Homeಚಳವಳಿ'Prisonor No. 626710 is present' ಸಾಕ್ಷ್ಯ ಚಿತ್ರ | 'ನಿನ್ನೆಯ ಸಂಜೆ ಉಮರ್‌ ಜೊತೆ...'

‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’

- Advertisement -
- Advertisement -

ನಿನ್ನೆ ಬೆಂಗಳೂರಿನ ಆಶಿರ್ವಾದ್‌ ಕೇಂದ್ರದಲ್ಲಿ Prisonor No. 626710 is present ಎಂಬ ಸಾಕ್ಷ್ಯ ಚಿತ್ರದ ಪ್ರದರ್ಶನ ಏರ್ಪಾಡಾಗಿತ್ತು. 6.30ಕ್ಕೆ ಪ್ರದರ್ಶನ ಎಂದು ಹಾಕಲಾಗಿತ್ತು. 6.15ಕ್ಕೇ ಹಾಲ್‌ ಫುಲ್‌ ಆಗಿತ್ತು. ಆದರೂ ಸಿನಿಮಾ ಶುರುವಾದದ್ದು 6.45ಕ್ಕೆ. ಬಂದವರನ್ನು ಕೂರಿಸಲು ಫಾದರ್‌ ಅರುಣ್‌ ಲೂಯಿಸ್ ಪೇಚಾಡುತ್ತಿದ್ದರು. ಸುಮಾರು ಜನ ನೆಲದ ಮೇಲೆಯೇ ಕೂತರು. ಕೂರಲೂ ಜಾಗವಿಲ್ಲ. ಹಾಗೂ ಹೀಗೂ ಮಾಡಿ ಚಿತ್ರವನ್ನು ಚಾಲು ಮಾಡಲಾಯಿತು.ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಈ ವಿಡಿಯೋ ನೋಡುತ್ತಿದ್ದೀರೆಂದರೆ ನಾನು ಬಂಧನವಾಗಿದ್ದೇನೆ ಎಂದೇ ಅರ್ಥ” ಎಂಬ ಉಮರ್‌ ನ ಮಾತಿನೊಂದಿಗೆ ಸಾಕ್ಷ್ಯ ಚಿತ್ರ ಪ್ರಾರಂಭವಾಯಿತು. ತನ್ನ ಬಂಧನವನ್ನು ನಿರೀಕ್ಷಿಸಿದ್ದ ಉಮರ್‌ ಮೊದಲೇ ರೆಕಾರ್ಡ್‌ ಮಾಡಿದ್ದ ವಿಡಿಯೋ ಅದು. ಸ್ವಯಂ ಉಮರ್‌, ಅವರ ಬಾಳ ಸಂಗಾತಿ ಜೋಸ್ನ ಹಾಗೂ ಅವರ ಮತ್ತೊಬ್ಬ ಮಿತ್ರನ ಮಾತುಗಳನ್ನು ನಿರೂಪಣೆಯಾಗಿ ಹೆಣೆಯಲಾಗಿದೆ.

ಇದನ್ನೂ ಓದಿ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ಮಧ್ಯದಲ್ಲಿ 2016 ರಿಂದ 2020ರ ನಡುವೆ ಜೆ ಎನ್‌ ಯು ಹಾಗೂ ದೆಹಲಿಯಲ್ಲಿ ನಡೆದ ಘಟನಾವಳಿಗಳನ್ನು ಹಿನ್ನೆಲೆಯಾಗಿ ಸಮರ್ಥ ರೀತಿಯಲ್ಲಿ ಬಳಸಲಾಗಿದೆ. ಸಿನೆಮಾ ಉಮರ್‌ ಬಗ್ಗೆ ಮಾತನಾಡಿದರೂ ಅದು ಹೇಳುವುದು ಈ ದೇಶದ ದುರಂತ ಕಥೆಯನ್ನು. ಬಹಳ ಸರಳವಾಗಿ, ನೇರವಾಗಿ, ಕಣ್ಣಿಗೆ ಕಟ್ಟುವ ವಿಡಿಯೋ ತುಣುಕುಗಳ ಮೂಲಕ ಹಾಗೂ ಹೃದಯ ಕಲಕುವ ವಾಸ್ತವಗಳ ಮೂಲಕ ನಿರ್ದೇಶಕ ಲಲಿತ್‌ ವಾಚಾನಿ ಅವರು ಚಿತ್ರವನ್ನು ಕಟ್ಟಿಕೊಡುವ ಪರಿ simple but super.

ಸಿನಿಮಾ ಮುಗಿದ ಮೇಲೆ ಸಂವಾದದ ಆರಂಭಿಕ ಮಾತುಗಳನ್ನಾಡಲು ನನ್ನನ್ನು ಕರೆದರು. ಉಮರ್‌ ಅವರನ್ನು ಹತ್ತಿರದಿಂದ ಬಲ್ಲವನು ಎಂಬ ಕಾರಣಕ್ಕೆ. ಮನದಾಳದಿಂದ ಉಮರ್‌ ಗೆ ಕ್ಷಮೆ ಕೇಳಿದೆ. ಉಮರ್‌ ಬಿಡುಗಡೆಗೆ ಇಷ್ಟು ವರ್ಷವಾದರೂ ನಾವು ಗಟ್ಟಿ ದನಿ ಎತ್ತಲಿಲ್ಲವಲ್ಲಾ ಎಂಬ ಕೊರಗು ಕಾಡುತ್ತಿತ್ತು. ನನ್ನದು ಮಾತ್ರವಲ್ಲ ಬಂದವರೆಲ್ಲರ ಮನಸ್ಸುಗಳೂ ಉಮರ್‌ ಬಿಡುಗಡೆಗೆ ಏನಾದರೂ ಮಾಡಬೇಕು ಎಂದು ಒತ್ತಾಯಿಸುತ್ತಿದ್ದವು.

ಭಾಗವಹಿಸಿದವರಲ್ಲಿ ಬಹುತೇಕ ಯುವ ಮುಖಗಳು. ಅ ಮುಖಗಳಲ್ಲಿ ಒಂದು ಕಾಳಜಿ ಇತ್ತು, ಹೊಳಪಿತ್ತು. ಸಂವಾದದ ಭಾಗವಾಗಿ ಹಲವರು ಯುವ ಮಿತ್ರರು ಬಹಳ ಚೆನ್ನಾಗಿ ಮಾತನಾಡಿದರು. ಮರ ಸಂಸ್ಥೆಯ ರಾಮ್‌ ಅರ್ಥಪೂರ್ಣ ಮಾತುಗಳ ಮೂಲಕ ಸಭೆಯನ್ನು ಸಮಾರೋಪಗೊಳಿಸಿದರು. ಸಭೆ ಮುಗಿದರೂ ಅನೇಕರಿಗೆ ಹೊರಡುವ ಮನಸ್ಸಿರಲಿಲ್ಲ. ಅಲ್ಲಲ್ಲೆ ಗುಂಪಾಗಿ ನಿಂತು, ಕುಳಿತು, ಮಾತಿನಲ್ಲಿ ತಲ್ಲೀನರಾಗಿದ್ದರು. ಕಳಕಳಿಯ ಮನಸ್ಸುಗಳ ಕಲರವದ ಮಾತಾವರಣ ಎಲ್ಲರನ್ನು ಹಿಡಿದಿಟ್ಟುಕೊಂಡಿತ್ತು ಅನಿಸುತ್ತೆ.

ಇದನ್ನೂಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ಯುವಜನರ ನಡುವೆ ಹಿರಿಯ ಹೋರಾಟಗಾರರೂ ಇದ್ದರು. ಯುವಜನರಿಗೆ ಮಾತನಾಡಲು ಬಿಟ್ಟು ಅವರು ಸುಮ್ಮನೆ ಕೂತು ಆಲಿಸುತ್ತಿದ್ದರು. ಒಂದು ರೀತಿಯಲ್ಲಿ ಆನಂದಿಸುತ್ತಿದ್ದರು. ಪ್ರಸಿದ್ಧ ರಂಗ ಕರ್ಮಿ ರಘುನಂದನ್ ಅವರು ವಿರೋಧ ಪಕ್ಷಗಳಾವುವೂ ಕೋರೆಗಾಂವ್‌ ಆರೋಪಿಗಳ ಬಗ್ಗೆಯಾಗಲೀ, ಉಮರ್‌ ಬಗ್ಗೆಯಾಗಲೀ ಮಾತನಾಡುತ್ತಿಲ್ಲ. ಎಲ್ಲಿ ತಮ್ಮನ್ನೂ ಭಯೋತ್ಪಾದಕರ ಬೆಂಬಲಿಗರು ಎಂದು ದೂಷಿಸಲಾಗುತ್ತೋ ಎಂಬ ಭಯ ಅವರಿಗೆ. ಆದರೆ ಈ ಪಕ್ಷಗಳೂ ಸಹ ಮಾತನಾಡಲೇಬಾಕಾದಂತಹ ವಾತಾವರಣವನ್ನು ಹಾಗೂ ಒತ್ತಡವನ್ನು ನಾವು ಸೃಷ್ಟಿಸಬೇಕು ಎಂದು ಸಲಹೆ ಮಾಡಿದರು.

ಸ್ಕ್ರೀನಿಂಗ್‌ ಹಾಗೂ ಸಂವಾದ ಎರಡನ್ನೂ ಮುಗಿಸಿಕೊಂಡು ಹೊರಟೆ. ಆದರೂ ಎರಡೂ ಹಿಂಬಾಲಿಸುತ್ತಲೇ ಬಂದವು. ಈಗಲೂ ಮನದ ಮೂಲೆಯಲ್ಲಿ ಗಟ್ಟಿಯಾಗಿ ಕೂತಿವೆ. ಏನು ಮಾಡುತ್ತೀರಿ ಎಂದು ಕೇಳುತ್ತಿವೆ. ಉತ್ತರ ಕಂಡುಕೊಳ್ಳಲೇಬೇಕು, ನಾವೆಲ್ಲರೂ ಕೂಡಿ.

ಮುಗಿಸುವ ಮುನ್ನ ಒಂದು ಮಾತು. ಈ ಸಾಕ್ಷ್ಯ ಚಿತ್ರ ತಾವು ನೋಡಲೇಬೇಕು. ಸಾಧ್ಯವಾದಷ್ಟು ನೀವಿರುವ ಕಡೆಗಳಲ್ಲಿ ಸ್ಕ್ರೀನಿಂಗ್‌ ಏರ್ಪಡಿಸಿ ಸಮಾನ ಮನಸ್ಕರ ಜೊತೆ ನೋಡಿ. ಆಗದಿದ್ದರೆ ವ್ಯಕ್ತಿಗತವಾಗಿಯಾದರೂ ನೋಡಿ. ಚಿತ್ರದ ಲಿಂಕ್‌ ಬೇಕಿದ್ದಲ್ಲಿ ನಿಸಾರ್‌ [8056035809] ಅವರನ್ನು ಸಂಪರ್ಕಿಸಿ.

ಉಮರ್‌ ಬಳಿ ಮತ್ತೊಮ್ಮೆ ಕ್ಷಮೆ ಕೋರುತ್ತಾ.

ವಿಡಿಯೊನೋಡಿ: ಕಟ್ಟುತ್ತೇವಾ ನಾವು ಜಾತಿ ಇಲ್ಲದ ಭೀತಿ ಇಲ್ಲದ ನಾಡ ಕಟ್ಟುತ್ತೇವೆ; ಹಾಡು ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....