Homeಮುಖಪುಟಉಮರ್ ಖಾಲಿದ್ ಜಾಮೀನು ಅರ್ಜಿ: 6ನೇ ಬಾರಿ ಮುಂದೂಡಿದ ಸುಪ್ರೀಂ ಕೋರ್ಟ್

ಉಮರ್ ಖಾಲಿದ್ ಜಾಮೀನು ಅರ್ಜಿ: 6ನೇ ಬಾರಿ ಮುಂದೂಡಿದ ಸುಪ್ರೀಂ ಕೋರ್ಟ್

- Advertisement -
- Advertisement -

2020ರ ಈಶಾನ್ಯ ದೆಹಲಿ ಗಲಭೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಜೆಎನ್‌ ಯುನ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 4 ವಾರಗಳ ಕಾಲ ಮುಂದೂಡಿದೆ.

ಈ ಹಿಂಸಾಚಾರವು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಮಾನಹಾನಿ ಮಾಡುವ ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಉಮರ್ ಖಾಲಿದ್ ಅವರು ಹಿಂಸಾಚಾರದಲ್ಲಿ ತಮ್ಮ ಪಾತ್ರವನ್ನು ಇಲ್ಲ ಮತ್ತು ಪ್ರಕರಣದ ಇತರ ಆರೋಪಿಗಳೊಂದಿಗೆ ಯಾವುದೇ “ಪಿತೂರಿಯ ಸಂಚು” ಮಾಡಿಲ್ಲ ಎಂದು ಜಾಮೀನು ಕೋರಿದ್ದಾರೆ.

ಮಂಗಳವಾರದ ವಿಚಾರಣೆಯಲ್ಲಿ, ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಪ್ರಕರಣ ಸಂಬಂಧ ವಿಸ್ಕೃತ ವಿಚಾರಣೆಯ ಅಗತ್ಯ ಇದೆ. ಸಾಕ್ಷ್ಯಚಿತ್ರ ಸಾಕ್ಷ್ಯವನ್ನು ಪರಿಶೀಲಿಸಬೇಕಾಗಿದೆ ಮತ್ತು ಪ್ರಕರಣವನ್ನು ನಾಲ್ಕು ವಾರಗಳವರೆಗೆ ಮುಂದೂಡುವುದಾಗಿ ಹೇಳಿದರು.

”ಈ ಪ್ರಕರಣದಲ್ಲಿ ನಾವು ಪ್ರತಿಯೊಂದು ದಾಖಲೆಗಳನ್ನು ಪರಿಶೀಲನೆ ನಡೆಸಬೇಕಿದೆ. ಪ್ರಕರಣ ಸಂಬಂಧ ನಿಮ್ಮ ಬಳಿ ಇರುವ ದಾಖಲೆಯನ್ನು ಸಲ್ಲಿಸಿ” ಎಂದು ಖಾಲಿದ್ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ಪೀಠ ಸೂಚಿಸಿತು.

ಭಯೋತ್ಪಾದನೆ, ಭಯೋತ್ಪಾದಕ ಕೃತ್ಯಗಳಿಗೆ ನಿಧಿ ಸಂಗ್ರಹಿಸುವುದು ಮತ್ತು ಪಿತೂರಿ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯ ಕೆಲವು ನಿಬಂಧನೆಗಳನ್ನು ಪ್ರಕರಣದಲ್ಲಿ ಅನ್ವಯಿಸಲಾಗುವುದಿಲ್ಲ ಎಂದು ಸಿಬಲ್ ವಾದಿಸಿದರು.

ಈ ಮೊದಲು ಮೇ 18ರಂದು ಖಾಲಿದ್ ಅವರ ಪ್ರಕರಣವು ಸುಪ್ರೀಂ ಕೋರ್ಟ್‌ ಮುಂದೆ ಬಂದಿತ್ತು. ಆನಂತರ ಪೊಲೀಸರು ಪ್ರತಿ-ಅಫಿಡವಿಟ್ ಸಲ್ಲಿಸಲು ಹೆಚ್ಚಿನ ಸಮಯ ಕೇಳಿದರು, ನ್ಯಾಯಾಧೀಶರು ವಿಚಾರಣೆಯಿಂದ ಹಿಂದೆ ಸರಿದರು ಹೀಗೆ ನಾನಾಕಾರಣಗಳಿಂದ ಈ ಪ್ರಕರಣ ಐದು ಬಾರಿ ಮುಂದೂಡಲಾಗಿದೆ.

ನಾಗರಿಕರ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನ್ಯಾಯಾಲಯಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ ಪುನರಾವರ್ತಿತ ಮುಂದೂಡಿಕೆಗಳು ಸಂಭವಿಸುತ್ತಿವೆ.

2022ರ ಅಕ್ಟೋಬರ್ 18ರಂದು ದೆಹಲಿ ಹೈಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಖಾಲಿದ್ ಅವರಿಗೆ ಉಳಿದ ಆರೋಪಿಗಳ ಜತೆ ಸಂಬಂಧ ಇತ್ತು. ಹೀಗಾಗಿ ಅವರ ಮೇಲಿನ ಆರೋಪ ಮೇಲ್ನೋಟಕ್ಕೆ ನಿಜವೆಂದು ತೋರುತ್ತದೆ. ಆರೋಪಿಯ ಕೃತ್ಯಗಳು ಪ್ರಾಥಮಿಕವಾಗಿ ಯುಪಿಎ ಕಾಯ್ದೆಯಡಿ ಭಯೋತ್ಪಾದಕ ಕೃತ್ಯ ಎಂದು ಅರ್ಹತೆ ಪಡೆದಿದೆ ಎಂದು ಕೋರ್ಟ್‌ ಹೇಳಿತ್ತು.

53 ಮಂದಿಯ ಸಾವು ಹಾಗೂ 700 ಮಂದಿ ಗಾಯಗೊಳ್ಳಲು ಕಾರಣವಾದ ಈ ಘಟನೆಯ ಹಿಂದೆ ಮಾಸ್ಟರ್ ಮೈಂಡ್‌ಗಳಾಗಿ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಖಾಲಿದ್, ಶಾರ್ಜಿಲ್ ಇಮಾಮ್ ಸಹಿತ ಹಲವರ ಮೇಲೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಇದನ್ನೂ ಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ನ್ಯಾಯಾಧೀಶ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...