Homeಮುಖಪುಟನವದೆಹಲಿಯಿಂದ ಜನಸಂಕಲ್ಪ ಸಮಾವೇಶಕ್ಕೆ ಬಂದ ಯುವದನಿ ಉಮರ್ ಖಾಲಿದ್ ಭಾಷಣ ಕನ್ನಡ ಅನುವಾದ

ನವದೆಹಲಿಯಿಂದ ಜನಸಂಕಲ್ಪ ಸಮಾವೇಶಕ್ಕೆ ಬಂದ ಯುವದನಿ ಉಮರ್ ಖಾಲಿದ್ ಭಾಷಣ ಕನ್ನಡ ಅನುವಾದ

- Advertisement -
- Advertisement -

ನಾನು ಹಿಂದಿಯಲ್ಲಿ ಮಾತನಾಡಲು ಅನುಮತಿ ಕೇಳುತ್ತಿದ್ದೇನೆ.

ನಾವೆಲ್ಲರೂ 2019ರ ಚುನಾವಣೆಯ ಮಿಷನ್ ಬಗ್ಗೆ ಬಹಳ ಮಾತಾಡುತ್ತಿದ್ದೇವೆ. ಆದರೆ, 2019ರ ಚುನಾವಣೆಯಲ್ಲಿ ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವಷ್ಟಕ್ಕೆ ನಮ್ಮ ಮಿಷನ್ ಕೊನೆಯಾಗುವುದಿಲ್ಲ. ಇಂದು ಬಿಡುಗಡೆಯಾದ ರಿಕ್ಲೈಮಿಂಗ್ ರಿಪಬ್ಲಿಕ್ ಅನ್ನು ಜಾರಿಗೊಳಿಸುವುದು ಬಹಳ ಮುಖ್ಯ. ಯಾರೇ ಅಧಿಕಾರಕ್ಕೆ ಬಂದರೂ. ಇವೇ ಇಂದಿನ ಚುನಾವಣೆಯಲ್ಲಿ ಪ್ರಮುಖ ಚರ್ಚೆಯಾಗಬೇಕಿತ್ತು. ಆದರೆ ಚರ್ಚೆ ಯಾವುದು ನಡೆಯುತ್ತಿದೆ?

ಮೋದಿ ಎದುರು ಯಾರು ಎಂಬುದು ಇಲ್ಲಿನ ಮುಖ್ಯ ಚರ್ಚೆಯಾಗಿಬಿಟ್ಟಿದೆ. ಹೇಗೋ ಮಾಡಿ ಈ ಚುನಾವಣೆಯನ್ನು ಮೋದಿ ವರ್ಸಸ್ ರಾಹುಲ್ ಗಾಂಧೀ ಮಾಡುತ್ತಿದ್ದಾರೆ. ಇದು ಇಬ್ಬರ ನಡುವಿನ ಪರ್ಸನಾಲಿಟಿ ಕಂಟೆಸ್ಟ್ ಮಾಡುವಂತಹ ಫ್ಯಾಶನ್ ಶೋ ಅಲ್ಲ. ಇದು ಭಗತ್ ಸಿಂಗ್ ಮತ್ತು ಸಾವರ್ಕರ್ ನಡುವಿನ, ಅಂಬೇಡ್ಕರ್ ಮತ್ತು ಗೋಲ್ವಾಳ್ಕರ್ ನಡುವಿನ ಸಂಘರ್ಷ.

ಮೋದಿಯಿದ್ದರೆ ಸಾಧ್ಯ ಎಂಬ ಒಂದು ಘೋಷಣೆಯಡಿ ಪ್ರಚಾರ ನಡೆಯುತ್ತಿದೆ. ಹೌದು, ಈ 5 ವರ್ಷಗಳಲ್ಲಿ ನಮ್ಮ ದೇಶದಲ್ಲಿ ಏನೇನಾಗಿದೆಯೋ ಅದು ಎಂದೂ ಹಿಂದೆ ಆಗಿರಲಿಲ್ಲ. ಬಾಬಾಸಾಹೇಬರು ನಮಗೆ ಕೊಟ್ಟ ಸಂವಿಧಾನವನ್ನು ಸಮಾನ ಗಣತಂತ್ರವಾಗಿ ಈ ದೇಶ ಇರಬೇಕೆಂದು ಹೇಳುವ ಸಂವಿಧಾನವನ್ನು ಸಂಸತ್ತಿನಿಂಧ ಕೇವಲ 2 ಕಿಮೀ ದೂರದ ಜಾಗದಲ್ಲಿ 9 ಆಗಸ್ಟ್ 2018ರಂದು ಸುಟ್ಟು ಹಾಕಲಾಯಿತು. ಅವರುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗಲಿಲ್ಲ, ಅವರ ಬಗ್ಗೆ ಯಾವುದೇ ಟಿವಿ ಚರ್ಚೆ ಮಾಡಲಿಲ್ಲ. ಏಕೆ? ಏಕೆಂದರೆ ದೇಶವನ್ನು ಆಳುವವರಿಗೆ ಬೇಕಾಗಿದ್ದನ್ನೇ ಅವರು ಮಾಡಿದ್ದರು.

ಆಸಿಫಾ ಎಂಬ 9 ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ-ಕೊಲೆ ನಡೆದಾಗ ಆ ಪ್ರಕರಣದ ಆರೋಪಿಗಳ ಪರವಾಗಿ ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ಮಾಡಲಾಯಿತು. ಮುಸ್ಲಿಮರನ್ನು ಬೀದಿಗಳಲ್ಲಿ ಸಿಗಿದು ಕೊಂದ ಆರೋಪಿಗಳು ಜೈಲಿನಿಂದ ಬಿಡುಗಡೆಯಾದ ನಂತರ ಹಾರ ಹಾಕಿ ಅಭಿನಂದಿಸಲು ಒಬ್ಬ ಯೂನಿಯನ್ ಮಿನಿಸ್ಟರ್ ಹೋಗಿದ್ದರು.

ಇದೆಲ್ಲ ಈ ಹಿಂದೆ ಎಂದೂ ನಡೆದಿರಲಿಲ್ಲ. ಮಧ್ಯರಾತ್ರಿ ನೋಟು ರದ್ಧತಿ ಘೋಷಣೆಯಾಗಿ, ಜನರ ಬದುಕನ್ನು ಹಿಂಡಿ ಹಿಪ್ಪೆ ಮಾಡಿದ್ದು. ಹೌದು ನಾವೂ ಹೇಳುತ್ತೇವೆ ಇದು ಮೋದಿ ಇಲ್ಲದಿದ್ದರೆ ನಡೆಯುತ್ತಿರಲಿಲ್ಲ.

ನೀರವ್ ಮೋದಿ, ಮಲ್ಯ ಮೊದಲಾದ ಎಲ್ಲರೂ ಕದ್ದ ದುಡ್ಡು ಹೊತ್ತು ದೇಶ ಬಿಟ್ಟು ಓಡಿಹೋಗಲು ಅವಕಾಶವಾಗುವಂತಹ ಪರಿಸ್ಥಿತಿ ಸೃಷ್ಟಿಸಲಾಯಿತು. ನೀರವ್ ಮೋದಿ ಕೊನೆಯ ಸಲ ಬಹಿರಂಗವಾಗಿ ಕಾಣಿಸಿಕೊಂಡಿದ್ದು ನರೇಂದ್ರ ಮೋದಿಯವರ ಜೊತೆ ದಾವೂಸ್‍ನಲ್ಲಿ. ಮೋದಿಯವರು ಚೌಕಿದಾರರಲ್ಲ, ಅಂಬಾನಿಯ ನಂಬಿಕಸ್ಥ ಮತ್ತು ದೇಶವನ್ನು ಮಾರುವ ಗುತ್ತಿಗೆದಾರ.

ಈ ದೇಶದಲ್ಲಿ 12000 ರೈತರು ಪ್ರತಿವರ್ಷ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಮಂತ್ರಿ, ಮೀಡಿಯಾ ಯಾರೂ ಮಾತಾಡದಿದ್ದಾಗ ನಾವು ಅದರ ಬಗ್ಗೆ ಮಾತಾಡಬೇಕು. ಆಹಾರದ ಹಕ್ಕಿನ ಬಗ್ಗೆ ಮಾತಾಡುವುದೂ ಬಹಳ ಮುಖ್ಯ. ಅದನ್ನು ಮಾಡುತ್ತಿದ್ದ ದೊಡ್ಡ ಅರ್ಥಶಾಸ್ತ್ರಜ್ಞ ಜಾನ್ ಡ್ರೀಜ್óರನ್ನು ಜಾರ್ಖಂಡ್‍ನಲ್ಲಿ ಮೊನ್ನೆ ಬಂಧಿಸಲಾಯಿತು, ಪ್ರತಿವರ್ಷ 3000 ಮಕ್ಕಳು ಹಸಿವಿನಿಂದ ಸಾಯುವ ಈ ದೇಶದಲ್ಲಿ ಅದು ಚುನಾವಣೆಯ ಇಶ್ಯೂ ಅಲ್ಲದಿದ್ದರೆ ಇನ್ನು ಯವುದು?

ಪ್ರತಿ ವರ್ಷ ಮ್ಯಾನ್‍ಹೋಲ್‍ನಲ್ಲಿ ಸಾಯುವ ದಲಿತರಿಗಾಗಿ ಒಂದೇ ಒಂದು ರೂಪಾಯಿ ಸಮಾಜ ಕಲ್ಯಾಣ ಇಲಾಖೆ ಖರ್ಚು ಮಾಡಿಲ್ಲ. ಇದು ಇಶ್ಯೂ ಅಲ್ಲದಿದ್ದರೆ ಇನ್ಯಾವುದು?

ನೀವು ಚುನಾವಣಾ ಬಾಂಡ್ ಮತ್ತು ನೋಟುರದ್ದತಿ ಜಿಎಸ್‍ಟಿಯನ್ನು ಜೊತೆಗೆ ಸೇರಿಸಿ ನೋಡಿ. ದೊಡ್ಡ ಬಂಡವಾಳಿಗರಾದ ಅಂಬಾನಿಯಂತಹವರ ಲಾಭದಲ್ಲಿ ಭಾರಿ ಹೆಚ್ಚಳವಾಗಿದೆ. ಅಂದರೆ ಇದು ಸಣ್ಣ ಮೀನುಗಳನ್ನು ದೊಡ್ಡ ಮೀನುಗಳು ನುಂಗಲು ಮಾಡಿರುವ ಅವಕಾಶ.

ಸಾವಿರಾರು ಕೋಟಿಯಷ್ಟು ಹಣ ಚುನಾವಣೆಗೆ ಖರ್ಚಾಗುತ್ತದೆಂದರೆ, ಯಾರ ಬಳಿ ತೋಳ್ಬಲ, ಹಣಬಲ ಇಲ್ಲವೋ ಅವರು ಚುನಾವಣೆಯಲ್ಲಿ ಲೆಕ್ಕಕ್ಕಿಲ್ಲ. ಇದರಿಂದ ನಮ್ಮ ಪ್ರಜಾತಂತ್ರ ನಾಶವಾಗುತ್ತದೆ.

ಅಮಿತ್ ಶಾ ನಾಮಪತ್ರ ಹಾಕಿದಾಗ ಅವರ ಆಸ್ತಿಯ ಪ್ರಮಾಣ ಎಷ್ಟು ಹೆಚ್ಚಳವಾಗಿದೆ ಎಂಬುದು ಗೊತ್ತಾಗಿದೆ. ಅವರ ಮಗನ ಆದಾಯ ಸಾವಿರಾರು ಪಟ್ಟು ಹೆಚ್ಚಾಗಿದೆ. ಆದರೆ, ಕಳೆದ 45 ವರ್ಷಗಳಲ್ಲಿ ಎಂದೂ ಇಲ್ಲದಷ್ಟು ನಿರುದ್ಯೋಗ ಸೃಷ್ಟಿಯಾಗಿದೆ. 24 ಲಕ್ಷ ಖಾಲಿ ಹುದ್ದೆಗಳ್ನು ಕೇಂದ್ರ ಸರ್ಕಾರ ತುಂಬದೆ ಖಾಲಿ ಬಿಟ್ಟಿದೆ. 2014ರಲ್ಲಿ ಇಂಡಿಯಾ ಫಸ್ಟ್ ಎಂಬ ಚುನಾವಣಾ ಘೋಷಣೆ ನೀಡಲಾಗಿತ್ತು. ಈಗ ಸ್ವಲ್ಪ ಸತ್ಯ ಹೇಳಿ, ಅಂಬಾನಿ ಮತ್ತು ಅದಾನಿ ಫಸ್ಟ್, ಇಂಡಿಯಾ ಲಾಸ್ಟ್ ಎಂದು.

ಹರಿಯಾಣಾದ ಗುರ್‍ಗಾಂವ್‍ನಲ್ಲಿ ಒಂದು ಕುಟುಂಬದ ಮನೆಗೆ ನುಗ್ಗಿ ಭಯಂಕರವಾಗಿ ಥಳಿಸಿದರು. ಅವರನ್ನು ಭೇಟಿಯಾದಾಗ ನಾನು ನೋಡಿದೆ. ಅವರಿಗೆ ಹಲವೆಡೆ ಮೂಳೆಮುರಿತಗಳಾಗಿವೆ. ಭಯ ಆತಂಕ ಹುಟ್ಟಿದೆ. ಆದರೆ ಅವರ ಮೇಲೆಯೇ ಕೊಲೆಯತ್ನ ಕೇಸ್ ಹಾಕಲಾಗಿದೆ. ಅಖ್ಲಾಕ್, ಪಹ್ಲೂಖಾನ್ ಎಲ್ಲರ ಪೆಕರಣದಲ್ಲೂ ಸತ್ತವರ ಕುಟುಂಬದವರ ಮೇಲೆಯೇ ಪ್ರಕರಣ ದಾಖಲಾಗಿದೆ.

ಇದು ಒಂದಿಡೀ ಸಮುದಾಯದಲ್ಲಿ ಭೀತಿ ಹುಟ್ಟಿಸಿ ಹಿಂದೆ ತಳ್ಳುವ ಆರೆಸ್ಸೆಸ್‍ನ ಹಳೆಯ ಕುತಂತ್ರ. ಸಾಚಾರ್ ಸಮಿತಿ ವರದಿ ಹೇಳುತ್ತದೆ. ಶಿಕ್ಷಣದಲ್ಲಿ, ಉದ್ಯೋಗದಲ್ಲಿ, ರೈಲ್ವೇಸ್‍ಲ್ಲಿ, ಸೈನ್ಯದಲ್ಲಿ ಎಲ್ಲೂ ಮುಸ್ಲಿಮರಿಲ್ಲ. ಒಂದೇ ಸ್ಥಳದಲ್ಲಿ ಅವರು ತಮ್ಮ ಜನಸಂಖ್ಯೆಗಿಂತ ಹೆಚ್ಚು ಸರಾಸರಿಯಲ್ಲಿದ್ದಾರೆ, ಅದು ಭಾರತದ ಜೈಲುಗಳಲ್ಲಿ! ಈ ಸಮುದಾಯವು ಇಂದು ಇವೇನನ್ನೂ ಕೇಳುವ ಹಾಗಿಲ್ಲ. ನಮ್ಮ ವಿರುದ್ಧ ಗಲಭೆ ಮಾಡಬೇಡಿ, ರಕ್ಷಣೆ ಕೊಡಿ ಎಂದು ಕೇಳಿಕೊಳ್ಳಬೇಕಾಗಿದೆ.

ಯಾವ ಸಂಘಟನೆ ಬ್ರಿಟಿಷರ ಜೊತೆ ರಾಜಿ ಮಾಡಿಕೊಂಡು ಅವರಿಗೆ ಕ್ಷಮಾಪಣೆ ಪತ್ರ ಬರೆದು ಕಾಲಕಳೆಯಿತೋ ಅವರ ಇಂದು ದೇಶಪ್ರೇಮದ ಗುತ್ತಿಗೆ ಹಿಡಿದಿದ್ದಾರೆ. ಹೀಗೆ ಹೇಗೆ ಆಯಿತು? ಹೇಗೆಂದರೆ 2014ರಿಗಿಂತ ಹಿಂದೆಯೇ ಪ್ರಜಾತಂತ್ರ ದುರ್ಬಲಗೊಳ್ಳುತ್ತಿತ್ತು. ಇಂದು ಮೋದಿ ವಿರೋಧಿಗಳೆನ್ನುವವರದ್ದೂ ಅದರಲ್ಲಿ ಪಾತ್ರವಿದೆ. 1984ರ ದಂಗೆಯ ಬಗ್ಗೆ ಸರಿಯಾದ ತನಿಖೆ ಆಗಲೇ ಇಲ್ಲ. ಸಾರ್ವಜನಿಕ ಉದ್ದಿಮೆಗಳನು ದುರ್ಬಲಗೊಳಿಸುವುದರಲ್ಲಿ ಅವರ ಪಾತ್ರವಿದೆ. ಶ್ರೀಕೃಷ್ಣ ಆಯೋಗದ ವರದಿಯ ಶಿಫಾರಸ್ಸುಗಳನ್ನು ಜಾರಿ ಮಾಡಿಲ್ಲ. ಜಾಗತೀಕರಣ ನೀತಿಗಳನ್ನು ಜಾರಿಗೆ ತಂದಿದ್ದಾರೆ.

ದೇಶದ ಜನರು ಇವೆಲ್ಲವನ್ನೂ ಅರ್ಥ ಮಾಡಿಕೊಂಡರೆ, 2019ರ ಚುನಾವಣೆಯಲ್ಲಿ ನಾವು ಅವರನ್ನು ಗುಜರಾತ್‍ಗೆ ಘರ್ ವಾಪಸಿ ಮಾಡಿಸುತ್ತೇವೆಂಬ ನಂಬಿಕೆ ನನಗಿದೆ. ಆದರೆ, ಇವರನ್ನು ಚುನಾವಣೆಯಲ್ಲಿ ಸೋಲಿಸುವುದಷ್ಠೆ ನಮ್ಮ ಕೆಲಸವಲ್ಲ. ಆರೆಸ್ಸೆಸ್ಸನ್ನು ಸೈದ್ಧಾಂತಿಕವಾಗಿ ಸೋಲಿಸುವುದು ಮತ್ತು ನಮ್ಮ ಸಂವಿಧಾನದ ಆಶಯವಾದ ಜೀವಪರ ದೇಶವನ್ನು ಕಟ್ಟುವುದು ನಮ್ಮ ಕೆಲಸವಾಗಬೇಕು ಈಗ.

 

ಇಷ್ಟು ಹೇಳಿ ನನ್ನ ಮಾತು ಮುಗಿಸುತ್ತೇನೆ. ಧನ್ಯವಾದಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...