Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

- Advertisement -
- Advertisement -

ಪ್ಯಾಲೆಸ್ತೀನ್ ಸಮಸ್ಯೆಯನ್ನು ಶಾಂತಿಯುತ ಮಾರ್ಗಗಳ ಮೂಲಕ ಪರಿಹರಿಸುವುದು ಮತ್ತು ದ್ವಿರಾಷ್ಟ್ರ ಪರಿಹಾರವನ್ನು ಮುನ್ನಡೆಸುವ ‘ನ್ಯೂಯಾರ್ಕ್ ಘೋಷಣೆ’ಯನ್ನು ಬೆಂಬಲಿಸುವ ನಿರ್ಣಯವನ್ನು ಭಾರತ ಶುಕ್ರವಾರ (ಸೆ.12) ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಬೆಂಬಲಿಸಿದೆ.

ಫ್ರಾನ್ಸ್ ಮಂಡಿಸಿದ ನಿರ್ಣಯದ ಪರವಾಗಿ 142 ಮತಗಳು, ವಿರುದ್ದ 10 ಮತಗಳು ಬಿದ್ದಿವೆ. 12 ರಾಷ್ಟ್ರಗಳು ಮತದಾನದಿಂದ ದೂರ ಉಳಿದಿವೆ. ಹೆಚ್ಚು ಮತಗಳು ಪರ ಬಿದ್ದಿರುವುದರಿಂದ ನಿರ್ಣಯ ಅಂಗೀಕಾರಗೊಂಡಿದೆ. ಅಮೆರಿಕ, ಇಸ್ರೇಲ್, ಅರ್ಜೆಂಟೀನಾ ಮತ್ತು ಹಂಗೇರಿ ನಿರ್ಣಯ ವಿರೋಧಿಸಿದ ರಾಷ್ಟ್ರಗಳಲ್ಲಿ ಸೇರಿವೆ.

‘ಪ್ಯಾಲೆಸ್ತೀನ್‌ ಸಮಸ್ಯೆಗಳ ಶಾಂತಿಯುತ ಇತ್ಯರ್ಥ ಮತ್ತು ದ್ವಿರಾಷ್ಟ್ರ ಪರಿಹಾರದ ಅನುಷ್ಠಾನದ ಕುರಿತು ನ್ಯೂಯಾರ್ಕ್ ಘೋಷಣೆಯ ಅನುಮೋದನೆ’ ಎಂಬ ಔಪಚಾರಿಕ ಶೀರ್ಷಿಕೆಯ ನಿರ್ಣಯವನ್ನು ಜುಲೈನಲ್ಲಿ ಫ್ರಾನ್ಸ್ ಮತ್ತು ಸೌದಿ ಅರೇಬಿಯಾ ಸಹ-ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮುನ್ನೆಲೆಗೆ ತರಲಾಗಿತ್ತು.

ನಿರ್ಣಯದ ಪ್ರಕಾರ, ಗಾಝಾದಲ್ಲಿನ ಯುದ್ಧವನ್ನು ಕೊನೆಗೊಳಿಸಲು, ದ್ವಿರಾಷ್ಟ್ರ ಪರಿಹಾರದ ಪರಿಣಾಮಕಾರಿ ಅನುಷ್ಠಾನದ ಆಧಾರದ ಮೇಲೆ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನ್ಯಾಯಯುತ, ಶಾಂತಿಯುತ ಮತ್ತು ಶಾಶ್ವತ ಇತ್ಯರ್ಥವನ್ನು ಸಾಧಿಸಲು ಮತ್ತು ಪ್ಯಾಲೆಸ್ತೀನಿಯರು, ಇಸ್ರೇಲಿಗಳು ಹಾಗೂ ಆ ಪ್ರದೇಶದ ಎಲ್ಲಾ ಜನರಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಮೂಹಿಕ ಕ್ರಮ ಕೈಗೊಳ್ಳಲು ರಾಷ್ಟ್ರಗಳು ಒಪ್ಪಿಕೊಂಡಿವೆ.

ಸಾರ್ವಭೌಮ ಮತ್ತು ಕಾರ್ಯಸಾಧ್ಯವಾದ ಪ್ಯಾಲೆಸ್ತೀನ್ ರಾಷ್ಟ್ರದ ಮಾನ್ಯತೆ ಸೇರಿದಂತೆ ದ್ವಿರಾಷ್ಟ್ರ ಪರಿಹಾರಕ್ಕೆ ಸ್ಪಷ್ಟವಾದ ಸಾರ್ವಜನಿಕ ಬದ್ಧತೆಯನ್ನು ಹೊರಡಿಸಲು ನಿರ್ಣಯದ ಮೂಲಕ ಇಸ್ರೇಲ್‌ಗೆ ರಾಷ್ಟ್ರಗಳು ಒತ್ತಾಯಿಸಿವೆ.

ಪ್ಯಾಲೆಸ್ತೀನಿಯರ ವಿರುದ್ಧದ ಹಿಂಸಾಚಾರ ಮತ್ತು ಪ್ರಚೋದನೆಯನ್ನು ತಕ್ಷಣವೇ ಕೊನೆಗೊಳಿಸಬೇಕು. ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್‌ ಪ್ರದೇಶದಲ್ಲಿನ ಎಲ್ಲಾ ವಸಾಹತು, ಭೂಕಬಳಿಕೆ ಮತ್ತು ಸ್ವಾಧೀನ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು. ಯಾವುದೇ ಸ್ವಾಧೀನ ಯೋಜನೆ ಅಥವಾ ವಸಾಹತು ನೀತಿಯನ್ನು ಸಾರ್ವಜನಿಕವಾಗಿ ತ್ಯಜಿಸಬೇಕು ಮತ್ತು ವಸಾಹತುಗಾರರ ಹಿಂಸಾಚಾರವನ್ನು ಕೊನೆಗೊಳಿಸಬೇಕು ಎಂದು ನಿರ್ಣಯ ಇಸ್ರೇಲ್‌ಗೆ ಅಗ್ರಹಿಸಿದೆ.

ನಿರ್ಣಯವು ‘ಪ್ಯಾಲೆಸ್ತೀನ್ ಜನರ ಸ್ವ-ನಿರ್ಣಯದ ಹಕ್ಕಿಗೆ ಬೆಂಬಲ’ವನ್ನು ಪುನರುಚ್ಚರಿಸಿದೆ. ಇತ್ತೀಚಿನ ಬೆಳವಣಿಗೆಗಳು ಮತ್ತೊಮ್ಮೆ, ಎಂದಿಗಿಂತಲೂ ಹೆಚ್ಚಾಗಿ, ಭಯಾನಕ ಮಾನವ ಸಾವುನೋವು ಮತ್ತು ಮಧ್ಯಪ್ರಾಚ್ಯ ಸಂಘರ್ಷದ ನಿರಂತರತೆಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಗಂಭೀರ ಪರಿಣಾಮಗಳನ್ನು ಎತ್ತಿ ತೋರಿಸಿವೆ ಎಂದು ನಿರ್ಣಯ ಹೇಳಿದೆ.

ದ್ವಿರಾಷ್ಟ್ರ ಪರಿಹಾರ ಮತ್ತು ಬಲವಾದ ಅಂತಾರಾಷ್ಟ್ರೀಯ ಖಾತರಿಗಳ ಕಡೆಗೆ ನಿರ್ಣಾಯಕ ಕ್ರಮಗಳ ಕೊರತೆಯಿಂದ ಸಂಘರ್ಷವು ಹೆಚ್ಚಾಗುತ್ತದೆ ಮತ್ತು ಪ್ರಾದೇಶಿಕ ಶಾಂತಿ ಅಸ್ಪಷ್ಟವಾಗಿ ಉಳಿಯುತ್ತದೆ.
ಗಾಝಾ ಪ್ಯಾಲೆಸ್ತೀನ್ ರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ. ಅದನ್ನು ಪಶ್ಚಿಮ ದಂಡೆಯೊಂದಿಗೆ ಏಕೀಕರಿಸಲ್ಪಡಬೇಕು. ಯಾವುದೇ ಆಕ್ರಮಣ, ಮುತ್ತಿಗೆ, ಪ್ರಾದೇಶಿಕ ಕಡಿತ ಅಥವಾ ಬಲವಂತದ ಸ್ಥಳಾಂತರ ಇರಬಾರದು ಎಂದು ನಿರ್ಣಯ ಹೇಳಿದೆ.

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...