Homeಕರ್ನಾಟಕಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್?

ಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್?

- Advertisement -
- Advertisement -

ಯಾಕೋ ನಮಗ ಇನ್ನು ಸೆಟ್ ಆಗ್ತಿಲ್ಲ, ಇಡೀ ಪಾರ್ಟಿನೆ ಸೆಟ್ ಆಗ್ತಿಲ್ಲ. ಗೋವಿಂದ ಕಾರಜೋಳರವರೇ ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಕೇಳಿಕೊಳ್ಳುತ್ತೇನೆ, ನೀವೆ ನನ್ನ ಗೆಲ್ಲಿಸಬೇಕು. ತುಂಬಿದ ವೇದಿಕೆಯಲ್ಲಿ ಈ ರೀತಿಯ ಮಾತುಗಳನ್ನು ಹೇಳುವ ಮೂಲಕ ಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್? ಎನ್ನುವ ಪ್ರಶ್ನೆ ಕಲಬುರಗಿ ಮಾತ್ರವಲ್ಲದೇ ಇಡೀ ರಾಜ್ಯದ್ಯಂತ ಹರಿದಾಡುತ್ತಿದೆ.

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೊಡೆ ತಟ್ಟಿದ್ದ ಮಾಜಿ ಶಾಸಕ ಉಮೇಶ್ ಜಾಧವ್ ಈಗ ವಿಲ ವಿಲ ಅಂತ ಒದ್ದಾಡುತ್ತಿದ್ದಾರೆ. ಕಾಂಗ್ರೆಸ್‍ನಿಂದಲೇ ಶಾಸಕರಾಗಿ ಕೊನೆಗೆ, ಸಂಸದನಾಗವು ಉದ್ದೇಶದಿಂದಲೇ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಉಮೇಶ್ ಜಾಧವ್ ಈಗ ಕಂಡ ಕಂಡವರ ಕಾಲಿಡುತ್ತೇನೆ ದಯವಿಟ್ಟು ಗೆಲ್ಲಿಸಿ ಎಂದು ಬೇಡಿಕೊಳ್ಳಬೇಕಾದ ಪರಿಸ್ಥಿತಿ ತಲುಪಿದ್ದಾರೆ.

“ಇದು ಡು ಆರ್ ಡೈ ಆದ, ನಂದು ಲಾಸ್ಟ್ ಚಾನ್ಸ್ ಅದ, ನಮಗೆ ನೀವು ಕೈಬಿಡಬಾರದು ಈ ಯುದ್ದದಲ್ಲಿ ಗೆಲ್ಲಿಸಬೇಕೆಂದು ನಾನು ಕೈ ಜೋಡಿಸಿ ವಿನಂತಿ ಮಾಡ್ತೀನಿ” ಯಾಕೋ ನಮಗ ಇನ್ನು ಸೆಟ್ ಆಗ್ತಿಲ್ಲ, ಇಡೀ ಪಾರ್ಟಿನೆ ಸೆಟ್ ಆಗ್ತಿಲ್ಲ. ಗೋವಿಂದ ಕಾರಜೋಳರವರೇ ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಕೇಳಿಕೊಳ್ಳುತ್ತೇನೆ. ನೀವೆ ನನ್ನ ಗೆಲ್ಲಿಸಬೇಕು ಎಂದು ಕಲಬುರಗಿಯಲ್ಲಿ ಏರ್ಪಡಿಸಿದ್ದ ಎಸ್ಸಿ ಸಮಾವೇಶದ ಬಹಿರಂಗ ಭಾಷಣದಲ್ಲಿ ಉಮೇಶ್ ಜಾಧವ್ ಹೇಳುವ ವಿಡಿಯೋ ವೈರಲ್ ಆಗಿದ್ದು ಇಲ್ಲಿ ಬಿಜೆಪಿ ಕಥೆ ಮುಗಿದ ಹಾಗೆನೇ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ಉಮೇಶ್ ಜಾಧವ್ ಮಾತಾಡಿರುವ ವಿಡಿಯೋ ನೋಡಿ

ಕಲಬುರಗಿಯಲ್ಲಿ ಉಮೇಶ್ ಜಾಧವ್ ಪರದಾಟ. ಚುನಾವಣೆಗೂ ಮುನ್ನವೇ ಸೋಲಿನ ಭಯ…

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, २० एप्रिल, २०१९

ಇವರ ಈ ಹೇಳಿಕೆಯಿಂದಾಗಿ ಖರ್ಗೆಯವರ ಭದ್ರಕೋಟೆಯಲ್ಲಿ ಕೇಸರಿ ಬಾವುಟ ಹಾರಿಸುವ ಬಿಜೆಪಿಯ ಕನಸು ಭಗ್ನಗೊಂಡಿದೆ. ಚುನಾವಣೆ ಇನ್ನು ಮೂರು ದಿನ ಇರುವಾಗ ಈ ರೀತಿ ಅಸಹಾಯಕರಂತೆ ಕೈ ಚೆಲ್ಲಿ ಮಾತಾಡುವುದು ಪಕ್ಷಕ್ಕೆ ಡ್ಯಾಮೇಜ್ ಎನ್ನುವ ಮಾತುಗಳು ಎಲ್ಲೆಡೆ ಹರಿದಾಡುತ್ತಿವೆ. ಹಾಗೇ ನೋಡಿದರೆ ಇದರಿಂದ ಖರ್ಗೆಯವರ ಗೆಲುವು ಮತ್ತಷ್ಟು ಸುಲಭ ಎಂದು ವಿಶ್ಲೇಷಿಸಲಾಗುತ್ತಿದೆ.


ಇದ್ದ ಶಾಸಕ ಸ್ಥಾನವನ್ನು ಬಿಟ್ಟು, ರಾಜೀನಾಮೆ ಅಂಗೀಕಾರ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದ ಉಮೇಶ್ ಜಾಧವ್‍ರವರ ಕಥೆ ಶೋಚನೀಯವಾಗಿದೆ. ಗೆದ್ದೆ ಬಿಡುವ ಹುಮ್ಮಸ್ಸಿನಿಂದ ಸ್ಪರ್ಧಿಸಿದ್ದ ಅವರೀಗ ಸೋಲಿನ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಒಂದು ವೇಳೆ ಸೋತೆಬಿಟ್ಟರಂತೂ ಶಾಸಕ ಸ್ಥಾನವೂ ಇಲ್ಲ, ಅತ್ತ ಕಾಂಗ್ರೆಸ್ ಕೂಡ ಇಲ್ಲ, ಬಿಜೆಪಿ ಸೆಟ್ ಆಗ್ತಿಲ್ಲ ಅಂತ ಕೊರಗುವ ಸ್ಥಿತಿಗೆ ತಲುಪಲಿದ್ದಾರೆ. ಏನಾಗುತ್ತೆ ಅಂತ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...