Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

- Advertisement -
- Advertisement -

ಪ್ಯಾಲೆಸ್ತೀನ್ ಸಮಸ್ಯೆಯನ್ನು ಶಾಂತಿಯುತ ಮಾರ್ಗಗಳ ಮೂಲಕ ಪರಿಹರಿಸುವುದು ಮತ್ತು ದ್ವಿರಾಷ್ಟ್ರ ಪರಿಹಾರವನ್ನು ಮುನ್ನಡೆಸುವ ‘ನ್ಯೂಯಾರ್ಕ್ ಘೋಷಣೆ’ಯನ್ನು ಬೆಂಬಲಿಸುವ ನಿರ್ಣಯವನ್ನು ಭಾರತ ಶುಕ್ರವಾರ (ಸೆ.12) ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಬೆಂಬಲಿಸಿದೆ.

ಫ್ರಾನ್ಸ್ ಮಂಡಿಸಿದ ನಿರ್ಣಯದ ಪರವಾಗಿ 142 ಮತಗಳು, ವಿರುದ್ದ 10 ಮತಗಳು ಬಿದ್ದಿವೆ. 12 ರಾಷ್ಟ್ರಗಳು ಮತದಾನದಿಂದ ದೂರ ಉಳಿದಿವೆ. ಹೆಚ್ಚು ಮತಗಳು ಪರ ಬಿದ್ದಿರುವುದರಿಂದ ನಿರ್ಣಯ ಅಂಗೀಕಾರಗೊಂಡಿದೆ. ಅಮೆರಿಕ, ಇಸ್ರೇಲ್, ಅರ್ಜೆಂಟೀನಾ ಮತ್ತು ಹಂಗೇರಿ ನಿರ್ಣಯ ವಿರೋಧಿಸಿದ ರಾಷ್ಟ್ರಗಳಲ್ಲಿ ಸೇರಿವೆ.

‘ಪ್ಯಾಲೆಸ್ತೀನ್‌ ಸಮಸ್ಯೆಗಳ ಶಾಂತಿಯುತ ಇತ್ಯರ್ಥ ಮತ್ತು ದ್ವಿರಾಷ್ಟ್ರ ಪರಿಹಾರದ ಅನುಷ್ಠಾನದ ಕುರಿತು ನ್ಯೂಯಾರ್ಕ್ ಘೋಷಣೆಯ ಅನುಮೋದನೆ’ ಎಂಬ ಔಪಚಾರಿಕ ಶೀರ್ಷಿಕೆಯ ನಿರ್ಣಯವನ್ನು ಜುಲೈನಲ್ಲಿ ಫ್ರಾನ್ಸ್ ಮತ್ತು ಸೌದಿ ಅರೇಬಿಯಾ ಸಹ-ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮುನ್ನೆಲೆಗೆ ತರಲಾಗಿತ್ತು.

ನಿರ್ಣಯದ ಪ್ರಕಾರ, ಗಾಝಾದಲ್ಲಿನ ಯುದ್ಧವನ್ನು ಕೊನೆಗೊಳಿಸಲು, ದ್ವಿರಾಷ್ಟ್ರ ಪರಿಹಾರದ ಪರಿಣಾಮಕಾರಿ ಅನುಷ್ಠಾನದ ಆಧಾರದ ಮೇಲೆ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನ್ಯಾಯಯುತ, ಶಾಂತಿಯುತ ಮತ್ತು ಶಾಶ್ವತ ಇತ್ಯರ್ಥವನ್ನು ಸಾಧಿಸಲು ಮತ್ತು ಪ್ಯಾಲೆಸ್ತೀನಿಯರು, ಇಸ್ರೇಲಿಗಳು ಹಾಗೂ ಆ ಪ್ರದೇಶದ ಎಲ್ಲಾ ಜನರಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಮೂಹಿಕ ಕ್ರಮ ಕೈಗೊಳ್ಳಲು ರಾಷ್ಟ್ರಗಳು ಒಪ್ಪಿಕೊಂಡಿವೆ.

ಸಾರ್ವಭೌಮ ಮತ್ತು ಕಾರ್ಯಸಾಧ್ಯವಾದ ಪ್ಯಾಲೆಸ್ತೀನ್ ರಾಷ್ಟ್ರದ ಮಾನ್ಯತೆ ಸೇರಿದಂತೆ ದ್ವಿರಾಷ್ಟ್ರ ಪರಿಹಾರಕ್ಕೆ ಸ್ಪಷ್ಟವಾದ ಸಾರ್ವಜನಿಕ ಬದ್ಧತೆಯನ್ನು ಹೊರಡಿಸಲು ನಿರ್ಣಯದ ಮೂಲಕ ಇಸ್ರೇಲ್‌ಗೆ ರಾಷ್ಟ್ರಗಳು ಒತ್ತಾಯಿಸಿವೆ.

ಪ್ಯಾಲೆಸ್ತೀನಿಯರ ವಿರುದ್ಧದ ಹಿಂಸಾಚಾರ ಮತ್ತು ಪ್ರಚೋದನೆಯನ್ನು ತಕ್ಷಣವೇ ಕೊನೆಗೊಳಿಸಬೇಕು. ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್‌ ಪ್ರದೇಶದಲ್ಲಿನ ಎಲ್ಲಾ ವಸಾಹತು, ಭೂಕಬಳಿಕೆ ಮತ್ತು ಸ್ವಾಧೀನ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು. ಯಾವುದೇ ಸ್ವಾಧೀನ ಯೋಜನೆ ಅಥವಾ ವಸಾಹತು ನೀತಿಯನ್ನು ಸಾರ್ವಜನಿಕವಾಗಿ ತ್ಯಜಿಸಬೇಕು ಮತ್ತು ವಸಾಹತುಗಾರರ ಹಿಂಸಾಚಾರವನ್ನು ಕೊನೆಗೊಳಿಸಬೇಕು ಎಂದು ನಿರ್ಣಯ ಇಸ್ರೇಲ್‌ಗೆ ಅಗ್ರಹಿಸಿದೆ.

ನಿರ್ಣಯವು ‘ಪ್ಯಾಲೆಸ್ತೀನ್ ಜನರ ಸ್ವ-ನಿರ್ಣಯದ ಹಕ್ಕಿಗೆ ಬೆಂಬಲ’ವನ್ನು ಪುನರುಚ್ಚರಿಸಿದೆ. ಇತ್ತೀಚಿನ ಬೆಳವಣಿಗೆಗಳು ಮತ್ತೊಮ್ಮೆ, ಎಂದಿಗಿಂತಲೂ ಹೆಚ್ಚಾಗಿ, ಭಯಾನಕ ಮಾನವ ಸಾವುನೋವು ಮತ್ತು ಮಧ್ಯಪ್ರಾಚ್ಯ ಸಂಘರ್ಷದ ನಿರಂತರತೆಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಗಂಭೀರ ಪರಿಣಾಮಗಳನ್ನು ಎತ್ತಿ ತೋರಿಸಿವೆ ಎಂದು ನಿರ್ಣಯ ಹೇಳಿದೆ.

ದ್ವಿರಾಷ್ಟ್ರ ಪರಿಹಾರ ಮತ್ತು ಬಲವಾದ ಅಂತಾರಾಷ್ಟ್ರೀಯ ಖಾತರಿಗಳ ಕಡೆಗೆ ನಿರ್ಣಾಯಕ ಕ್ರಮಗಳ ಕೊರತೆಯಿಂದ ಸಂಘರ್ಷವು ಹೆಚ್ಚಾಗುತ್ತದೆ ಮತ್ತು ಪ್ರಾದೇಶಿಕ ಶಾಂತಿ ಅಸ್ಪಷ್ಟವಾಗಿ ಉಳಿಯುತ್ತದೆ.
ಗಾಝಾ ಪ್ಯಾಲೆಸ್ತೀನ್ ರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ. ಅದನ್ನು ಪಶ್ಚಿಮ ದಂಡೆಯೊಂದಿಗೆ ಏಕೀಕರಿಸಲ್ಪಡಬೇಕು. ಯಾವುದೇ ಆಕ್ರಮಣ, ಮುತ್ತಿಗೆ, ಪ್ರಾದೇಶಿಕ ಕಡಿತ ಅಥವಾ ಬಲವಂತದ ಸ್ಥಳಾಂತರ ಇರಬಾರದು ಎಂದು ನಿರ್ಣಯ ಹೇಳಿದೆ.

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...