Homeಚಳವಳಿ'Prisonor No. 626710 is present' ಸಾಕ್ಷ್ಯ ಚಿತ್ರ | 'ನಿನ್ನೆಯ ಸಂಜೆ ಉಮರ್‌ ಜೊತೆ...'

‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’

- Advertisement -
- Advertisement -

ನಿನ್ನೆ ಬೆಂಗಳೂರಿನ ಆಶಿರ್ವಾದ್‌ ಕೇಂದ್ರದಲ್ಲಿ Prisonor No. 626710 is present ಎಂಬ ಸಾಕ್ಷ್ಯ ಚಿತ್ರದ ಪ್ರದರ್ಶನ ಏರ್ಪಾಡಾಗಿತ್ತು. 6.30ಕ್ಕೆ ಪ್ರದರ್ಶನ ಎಂದು ಹಾಕಲಾಗಿತ್ತು. 6.15ಕ್ಕೇ ಹಾಲ್‌ ಫುಲ್‌ ಆಗಿತ್ತು. ಆದರೂ ಸಿನಿಮಾ ಶುರುವಾದದ್ದು 6.45ಕ್ಕೆ. ಬಂದವರನ್ನು ಕೂರಿಸಲು ಫಾದರ್‌ ಅರುಣ್‌ ಲೂಯಿಸ್ ಪೇಚಾಡುತ್ತಿದ್ದರು. ಸುಮಾರು ಜನ ನೆಲದ ಮೇಲೆಯೇ ಕೂತರು. ಕೂರಲೂ ಜಾಗವಿಲ್ಲ. ಹಾಗೂ ಹೀಗೂ ಮಾಡಿ ಚಿತ್ರವನ್ನು ಚಾಲು ಮಾಡಲಾಯಿತು.ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಈ ವಿಡಿಯೋ ನೋಡುತ್ತಿದ್ದೀರೆಂದರೆ ನಾನು ಬಂಧನವಾಗಿದ್ದೇನೆ ಎಂದೇ ಅರ್ಥ” ಎಂಬ ಉಮರ್‌ ನ ಮಾತಿನೊಂದಿಗೆ ಸಾಕ್ಷ್ಯ ಚಿತ್ರ ಪ್ರಾರಂಭವಾಯಿತು. ತನ್ನ ಬಂಧನವನ್ನು ನಿರೀಕ್ಷಿಸಿದ್ದ ಉಮರ್‌ ಮೊದಲೇ ರೆಕಾರ್ಡ್‌ ಮಾಡಿದ್ದ ವಿಡಿಯೋ ಅದು. ಸ್ವಯಂ ಉಮರ್‌, ಅವರ ಬಾಳ ಸಂಗಾತಿ ಜೋಸ್ನ ಹಾಗೂ ಅವರ ಮತ್ತೊಬ್ಬ ಮಿತ್ರನ ಮಾತುಗಳನ್ನು ನಿರೂಪಣೆಯಾಗಿ ಹೆಣೆಯಲಾಗಿದೆ.

ಇದನ್ನೂ ಓದಿ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ಮಧ್ಯದಲ್ಲಿ 2016 ರಿಂದ 2020ರ ನಡುವೆ ಜೆ ಎನ್‌ ಯು ಹಾಗೂ ದೆಹಲಿಯಲ್ಲಿ ನಡೆದ ಘಟನಾವಳಿಗಳನ್ನು ಹಿನ್ನೆಲೆಯಾಗಿ ಸಮರ್ಥ ರೀತಿಯಲ್ಲಿ ಬಳಸಲಾಗಿದೆ. ಸಿನೆಮಾ ಉಮರ್‌ ಬಗ್ಗೆ ಮಾತನಾಡಿದರೂ ಅದು ಹೇಳುವುದು ಈ ದೇಶದ ದುರಂತ ಕಥೆಯನ್ನು. ಬಹಳ ಸರಳವಾಗಿ, ನೇರವಾಗಿ, ಕಣ್ಣಿಗೆ ಕಟ್ಟುವ ವಿಡಿಯೋ ತುಣುಕುಗಳ ಮೂಲಕ ಹಾಗೂ ಹೃದಯ ಕಲಕುವ ವಾಸ್ತವಗಳ ಮೂಲಕ ನಿರ್ದೇಶಕ ಲಲಿತ್‌ ವಾಚಾನಿ ಅವರು ಚಿತ್ರವನ್ನು ಕಟ್ಟಿಕೊಡುವ ಪರಿ simple but super.

ಸಿನಿಮಾ ಮುಗಿದ ಮೇಲೆ ಸಂವಾದದ ಆರಂಭಿಕ ಮಾತುಗಳನ್ನಾಡಲು ನನ್ನನ್ನು ಕರೆದರು. ಉಮರ್‌ ಅವರನ್ನು ಹತ್ತಿರದಿಂದ ಬಲ್ಲವನು ಎಂಬ ಕಾರಣಕ್ಕೆ. ಮನದಾಳದಿಂದ ಉಮರ್‌ ಗೆ ಕ್ಷಮೆ ಕೇಳಿದೆ. ಉಮರ್‌ ಬಿಡುಗಡೆಗೆ ಇಷ್ಟು ವರ್ಷವಾದರೂ ನಾವು ಗಟ್ಟಿ ದನಿ ಎತ್ತಲಿಲ್ಲವಲ್ಲಾ ಎಂಬ ಕೊರಗು ಕಾಡುತ್ತಿತ್ತು. ನನ್ನದು ಮಾತ್ರವಲ್ಲ ಬಂದವರೆಲ್ಲರ ಮನಸ್ಸುಗಳೂ ಉಮರ್‌ ಬಿಡುಗಡೆಗೆ ಏನಾದರೂ ಮಾಡಬೇಕು ಎಂದು ಒತ್ತಾಯಿಸುತ್ತಿದ್ದವು.

ಭಾಗವಹಿಸಿದವರಲ್ಲಿ ಬಹುತೇಕ ಯುವ ಮುಖಗಳು. ಅ ಮುಖಗಳಲ್ಲಿ ಒಂದು ಕಾಳಜಿ ಇತ್ತು, ಹೊಳಪಿತ್ತು. ಸಂವಾದದ ಭಾಗವಾಗಿ ಹಲವರು ಯುವ ಮಿತ್ರರು ಬಹಳ ಚೆನ್ನಾಗಿ ಮಾತನಾಡಿದರು. ಮರ ಸಂಸ್ಥೆಯ ರಾಮ್‌ ಅರ್ಥಪೂರ್ಣ ಮಾತುಗಳ ಮೂಲಕ ಸಭೆಯನ್ನು ಸಮಾರೋಪಗೊಳಿಸಿದರು. ಸಭೆ ಮುಗಿದರೂ ಅನೇಕರಿಗೆ ಹೊರಡುವ ಮನಸ್ಸಿರಲಿಲ್ಲ. ಅಲ್ಲಲ್ಲೆ ಗುಂಪಾಗಿ ನಿಂತು, ಕುಳಿತು, ಮಾತಿನಲ್ಲಿ ತಲ್ಲೀನರಾಗಿದ್ದರು. ಕಳಕಳಿಯ ಮನಸ್ಸುಗಳ ಕಲರವದ ಮಾತಾವರಣ ಎಲ್ಲರನ್ನು ಹಿಡಿದಿಟ್ಟುಕೊಂಡಿತ್ತು ಅನಿಸುತ್ತೆ.

ಇದನ್ನೂಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ಯುವಜನರ ನಡುವೆ ಹಿರಿಯ ಹೋರಾಟಗಾರರೂ ಇದ್ದರು. ಯುವಜನರಿಗೆ ಮಾತನಾಡಲು ಬಿಟ್ಟು ಅವರು ಸುಮ್ಮನೆ ಕೂತು ಆಲಿಸುತ್ತಿದ್ದರು. ಒಂದು ರೀತಿಯಲ್ಲಿ ಆನಂದಿಸುತ್ತಿದ್ದರು. ಪ್ರಸಿದ್ಧ ರಂಗ ಕರ್ಮಿ ರಘುನಂದನ್ ಅವರು ವಿರೋಧ ಪಕ್ಷಗಳಾವುವೂ ಕೋರೆಗಾಂವ್‌ ಆರೋಪಿಗಳ ಬಗ್ಗೆಯಾಗಲೀ, ಉಮರ್‌ ಬಗ್ಗೆಯಾಗಲೀ ಮಾತನಾಡುತ್ತಿಲ್ಲ. ಎಲ್ಲಿ ತಮ್ಮನ್ನೂ ಭಯೋತ್ಪಾದಕರ ಬೆಂಬಲಿಗರು ಎಂದು ದೂಷಿಸಲಾಗುತ್ತೋ ಎಂಬ ಭಯ ಅವರಿಗೆ. ಆದರೆ ಈ ಪಕ್ಷಗಳೂ ಸಹ ಮಾತನಾಡಲೇಬಾಕಾದಂತಹ ವಾತಾವರಣವನ್ನು ಹಾಗೂ ಒತ್ತಡವನ್ನು ನಾವು ಸೃಷ್ಟಿಸಬೇಕು ಎಂದು ಸಲಹೆ ಮಾಡಿದರು.

ಸ್ಕ್ರೀನಿಂಗ್‌ ಹಾಗೂ ಸಂವಾದ ಎರಡನ್ನೂ ಮುಗಿಸಿಕೊಂಡು ಹೊರಟೆ. ಆದರೂ ಎರಡೂ ಹಿಂಬಾಲಿಸುತ್ತಲೇ ಬಂದವು. ಈಗಲೂ ಮನದ ಮೂಲೆಯಲ್ಲಿ ಗಟ್ಟಿಯಾಗಿ ಕೂತಿವೆ. ಏನು ಮಾಡುತ್ತೀರಿ ಎಂದು ಕೇಳುತ್ತಿವೆ. ಉತ್ತರ ಕಂಡುಕೊಳ್ಳಲೇಬೇಕು, ನಾವೆಲ್ಲರೂ ಕೂಡಿ.

ಮುಗಿಸುವ ಮುನ್ನ ಒಂದು ಮಾತು. ಈ ಸಾಕ್ಷ್ಯ ಚಿತ್ರ ತಾವು ನೋಡಲೇಬೇಕು. ಸಾಧ್ಯವಾದಷ್ಟು ನೀವಿರುವ ಕಡೆಗಳಲ್ಲಿ ಸ್ಕ್ರೀನಿಂಗ್‌ ಏರ್ಪಡಿಸಿ ಸಮಾನ ಮನಸ್ಕರ ಜೊತೆ ನೋಡಿ. ಆಗದಿದ್ದರೆ ವ್ಯಕ್ತಿಗತವಾಗಿಯಾದರೂ ನೋಡಿ. ಚಿತ್ರದ ಲಿಂಕ್‌ ಬೇಕಿದ್ದಲ್ಲಿ ನಿಸಾರ್‌ [8056035809] ಅವರನ್ನು ಸಂಪರ್ಕಿಸಿ.

ಉಮರ್‌ ಬಳಿ ಮತ್ತೊಮ್ಮೆ ಕ್ಷಮೆ ಕೋರುತ್ತಾ.

ವಿಡಿಯೊನೋಡಿ: ಕಟ್ಟುತ್ತೇವಾ ನಾವು ಜಾತಿ ಇಲ್ಲದ ಭೀತಿ ಇಲ್ಲದ ನಾಡ ಕಟ್ಟುತ್ತೇವೆ; ಹಾಡು ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...