Homeಮುಖಪುಟನವದೆಹಲಿಯಿಂದ ಜನಸಂಕಲ್ಪ ಸಮಾವೇಶಕ್ಕೆ ಬಂದ ಯುವದನಿ ಉಮರ್ ಖಾಲಿದ್ ಭಾಷಣ ಕನ್ನಡ ಅನುವಾದ

ನವದೆಹಲಿಯಿಂದ ಜನಸಂಕಲ್ಪ ಸಮಾವೇಶಕ್ಕೆ ಬಂದ ಯುವದನಿ ಉಮರ್ ಖಾಲಿದ್ ಭಾಷಣ ಕನ್ನಡ ಅನುವಾದ

- Advertisement -
- Advertisement -

ನಾನು ಹಿಂದಿಯಲ್ಲಿ ಮಾತನಾಡಲು ಅನುಮತಿ ಕೇಳುತ್ತಿದ್ದೇನೆ.

ನಾವೆಲ್ಲರೂ 2019ರ ಚುನಾವಣೆಯ ಮಿಷನ್ ಬಗ್ಗೆ ಬಹಳ ಮಾತಾಡುತ್ತಿದ್ದೇವೆ. ಆದರೆ, 2019ರ ಚುನಾವಣೆಯಲ್ಲಿ ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವಷ್ಟಕ್ಕೆ ನಮ್ಮ ಮಿಷನ್ ಕೊನೆಯಾಗುವುದಿಲ್ಲ. ಇಂದು ಬಿಡುಗಡೆಯಾದ ರಿಕ್ಲೈಮಿಂಗ್ ರಿಪಬ್ಲಿಕ್ ಅನ್ನು ಜಾರಿಗೊಳಿಸುವುದು ಬಹಳ ಮುಖ್ಯ. ಯಾರೇ ಅಧಿಕಾರಕ್ಕೆ ಬಂದರೂ. ಇವೇ ಇಂದಿನ ಚುನಾವಣೆಯಲ್ಲಿ ಪ್ರಮುಖ ಚರ್ಚೆಯಾಗಬೇಕಿತ್ತು. ಆದರೆ ಚರ್ಚೆ ಯಾವುದು ನಡೆಯುತ್ತಿದೆ?

ಮೋದಿ ಎದುರು ಯಾರು ಎಂಬುದು ಇಲ್ಲಿನ ಮುಖ್ಯ ಚರ್ಚೆಯಾಗಿಬಿಟ್ಟಿದೆ. ಹೇಗೋ ಮಾಡಿ ಈ ಚುನಾವಣೆಯನ್ನು ಮೋದಿ ವರ್ಸಸ್ ರಾಹುಲ್ ಗಾಂಧೀ ಮಾಡುತ್ತಿದ್ದಾರೆ. ಇದು ಇಬ್ಬರ ನಡುವಿನ ಪರ್ಸನಾಲಿಟಿ ಕಂಟೆಸ್ಟ್ ಮಾಡುವಂತಹ ಫ್ಯಾಶನ್ ಶೋ ಅಲ್ಲ. ಇದು ಭಗತ್ ಸಿಂಗ್ ಮತ್ತು ಸಾವರ್ಕರ್ ನಡುವಿನ, ಅಂಬೇಡ್ಕರ್ ಮತ್ತು ಗೋಲ್ವಾಳ್ಕರ್ ನಡುವಿನ ಸಂಘರ್ಷ.

ಮೋದಿಯಿದ್ದರೆ ಸಾಧ್ಯ ಎಂಬ ಒಂದು ಘೋಷಣೆಯಡಿ ಪ್ರಚಾರ ನಡೆಯುತ್ತಿದೆ. ಹೌದು, ಈ 5 ವರ್ಷಗಳಲ್ಲಿ ನಮ್ಮ ದೇಶದಲ್ಲಿ ಏನೇನಾಗಿದೆಯೋ ಅದು ಎಂದೂ ಹಿಂದೆ ಆಗಿರಲಿಲ್ಲ. ಬಾಬಾಸಾಹೇಬರು ನಮಗೆ ಕೊಟ್ಟ ಸಂವಿಧಾನವನ್ನು ಸಮಾನ ಗಣತಂತ್ರವಾಗಿ ಈ ದೇಶ ಇರಬೇಕೆಂದು ಹೇಳುವ ಸಂವಿಧಾನವನ್ನು ಸಂಸತ್ತಿನಿಂಧ ಕೇವಲ 2 ಕಿಮೀ ದೂರದ ಜಾಗದಲ್ಲಿ 9 ಆಗಸ್ಟ್ 2018ರಂದು ಸುಟ್ಟು ಹಾಕಲಾಯಿತು. ಅವರುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗಲಿಲ್ಲ, ಅವರ ಬಗ್ಗೆ ಯಾವುದೇ ಟಿವಿ ಚರ್ಚೆ ಮಾಡಲಿಲ್ಲ. ಏಕೆ? ಏಕೆಂದರೆ ದೇಶವನ್ನು ಆಳುವವರಿಗೆ ಬೇಕಾಗಿದ್ದನ್ನೇ ಅವರು ಮಾಡಿದ್ದರು.

ಆಸಿಫಾ ಎಂಬ 9 ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ-ಕೊಲೆ ನಡೆದಾಗ ಆ ಪ್ರಕರಣದ ಆರೋಪಿಗಳ ಪರವಾಗಿ ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ಮಾಡಲಾಯಿತು. ಮುಸ್ಲಿಮರನ್ನು ಬೀದಿಗಳಲ್ಲಿ ಸಿಗಿದು ಕೊಂದ ಆರೋಪಿಗಳು ಜೈಲಿನಿಂದ ಬಿಡುಗಡೆಯಾದ ನಂತರ ಹಾರ ಹಾಕಿ ಅಭಿನಂದಿಸಲು ಒಬ್ಬ ಯೂನಿಯನ್ ಮಿನಿಸ್ಟರ್ ಹೋಗಿದ್ದರು.

ಇದೆಲ್ಲ ಈ ಹಿಂದೆ ಎಂದೂ ನಡೆದಿರಲಿಲ್ಲ. ಮಧ್ಯರಾತ್ರಿ ನೋಟು ರದ್ಧತಿ ಘೋಷಣೆಯಾಗಿ, ಜನರ ಬದುಕನ್ನು ಹಿಂಡಿ ಹಿಪ್ಪೆ ಮಾಡಿದ್ದು. ಹೌದು ನಾವೂ ಹೇಳುತ್ತೇವೆ ಇದು ಮೋದಿ ಇಲ್ಲದಿದ್ದರೆ ನಡೆಯುತ್ತಿರಲಿಲ್ಲ.

ನೀರವ್ ಮೋದಿ, ಮಲ್ಯ ಮೊದಲಾದ ಎಲ್ಲರೂ ಕದ್ದ ದುಡ್ಡು ಹೊತ್ತು ದೇಶ ಬಿಟ್ಟು ಓಡಿಹೋಗಲು ಅವಕಾಶವಾಗುವಂತಹ ಪರಿಸ್ಥಿತಿ ಸೃಷ್ಟಿಸಲಾಯಿತು. ನೀರವ್ ಮೋದಿ ಕೊನೆಯ ಸಲ ಬಹಿರಂಗವಾಗಿ ಕಾಣಿಸಿಕೊಂಡಿದ್ದು ನರೇಂದ್ರ ಮೋದಿಯವರ ಜೊತೆ ದಾವೂಸ್‍ನಲ್ಲಿ. ಮೋದಿಯವರು ಚೌಕಿದಾರರಲ್ಲ, ಅಂಬಾನಿಯ ನಂಬಿಕಸ್ಥ ಮತ್ತು ದೇಶವನ್ನು ಮಾರುವ ಗುತ್ತಿಗೆದಾರ.

ಈ ದೇಶದಲ್ಲಿ 12000 ರೈತರು ಪ್ರತಿವರ್ಷ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಮಂತ್ರಿ, ಮೀಡಿಯಾ ಯಾರೂ ಮಾತಾಡದಿದ್ದಾಗ ನಾವು ಅದರ ಬಗ್ಗೆ ಮಾತಾಡಬೇಕು. ಆಹಾರದ ಹಕ್ಕಿನ ಬಗ್ಗೆ ಮಾತಾಡುವುದೂ ಬಹಳ ಮುಖ್ಯ. ಅದನ್ನು ಮಾಡುತ್ತಿದ್ದ ದೊಡ್ಡ ಅರ್ಥಶಾಸ್ತ್ರಜ್ಞ ಜಾನ್ ಡ್ರೀಜ್óರನ್ನು ಜಾರ್ಖಂಡ್‍ನಲ್ಲಿ ಮೊನ್ನೆ ಬಂಧಿಸಲಾಯಿತು, ಪ್ರತಿವರ್ಷ 3000 ಮಕ್ಕಳು ಹಸಿವಿನಿಂದ ಸಾಯುವ ಈ ದೇಶದಲ್ಲಿ ಅದು ಚುನಾವಣೆಯ ಇಶ್ಯೂ ಅಲ್ಲದಿದ್ದರೆ ಇನ್ನು ಯವುದು?

ಪ್ರತಿ ವರ್ಷ ಮ್ಯಾನ್‍ಹೋಲ್‍ನಲ್ಲಿ ಸಾಯುವ ದಲಿತರಿಗಾಗಿ ಒಂದೇ ಒಂದು ರೂಪಾಯಿ ಸಮಾಜ ಕಲ್ಯಾಣ ಇಲಾಖೆ ಖರ್ಚು ಮಾಡಿಲ್ಲ. ಇದು ಇಶ್ಯೂ ಅಲ್ಲದಿದ್ದರೆ ಇನ್ಯಾವುದು?

ನೀವು ಚುನಾವಣಾ ಬಾಂಡ್ ಮತ್ತು ನೋಟುರದ್ದತಿ ಜಿಎಸ್‍ಟಿಯನ್ನು ಜೊತೆಗೆ ಸೇರಿಸಿ ನೋಡಿ. ದೊಡ್ಡ ಬಂಡವಾಳಿಗರಾದ ಅಂಬಾನಿಯಂತಹವರ ಲಾಭದಲ್ಲಿ ಭಾರಿ ಹೆಚ್ಚಳವಾಗಿದೆ. ಅಂದರೆ ಇದು ಸಣ್ಣ ಮೀನುಗಳನ್ನು ದೊಡ್ಡ ಮೀನುಗಳು ನುಂಗಲು ಮಾಡಿರುವ ಅವಕಾಶ.

ಸಾವಿರಾರು ಕೋಟಿಯಷ್ಟು ಹಣ ಚುನಾವಣೆಗೆ ಖರ್ಚಾಗುತ್ತದೆಂದರೆ, ಯಾರ ಬಳಿ ತೋಳ್ಬಲ, ಹಣಬಲ ಇಲ್ಲವೋ ಅವರು ಚುನಾವಣೆಯಲ್ಲಿ ಲೆಕ್ಕಕ್ಕಿಲ್ಲ. ಇದರಿಂದ ನಮ್ಮ ಪ್ರಜಾತಂತ್ರ ನಾಶವಾಗುತ್ತದೆ.

ಅಮಿತ್ ಶಾ ನಾಮಪತ್ರ ಹಾಕಿದಾಗ ಅವರ ಆಸ್ತಿಯ ಪ್ರಮಾಣ ಎಷ್ಟು ಹೆಚ್ಚಳವಾಗಿದೆ ಎಂಬುದು ಗೊತ್ತಾಗಿದೆ. ಅವರ ಮಗನ ಆದಾಯ ಸಾವಿರಾರು ಪಟ್ಟು ಹೆಚ್ಚಾಗಿದೆ. ಆದರೆ, ಕಳೆದ 45 ವರ್ಷಗಳಲ್ಲಿ ಎಂದೂ ಇಲ್ಲದಷ್ಟು ನಿರುದ್ಯೋಗ ಸೃಷ್ಟಿಯಾಗಿದೆ. 24 ಲಕ್ಷ ಖಾಲಿ ಹುದ್ದೆಗಳ್ನು ಕೇಂದ್ರ ಸರ್ಕಾರ ತುಂಬದೆ ಖಾಲಿ ಬಿಟ್ಟಿದೆ. 2014ರಲ್ಲಿ ಇಂಡಿಯಾ ಫಸ್ಟ್ ಎಂಬ ಚುನಾವಣಾ ಘೋಷಣೆ ನೀಡಲಾಗಿತ್ತು. ಈಗ ಸ್ವಲ್ಪ ಸತ್ಯ ಹೇಳಿ, ಅಂಬಾನಿ ಮತ್ತು ಅದಾನಿ ಫಸ್ಟ್, ಇಂಡಿಯಾ ಲಾಸ್ಟ್ ಎಂದು.

ಹರಿಯಾಣಾದ ಗುರ್‍ಗಾಂವ್‍ನಲ್ಲಿ ಒಂದು ಕುಟುಂಬದ ಮನೆಗೆ ನುಗ್ಗಿ ಭಯಂಕರವಾಗಿ ಥಳಿಸಿದರು. ಅವರನ್ನು ಭೇಟಿಯಾದಾಗ ನಾನು ನೋಡಿದೆ. ಅವರಿಗೆ ಹಲವೆಡೆ ಮೂಳೆಮುರಿತಗಳಾಗಿವೆ. ಭಯ ಆತಂಕ ಹುಟ್ಟಿದೆ. ಆದರೆ ಅವರ ಮೇಲೆಯೇ ಕೊಲೆಯತ್ನ ಕೇಸ್ ಹಾಕಲಾಗಿದೆ. ಅಖ್ಲಾಕ್, ಪಹ್ಲೂಖಾನ್ ಎಲ್ಲರ ಪೆಕರಣದಲ್ಲೂ ಸತ್ತವರ ಕುಟುಂಬದವರ ಮೇಲೆಯೇ ಪ್ರಕರಣ ದಾಖಲಾಗಿದೆ.

ಇದು ಒಂದಿಡೀ ಸಮುದಾಯದಲ್ಲಿ ಭೀತಿ ಹುಟ್ಟಿಸಿ ಹಿಂದೆ ತಳ್ಳುವ ಆರೆಸ್ಸೆಸ್‍ನ ಹಳೆಯ ಕುತಂತ್ರ. ಸಾಚಾರ್ ಸಮಿತಿ ವರದಿ ಹೇಳುತ್ತದೆ. ಶಿಕ್ಷಣದಲ್ಲಿ, ಉದ್ಯೋಗದಲ್ಲಿ, ರೈಲ್ವೇಸ್‍ಲ್ಲಿ, ಸೈನ್ಯದಲ್ಲಿ ಎಲ್ಲೂ ಮುಸ್ಲಿಮರಿಲ್ಲ. ಒಂದೇ ಸ್ಥಳದಲ್ಲಿ ಅವರು ತಮ್ಮ ಜನಸಂಖ್ಯೆಗಿಂತ ಹೆಚ್ಚು ಸರಾಸರಿಯಲ್ಲಿದ್ದಾರೆ, ಅದು ಭಾರತದ ಜೈಲುಗಳಲ್ಲಿ! ಈ ಸಮುದಾಯವು ಇಂದು ಇವೇನನ್ನೂ ಕೇಳುವ ಹಾಗಿಲ್ಲ. ನಮ್ಮ ವಿರುದ್ಧ ಗಲಭೆ ಮಾಡಬೇಡಿ, ರಕ್ಷಣೆ ಕೊಡಿ ಎಂದು ಕೇಳಿಕೊಳ್ಳಬೇಕಾಗಿದೆ.

ಯಾವ ಸಂಘಟನೆ ಬ್ರಿಟಿಷರ ಜೊತೆ ರಾಜಿ ಮಾಡಿಕೊಂಡು ಅವರಿಗೆ ಕ್ಷಮಾಪಣೆ ಪತ್ರ ಬರೆದು ಕಾಲಕಳೆಯಿತೋ ಅವರ ಇಂದು ದೇಶಪ್ರೇಮದ ಗುತ್ತಿಗೆ ಹಿಡಿದಿದ್ದಾರೆ. ಹೀಗೆ ಹೇಗೆ ಆಯಿತು? ಹೇಗೆಂದರೆ 2014ರಿಗಿಂತ ಹಿಂದೆಯೇ ಪ್ರಜಾತಂತ್ರ ದುರ್ಬಲಗೊಳ್ಳುತ್ತಿತ್ತು. ಇಂದು ಮೋದಿ ವಿರೋಧಿಗಳೆನ್ನುವವರದ್ದೂ ಅದರಲ್ಲಿ ಪಾತ್ರವಿದೆ. 1984ರ ದಂಗೆಯ ಬಗ್ಗೆ ಸರಿಯಾದ ತನಿಖೆ ಆಗಲೇ ಇಲ್ಲ. ಸಾರ್ವಜನಿಕ ಉದ್ದಿಮೆಗಳನು ದುರ್ಬಲಗೊಳಿಸುವುದರಲ್ಲಿ ಅವರ ಪಾತ್ರವಿದೆ. ಶ್ರೀಕೃಷ್ಣ ಆಯೋಗದ ವರದಿಯ ಶಿಫಾರಸ್ಸುಗಳನ್ನು ಜಾರಿ ಮಾಡಿಲ್ಲ. ಜಾಗತೀಕರಣ ನೀತಿಗಳನ್ನು ಜಾರಿಗೆ ತಂದಿದ್ದಾರೆ.

ದೇಶದ ಜನರು ಇವೆಲ್ಲವನ್ನೂ ಅರ್ಥ ಮಾಡಿಕೊಂಡರೆ, 2019ರ ಚುನಾವಣೆಯಲ್ಲಿ ನಾವು ಅವರನ್ನು ಗುಜರಾತ್‍ಗೆ ಘರ್ ವಾಪಸಿ ಮಾಡಿಸುತ್ತೇವೆಂಬ ನಂಬಿಕೆ ನನಗಿದೆ. ಆದರೆ, ಇವರನ್ನು ಚುನಾವಣೆಯಲ್ಲಿ ಸೋಲಿಸುವುದಷ್ಠೆ ನಮ್ಮ ಕೆಲಸವಲ್ಲ. ಆರೆಸ್ಸೆಸ್ಸನ್ನು ಸೈದ್ಧಾಂತಿಕವಾಗಿ ಸೋಲಿಸುವುದು ಮತ್ತು ನಮ್ಮ ಸಂವಿಧಾನದ ಆಶಯವಾದ ಜೀವಪರ ದೇಶವನ್ನು ಕಟ್ಟುವುದು ನಮ್ಮ ಕೆಲಸವಾಗಬೇಕು ಈಗ.

 

ಇಷ್ಟು ಹೇಳಿ ನನ್ನ ಮಾತು ಮುಗಿಸುತ್ತೇನೆ. ಧನ್ಯವಾದಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...