Homeಮುಖಪುಟತನಗೆ ಮಂತ್ರಿ ಸ್ಥಾನ, ಸಹೋದರನಿಗೆ ಪರಿಷತ್; ಬ್ಲಾಕ್‌ಮೇಲ್‌ಗೆ ಇಳಿದರಾ ಉಮೇಶ್‌ ಕತ್ತಿ?

ತನಗೆ ಮಂತ್ರಿ ಸ್ಥಾನ, ಸಹೋದರನಿಗೆ ಪರಿಷತ್; ಬ್ಲಾಕ್‌ಮೇಲ್‌ಗೆ ಇಳಿದರಾ ಉಮೇಶ್‌ ಕತ್ತಿ?

- Advertisement -
- Advertisement -

ತನಗೆ ಮಂತ್ರಿ ಸ್ಥಾನ ಬೇಕು ಮತ್ತು ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆ ಅಥವಾ ವಿಧಾನ ಪರಿಷತ್ ಸ್ಥಾನವನ್ನಾದರೂ ನೀಡಬೇಕು ಎಂಬ ಮಹತ್ವಾಕಾಂಕ್ಷೆಯಿಂದಲೇ ಹಿರಿಯ ಶಾಸಕ ಉಮೇಶ್ ಕತ್ತಿ ಬ್ಲಾಕ್‌ಮೇಲ್ ರಾಜಕಾರಣಕ್ಕೆ ಮುಂದಾದರಾ ಎಂಬ ಸಂಶಯ ಇದೀಗ ರಾಜ್ಯ ರಾಜಕೀಯದಲ್ಲಿ ಮನೆ ಮಾಡಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದ ಉಮೇಶ್ ಕತ್ತಿ ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಲೇ ಇದ್ದಾರೆ. ಸತತ 8 ಬಾರಿ ಶಾಸಕರಾಗಿರುವ ಉಮೇಶ್ ಕತ್ತಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಆದರೆ, ಉತ್ತರ ಕರ್ನಾಟಕ ಮತ್ತು ಲಿಂಗಾಯತ ನಾಯಕರ ರಾಜಕೀಯ ಲೆಕ್ಕಾಚಾರದ ಕಾರಣದಿಂದಲೇ ಕತ್ತಿಗೆ ಸಚಿವ ಸ್ಥಾನ ಲಭ್ಯವಾಗಿಲ್ಲ ಎಂಬುದು ಇಂದು ಗುಟ್ಟಾಗೇನು ಉಳಿದಿಲ್ಲ. ಇದೇ ಕಾರಣಕ್ಕೆ ಉಮೇಶ್ ಕತ್ತಿ ಇದೀಗ ಬ್ಲಾಕ್‌ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು? 


ಲೋಕಸಭಾ ಚುನಾವಣಾ ಸಂದರ್ಭದಲ್ಲೇ ಉಮೇಶ್ ಕತ್ತಿ ತನ್ನ ಸಹೋದರ ರಮೇಶ್ ಕತ್ತಿಗೆ ಲೋಕಸಭಾ ಟಿಕೆಟ್ ಕೇಳಿದ್ದರು. ಆದರೆ, ಕಾರಣಾಂತರಗಳಿಂದ ಟಿಕೆಟ್ ಕೈತಪ್ಪಿದ್ದರಿಂದ ರಾಜ್ಯಸಭೆ ಅತವಾ ವಿಧಾನ ಪರಿಷತ್ ಟಿಕೆಟ್ ಆದರೂ ನೀಡುವಂತೆ ರಾಷ್ಟ್ರ ಮಟ್ಟದ ನಾಯರ ಎದುರು ದುಂಬಾಲು ಬಿದ್ದಿದ್ದರು.

ಇನ್ನೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದ ನಂತರ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಈವರೆಗೆ ಇವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ, ಸಹೋದರ ರಮೇಶ್ ಕತ್ತಿಗೂ ರಾಜ್ಯಸಭೆ ಅಥವಾ ವಿಧಾನ ಪರಿಷತ್ ಸ್ಥಾನ ಸಿಗುವುದು ಖಚಿತವಿಲ್ಲ.

ಇನ್ನೇನು ಜೂನ್ ತಿಂಗಳಲ್ಲಿ ರಾಜ್ಯಸಭೆಗೆ ಚುನಾವಣೆ ನಡೆಯಲಿದೆ, ಅಲ್ಲದೆ ರಾಜ್ಯದಲ್ಲೂ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಇದೇ ಕಾರಣಕ್ಕೆ ಮತ್ತೆ ಬ್ಲಾಕ್ಮೇಲ್ ತಂತ್ರಕ್ಕೆ ಮುಂದಾಗಿರುವ ಉಮೇಶ್ ಕತ್ತಿ ತನಗೆ ಹಲವು ಪ್ರಭಾವಿ ಶಾಸಕರ-ನಾಯಕರ ಬೆಂಬಲ ಇದೆ ಎಂದು ತೋರಿಸಿಕೊಳ್ಳುವ ಸಲುವಾಗಿ ಗುರುವಾರ ಅತೃಪ್ತ ಶಾಸಕರ ಸಭೆ ನಡೆಸಿದ್ದಾರೆ. ಲಿಂಗಾಯತ ಶಾಸಕರ ಜೊತೆ ಸೇರಿ ಉತ್ತರ ಕರ್ನಾಟಕ ಭಾಗದ ಶಾಸಕರನ್ನು ಒಗ್ಗೂಡಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಉಮೇಶ್ ಕತ್ತಿ ತಂತ್ರ ಫಲಿಸಿದರೆ, ಬಿಎಸ್‌ವೈ ಸ್ಥಾನಕ್ಕೆ ಕುತ್ತು ಬರುವುದು ಖಚಿತ. ಇದೇ ಕಾರಣಕ್ಕೆ ಬಿಎಸ್ವೈ ಸಹ ಇಂದು ಭಿನ್ನಮತೀಯರನ್ನು ಮಾತುಕತೆಗೆ ಕರೆದಿದ್ದು ಬಿಜೆಪಿಯಲ್ಲಿ ಭುಗಿಲೆದ್ದಿರುವ ಈ ಭಿನ್ನಮತ ಮುಂದಿನ ದಿನಗಳಲ್ಲಿ ಯಾವ ಮಹತ್ವದ ತಿರುವು ಪಡೆಯಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ – ಬಸನಗೌಡ ಪಾಟೀಲ್ ಯತ್ನಾಳ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...