Homeಮುಖಪುಟನವದೆಹಲಿಯಿಂದ ಜನಸಂಕಲ್ಪ ಸಮಾವೇಶಕ್ಕೆ ಬಂದ ಯುವದನಿ ಉಮರ್ ಖಾಲಿದ್ ಭಾಷಣ ಕನ್ನಡ ಅನುವಾದ

ನವದೆಹಲಿಯಿಂದ ಜನಸಂಕಲ್ಪ ಸಮಾವೇಶಕ್ಕೆ ಬಂದ ಯುವದನಿ ಉಮರ್ ಖಾಲಿದ್ ಭಾಷಣ ಕನ್ನಡ ಅನುವಾದ

- Advertisement -
- Advertisement -

ನಾನು ಹಿಂದಿಯಲ್ಲಿ ಮಾತನಾಡಲು ಅನುಮತಿ ಕೇಳುತ್ತಿದ್ದೇನೆ.

ನಾವೆಲ್ಲರೂ 2019ರ ಚುನಾವಣೆಯ ಮಿಷನ್ ಬಗ್ಗೆ ಬಹಳ ಮಾತಾಡುತ್ತಿದ್ದೇವೆ. ಆದರೆ, 2019ರ ಚುನಾವಣೆಯಲ್ಲಿ ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವಷ್ಟಕ್ಕೆ ನಮ್ಮ ಮಿಷನ್ ಕೊನೆಯಾಗುವುದಿಲ್ಲ. ಇಂದು ಬಿಡುಗಡೆಯಾದ ರಿಕ್ಲೈಮಿಂಗ್ ರಿಪಬ್ಲಿಕ್ ಅನ್ನು ಜಾರಿಗೊಳಿಸುವುದು ಬಹಳ ಮುಖ್ಯ. ಯಾರೇ ಅಧಿಕಾರಕ್ಕೆ ಬಂದರೂ. ಇವೇ ಇಂದಿನ ಚುನಾವಣೆಯಲ್ಲಿ ಪ್ರಮುಖ ಚರ್ಚೆಯಾಗಬೇಕಿತ್ತು. ಆದರೆ ಚರ್ಚೆ ಯಾವುದು ನಡೆಯುತ್ತಿದೆ?

ಮೋದಿ ಎದುರು ಯಾರು ಎಂಬುದು ಇಲ್ಲಿನ ಮುಖ್ಯ ಚರ್ಚೆಯಾಗಿಬಿಟ್ಟಿದೆ. ಹೇಗೋ ಮಾಡಿ ಈ ಚುನಾವಣೆಯನ್ನು ಮೋದಿ ವರ್ಸಸ್ ರಾಹುಲ್ ಗಾಂಧೀ ಮಾಡುತ್ತಿದ್ದಾರೆ. ಇದು ಇಬ್ಬರ ನಡುವಿನ ಪರ್ಸನಾಲಿಟಿ ಕಂಟೆಸ್ಟ್ ಮಾಡುವಂತಹ ಫ್ಯಾಶನ್ ಶೋ ಅಲ್ಲ. ಇದು ಭಗತ್ ಸಿಂಗ್ ಮತ್ತು ಸಾವರ್ಕರ್ ನಡುವಿನ, ಅಂಬೇಡ್ಕರ್ ಮತ್ತು ಗೋಲ್ವಾಳ್ಕರ್ ನಡುವಿನ ಸಂಘರ್ಷ.

ಮೋದಿಯಿದ್ದರೆ ಸಾಧ್ಯ ಎಂಬ ಒಂದು ಘೋಷಣೆಯಡಿ ಪ್ರಚಾರ ನಡೆಯುತ್ತಿದೆ. ಹೌದು, ಈ 5 ವರ್ಷಗಳಲ್ಲಿ ನಮ್ಮ ದೇಶದಲ್ಲಿ ಏನೇನಾಗಿದೆಯೋ ಅದು ಎಂದೂ ಹಿಂದೆ ಆಗಿರಲಿಲ್ಲ. ಬಾಬಾಸಾಹೇಬರು ನಮಗೆ ಕೊಟ್ಟ ಸಂವಿಧಾನವನ್ನು ಸಮಾನ ಗಣತಂತ್ರವಾಗಿ ಈ ದೇಶ ಇರಬೇಕೆಂದು ಹೇಳುವ ಸಂವಿಧಾನವನ್ನು ಸಂಸತ್ತಿನಿಂಧ ಕೇವಲ 2 ಕಿಮೀ ದೂರದ ಜಾಗದಲ್ಲಿ 9 ಆಗಸ್ಟ್ 2018ರಂದು ಸುಟ್ಟು ಹಾಕಲಾಯಿತು. ಅವರುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗಲಿಲ್ಲ, ಅವರ ಬಗ್ಗೆ ಯಾವುದೇ ಟಿವಿ ಚರ್ಚೆ ಮಾಡಲಿಲ್ಲ. ಏಕೆ? ಏಕೆಂದರೆ ದೇಶವನ್ನು ಆಳುವವರಿಗೆ ಬೇಕಾಗಿದ್ದನ್ನೇ ಅವರು ಮಾಡಿದ್ದರು.

ಆಸಿಫಾ ಎಂಬ 9 ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ-ಕೊಲೆ ನಡೆದಾಗ ಆ ಪ್ರಕರಣದ ಆರೋಪಿಗಳ ಪರವಾಗಿ ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ಮಾಡಲಾಯಿತು. ಮುಸ್ಲಿಮರನ್ನು ಬೀದಿಗಳಲ್ಲಿ ಸಿಗಿದು ಕೊಂದ ಆರೋಪಿಗಳು ಜೈಲಿನಿಂದ ಬಿಡುಗಡೆಯಾದ ನಂತರ ಹಾರ ಹಾಕಿ ಅಭಿನಂದಿಸಲು ಒಬ್ಬ ಯೂನಿಯನ್ ಮಿನಿಸ್ಟರ್ ಹೋಗಿದ್ದರು.

ಇದೆಲ್ಲ ಈ ಹಿಂದೆ ಎಂದೂ ನಡೆದಿರಲಿಲ್ಲ. ಮಧ್ಯರಾತ್ರಿ ನೋಟು ರದ್ಧತಿ ಘೋಷಣೆಯಾಗಿ, ಜನರ ಬದುಕನ್ನು ಹಿಂಡಿ ಹಿಪ್ಪೆ ಮಾಡಿದ್ದು. ಹೌದು ನಾವೂ ಹೇಳುತ್ತೇವೆ ಇದು ಮೋದಿ ಇಲ್ಲದಿದ್ದರೆ ನಡೆಯುತ್ತಿರಲಿಲ್ಲ.

ನೀರವ್ ಮೋದಿ, ಮಲ್ಯ ಮೊದಲಾದ ಎಲ್ಲರೂ ಕದ್ದ ದುಡ್ಡು ಹೊತ್ತು ದೇಶ ಬಿಟ್ಟು ಓಡಿಹೋಗಲು ಅವಕಾಶವಾಗುವಂತಹ ಪರಿಸ್ಥಿತಿ ಸೃಷ್ಟಿಸಲಾಯಿತು. ನೀರವ್ ಮೋದಿ ಕೊನೆಯ ಸಲ ಬಹಿರಂಗವಾಗಿ ಕಾಣಿಸಿಕೊಂಡಿದ್ದು ನರೇಂದ್ರ ಮೋದಿಯವರ ಜೊತೆ ದಾವೂಸ್‍ನಲ್ಲಿ. ಮೋದಿಯವರು ಚೌಕಿದಾರರಲ್ಲ, ಅಂಬಾನಿಯ ನಂಬಿಕಸ್ಥ ಮತ್ತು ದೇಶವನ್ನು ಮಾರುವ ಗುತ್ತಿಗೆದಾರ.

ಈ ದೇಶದಲ್ಲಿ 12000 ರೈತರು ಪ್ರತಿವರ್ಷ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಮಂತ್ರಿ, ಮೀಡಿಯಾ ಯಾರೂ ಮಾತಾಡದಿದ್ದಾಗ ನಾವು ಅದರ ಬಗ್ಗೆ ಮಾತಾಡಬೇಕು. ಆಹಾರದ ಹಕ್ಕಿನ ಬಗ್ಗೆ ಮಾತಾಡುವುದೂ ಬಹಳ ಮುಖ್ಯ. ಅದನ್ನು ಮಾಡುತ್ತಿದ್ದ ದೊಡ್ಡ ಅರ್ಥಶಾಸ್ತ್ರಜ್ಞ ಜಾನ್ ಡ್ರೀಜ್óರನ್ನು ಜಾರ್ಖಂಡ್‍ನಲ್ಲಿ ಮೊನ್ನೆ ಬಂಧಿಸಲಾಯಿತು, ಪ್ರತಿವರ್ಷ 3000 ಮಕ್ಕಳು ಹಸಿವಿನಿಂದ ಸಾಯುವ ಈ ದೇಶದಲ್ಲಿ ಅದು ಚುನಾವಣೆಯ ಇಶ್ಯೂ ಅಲ್ಲದಿದ್ದರೆ ಇನ್ನು ಯವುದು?

ಪ್ರತಿ ವರ್ಷ ಮ್ಯಾನ್‍ಹೋಲ್‍ನಲ್ಲಿ ಸಾಯುವ ದಲಿತರಿಗಾಗಿ ಒಂದೇ ಒಂದು ರೂಪಾಯಿ ಸಮಾಜ ಕಲ್ಯಾಣ ಇಲಾಖೆ ಖರ್ಚು ಮಾಡಿಲ್ಲ. ಇದು ಇಶ್ಯೂ ಅಲ್ಲದಿದ್ದರೆ ಇನ್ಯಾವುದು?

ನೀವು ಚುನಾವಣಾ ಬಾಂಡ್ ಮತ್ತು ನೋಟುರದ್ದತಿ ಜಿಎಸ್‍ಟಿಯನ್ನು ಜೊತೆಗೆ ಸೇರಿಸಿ ನೋಡಿ. ದೊಡ್ಡ ಬಂಡವಾಳಿಗರಾದ ಅಂಬಾನಿಯಂತಹವರ ಲಾಭದಲ್ಲಿ ಭಾರಿ ಹೆಚ್ಚಳವಾಗಿದೆ. ಅಂದರೆ ಇದು ಸಣ್ಣ ಮೀನುಗಳನ್ನು ದೊಡ್ಡ ಮೀನುಗಳು ನುಂಗಲು ಮಾಡಿರುವ ಅವಕಾಶ.

ಸಾವಿರಾರು ಕೋಟಿಯಷ್ಟು ಹಣ ಚುನಾವಣೆಗೆ ಖರ್ಚಾಗುತ್ತದೆಂದರೆ, ಯಾರ ಬಳಿ ತೋಳ್ಬಲ, ಹಣಬಲ ಇಲ್ಲವೋ ಅವರು ಚುನಾವಣೆಯಲ್ಲಿ ಲೆಕ್ಕಕ್ಕಿಲ್ಲ. ಇದರಿಂದ ನಮ್ಮ ಪ್ರಜಾತಂತ್ರ ನಾಶವಾಗುತ್ತದೆ.

ಅಮಿತ್ ಶಾ ನಾಮಪತ್ರ ಹಾಕಿದಾಗ ಅವರ ಆಸ್ತಿಯ ಪ್ರಮಾಣ ಎಷ್ಟು ಹೆಚ್ಚಳವಾಗಿದೆ ಎಂಬುದು ಗೊತ್ತಾಗಿದೆ. ಅವರ ಮಗನ ಆದಾಯ ಸಾವಿರಾರು ಪಟ್ಟು ಹೆಚ್ಚಾಗಿದೆ. ಆದರೆ, ಕಳೆದ 45 ವರ್ಷಗಳಲ್ಲಿ ಎಂದೂ ಇಲ್ಲದಷ್ಟು ನಿರುದ್ಯೋಗ ಸೃಷ್ಟಿಯಾಗಿದೆ. 24 ಲಕ್ಷ ಖಾಲಿ ಹುದ್ದೆಗಳ್ನು ಕೇಂದ್ರ ಸರ್ಕಾರ ತುಂಬದೆ ಖಾಲಿ ಬಿಟ್ಟಿದೆ. 2014ರಲ್ಲಿ ಇಂಡಿಯಾ ಫಸ್ಟ್ ಎಂಬ ಚುನಾವಣಾ ಘೋಷಣೆ ನೀಡಲಾಗಿತ್ತು. ಈಗ ಸ್ವಲ್ಪ ಸತ್ಯ ಹೇಳಿ, ಅಂಬಾನಿ ಮತ್ತು ಅದಾನಿ ಫಸ್ಟ್, ಇಂಡಿಯಾ ಲಾಸ್ಟ್ ಎಂದು.

ಹರಿಯಾಣಾದ ಗುರ್‍ಗಾಂವ್‍ನಲ್ಲಿ ಒಂದು ಕುಟುಂಬದ ಮನೆಗೆ ನುಗ್ಗಿ ಭಯಂಕರವಾಗಿ ಥಳಿಸಿದರು. ಅವರನ್ನು ಭೇಟಿಯಾದಾಗ ನಾನು ನೋಡಿದೆ. ಅವರಿಗೆ ಹಲವೆಡೆ ಮೂಳೆಮುರಿತಗಳಾಗಿವೆ. ಭಯ ಆತಂಕ ಹುಟ್ಟಿದೆ. ಆದರೆ ಅವರ ಮೇಲೆಯೇ ಕೊಲೆಯತ್ನ ಕೇಸ್ ಹಾಕಲಾಗಿದೆ. ಅಖ್ಲಾಕ್, ಪಹ್ಲೂಖಾನ್ ಎಲ್ಲರ ಪೆಕರಣದಲ್ಲೂ ಸತ್ತವರ ಕುಟುಂಬದವರ ಮೇಲೆಯೇ ಪ್ರಕರಣ ದಾಖಲಾಗಿದೆ.

ಇದು ಒಂದಿಡೀ ಸಮುದಾಯದಲ್ಲಿ ಭೀತಿ ಹುಟ್ಟಿಸಿ ಹಿಂದೆ ತಳ್ಳುವ ಆರೆಸ್ಸೆಸ್‍ನ ಹಳೆಯ ಕುತಂತ್ರ. ಸಾಚಾರ್ ಸಮಿತಿ ವರದಿ ಹೇಳುತ್ತದೆ. ಶಿಕ್ಷಣದಲ್ಲಿ, ಉದ್ಯೋಗದಲ್ಲಿ, ರೈಲ್ವೇಸ್‍ಲ್ಲಿ, ಸೈನ್ಯದಲ್ಲಿ ಎಲ್ಲೂ ಮುಸ್ಲಿಮರಿಲ್ಲ. ಒಂದೇ ಸ್ಥಳದಲ್ಲಿ ಅವರು ತಮ್ಮ ಜನಸಂಖ್ಯೆಗಿಂತ ಹೆಚ್ಚು ಸರಾಸರಿಯಲ್ಲಿದ್ದಾರೆ, ಅದು ಭಾರತದ ಜೈಲುಗಳಲ್ಲಿ! ಈ ಸಮುದಾಯವು ಇಂದು ಇವೇನನ್ನೂ ಕೇಳುವ ಹಾಗಿಲ್ಲ. ನಮ್ಮ ವಿರುದ್ಧ ಗಲಭೆ ಮಾಡಬೇಡಿ, ರಕ್ಷಣೆ ಕೊಡಿ ಎಂದು ಕೇಳಿಕೊಳ್ಳಬೇಕಾಗಿದೆ.

ಯಾವ ಸಂಘಟನೆ ಬ್ರಿಟಿಷರ ಜೊತೆ ರಾಜಿ ಮಾಡಿಕೊಂಡು ಅವರಿಗೆ ಕ್ಷಮಾಪಣೆ ಪತ್ರ ಬರೆದು ಕಾಲಕಳೆಯಿತೋ ಅವರ ಇಂದು ದೇಶಪ್ರೇಮದ ಗುತ್ತಿಗೆ ಹಿಡಿದಿದ್ದಾರೆ. ಹೀಗೆ ಹೇಗೆ ಆಯಿತು? ಹೇಗೆಂದರೆ 2014ರಿಗಿಂತ ಹಿಂದೆಯೇ ಪ್ರಜಾತಂತ್ರ ದುರ್ಬಲಗೊಳ್ಳುತ್ತಿತ್ತು. ಇಂದು ಮೋದಿ ವಿರೋಧಿಗಳೆನ್ನುವವರದ್ದೂ ಅದರಲ್ಲಿ ಪಾತ್ರವಿದೆ. 1984ರ ದಂಗೆಯ ಬಗ್ಗೆ ಸರಿಯಾದ ತನಿಖೆ ಆಗಲೇ ಇಲ್ಲ. ಸಾರ್ವಜನಿಕ ಉದ್ದಿಮೆಗಳನು ದುರ್ಬಲಗೊಳಿಸುವುದರಲ್ಲಿ ಅವರ ಪಾತ್ರವಿದೆ. ಶ್ರೀಕೃಷ್ಣ ಆಯೋಗದ ವರದಿಯ ಶಿಫಾರಸ್ಸುಗಳನ್ನು ಜಾರಿ ಮಾಡಿಲ್ಲ. ಜಾಗತೀಕರಣ ನೀತಿಗಳನ್ನು ಜಾರಿಗೆ ತಂದಿದ್ದಾರೆ.

ದೇಶದ ಜನರು ಇವೆಲ್ಲವನ್ನೂ ಅರ್ಥ ಮಾಡಿಕೊಂಡರೆ, 2019ರ ಚುನಾವಣೆಯಲ್ಲಿ ನಾವು ಅವರನ್ನು ಗುಜರಾತ್‍ಗೆ ಘರ್ ವಾಪಸಿ ಮಾಡಿಸುತ್ತೇವೆಂಬ ನಂಬಿಕೆ ನನಗಿದೆ. ಆದರೆ, ಇವರನ್ನು ಚುನಾವಣೆಯಲ್ಲಿ ಸೋಲಿಸುವುದಷ್ಠೆ ನಮ್ಮ ಕೆಲಸವಲ್ಲ. ಆರೆಸ್ಸೆಸ್ಸನ್ನು ಸೈದ್ಧಾಂತಿಕವಾಗಿ ಸೋಲಿಸುವುದು ಮತ್ತು ನಮ್ಮ ಸಂವಿಧಾನದ ಆಶಯವಾದ ಜೀವಪರ ದೇಶವನ್ನು ಕಟ್ಟುವುದು ನಮ್ಮ ಕೆಲಸವಾಗಬೇಕು ಈಗ.

 

ಇಷ್ಟು ಹೇಳಿ ನನ್ನ ಮಾತು ಮುಗಿಸುತ್ತೇನೆ. ಧನ್ಯವಾದಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...