Homeಮುಖಪುಟತನಗೆ ಮಂತ್ರಿ ಸ್ಥಾನ, ಸಹೋದರನಿಗೆ ಪರಿಷತ್; ಬ್ಲಾಕ್‌ಮೇಲ್‌ಗೆ ಇಳಿದರಾ ಉಮೇಶ್‌ ಕತ್ತಿ?

ತನಗೆ ಮಂತ್ರಿ ಸ್ಥಾನ, ಸಹೋದರನಿಗೆ ಪರಿಷತ್; ಬ್ಲಾಕ್‌ಮೇಲ್‌ಗೆ ಇಳಿದರಾ ಉಮೇಶ್‌ ಕತ್ತಿ?

- Advertisement -
- Advertisement -

ತನಗೆ ಮಂತ್ರಿ ಸ್ಥಾನ ಬೇಕು ಮತ್ತು ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆ ಅಥವಾ ವಿಧಾನ ಪರಿಷತ್ ಸ್ಥಾನವನ್ನಾದರೂ ನೀಡಬೇಕು ಎಂಬ ಮಹತ್ವಾಕಾಂಕ್ಷೆಯಿಂದಲೇ ಹಿರಿಯ ಶಾಸಕ ಉಮೇಶ್ ಕತ್ತಿ ಬ್ಲಾಕ್‌ಮೇಲ್ ರಾಜಕಾರಣಕ್ಕೆ ಮುಂದಾದರಾ ಎಂಬ ಸಂಶಯ ಇದೀಗ ರಾಜ್ಯ ರಾಜಕೀಯದಲ್ಲಿ ಮನೆ ಮಾಡಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದ ಉಮೇಶ್ ಕತ್ತಿ ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಲೇ ಇದ್ದಾರೆ. ಸತತ 8 ಬಾರಿ ಶಾಸಕರಾಗಿರುವ ಉಮೇಶ್ ಕತ್ತಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಆದರೆ, ಉತ್ತರ ಕರ್ನಾಟಕ ಮತ್ತು ಲಿಂಗಾಯತ ನಾಯಕರ ರಾಜಕೀಯ ಲೆಕ್ಕಾಚಾರದ ಕಾರಣದಿಂದಲೇ ಕತ್ತಿಗೆ ಸಚಿವ ಸ್ಥಾನ ಲಭ್ಯವಾಗಿಲ್ಲ ಎಂಬುದು ಇಂದು ಗುಟ್ಟಾಗೇನು ಉಳಿದಿಲ್ಲ. ಇದೇ ಕಾರಣಕ್ಕೆ ಉಮೇಶ್ ಕತ್ತಿ ಇದೀಗ ಬ್ಲಾಕ್‌ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು? 


ಲೋಕಸಭಾ ಚುನಾವಣಾ ಸಂದರ್ಭದಲ್ಲೇ ಉಮೇಶ್ ಕತ್ತಿ ತನ್ನ ಸಹೋದರ ರಮೇಶ್ ಕತ್ತಿಗೆ ಲೋಕಸಭಾ ಟಿಕೆಟ್ ಕೇಳಿದ್ದರು. ಆದರೆ, ಕಾರಣಾಂತರಗಳಿಂದ ಟಿಕೆಟ್ ಕೈತಪ್ಪಿದ್ದರಿಂದ ರಾಜ್ಯಸಭೆ ಅತವಾ ವಿಧಾನ ಪರಿಷತ್ ಟಿಕೆಟ್ ಆದರೂ ನೀಡುವಂತೆ ರಾಷ್ಟ್ರ ಮಟ್ಟದ ನಾಯರ ಎದುರು ದುಂಬಾಲು ಬಿದ್ದಿದ್ದರು.

ಇನ್ನೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದ ನಂತರ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಈವರೆಗೆ ಇವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ, ಸಹೋದರ ರಮೇಶ್ ಕತ್ತಿಗೂ ರಾಜ್ಯಸಭೆ ಅಥವಾ ವಿಧಾನ ಪರಿಷತ್ ಸ್ಥಾನ ಸಿಗುವುದು ಖಚಿತವಿಲ್ಲ.

ಇನ್ನೇನು ಜೂನ್ ತಿಂಗಳಲ್ಲಿ ರಾಜ್ಯಸಭೆಗೆ ಚುನಾವಣೆ ನಡೆಯಲಿದೆ, ಅಲ್ಲದೆ ರಾಜ್ಯದಲ್ಲೂ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಇದೇ ಕಾರಣಕ್ಕೆ ಮತ್ತೆ ಬ್ಲಾಕ್ಮೇಲ್ ತಂತ್ರಕ್ಕೆ ಮುಂದಾಗಿರುವ ಉಮೇಶ್ ಕತ್ತಿ ತನಗೆ ಹಲವು ಪ್ರಭಾವಿ ಶಾಸಕರ-ನಾಯಕರ ಬೆಂಬಲ ಇದೆ ಎಂದು ತೋರಿಸಿಕೊಳ್ಳುವ ಸಲುವಾಗಿ ಗುರುವಾರ ಅತೃಪ್ತ ಶಾಸಕರ ಸಭೆ ನಡೆಸಿದ್ದಾರೆ. ಲಿಂಗಾಯತ ಶಾಸಕರ ಜೊತೆ ಸೇರಿ ಉತ್ತರ ಕರ್ನಾಟಕ ಭಾಗದ ಶಾಸಕರನ್ನು ಒಗ್ಗೂಡಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಉಮೇಶ್ ಕತ್ತಿ ತಂತ್ರ ಫಲಿಸಿದರೆ, ಬಿಎಸ್‌ವೈ ಸ್ಥಾನಕ್ಕೆ ಕುತ್ತು ಬರುವುದು ಖಚಿತ. ಇದೇ ಕಾರಣಕ್ಕೆ ಬಿಎಸ್ವೈ ಸಹ ಇಂದು ಭಿನ್ನಮತೀಯರನ್ನು ಮಾತುಕತೆಗೆ ಕರೆದಿದ್ದು ಬಿಜೆಪಿಯಲ್ಲಿ ಭುಗಿಲೆದ್ದಿರುವ ಈ ಭಿನ್ನಮತ ಮುಂದಿನ ದಿನಗಳಲ್ಲಿ ಯಾವ ಮಹತ್ವದ ತಿರುವು ಪಡೆಯಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ – ಬಸನಗೌಡ ಪಾಟೀಲ್ ಯತ್ನಾಳ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...