Homeಕರ್ನಾಟಕಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್?

ಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್?

- Advertisement -
- Advertisement -

ಯಾಕೋ ನಮಗ ಇನ್ನು ಸೆಟ್ ಆಗ್ತಿಲ್ಲ, ಇಡೀ ಪಾರ್ಟಿನೆ ಸೆಟ್ ಆಗ್ತಿಲ್ಲ. ಗೋವಿಂದ ಕಾರಜೋಳರವರೇ ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಕೇಳಿಕೊಳ್ಳುತ್ತೇನೆ, ನೀವೆ ನನ್ನ ಗೆಲ್ಲಿಸಬೇಕು. ತುಂಬಿದ ವೇದಿಕೆಯಲ್ಲಿ ಈ ರೀತಿಯ ಮಾತುಗಳನ್ನು ಹೇಳುವ ಮೂಲಕ ಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್? ಎನ್ನುವ ಪ್ರಶ್ನೆ ಕಲಬುರಗಿ ಮಾತ್ರವಲ್ಲದೇ ಇಡೀ ರಾಜ್ಯದ್ಯಂತ ಹರಿದಾಡುತ್ತಿದೆ.

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೊಡೆ ತಟ್ಟಿದ್ದ ಮಾಜಿ ಶಾಸಕ ಉಮೇಶ್ ಜಾಧವ್ ಈಗ ವಿಲ ವಿಲ ಅಂತ ಒದ್ದಾಡುತ್ತಿದ್ದಾರೆ. ಕಾಂಗ್ರೆಸ್‍ನಿಂದಲೇ ಶಾಸಕರಾಗಿ ಕೊನೆಗೆ, ಸಂಸದನಾಗವು ಉದ್ದೇಶದಿಂದಲೇ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಉಮೇಶ್ ಜಾಧವ್ ಈಗ ಕಂಡ ಕಂಡವರ ಕಾಲಿಡುತ್ತೇನೆ ದಯವಿಟ್ಟು ಗೆಲ್ಲಿಸಿ ಎಂದು ಬೇಡಿಕೊಳ್ಳಬೇಕಾದ ಪರಿಸ್ಥಿತಿ ತಲುಪಿದ್ದಾರೆ.

“ಇದು ಡು ಆರ್ ಡೈ ಆದ, ನಂದು ಲಾಸ್ಟ್ ಚಾನ್ಸ್ ಅದ, ನಮಗೆ ನೀವು ಕೈಬಿಡಬಾರದು ಈ ಯುದ್ದದಲ್ಲಿ ಗೆಲ್ಲಿಸಬೇಕೆಂದು ನಾನು ಕೈ ಜೋಡಿಸಿ ವಿನಂತಿ ಮಾಡ್ತೀನಿ” ಯಾಕೋ ನಮಗ ಇನ್ನು ಸೆಟ್ ಆಗ್ತಿಲ್ಲ, ಇಡೀ ಪಾರ್ಟಿನೆ ಸೆಟ್ ಆಗ್ತಿಲ್ಲ. ಗೋವಿಂದ ಕಾರಜೋಳರವರೇ ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಕೇಳಿಕೊಳ್ಳುತ್ತೇನೆ. ನೀವೆ ನನ್ನ ಗೆಲ್ಲಿಸಬೇಕು ಎಂದು ಕಲಬುರಗಿಯಲ್ಲಿ ಏರ್ಪಡಿಸಿದ್ದ ಎಸ್ಸಿ ಸಮಾವೇಶದ ಬಹಿರಂಗ ಭಾಷಣದಲ್ಲಿ ಉಮೇಶ್ ಜಾಧವ್ ಹೇಳುವ ವಿಡಿಯೋ ವೈರಲ್ ಆಗಿದ್ದು ಇಲ್ಲಿ ಬಿಜೆಪಿ ಕಥೆ ಮುಗಿದ ಹಾಗೆನೇ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ಉಮೇಶ್ ಜಾಧವ್ ಮಾತಾಡಿರುವ ವಿಡಿಯೋ ನೋಡಿ

ಕಲಬುರಗಿಯಲ್ಲಿ ಉಮೇಶ್ ಜಾಧವ್ ಪರದಾಟ. ಚುನಾವಣೆಗೂ ಮುನ್ನವೇ ಸೋಲಿನ ಭಯ…

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, २० एप्रिल, २०१९

ಇವರ ಈ ಹೇಳಿಕೆಯಿಂದಾಗಿ ಖರ್ಗೆಯವರ ಭದ್ರಕೋಟೆಯಲ್ಲಿ ಕೇಸರಿ ಬಾವುಟ ಹಾರಿಸುವ ಬಿಜೆಪಿಯ ಕನಸು ಭಗ್ನಗೊಂಡಿದೆ. ಚುನಾವಣೆ ಇನ್ನು ಮೂರು ದಿನ ಇರುವಾಗ ಈ ರೀತಿ ಅಸಹಾಯಕರಂತೆ ಕೈ ಚೆಲ್ಲಿ ಮಾತಾಡುವುದು ಪಕ್ಷಕ್ಕೆ ಡ್ಯಾಮೇಜ್ ಎನ್ನುವ ಮಾತುಗಳು ಎಲ್ಲೆಡೆ ಹರಿದಾಡುತ್ತಿವೆ. ಹಾಗೇ ನೋಡಿದರೆ ಇದರಿಂದ ಖರ್ಗೆಯವರ ಗೆಲುವು ಮತ್ತಷ್ಟು ಸುಲಭ ಎಂದು ವಿಶ್ಲೇಷಿಸಲಾಗುತ್ತಿದೆ.


ಇದ್ದ ಶಾಸಕ ಸ್ಥಾನವನ್ನು ಬಿಟ್ಟು, ರಾಜೀನಾಮೆ ಅಂಗೀಕಾರ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದ ಉಮೇಶ್ ಜಾಧವ್‍ರವರ ಕಥೆ ಶೋಚನೀಯವಾಗಿದೆ. ಗೆದ್ದೆ ಬಿಡುವ ಹುಮ್ಮಸ್ಸಿನಿಂದ ಸ್ಪರ್ಧಿಸಿದ್ದ ಅವರೀಗ ಸೋಲಿನ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಒಂದು ವೇಳೆ ಸೋತೆಬಿಟ್ಟರಂತೂ ಶಾಸಕ ಸ್ಥಾನವೂ ಇಲ್ಲ, ಅತ್ತ ಕಾಂಗ್ರೆಸ್ ಕೂಡ ಇಲ್ಲ, ಬಿಜೆಪಿ ಸೆಟ್ ಆಗ್ತಿಲ್ಲ ಅಂತ ಕೊರಗುವ ಸ್ಥಿತಿಗೆ ತಲುಪಲಿದ್ದಾರೆ. ಏನಾಗುತ್ತೆ ಅಂತ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...