Homeಮುಖಪುಟತನಗೆ ಮಂತ್ರಿ ಸ್ಥಾನ, ಸಹೋದರನಿಗೆ ಪರಿಷತ್; ಬ್ಲಾಕ್‌ಮೇಲ್‌ಗೆ ಇಳಿದರಾ ಉಮೇಶ್‌ ಕತ್ತಿ?

ತನಗೆ ಮಂತ್ರಿ ಸ್ಥಾನ, ಸಹೋದರನಿಗೆ ಪರಿಷತ್; ಬ್ಲಾಕ್‌ಮೇಲ್‌ಗೆ ಇಳಿದರಾ ಉಮೇಶ್‌ ಕತ್ತಿ?

- Advertisement -
- Advertisement -

ತನಗೆ ಮಂತ್ರಿ ಸ್ಥಾನ ಬೇಕು ಮತ್ತು ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆ ಅಥವಾ ವಿಧಾನ ಪರಿಷತ್ ಸ್ಥಾನವನ್ನಾದರೂ ನೀಡಬೇಕು ಎಂಬ ಮಹತ್ವಾಕಾಂಕ್ಷೆಯಿಂದಲೇ ಹಿರಿಯ ಶಾಸಕ ಉಮೇಶ್ ಕತ್ತಿ ಬ್ಲಾಕ್‌ಮೇಲ್ ರಾಜಕಾರಣಕ್ಕೆ ಮುಂದಾದರಾ ಎಂಬ ಸಂಶಯ ಇದೀಗ ರಾಜ್ಯ ರಾಜಕೀಯದಲ್ಲಿ ಮನೆ ಮಾಡಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದ ಉಮೇಶ್ ಕತ್ತಿ ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಲೇ ಇದ್ದಾರೆ. ಸತತ 8 ಬಾರಿ ಶಾಸಕರಾಗಿರುವ ಉಮೇಶ್ ಕತ್ತಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಆದರೆ, ಉತ್ತರ ಕರ್ನಾಟಕ ಮತ್ತು ಲಿಂಗಾಯತ ನಾಯಕರ ರಾಜಕೀಯ ಲೆಕ್ಕಾಚಾರದ ಕಾರಣದಿಂದಲೇ ಕತ್ತಿಗೆ ಸಚಿವ ಸ್ಥಾನ ಲಭ್ಯವಾಗಿಲ್ಲ ಎಂಬುದು ಇಂದು ಗುಟ್ಟಾಗೇನು ಉಳಿದಿಲ್ಲ. ಇದೇ ಕಾರಣಕ್ಕೆ ಉಮೇಶ್ ಕತ್ತಿ ಇದೀಗ ಬ್ಲಾಕ್‌ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ; ಬಿಎಸ್‌ವೈ ಸ್ಥಾನಕ್ಕೆ ’ಕತ್ತಿ’ಯಿಂದ ಕುತ್ತು? 


ಲೋಕಸಭಾ ಚುನಾವಣಾ ಸಂದರ್ಭದಲ್ಲೇ ಉಮೇಶ್ ಕತ್ತಿ ತನ್ನ ಸಹೋದರ ರಮೇಶ್ ಕತ್ತಿಗೆ ಲೋಕಸಭಾ ಟಿಕೆಟ್ ಕೇಳಿದ್ದರು. ಆದರೆ, ಕಾರಣಾಂತರಗಳಿಂದ ಟಿಕೆಟ್ ಕೈತಪ್ಪಿದ್ದರಿಂದ ರಾಜ್ಯಸಭೆ ಅತವಾ ವಿಧಾನ ಪರಿಷತ್ ಟಿಕೆಟ್ ಆದರೂ ನೀಡುವಂತೆ ರಾಷ್ಟ್ರ ಮಟ್ಟದ ನಾಯರ ಎದುರು ದುಂಬಾಲು ಬಿದ್ದಿದ್ದರು.

ಇನ್ನೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದ ನಂತರ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಈವರೆಗೆ ಇವರಿಗೆ ಸಚಿವ ಸ್ಥಾನ ನೀಡಲಾಗಿಲ್ಲ, ಸಹೋದರ ರಮೇಶ್ ಕತ್ತಿಗೂ ರಾಜ್ಯಸಭೆ ಅಥವಾ ವಿಧಾನ ಪರಿಷತ್ ಸ್ಥಾನ ಸಿಗುವುದು ಖಚಿತವಿಲ್ಲ.

ಇನ್ನೇನು ಜೂನ್ ತಿಂಗಳಲ್ಲಿ ರಾಜ್ಯಸಭೆಗೆ ಚುನಾವಣೆ ನಡೆಯಲಿದೆ, ಅಲ್ಲದೆ ರಾಜ್ಯದಲ್ಲೂ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಇದೇ ಕಾರಣಕ್ಕೆ ಮತ್ತೆ ಬ್ಲಾಕ್ಮೇಲ್ ತಂತ್ರಕ್ಕೆ ಮುಂದಾಗಿರುವ ಉಮೇಶ್ ಕತ್ತಿ ತನಗೆ ಹಲವು ಪ್ರಭಾವಿ ಶಾಸಕರ-ನಾಯಕರ ಬೆಂಬಲ ಇದೆ ಎಂದು ತೋರಿಸಿಕೊಳ್ಳುವ ಸಲುವಾಗಿ ಗುರುವಾರ ಅತೃಪ್ತ ಶಾಸಕರ ಸಭೆ ನಡೆಸಿದ್ದಾರೆ. ಲಿಂಗಾಯತ ಶಾಸಕರ ಜೊತೆ ಸೇರಿ ಉತ್ತರ ಕರ್ನಾಟಕ ಭಾಗದ ಶಾಸಕರನ್ನು ಒಗ್ಗೂಡಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಉಮೇಶ್ ಕತ್ತಿ ತಂತ್ರ ಫಲಿಸಿದರೆ, ಬಿಎಸ್‌ವೈ ಸ್ಥಾನಕ್ಕೆ ಕುತ್ತು ಬರುವುದು ಖಚಿತ. ಇದೇ ಕಾರಣಕ್ಕೆ ಬಿಎಸ್ವೈ ಸಹ ಇಂದು ಭಿನ್ನಮತೀಯರನ್ನು ಮಾತುಕತೆಗೆ ಕರೆದಿದ್ದು ಬಿಜೆಪಿಯಲ್ಲಿ ಭುಗಿಲೆದ್ದಿರುವ ಈ ಭಿನ್ನಮತ ಮುಂದಿನ ದಿನಗಳಲ್ಲಿ ಯಾವ ಮಹತ್ವದ ತಿರುವು ಪಡೆಯಲಿದೆ ಎಂದು ಕಾದು ನೋಡಬೇಕಿದೆ.


ಇದನ್ನೂ ಓದಿ: ಯಡಿಯೂರಪ್ಪ ಮುಖ್ಯಮಂತ್ರಿ ಅಷ್ಟೇ – ಬಸನಗೌಡ ಪಾಟೀಲ್ ಯತ್ನಾಳ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...