Homeಚಳವಳಿ'Prisonor No. 626710 is present' ಸಾಕ್ಷ್ಯ ಚಿತ್ರ | 'ನಿನ್ನೆಯ ಸಂಜೆ ಉಮರ್‌ ಜೊತೆ...'

‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’

- Advertisement -
- Advertisement -

ನಿನ್ನೆ ಬೆಂಗಳೂರಿನ ಆಶಿರ್ವಾದ್‌ ಕೇಂದ್ರದಲ್ಲಿ Prisonor No. 626710 is present ಎಂಬ ಸಾಕ್ಷ್ಯ ಚಿತ್ರದ ಪ್ರದರ್ಶನ ಏರ್ಪಾಡಾಗಿತ್ತು. 6.30ಕ್ಕೆ ಪ್ರದರ್ಶನ ಎಂದು ಹಾಕಲಾಗಿತ್ತು. 6.15ಕ್ಕೇ ಹಾಲ್‌ ಫುಲ್‌ ಆಗಿತ್ತು. ಆದರೂ ಸಿನಿಮಾ ಶುರುವಾದದ್ದು 6.45ಕ್ಕೆ. ಬಂದವರನ್ನು ಕೂರಿಸಲು ಫಾದರ್‌ ಅರುಣ್‌ ಲೂಯಿಸ್ ಪೇಚಾಡುತ್ತಿದ್ದರು. ಸುಮಾರು ಜನ ನೆಲದ ಮೇಲೆಯೇ ಕೂತರು. ಕೂರಲೂ ಜಾಗವಿಲ್ಲ. ಹಾಗೂ ಹೀಗೂ ಮಾಡಿ ಚಿತ್ರವನ್ನು ಚಾಲು ಮಾಡಲಾಯಿತು.ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಈ ವಿಡಿಯೋ ನೋಡುತ್ತಿದ್ದೀರೆಂದರೆ ನಾನು ಬಂಧನವಾಗಿದ್ದೇನೆ ಎಂದೇ ಅರ್ಥ” ಎಂಬ ಉಮರ್‌ ನ ಮಾತಿನೊಂದಿಗೆ ಸಾಕ್ಷ್ಯ ಚಿತ್ರ ಪ್ರಾರಂಭವಾಯಿತು. ತನ್ನ ಬಂಧನವನ್ನು ನಿರೀಕ್ಷಿಸಿದ್ದ ಉಮರ್‌ ಮೊದಲೇ ರೆಕಾರ್ಡ್‌ ಮಾಡಿದ್ದ ವಿಡಿಯೋ ಅದು. ಸ್ವಯಂ ಉಮರ್‌, ಅವರ ಬಾಳ ಸಂಗಾತಿ ಜೋಸ್ನ ಹಾಗೂ ಅವರ ಮತ್ತೊಬ್ಬ ಮಿತ್ರನ ಮಾತುಗಳನ್ನು ನಿರೂಪಣೆಯಾಗಿ ಹೆಣೆಯಲಾಗಿದೆ.

ಇದನ್ನೂ ಓದಿ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ಮಧ್ಯದಲ್ಲಿ 2016 ರಿಂದ 2020ರ ನಡುವೆ ಜೆ ಎನ್‌ ಯು ಹಾಗೂ ದೆಹಲಿಯಲ್ಲಿ ನಡೆದ ಘಟನಾವಳಿಗಳನ್ನು ಹಿನ್ನೆಲೆಯಾಗಿ ಸಮರ್ಥ ರೀತಿಯಲ್ಲಿ ಬಳಸಲಾಗಿದೆ. ಸಿನೆಮಾ ಉಮರ್‌ ಬಗ್ಗೆ ಮಾತನಾಡಿದರೂ ಅದು ಹೇಳುವುದು ಈ ದೇಶದ ದುರಂತ ಕಥೆಯನ್ನು. ಬಹಳ ಸರಳವಾಗಿ, ನೇರವಾಗಿ, ಕಣ್ಣಿಗೆ ಕಟ್ಟುವ ವಿಡಿಯೋ ತುಣುಕುಗಳ ಮೂಲಕ ಹಾಗೂ ಹೃದಯ ಕಲಕುವ ವಾಸ್ತವಗಳ ಮೂಲಕ ನಿರ್ದೇಶಕ ಲಲಿತ್‌ ವಾಚಾನಿ ಅವರು ಚಿತ್ರವನ್ನು ಕಟ್ಟಿಕೊಡುವ ಪರಿ simple but super.

ಸಿನಿಮಾ ಮುಗಿದ ಮೇಲೆ ಸಂವಾದದ ಆರಂಭಿಕ ಮಾತುಗಳನ್ನಾಡಲು ನನ್ನನ್ನು ಕರೆದರು. ಉಮರ್‌ ಅವರನ್ನು ಹತ್ತಿರದಿಂದ ಬಲ್ಲವನು ಎಂಬ ಕಾರಣಕ್ಕೆ. ಮನದಾಳದಿಂದ ಉಮರ್‌ ಗೆ ಕ್ಷಮೆ ಕೇಳಿದೆ. ಉಮರ್‌ ಬಿಡುಗಡೆಗೆ ಇಷ್ಟು ವರ್ಷವಾದರೂ ನಾವು ಗಟ್ಟಿ ದನಿ ಎತ್ತಲಿಲ್ಲವಲ್ಲಾ ಎಂಬ ಕೊರಗು ಕಾಡುತ್ತಿತ್ತು. ನನ್ನದು ಮಾತ್ರವಲ್ಲ ಬಂದವರೆಲ್ಲರ ಮನಸ್ಸುಗಳೂ ಉಮರ್‌ ಬಿಡುಗಡೆಗೆ ಏನಾದರೂ ಮಾಡಬೇಕು ಎಂದು ಒತ್ತಾಯಿಸುತ್ತಿದ್ದವು.

ಭಾಗವಹಿಸಿದವರಲ್ಲಿ ಬಹುತೇಕ ಯುವ ಮುಖಗಳು. ಅ ಮುಖಗಳಲ್ಲಿ ಒಂದು ಕಾಳಜಿ ಇತ್ತು, ಹೊಳಪಿತ್ತು. ಸಂವಾದದ ಭಾಗವಾಗಿ ಹಲವರು ಯುವ ಮಿತ್ರರು ಬಹಳ ಚೆನ್ನಾಗಿ ಮಾತನಾಡಿದರು. ಮರ ಸಂಸ್ಥೆಯ ರಾಮ್‌ ಅರ್ಥಪೂರ್ಣ ಮಾತುಗಳ ಮೂಲಕ ಸಭೆಯನ್ನು ಸಮಾರೋಪಗೊಳಿಸಿದರು. ಸಭೆ ಮುಗಿದರೂ ಅನೇಕರಿಗೆ ಹೊರಡುವ ಮನಸ್ಸಿರಲಿಲ್ಲ. ಅಲ್ಲಲ್ಲೆ ಗುಂಪಾಗಿ ನಿಂತು, ಕುಳಿತು, ಮಾತಿನಲ್ಲಿ ತಲ್ಲೀನರಾಗಿದ್ದರು. ಕಳಕಳಿಯ ಮನಸ್ಸುಗಳ ಕಲರವದ ಮಾತಾವರಣ ಎಲ್ಲರನ್ನು ಹಿಡಿದಿಟ್ಟುಕೊಂಡಿತ್ತು ಅನಿಸುತ್ತೆ.

ಇದನ್ನೂಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ಯುವಜನರ ನಡುವೆ ಹಿರಿಯ ಹೋರಾಟಗಾರರೂ ಇದ್ದರು. ಯುವಜನರಿಗೆ ಮಾತನಾಡಲು ಬಿಟ್ಟು ಅವರು ಸುಮ್ಮನೆ ಕೂತು ಆಲಿಸುತ್ತಿದ್ದರು. ಒಂದು ರೀತಿಯಲ್ಲಿ ಆನಂದಿಸುತ್ತಿದ್ದರು. ಪ್ರಸಿದ್ಧ ರಂಗ ಕರ್ಮಿ ರಘುನಂದನ್ ಅವರು ವಿರೋಧ ಪಕ್ಷಗಳಾವುವೂ ಕೋರೆಗಾಂವ್‌ ಆರೋಪಿಗಳ ಬಗ್ಗೆಯಾಗಲೀ, ಉಮರ್‌ ಬಗ್ಗೆಯಾಗಲೀ ಮಾತನಾಡುತ್ತಿಲ್ಲ. ಎಲ್ಲಿ ತಮ್ಮನ್ನೂ ಭಯೋತ್ಪಾದಕರ ಬೆಂಬಲಿಗರು ಎಂದು ದೂಷಿಸಲಾಗುತ್ತೋ ಎಂಬ ಭಯ ಅವರಿಗೆ. ಆದರೆ ಈ ಪಕ್ಷಗಳೂ ಸಹ ಮಾತನಾಡಲೇಬಾಕಾದಂತಹ ವಾತಾವರಣವನ್ನು ಹಾಗೂ ಒತ್ತಡವನ್ನು ನಾವು ಸೃಷ್ಟಿಸಬೇಕು ಎಂದು ಸಲಹೆ ಮಾಡಿದರು.

ಸ್ಕ್ರೀನಿಂಗ್‌ ಹಾಗೂ ಸಂವಾದ ಎರಡನ್ನೂ ಮುಗಿಸಿಕೊಂಡು ಹೊರಟೆ. ಆದರೂ ಎರಡೂ ಹಿಂಬಾಲಿಸುತ್ತಲೇ ಬಂದವು. ಈಗಲೂ ಮನದ ಮೂಲೆಯಲ್ಲಿ ಗಟ್ಟಿಯಾಗಿ ಕೂತಿವೆ. ಏನು ಮಾಡುತ್ತೀರಿ ಎಂದು ಕೇಳುತ್ತಿವೆ. ಉತ್ತರ ಕಂಡುಕೊಳ್ಳಲೇಬೇಕು, ನಾವೆಲ್ಲರೂ ಕೂಡಿ.

ಮುಗಿಸುವ ಮುನ್ನ ಒಂದು ಮಾತು. ಈ ಸಾಕ್ಷ್ಯ ಚಿತ್ರ ತಾವು ನೋಡಲೇಬೇಕು. ಸಾಧ್ಯವಾದಷ್ಟು ನೀವಿರುವ ಕಡೆಗಳಲ್ಲಿ ಸ್ಕ್ರೀನಿಂಗ್‌ ಏರ್ಪಡಿಸಿ ಸಮಾನ ಮನಸ್ಕರ ಜೊತೆ ನೋಡಿ. ಆಗದಿದ್ದರೆ ವ್ಯಕ್ತಿಗತವಾಗಿಯಾದರೂ ನೋಡಿ. ಚಿತ್ರದ ಲಿಂಕ್‌ ಬೇಕಿದ್ದಲ್ಲಿ ನಿಸಾರ್‌ [8056035809] ಅವರನ್ನು ಸಂಪರ್ಕಿಸಿ.

ಉಮರ್‌ ಬಳಿ ಮತ್ತೊಮ್ಮೆ ಕ್ಷಮೆ ಕೋರುತ್ತಾ.

ವಿಡಿಯೊನೋಡಿ: ಕಟ್ಟುತ್ತೇವಾ ನಾವು ಜಾತಿ ಇಲ್ಲದ ಭೀತಿ ಇಲ್ಲದ ನಾಡ ಕಟ್ಟುತ್ತೇವೆ; ಹಾಡು ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....