Homeಕರ್ನಾಟಕಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್?

ಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್?

- Advertisement -
- Advertisement -

ಯಾಕೋ ನಮಗ ಇನ್ನು ಸೆಟ್ ಆಗ್ತಿಲ್ಲ, ಇಡೀ ಪಾರ್ಟಿನೆ ಸೆಟ್ ಆಗ್ತಿಲ್ಲ. ಗೋವಿಂದ ಕಾರಜೋಳರವರೇ ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಕೇಳಿಕೊಳ್ಳುತ್ತೇನೆ, ನೀವೆ ನನ್ನ ಗೆಲ್ಲಿಸಬೇಕು. ತುಂಬಿದ ವೇದಿಕೆಯಲ್ಲಿ ಈ ರೀತಿಯ ಮಾತುಗಳನ್ನು ಹೇಳುವ ಮೂಲಕ ಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್? ಎನ್ನುವ ಪ್ರಶ್ನೆ ಕಲಬುರಗಿ ಮಾತ್ರವಲ್ಲದೇ ಇಡೀ ರಾಜ್ಯದ್ಯಂತ ಹರಿದಾಡುತ್ತಿದೆ.

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೊಡೆ ತಟ್ಟಿದ್ದ ಮಾಜಿ ಶಾಸಕ ಉಮೇಶ್ ಜಾಧವ್ ಈಗ ವಿಲ ವಿಲ ಅಂತ ಒದ್ದಾಡುತ್ತಿದ್ದಾರೆ. ಕಾಂಗ್ರೆಸ್‍ನಿಂದಲೇ ಶಾಸಕರಾಗಿ ಕೊನೆಗೆ, ಸಂಸದನಾಗವು ಉದ್ದೇಶದಿಂದಲೇ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಉಮೇಶ್ ಜಾಧವ್ ಈಗ ಕಂಡ ಕಂಡವರ ಕಾಲಿಡುತ್ತೇನೆ ದಯವಿಟ್ಟು ಗೆಲ್ಲಿಸಿ ಎಂದು ಬೇಡಿಕೊಳ್ಳಬೇಕಾದ ಪರಿಸ್ಥಿತಿ ತಲುಪಿದ್ದಾರೆ.

“ಇದು ಡು ಆರ್ ಡೈ ಆದ, ನಂದು ಲಾಸ್ಟ್ ಚಾನ್ಸ್ ಅದ, ನಮಗೆ ನೀವು ಕೈಬಿಡಬಾರದು ಈ ಯುದ್ದದಲ್ಲಿ ಗೆಲ್ಲಿಸಬೇಕೆಂದು ನಾನು ಕೈ ಜೋಡಿಸಿ ವಿನಂತಿ ಮಾಡ್ತೀನಿ” ಯಾಕೋ ನಮಗ ಇನ್ನು ಸೆಟ್ ಆಗ್ತಿಲ್ಲ, ಇಡೀ ಪಾರ್ಟಿನೆ ಸೆಟ್ ಆಗ್ತಿಲ್ಲ. ಗೋವಿಂದ ಕಾರಜೋಳರವರೇ ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಕೇಳಿಕೊಳ್ಳುತ್ತೇನೆ. ನೀವೆ ನನ್ನ ಗೆಲ್ಲಿಸಬೇಕು ಎಂದು ಕಲಬುರಗಿಯಲ್ಲಿ ಏರ್ಪಡಿಸಿದ್ದ ಎಸ್ಸಿ ಸಮಾವೇಶದ ಬಹಿರಂಗ ಭಾಷಣದಲ್ಲಿ ಉಮೇಶ್ ಜಾಧವ್ ಹೇಳುವ ವಿಡಿಯೋ ವೈರಲ್ ಆಗಿದ್ದು ಇಲ್ಲಿ ಬಿಜೆಪಿ ಕಥೆ ಮುಗಿದ ಹಾಗೆನೇ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ಉಮೇಶ್ ಜಾಧವ್ ಮಾತಾಡಿರುವ ವಿಡಿಯೋ ನೋಡಿ

ಕಲಬುರಗಿಯಲ್ಲಿ ಉಮೇಶ್ ಜಾಧವ್ ಪರದಾಟ. ಚುನಾವಣೆಗೂ ಮುನ್ನವೇ ಸೋಲಿನ ಭಯ…

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, २० एप्रिल, २०१९

ಇವರ ಈ ಹೇಳಿಕೆಯಿಂದಾಗಿ ಖರ್ಗೆಯವರ ಭದ್ರಕೋಟೆಯಲ್ಲಿ ಕೇಸರಿ ಬಾವುಟ ಹಾರಿಸುವ ಬಿಜೆಪಿಯ ಕನಸು ಭಗ್ನಗೊಂಡಿದೆ. ಚುನಾವಣೆ ಇನ್ನು ಮೂರು ದಿನ ಇರುವಾಗ ಈ ರೀತಿ ಅಸಹಾಯಕರಂತೆ ಕೈ ಚೆಲ್ಲಿ ಮಾತಾಡುವುದು ಪಕ್ಷಕ್ಕೆ ಡ್ಯಾಮೇಜ್ ಎನ್ನುವ ಮಾತುಗಳು ಎಲ್ಲೆಡೆ ಹರಿದಾಡುತ್ತಿವೆ. ಹಾಗೇ ನೋಡಿದರೆ ಇದರಿಂದ ಖರ್ಗೆಯವರ ಗೆಲುವು ಮತ್ತಷ್ಟು ಸುಲಭ ಎಂದು ವಿಶ್ಲೇಷಿಸಲಾಗುತ್ತಿದೆ.


ಇದ್ದ ಶಾಸಕ ಸ್ಥಾನವನ್ನು ಬಿಟ್ಟು, ರಾಜೀನಾಮೆ ಅಂಗೀಕಾರ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದ ಉಮೇಶ್ ಜಾಧವ್‍ರವರ ಕಥೆ ಶೋಚನೀಯವಾಗಿದೆ. ಗೆದ್ದೆ ಬಿಡುವ ಹುಮ್ಮಸ್ಸಿನಿಂದ ಸ್ಪರ್ಧಿಸಿದ್ದ ಅವರೀಗ ಸೋಲಿನ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಒಂದು ವೇಳೆ ಸೋತೆಬಿಟ್ಟರಂತೂ ಶಾಸಕ ಸ್ಥಾನವೂ ಇಲ್ಲ, ಅತ್ತ ಕಾಂಗ್ರೆಸ್ ಕೂಡ ಇಲ್ಲ, ಬಿಜೆಪಿ ಸೆಟ್ ಆಗ್ತಿಲ್ಲ ಅಂತ ಕೊರಗುವ ಸ್ಥಿತಿಗೆ ತಲುಪಲಿದ್ದಾರೆ. ಏನಾಗುತ್ತೆ ಅಂತ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...