Homeಚಳವಳಿ'Prisonor No. 626710 is present' ಸಾಕ್ಷ್ಯ ಚಿತ್ರ | 'ನಿನ್ನೆಯ ಸಂಜೆ ಉಮರ್‌ ಜೊತೆ...'

‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’

- Advertisement -
- Advertisement -

ನಿನ್ನೆ ಬೆಂಗಳೂರಿನ ಆಶಿರ್ವಾದ್‌ ಕೇಂದ್ರದಲ್ಲಿ Prisonor No. 626710 is present ಎಂಬ ಸಾಕ್ಷ್ಯ ಚಿತ್ರದ ಪ್ರದರ್ಶನ ಏರ್ಪಾಡಾಗಿತ್ತು. 6.30ಕ್ಕೆ ಪ್ರದರ್ಶನ ಎಂದು ಹಾಕಲಾಗಿತ್ತು. 6.15ಕ್ಕೇ ಹಾಲ್‌ ಫುಲ್‌ ಆಗಿತ್ತು. ಆದರೂ ಸಿನಿಮಾ ಶುರುವಾದದ್ದು 6.45ಕ್ಕೆ. ಬಂದವರನ್ನು ಕೂರಿಸಲು ಫಾದರ್‌ ಅರುಣ್‌ ಲೂಯಿಸ್ ಪೇಚಾಡುತ್ತಿದ್ದರು. ಸುಮಾರು ಜನ ನೆಲದ ಮೇಲೆಯೇ ಕೂತರು. ಕೂರಲೂ ಜಾಗವಿಲ್ಲ. ಹಾಗೂ ಹೀಗೂ ಮಾಡಿ ಚಿತ್ರವನ್ನು ಚಾಲು ಮಾಡಲಾಯಿತು.ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಈ ವಿಡಿಯೋ ನೋಡುತ್ತಿದ್ದೀರೆಂದರೆ ನಾನು ಬಂಧನವಾಗಿದ್ದೇನೆ ಎಂದೇ ಅರ್ಥ” ಎಂಬ ಉಮರ್‌ ನ ಮಾತಿನೊಂದಿಗೆ ಸಾಕ್ಷ್ಯ ಚಿತ್ರ ಪ್ರಾರಂಭವಾಯಿತು. ತನ್ನ ಬಂಧನವನ್ನು ನಿರೀಕ್ಷಿಸಿದ್ದ ಉಮರ್‌ ಮೊದಲೇ ರೆಕಾರ್ಡ್‌ ಮಾಡಿದ್ದ ವಿಡಿಯೋ ಅದು. ಸ್ವಯಂ ಉಮರ್‌, ಅವರ ಬಾಳ ಸಂಗಾತಿ ಜೋಸ್ನ ಹಾಗೂ ಅವರ ಮತ್ತೊಬ್ಬ ಮಿತ್ರನ ಮಾತುಗಳನ್ನು ನಿರೂಪಣೆಯಾಗಿ ಹೆಣೆಯಲಾಗಿದೆ.

ಇದನ್ನೂ ಓದಿ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ಮಧ್ಯದಲ್ಲಿ 2016 ರಿಂದ 2020ರ ನಡುವೆ ಜೆ ಎನ್‌ ಯು ಹಾಗೂ ದೆಹಲಿಯಲ್ಲಿ ನಡೆದ ಘಟನಾವಳಿಗಳನ್ನು ಹಿನ್ನೆಲೆಯಾಗಿ ಸಮರ್ಥ ರೀತಿಯಲ್ಲಿ ಬಳಸಲಾಗಿದೆ. ಸಿನೆಮಾ ಉಮರ್‌ ಬಗ್ಗೆ ಮಾತನಾಡಿದರೂ ಅದು ಹೇಳುವುದು ಈ ದೇಶದ ದುರಂತ ಕಥೆಯನ್ನು. ಬಹಳ ಸರಳವಾಗಿ, ನೇರವಾಗಿ, ಕಣ್ಣಿಗೆ ಕಟ್ಟುವ ವಿಡಿಯೋ ತುಣುಕುಗಳ ಮೂಲಕ ಹಾಗೂ ಹೃದಯ ಕಲಕುವ ವಾಸ್ತವಗಳ ಮೂಲಕ ನಿರ್ದೇಶಕ ಲಲಿತ್‌ ವಾಚಾನಿ ಅವರು ಚಿತ್ರವನ್ನು ಕಟ್ಟಿಕೊಡುವ ಪರಿ simple but super.

ಸಿನಿಮಾ ಮುಗಿದ ಮೇಲೆ ಸಂವಾದದ ಆರಂಭಿಕ ಮಾತುಗಳನ್ನಾಡಲು ನನ್ನನ್ನು ಕರೆದರು. ಉಮರ್‌ ಅವರನ್ನು ಹತ್ತಿರದಿಂದ ಬಲ್ಲವನು ಎಂಬ ಕಾರಣಕ್ಕೆ. ಮನದಾಳದಿಂದ ಉಮರ್‌ ಗೆ ಕ್ಷಮೆ ಕೇಳಿದೆ. ಉಮರ್‌ ಬಿಡುಗಡೆಗೆ ಇಷ್ಟು ವರ್ಷವಾದರೂ ನಾವು ಗಟ್ಟಿ ದನಿ ಎತ್ತಲಿಲ್ಲವಲ್ಲಾ ಎಂಬ ಕೊರಗು ಕಾಡುತ್ತಿತ್ತು. ನನ್ನದು ಮಾತ್ರವಲ್ಲ ಬಂದವರೆಲ್ಲರ ಮನಸ್ಸುಗಳೂ ಉಮರ್‌ ಬಿಡುಗಡೆಗೆ ಏನಾದರೂ ಮಾಡಬೇಕು ಎಂದು ಒತ್ತಾಯಿಸುತ್ತಿದ್ದವು.

ಭಾಗವಹಿಸಿದವರಲ್ಲಿ ಬಹುತೇಕ ಯುವ ಮುಖಗಳು. ಅ ಮುಖಗಳಲ್ಲಿ ಒಂದು ಕಾಳಜಿ ಇತ್ತು, ಹೊಳಪಿತ್ತು. ಸಂವಾದದ ಭಾಗವಾಗಿ ಹಲವರು ಯುವ ಮಿತ್ರರು ಬಹಳ ಚೆನ್ನಾಗಿ ಮಾತನಾಡಿದರು. ಮರ ಸಂಸ್ಥೆಯ ರಾಮ್‌ ಅರ್ಥಪೂರ್ಣ ಮಾತುಗಳ ಮೂಲಕ ಸಭೆಯನ್ನು ಸಮಾರೋಪಗೊಳಿಸಿದರು. ಸಭೆ ಮುಗಿದರೂ ಅನೇಕರಿಗೆ ಹೊರಡುವ ಮನಸ್ಸಿರಲಿಲ್ಲ. ಅಲ್ಲಲ್ಲೆ ಗುಂಪಾಗಿ ನಿಂತು, ಕುಳಿತು, ಮಾತಿನಲ್ಲಿ ತಲ್ಲೀನರಾಗಿದ್ದರು. ಕಳಕಳಿಯ ಮನಸ್ಸುಗಳ ಕಲರವದ ಮಾತಾವರಣ ಎಲ್ಲರನ್ನು ಹಿಡಿದಿಟ್ಟುಕೊಂಡಿತ್ತು ಅನಿಸುತ್ತೆ.

ಇದನ್ನೂಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ಯುವಜನರ ನಡುವೆ ಹಿರಿಯ ಹೋರಾಟಗಾರರೂ ಇದ್ದರು. ಯುವಜನರಿಗೆ ಮಾತನಾಡಲು ಬಿಟ್ಟು ಅವರು ಸುಮ್ಮನೆ ಕೂತು ಆಲಿಸುತ್ತಿದ್ದರು. ಒಂದು ರೀತಿಯಲ್ಲಿ ಆನಂದಿಸುತ್ತಿದ್ದರು. ಪ್ರಸಿದ್ಧ ರಂಗ ಕರ್ಮಿ ರಘುನಂದನ್ ಅವರು ವಿರೋಧ ಪಕ್ಷಗಳಾವುವೂ ಕೋರೆಗಾಂವ್‌ ಆರೋಪಿಗಳ ಬಗ್ಗೆಯಾಗಲೀ, ಉಮರ್‌ ಬಗ್ಗೆಯಾಗಲೀ ಮಾತನಾಡುತ್ತಿಲ್ಲ. ಎಲ್ಲಿ ತಮ್ಮನ್ನೂ ಭಯೋತ್ಪಾದಕರ ಬೆಂಬಲಿಗರು ಎಂದು ದೂಷಿಸಲಾಗುತ್ತೋ ಎಂಬ ಭಯ ಅವರಿಗೆ. ಆದರೆ ಈ ಪಕ್ಷಗಳೂ ಸಹ ಮಾತನಾಡಲೇಬಾಕಾದಂತಹ ವಾತಾವರಣವನ್ನು ಹಾಗೂ ಒತ್ತಡವನ್ನು ನಾವು ಸೃಷ್ಟಿಸಬೇಕು ಎಂದು ಸಲಹೆ ಮಾಡಿದರು.

ಸ್ಕ್ರೀನಿಂಗ್‌ ಹಾಗೂ ಸಂವಾದ ಎರಡನ್ನೂ ಮುಗಿಸಿಕೊಂಡು ಹೊರಟೆ. ಆದರೂ ಎರಡೂ ಹಿಂಬಾಲಿಸುತ್ತಲೇ ಬಂದವು. ಈಗಲೂ ಮನದ ಮೂಲೆಯಲ್ಲಿ ಗಟ್ಟಿಯಾಗಿ ಕೂತಿವೆ. ಏನು ಮಾಡುತ್ತೀರಿ ಎಂದು ಕೇಳುತ್ತಿವೆ. ಉತ್ತರ ಕಂಡುಕೊಳ್ಳಲೇಬೇಕು, ನಾವೆಲ್ಲರೂ ಕೂಡಿ.

ಮುಗಿಸುವ ಮುನ್ನ ಒಂದು ಮಾತು. ಈ ಸಾಕ್ಷ್ಯ ಚಿತ್ರ ತಾವು ನೋಡಲೇಬೇಕು. ಸಾಧ್ಯವಾದಷ್ಟು ನೀವಿರುವ ಕಡೆಗಳಲ್ಲಿ ಸ್ಕ್ರೀನಿಂಗ್‌ ಏರ್ಪಡಿಸಿ ಸಮಾನ ಮನಸ್ಕರ ಜೊತೆ ನೋಡಿ. ಆಗದಿದ್ದರೆ ವ್ಯಕ್ತಿಗತವಾಗಿಯಾದರೂ ನೋಡಿ. ಚಿತ್ರದ ಲಿಂಕ್‌ ಬೇಕಿದ್ದಲ್ಲಿ ನಿಸಾರ್‌ [8056035809] ಅವರನ್ನು ಸಂಪರ್ಕಿಸಿ.

ಉಮರ್‌ ಬಳಿ ಮತ್ತೊಮ್ಮೆ ಕ್ಷಮೆ ಕೋರುತ್ತಾ.

ವಿಡಿಯೊನೋಡಿ: ಕಟ್ಟುತ್ತೇವಾ ನಾವು ಜಾತಿ ಇಲ್ಲದ ಭೀತಿ ಇಲ್ಲದ ನಾಡ ಕಟ್ಟುತ್ತೇವೆ; ಹಾಡು ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...