Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

- Advertisement -
- Advertisement -

ಪ್ಯಾಲೆಸ್ತೀನ್ ಸಮಸ್ಯೆಯನ್ನು ಶಾಂತಿಯುತ ಮಾರ್ಗಗಳ ಮೂಲಕ ಪರಿಹರಿಸುವುದು ಮತ್ತು ದ್ವಿರಾಷ್ಟ್ರ ಪರಿಹಾರವನ್ನು ಮುನ್ನಡೆಸುವ ‘ನ್ಯೂಯಾರ್ಕ್ ಘೋಷಣೆ’ಯನ್ನು ಬೆಂಬಲಿಸುವ ನಿರ್ಣಯವನ್ನು ಭಾರತ ಶುಕ್ರವಾರ (ಸೆ.12) ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಬೆಂಬಲಿಸಿದೆ.

ಫ್ರಾನ್ಸ್ ಮಂಡಿಸಿದ ನಿರ್ಣಯದ ಪರವಾಗಿ 142 ಮತಗಳು, ವಿರುದ್ದ 10 ಮತಗಳು ಬಿದ್ದಿವೆ. 12 ರಾಷ್ಟ್ರಗಳು ಮತದಾನದಿಂದ ದೂರ ಉಳಿದಿವೆ. ಹೆಚ್ಚು ಮತಗಳು ಪರ ಬಿದ್ದಿರುವುದರಿಂದ ನಿರ್ಣಯ ಅಂಗೀಕಾರಗೊಂಡಿದೆ. ಅಮೆರಿಕ, ಇಸ್ರೇಲ್, ಅರ್ಜೆಂಟೀನಾ ಮತ್ತು ಹಂಗೇರಿ ನಿರ್ಣಯ ವಿರೋಧಿಸಿದ ರಾಷ್ಟ್ರಗಳಲ್ಲಿ ಸೇರಿವೆ.

‘ಪ್ಯಾಲೆಸ್ತೀನ್‌ ಸಮಸ್ಯೆಗಳ ಶಾಂತಿಯುತ ಇತ್ಯರ್ಥ ಮತ್ತು ದ್ವಿರಾಷ್ಟ್ರ ಪರಿಹಾರದ ಅನುಷ್ಠಾನದ ಕುರಿತು ನ್ಯೂಯಾರ್ಕ್ ಘೋಷಣೆಯ ಅನುಮೋದನೆ’ ಎಂಬ ಔಪಚಾರಿಕ ಶೀರ್ಷಿಕೆಯ ನಿರ್ಣಯವನ್ನು ಜುಲೈನಲ್ಲಿ ಫ್ರಾನ್ಸ್ ಮತ್ತು ಸೌದಿ ಅರೇಬಿಯಾ ಸಹ-ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮುನ್ನೆಲೆಗೆ ತರಲಾಗಿತ್ತು.

ನಿರ್ಣಯದ ಪ್ರಕಾರ, ಗಾಝಾದಲ್ಲಿನ ಯುದ್ಧವನ್ನು ಕೊನೆಗೊಳಿಸಲು, ದ್ವಿರಾಷ್ಟ್ರ ಪರಿಹಾರದ ಪರಿಣಾಮಕಾರಿ ಅನುಷ್ಠಾನದ ಆಧಾರದ ಮೇಲೆ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನ್ಯಾಯಯುತ, ಶಾಂತಿಯುತ ಮತ್ತು ಶಾಶ್ವತ ಇತ್ಯರ್ಥವನ್ನು ಸಾಧಿಸಲು ಮತ್ತು ಪ್ಯಾಲೆಸ್ತೀನಿಯರು, ಇಸ್ರೇಲಿಗಳು ಹಾಗೂ ಆ ಪ್ರದೇಶದ ಎಲ್ಲಾ ಜನರಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಮೂಹಿಕ ಕ್ರಮ ಕೈಗೊಳ್ಳಲು ರಾಷ್ಟ್ರಗಳು ಒಪ್ಪಿಕೊಂಡಿವೆ.

ಸಾರ್ವಭೌಮ ಮತ್ತು ಕಾರ್ಯಸಾಧ್ಯವಾದ ಪ್ಯಾಲೆಸ್ತೀನ್ ರಾಷ್ಟ್ರದ ಮಾನ್ಯತೆ ಸೇರಿದಂತೆ ದ್ವಿರಾಷ್ಟ್ರ ಪರಿಹಾರಕ್ಕೆ ಸ್ಪಷ್ಟವಾದ ಸಾರ್ವಜನಿಕ ಬದ್ಧತೆಯನ್ನು ಹೊರಡಿಸಲು ನಿರ್ಣಯದ ಮೂಲಕ ಇಸ್ರೇಲ್‌ಗೆ ರಾಷ್ಟ್ರಗಳು ಒತ್ತಾಯಿಸಿವೆ.

ಪ್ಯಾಲೆಸ್ತೀನಿಯರ ವಿರುದ್ಧದ ಹಿಂಸಾಚಾರ ಮತ್ತು ಪ್ರಚೋದನೆಯನ್ನು ತಕ್ಷಣವೇ ಕೊನೆಗೊಳಿಸಬೇಕು. ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್‌ ಪ್ರದೇಶದಲ್ಲಿನ ಎಲ್ಲಾ ವಸಾಹತು, ಭೂಕಬಳಿಕೆ ಮತ್ತು ಸ್ವಾಧೀನ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು. ಯಾವುದೇ ಸ್ವಾಧೀನ ಯೋಜನೆ ಅಥವಾ ವಸಾಹತು ನೀತಿಯನ್ನು ಸಾರ್ವಜನಿಕವಾಗಿ ತ್ಯಜಿಸಬೇಕು ಮತ್ತು ವಸಾಹತುಗಾರರ ಹಿಂಸಾಚಾರವನ್ನು ಕೊನೆಗೊಳಿಸಬೇಕು ಎಂದು ನಿರ್ಣಯ ಇಸ್ರೇಲ್‌ಗೆ ಅಗ್ರಹಿಸಿದೆ.

ನಿರ್ಣಯವು ‘ಪ್ಯಾಲೆಸ್ತೀನ್ ಜನರ ಸ್ವ-ನಿರ್ಣಯದ ಹಕ್ಕಿಗೆ ಬೆಂಬಲ’ವನ್ನು ಪುನರುಚ್ಚರಿಸಿದೆ. ಇತ್ತೀಚಿನ ಬೆಳವಣಿಗೆಗಳು ಮತ್ತೊಮ್ಮೆ, ಎಂದಿಗಿಂತಲೂ ಹೆಚ್ಚಾಗಿ, ಭಯಾನಕ ಮಾನವ ಸಾವುನೋವು ಮತ್ತು ಮಧ್ಯಪ್ರಾಚ್ಯ ಸಂಘರ್ಷದ ನಿರಂತರತೆಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಗಂಭೀರ ಪರಿಣಾಮಗಳನ್ನು ಎತ್ತಿ ತೋರಿಸಿವೆ ಎಂದು ನಿರ್ಣಯ ಹೇಳಿದೆ.

ದ್ವಿರಾಷ್ಟ್ರ ಪರಿಹಾರ ಮತ್ತು ಬಲವಾದ ಅಂತಾರಾಷ್ಟ್ರೀಯ ಖಾತರಿಗಳ ಕಡೆಗೆ ನಿರ್ಣಾಯಕ ಕ್ರಮಗಳ ಕೊರತೆಯಿಂದ ಸಂಘರ್ಷವು ಹೆಚ್ಚಾಗುತ್ತದೆ ಮತ್ತು ಪ್ರಾದೇಶಿಕ ಶಾಂತಿ ಅಸ್ಪಷ್ಟವಾಗಿ ಉಳಿಯುತ್ತದೆ.
ಗಾಝಾ ಪ್ಯಾಲೆಸ್ತೀನ್ ರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ. ಅದನ್ನು ಪಶ್ಚಿಮ ದಂಡೆಯೊಂದಿಗೆ ಏಕೀಕರಿಸಲ್ಪಡಬೇಕು. ಯಾವುದೇ ಆಕ್ರಮಣ, ಮುತ್ತಿಗೆ, ಪ್ರಾದೇಶಿಕ ಕಡಿತ ಅಥವಾ ಬಲವಂತದ ಸ್ಥಳಾಂತರ ಇರಬಾರದು ಎಂದು ನಿರ್ಣಯ ಹೇಳಿದೆ.

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...