Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

- Advertisement -
- Advertisement -

ಪ್ಯಾಲೆಸ್ತೀನ್ ಸಮಸ್ಯೆಯನ್ನು ಶಾಂತಿಯುತ ಮಾರ್ಗಗಳ ಮೂಲಕ ಪರಿಹರಿಸುವುದು ಮತ್ತು ದ್ವಿರಾಷ್ಟ್ರ ಪರಿಹಾರವನ್ನು ಮುನ್ನಡೆಸುವ ‘ನ್ಯೂಯಾರ್ಕ್ ಘೋಷಣೆ’ಯನ್ನು ಬೆಂಬಲಿಸುವ ನಿರ್ಣಯವನ್ನು ಭಾರತ ಶುಕ್ರವಾರ (ಸೆ.12) ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಬೆಂಬಲಿಸಿದೆ.

ಫ್ರಾನ್ಸ್ ಮಂಡಿಸಿದ ನಿರ್ಣಯದ ಪರವಾಗಿ 142 ಮತಗಳು, ವಿರುದ್ದ 10 ಮತಗಳು ಬಿದ್ದಿವೆ. 12 ರಾಷ್ಟ್ರಗಳು ಮತದಾನದಿಂದ ದೂರ ಉಳಿದಿವೆ. ಹೆಚ್ಚು ಮತಗಳು ಪರ ಬಿದ್ದಿರುವುದರಿಂದ ನಿರ್ಣಯ ಅಂಗೀಕಾರಗೊಂಡಿದೆ. ಅಮೆರಿಕ, ಇಸ್ರೇಲ್, ಅರ್ಜೆಂಟೀನಾ ಮತ್ತು ಹಂಗೇರಿ ನಿರ್ಣಯ ವಿರೋಧಿಸಿದ ರಾಷ್ಟ್ರಗಳಲ್ಲಿ ಸೇರಿವೆ.

‘ಪ್ಯಾಲೆಸ್ತೀನ್‌ ಸಮಸ್ಯೆಗಳ ಶಾಂತಿಯುತ ಇತ್ಯರ್ಥ ಮತ್ತು ದ್ವಿರಾಷ್ಟ್ರ ಪರಿಹಾರದ ಅನುಷ್ಠಾನದ ಕುರಿತು ನ್ಯೂಯಾರ್ಕ್ ಘೋಷಣೆಯ ಅನುಮೋದನೆ’ ಎಂಬ ಔಪಚಾರಿಕ ಶೀರ್ಷಿಕೆಯ ನಿರ್ಣಯವನ್ನು ಜುಲೈನಲ್ಲಿ ಫ್ರಾನ್ಸ್ ಮತ್ತು ಸೌದಿ ಅರೇಬಿಯಾ ಸಹ-ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮುನ್ನೆಲೆಗೆ ತರಲಾಗಿತ್ತು.

ನಿರ್ಣಯದ ಪ್ರಕಾರ, ಗಾಝಾದಲ್ಲಿನ ಯುದ್ಧವನ್ನು ಕೊನೆಗೊಳಿಸಲು, ದ್ವಿರಾಷ್ಟ್ರ ಪರಿಹಾರದ ಪರಿಣಾಮಕಾರಿ ಅನುಷ್ಠಾನದ ಆಧಾರದ ಮೇಲೆ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ನ್ಯಾಯಯುತ, ಶಾಂತಿಯುತ ಮತ್ತು ಶಾಶ್ವತ ಇತ್ಯರ್ಥವನ್ನು ಸಾಧಿಸಲು ಮತ್ತು ಪ್ಯಾಲೆಸ್ತೀನಿಯರು, ಇಸ್ರೇಲಿಗಳು ಹಾಗೂ ಆ ಪ್ರದೇಶದ ಎಲ್ಲಾ ಜನರಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಮೂಹಿಕ ಕ್ರಮ ಕೈಗೊಳ್ಳಲು ರಾಷ್ಟ್ರಗಳು ಒಪ್ಪಿಕೊಂಡಿವೆ.

ಸಾರ್ವಭೌಮ ಮತ್ತು ಕಾರ್ಯಸಾಧ್ಯವಾದ ಪ್ಯಾಲೆಸ್ತೀನ್ ರಾಷ್ಟ್ರದ ಮಾನ್ಯತೆ ಸೇರಿದಂತೆ ದ್ವಿರಾಷ್ಟ್ರ ಪರಿಹಾರಕ್ಕೆ ಸ್ಪಷ್ಟವಾದ ಸಾರ್ವಜನಿಕ ಬದ್ಧತೆಯನ್ನು ಹೊರಡಿಸಲು ನಿರ್ಣಯದ ಮೂಲಕ ಇಸ್ರೇಲ್‌ಗೆ ರಾಷ್ಟ್ರಗಳು ಒತ್ತಾಯಿಸಿವೆ.

ಪ್ಯಾಲೆಸ್ತೀನಿಯರ ವಿರುದ್ಧದ ಹಿಂಸಾಚಾರ ಮತ್ತು ಪ್ರಚೋದನೆಯನ್ನು ತಕ್ಷಣವೇ ಕೊನೆಗೊಳಿಸಬೇಕು. ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್‌ ಪ್ರದೇಶದಲ್ಲಿನ ಎಲ್ಲಾ ವಸಾಹತು, ಭೂಕಬಳಿಕೆ ಮತ್ತು ಸ್ವಾಧೀನ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು. ಯಾವುದೇ ಸ್ವಾಧೀನ ಯೋಜನೆ ಅಥವಾ ವಸಾಹತು ನೀತಿಯನ್ನು ಸಾರ್ವಜನಿಕವಾಗಿ ತ್ಯಜಿಸಬೇಕು ಮತ್ತು ವಸಾಹತುಗಾರರ ಹಿಂಸಾಚಾರವನ್ನು ಕೊನೆಗೊಳಿಸಬೇಕು ಎಂದು ನಿರ್ಣಯ ಇಸ್ರೇಲ್‌ಗೆ ಅಗ್ರಹಿಸಿದೆ.

ನಿರ್ಣಯವು ‘ಪ್ಯಾಲೆಸ್ತೀನ್ ಜನರ ಸ್ವ-ನಿರ್ಣಯದ ಹಕ್ಕಿಗೆ ಬೆಂಬಲ’ವನ್ನು ಪುನರುಚ್ಚರಿಸಿದೆ. ಇತ್ತೀಚಿನ ಬೆಳವಣಿಗೆಗಳು ಮತ್ತೊಮ್ಮೆ, ಎಂದಿಗಿಂತಲೂ ಹೆಚ್ಚಾಗಿ, ಭಯಾನಕ ಮಾನವ ಸಾವುನೋವು ಮತ್ತು ಮಧ್ಯಪ್ರಾಚ್ಯ ಸಂಘರ್ಷದ ನಿರಂತರತೆಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಗಂಭೀರ ಪರಿಣಾಮಗಳನ್ನು ಎತ್ತಿ ತೋರಿಸಿವೆ ಎಂದು ನಿರ್ಣಯ ಹೇಳಿದೆ.

ದ್ವಿರಾಷ್ಟ್ರ ಪರಿಹಾರ ಮತ್ತು ಬಲವಾದ ಅಂತಾರಾಷ್ಟ್ರೀಯ ಖಾತರಿಗಳ ಕಡೆಗೆ ನಿರ್ಣಾಯಕ ಕ್ರಮಗಳ ಕೊರತೆಯಿಂದ ಸಂಘರ್ಷವು ಹೆಚ್ಚಾಗುತ್ತದೆ ಮತ್ತು ಪ್ರಾದೇಶಿಕ ಶಾಂತಿ ಅಸ್ಪಷ್ಟವಾಗಿ ಉಳಿಯುತ್ತದೆ.
ಗಾಝಾ ಪ್ಯಾಲೆಸ್ತೀನ್ ರಾಷ್ಟ್ರದ ಅವಿಭಾಜ್ಯ ಅಂಗವಾಗಿದೆ. ಅದನ್ನು ಪಶ್ಚಿಮ ದಂಡೆಯೊಂದಿಗೆ ಏಕೀಕರಿಸಲ್ಪಡಬೇಕು. ಯಾವುದೇ ಆಕ್ರಮಣ, ಮುತ್ತಿಗೆ, ಪ್ರಾದೇಶಿಕ ಕಡಿತ ಅಥವಾ ಬಲವಂತದ ಸ್ಥಳಾಂತರ ಇರಬಾರದು ಎಂದು ನಿರ್ಣಯ ಹೇಳಿದೆ.

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಸರ್ಕಾರದ ಚುಕ್ಕಾಣಿ ಹಿಡಿದ ಸುಶೀಲಾ ಕರ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...