Homeಮುಖಪುಟವಿಶ್ವಸಂಸ್ಥೆಯ ಕಚೇರಿಗಳಲ್ಲಿ ಧ್ವಜ ಅರ್ಧಕ್ಕೆ ಇಳಿಸಿ ಮೌನಾಚರಣೆ

ವಿಶ್ವಸಂಸ್ಥೆಯ ಕಚೇರಿಗಳಲ್ಲಿ ಧ್ವಜ ಅರ್ಧಕ್ಕೆ ಇಳಿಸಿ ಮೌನಾಚರಣೆ

- Advertisement -
- Advertisement -

ಇಸ್ರೇಲ್-ಹಮಾಸ್ ಸಂಘರ್ಷದ ಸಂದರ್ಭದಲ್ಲಿ ಗಾಝಾದಲ್ಲಿ ಹತರಾದ ಸಹೋದ್ಯೋಗಿಗಳ ಸ್ಮರಣಾರ್ಥ  ವಿಶ್ವಸಂಸ್ಥೆಯ ಸಿಬ್ಬಂದಿಗಳು 1 ನಿಮಿಷ ಮೌನಾಚರಣೆ ಮಾಡಿದ್ದು, ಏಷ್ಯದಾದ್ಯಂತ ವಿಶ್ವಸಂಸ್ಥೆಯ ಕಾಂಪೌಂಡ್‌ಗಳಲ್ಲಿ ಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ.

ವಿಶ್ವಸಂಸ್ಥೆಯ ನೀಲಿ ಮತ್ತು ಬಿಳಿ ಬಣ್ಣದ ಧ್ವಜವನ್ನು ಬ್ಯಾಂಕಾಕ್, ಟೋಕಿಯೊ ಮತ್ತು ಬೀಜಿಂಗ್‌ನಲ್ಲಿರುವ ಕಚೇರಿಗಳಲ್ಲಿ ಸ್ಥಳೀಯ ಸಮಯ ಬೆಳಿಗ್ಗೆ 9:30ಕ್ಕೆ ಅರ್ಧಕ್ಕೆ ಇಳಿಸಲಾಗಿದೆ.

ಪ್ಯಾಲೆಸ್ತೀನ್‌ ನಾಗರಿಕರಿಗೆ ಪರಿಹಾರ ಕಲ್ಪಿಸುತ್ತಿರುವ ವಿಶ್ವಸಂಸ್ಥೆಯ ಏಜೆನ್ಸಿ ಯುಎನ್‌ಆರ್‌ಡಬ್ಲ್ಯುಎ, ಗಾಝಾದಲ್ಲಿ ಯುದ್ಧ ಸಮಯದಲ್ಲಿ ವಿಶ್ವಸಂಸ್ಥೆಯ 100ಕ್ಕೂ ಹೆಚ್ಚು ಸಿಬ್ಬಂದಿಗಳು ಹತರಾಗಿದ್ದಾರೆ ಎಂದು ಹೇಳಿದೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್ ರಾಕೆಟ್‌ ದಾಳಿ ನಡೆಸಿದ ನಂತರ ಇಸ್ರೇಲ್ ಯುದ್ಧ ಘೋಷಿಸಿದೆ. ಯುದ್ಧ 1 ತಿಂಗಳು ಕಳೆದಿದ್ದು, ಗಾಝಾ ಪಟ್ಟಿ ಮೇಲಿನ ಇಸ್ರೇಲ್‌ ಬಾಂಬ್ ದಾಳಿ ಮುಂದುವರಿದಿದೆ.
ಇಸ್ರೇಲ್‌ ಅಧಿಕಾರಿಗಳ ಪ್ರಕಾರ ಇಸ್ರೇಲ್‌ ಮೇಲೆ ಹಮಾಸ್‌ ನಡೆಸಿದ ದಾಳಿಯಲ್ಲಿ 1,200 ಜನರು ಮೃತಪಟ್ಟಿದ್ದಾರೆ. 240 ಜನರನ್ನು ಒತ್ತೆಯಾಳುಗಳಾಗಿ ಇಡಲಾಗಿದೆ.

ಗಾಝಾ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಮೃತರ ಸಂಖ್ಯೆ 11,078ಕ್ಕೆ ತಲುಪಿದೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ತಿಳಿಸಿದೆ. ಮೃತರಲ್ಲಿ 4,506 ಮಕ್ಕಳು, 3,027 ಮಹಿಳೆಯರು, 6,78 ವಯಸ್ಕರು ಸೇರಿದ್ದಾರೆ. ಇದೇ ವೇಳೆ  27,490ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಇಸ್ರೇಲ್ ದಾಳಿಯಿಂದ ನೆಲಸಮವಾದ ಕಟ್ಟಡಗಳ ಅವಶೇಷಗಳಡಿಯಲ್ಲಿ 1,500 ಮಕ್ಕಳು ಸೇರಿದಂತೆ 2,700 ಜನರು ಸಿಲುಕಿಕೊಂಡಿದ್ದಾರೆ. ಇಸ್ರೇಲ್‌ ಆಕ್ರಮಣಕ್ಕೆ 198 ವೈದ್ಯಾಧಿಕಾರಿಗಳು ಮೃತಪಟ್ಟಿದ್ದಾರೆ.  53 ಆಂಬ್ಯುಲೆನ್ಸ್‌ಗಳನ್ನು ಧ್ವಂಸಗೊಳಿಸಲಾಗಿದೆ. ಇಸ್ರೇಲ್ 135 ಆರೋಗ್ಯ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು 21 ಆಸ್ಪತ್ರೆಗಳು ಮತ್ತು 47 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬಂದ್ ಮಾಡುವಂತಾಗಿದೆ ಎಂದು  ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಹೇಳಿದ್ದಾರೆ.

ಪ್ಯಾಲೆಸ್ತೀನ್‌ನ ಆಕ್ರಮಿತ ಪ್ರದೇಶಗಳಲ್ಲಿ ಇಸ್ರೇಲ್‌ನ ವಸಾಹತು ಚಟುವಟಿಕೆ ಖಂಡಿಸಿ ವಿಶ್ವಸಂಸ್ಥೆಯು, ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಿದೆ. ಗುರುವಾರ ಮಂಡನೆಯಾದ ಈ ನಿರ್ಣಯದ ಪರ ಭಾರತ ಸೇರಿದಂತೆ 145 ರಾಷ್ಟ್ರಗಳು ಮತ ಚಲಾಯಿಸಿವೆ. ಇದರ ವಿರುದ್ಧ 7 ದೇಶಗಳು ಮತ ಚಲಾಯಿಸಿವೆ. 18 ದೇಶಗಳು ದೂರ ಉಳಿದಿವೆ.

ಪೂರ್ವ ಜೆರುಸಲೇಂ ಹಾಗೂ ಸಿರಿಯಾದ ಗೋಲನ್ ಸೇರಿದಂತೆ ಪ್ಯಾಲೆಸ್ಟೀನ್‌ನ ಆಕ್ರಮಿತ ಪ್ರದೇಶದಲ್ಲಿ ಇಸ್ರೇಲ್ ವಸಾಹತು ಚಟುವಟಿಕೆ ಶೀರ್ಷಿಕೆಯಡಿ ಕರಡು ನಿರ್ಣಯ ಸಿದ್ಧಪಡಿಸಲಾಗಿತ್ತು. ವಿಶ್ವಸಂಸ್ಥೆಯ ವಿಶೇಷ ರಾಜಕೀಯ ಹಾಗೂ ವಸಾಹತು ವಿಮೋಚನಾ ಸಮಿತಿಯು ಇದಕ್ಕೆ ಅನುಮೋದನೆ ನೀಡಿತ್ತು.

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಶನಿವಾರ ನಡೆದ ಶೃಂಗಸಭೆಯಲ್ಲಿ ಇರಾನ್ ಮತ್ತು ಸೌದಿ ಅರೇಬಿಯಾ ನಾಯಕರು ಗಾಝಾ ಪಟ್ಟಿಯಲ್ಲಿ ತಕ್ಷಣದ ಕದನ ವಿರಾಮಕ್ಕೆ ಆಗ್ರಹಿಸಿದ್ದು, ಮಾನವೀಯ ನೆರವಿಗೆ ಆಗ್ರಹಿಸಿದ್ದರು. ಜೊತೆಗೆ ಯುದ್ಧ ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ್ದರು.

ಇದನ್ನು ಓದಿ: ಗಾಝಾದಲ್ಲಿ ನಾಗರಿಕರ ಹತ್ಯಾಕಾಂಡ: ಅಂತರಾಷ್ಟ್ರೀಯ ಸಮುದಾಯವನ್ನು ದೂಷಿಸಿದ ಸೌದಿ, ಇರಾನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...