Homeಚಳವಳಿ'Prisonor No. 626710 is present' ಸಾಕ್ಷ್ಯ ಚಿತ್ರ | 'ನಿನ್ನೆಯ ಸಂಜೆ ಉಮರ್‌ ಜೊತೆ...'

‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’

- Advertisement -
- Advertisement -

ನಿನ್ನೆ ಬೆಂಗಳೂರಿನ ಆಶಿರ್ವಾದ್‌ ಕೇಂದ್ರದಲ್ಲಿ Prisonor No. 626710 is present ಎಂಬ ಸಾಕ್ಷ್ಯ ಚಿತ್ರದ ಪ್ರದರ್ಶನ ಏರ್ಪಾಡಾಗಿತ್ತು. 6.30ಕ್ಕೆ ಪ್ರದರ್ಶನ ಎಂದು ಹಾಕಲಾಗಿತ್ತು. 6.15ಕ್ಕೇ ಹಾಲ್‌ ಫುಲ್‌ ಆಗಿತ್ತು. ಆದರೂ ಸಿನಿಮಾ ಶುರುವಾದದ್ದು 6.45ಕ್ಕೆ. ಬಂದವರನ್ನು ಕೂರಿಸಲು ಫಾದರ್‌ ಅರುಣ್‌ ಲೂಯಿಸ್ ಪೇಚಾಡುತ್ತಿದ್ದರು. ಸುಮಾರು ಜನ ನೆಲದ ಮೇಲೆಯೇ ಕೂತರು. ಕೂರಲೂ ಜಾಗವಿಲ್ಲ. ಹಾಗೂ ಹೀಗೂ ಮಾಡಿ ಚಿತ್ರವನ್ನು ಚಾಲು ಮಾಡಲಾಯಿತು.ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಈ ವಿಡಿಯೋ ನೋಡುತ್ತಿದ್ದೀರೆಂದರೆ ನಾನು ಬಂಧನವಾಗಿದ್ದೇನೆ ಎಂದೇ ಅರ್ಥ” ಎಂಬ ಉಮರ್‌ ನ ಮಾತಿನೊಂದಿಗೆ ಸಾಕ್ಷ್ಯ ಚಿತ್ರ ಪ್ರಾರಂಭವಾಯಿತು. ತನ್ನ ಬಂಧನವನ್ನು ನಿರೀಕ್ಷಿಸಿದ್ದ ಉಮರ್‌ ಮೊದಲೇ ರೆಕಾರ್ಡ್‌ ಮಾಡಿದ್ದ ವಿಡಿಯೋ ಅದು. ಸ್ವಯಂ ಉಮರ್‌, ಅವರ ಬಾಳ ಸಂಗಾತಿ ಜೋಸ್ನ ಹಾಗೂ ಅವರ ಮತ್ತೊಬ್ಬ ಮಿತ್ರನ ಮಾತುಗಳನ್ನು ನಿರೂಪಣೆಯಾಗಿ ಹೆಣೆಯಲಾಗಿದೆ.

ಇದನ್ನೂ ಓದಿ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ಮಧ್ಯದಲ್ಲಿ 2016 ರಿಂದ 2020ರ ನಡುವೆ ಜೆ ಎನ್‌ ಯು ಹಾಗೂ ದೆಹಲಿಯಲ್ಲಿ ನಡೆದ ಘಟನಾವಳಿಗಳನ್ನು ಹಿನ್ನೆಲೆಯಾಗಿ ಸಮರ್ಥ ರೀತಿಯಲ್ಲಿ ಬಳಸಲಾಗಿದೆ. ಸಿನೆಮಾ ಉಮರ್‌ ಬಗ್ಗೆ ಮಾತನಾಡಿದರೂ ಅದು ಹೇಳುವುದು ಈ ದೇಶದ ದುರಂತ ಕಥೆಯನ್ನು. ಬಹಳ ಸರಳವಾಗಿ, ನೇರವಾಗಿ, ಕಣ್ಣಿಗೆ ಕಟ್ಟುವ ವಿಡಿಯೋ ತುಣುಕುಗಳ ಮೂಲಕ ಹಾಗೂ ಹೃದಯ ಕಲಕುವ ವಾಸ್ತವಗಳ ಮೂಲಕ ನಿರ್ದೇಶಕ ಲಲಿತ್‌ ವಾಚಾನಿ ಅವರು ಚಿತ್ರವನ್ನು ಕಟ್ಟಿಕೊಡುವ ಪರಿ simple but super.

ಸಿನಿಮಾ ಮುಗಿದ ಮೇಲೆ ಸಂವಾದದ ಆರಂಭಿಕ ಮಾತುಗಳನ್ನಾಡಲು ನನ್ನನ್ನು ಕರೆದರು. ಉಮರ್‌ ಅವರನ್ನು ಹತ್ತಿರದಿಂದ ಬಲ್ಲವನು ಎಂಬ ಕಾರಣಕ್ಕೆ. ಮನದಾಳದಿಂದ ಉಮರ್‌ ಗೆ ಕ್ಷಮೆ ಕೇಳಿದೆ. ಉಮರ್‌ ಬಿಡುಗಡೆಗೆ ಇಷ್ಟು ವರ್ಷವಾದರೂ ನಾವು ಗಟ್ಟಿ ದನಿ ಎತ್ತಲಿಲ್ಲವಲ್ಲಾ ಎಂಬ ಕೊರಗು ಕಾಡುತ್ತಿತ್ತು. ನನ್ನದು ಮಾತ್ರವಲ್ಲ ಬಂದವರೆಲ್ಲರ ಮನಸ್ಸುಗಳೂ ಉಮರ್‌ ಬಿಡುಗಡೆಗೆ ಏನಾದರೂ ಮಾಡಬೇಕು ಎಂದು ಒತ್ತಾಯಿಸುತ್ತಿದ್ದವು.

ಭಾಗವಹಿಸಿದವರಲ್ಲಿ ಬಹುತೇಕ ಯುವ ಮುಖಗಳು. ಅ ಮುಖಗಳಲ್ಲಿ ಒಂದು ಕಾಳಜಿ ಇತ್ತು, ಹೊಳಪಿತ್ತು. ಸಂವಾದದ ಭಾಗವಾಗಿ ಹಲವರು ಯುವ ಮಿತ್ರರು ಬಹಳ ಚೆನ್ನಾಗಿ ಮಾತನಾಡಿದರು. ಮರ ಸಂಸ್ಥೆಯ ರಾಮ್‌ ಅರ್ಥಪೂರ್ಣ ಮಾತುಗಳ ಮೂಲಕ ಸಭೆಯನ್ನು ಸಮಾರೋಪಗೊಳಿಸಿದರು. ಸಭೆ ಮುಗಿದರೂ ಅನೇಕರಿಗೆ ಹೊರಡುವ ಮನಸ್ಸಿರಲಿಲ್ಲ. ಅಲ್ಲಲ್ಲೆ ಗುಂಪಾಗಿ ನಿಂತು, ಕುಳಿತು, ಮಾತಿನಲ್ಲಿ ತಲ್ಲೀನರಾಗಿದ್ದರು. ಕಳಕಳಿಯ ಮನಸ್ಸುಗಳ ಕಲರವದ ಮಾತಾವರಣ ಎಲ್ಲರನ್ನು ಹಿಡಿದಿಟ್ಟುಕೊಂಡಿತ್ತು ಅನಿಸುತ್ತೆ.

ಇದನ್ನೂಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ಯುವಜನರ ನಡುವೆ ಹಿರಿಯ ಹೋರಾಟಗಾರರೂ ಇದ್ದರು. ಯುವಜನರಿಗೆ ಮಾತನಾಡಲು ಬಿಟ್ಟು ಅವರು ಸುಮ್ಮನೆ ಕೂತು ಆಲಿಸುತ್ತಿದ್ದರು. ಒಂದು ರೀತಿಯಲ್ಲಿ ಆನಂದಿಸುತ್ತಿದ್ದರು. ಪ್ರಸಿದ್ಧ ರಂಗ ಕರ್ಮಿ ರಘುನಂದನ್ ಅವರು ವಿರೋಧ ಪಕ್ಷಗಳಾವುವೂ ಕೋರೆಗಾಂವ್‌ ಆರೋಪಿಗಳ ಬಗ್ಗೆಯಾಗಲೀ, ಉಮರ್‌ ಬಗ್ಗೆಯಾಗಲೀ ಮಾತನಾಡುತ್ತಿಲ್ಲ. ಎಲ್ಲಿ ತಮ್ಮನ್ನೂ ಭಯೋತ್ಪಾದಕರ ಬೆಂಬಲಿಗರು ಎಂದು ದೂಷಿಸಲಾಗುತ್ತೋ ಎಂಬ ಭಯ ಅವರಿಗೆ. ಆದರೆ ಈ ಪಕ್ಷಗಳೂ ಸಹ ಮಾತನಾಡಲೇಬಾಕಾದಂತಹ ವಾತಾವರಣವನ್ನು ಹಾಗೂ ಒತ್ತಡವನ್ನು ನಾವು ಸೃಷ್ಟಿಸಬೇಕು ಎಂದು ಸಲಹೆ ಮಾಡಿದರು.

ಸ್ಕ್ರೀನಿಂಗ್‌ ಹಾಗೂ ಸಂವಾದ ಎರಡನ್ನೂ ಮುಗಿಸಿಕೊಂಡು ಹೊರಟೆ. ಆದರೂ ಎರಡೂ ಹಿಂಬಾಲಿಸುತ್ತಲೇ ಬಂದವು. ಈಗಲೂ ಮನದ ಮೂಲೆಯಲ್ಲಿ ಗಟ್ಟಿಯಾಗಿ ಕೂತಿವೆ. ಏನು ಮಾಡುತ್ತೀರಿ ಎಂದು ಕೇಳುತ್ತಿವೆ. ಉತ್ತರ ಕಂಡುಕೊಳ್ಳಲೇಬೇಕು, ನಾವೆಲ್ಲರೂ ಕೂಡಿ.

ಮುಗಿಸುವ ಮುನ್ನ ಒಂದು ಮಾತು. ಈ ಸಾಕ್ಷ್ಯ ಚಿತ್ರ ತಾವು ನೋಡಲೇಬೇಕು. ಸಾಧ್ಯವಾದಷ್ಟು ನೀವಿರುವ ಕಡೆಗಳಲ್ಲಿ ಸ್ಕ್ರೀನಿಂಗ್‌ ಏರ್ಪಡಿಸಿ ಸಮಾನ ಮನಸ್ಕರ ಜೊತೆ ನೋಡಿ. ಆಗದಿದ್ದರೆ ವ್ಯಕ್ತಿಗತವಾಗಿಯಾದರೂ ನೋಡಿ. ಚಿತ್ರದ ಲಿಂಕ್‌ ಬೇಕಿದ್ದಲ್ಲಿ ನಿಸಾರ್‌ [8056035809] ಅವರನ್ನು ಸಂಪರ್ಕಿಸಿ.

ಉಮರ್‌ ಬಳಿ ಮತ್ತೊಮ್ಮೆ ಕ್ಷಮೆ ಕೋರುತ್ತಾ.

ವಿಡಿಯೊನೋಡಿ: ಕಟ್ಟುತ್ತೇವಾ ನಾವು ಜಾತಿ ಇಲ್ಲದ ಭೀತಿ ಇಲ್ಲದ ನಾಡ ಕಟ್ಟುತ್ತೇವೆ; ಹಾಡು ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...