Homeಮುಖಪುಟಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

- Advertisement -
- Advertisement -

ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ. ಆದರೆ, ಈ ನಿರ್ಣಯ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿಲ್ಲ.

ಯುಎಸ್ , ರಷ್ಯಾ ನಿರ್ಣಯದ ಪರ ಮತ ಹಾಕಿಲ್ಲ. ಈ ಎರಡು ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು. ಮಾನವೀಯ ನೆರವು ಒದಗಿಸುವ ನಿರ್ಣಯಕ್ಕೆ ಯುಎಸ್ ವಿರೋಧ ವ್ಯಕ್ತಪಡಿಸಿದೆ. ಮಾನವೀಯ ವಿತರಣೆಗಳ ವಿಶೇಷ ನಿಯಂತ್ರಣವನ್ನು ವಿಶ್ವ ಸಂಸ್ಥೆಗೆ ನೀಡುವ ಷರತ್ತನ್ನು ತೆಗೆದುಹಾಕಲು ಅದು ಒತ್ತಾಯಿಸಿದೆ.

ತಕ್ಷಣ ಗಾಝಾಗೆ ಮಾನವೀಯ ನೆರವು ಹೆಚ್ಚಿಸಬೇಕು. ಇದಕ್ಕಾಗಿ ವಿಶ್ವಸಂಸ್ಥೆಯಿಂದ ಸಂಯೋಜಕರನ್ನು ನೇಮಿಸಬೇಕು. ಇಸ್ರೇಲ್ ಕುರಿತು ಇದುವರೆಗೆ ಮಾತನಾಡದ ರಾಷ್ಟ್ರಗಳು ಕೂಡ ಇದರಲ್ಲಿ ಕೈ ಜೋಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ನಿರ್ಣಯದ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕದನ ವಿರಾಮವಿಲ್ಲದೆ ಕೇವಲ ಮಾನವೀಯ ವಿತರಣೆ ಹೆಚ್ಚಿಸುವ ನಿರ್ಣಯದ ಸಫಲತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

“ಗಾಝಾದ ಜನತೆಗೆ ಮಾನವೀಯ ನೆರವು ಹೆಚ್ಚಿಸುವ ಭದ್ರತಾ ಮಂಡಳಿಯ ನಿರ್ಣಯ ಜನರಿಗೆ ಸಹಕಾರಿಯಾಗಲಿದೆ ಎಂದು ನಾನು ಒಪ್ಪುತ್ತೇನೆ. ಆದರೆ, ಇದು ಸಫಲತೆ ಕಾಣಬೇಕಾದರೆ, ಗಾಝಾದ ಜನತೆಯ ದುಃಸ್ವಪ್ನ ಕೊನೆಗೊಳಿಸಲು ಮಾನವೀಯ ಕದನ ವಿರಾಮವು ಏಕೈಕ ಮಾರ್ಗವಾಗಿದೆ” ಎಂದು ಗುಟೆರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಜಿಪ್ಟ್ ರೆಡ್ ಕ್ರೆಸೆಂಟ್, ವಿಶ್ವಸಂಸ್ಥೆ ಮತ್ತು ನಮ್ಮ ಸಹವರ್ತಿಗಳು ಕಳಿಸಿದ ಮಾನವೀಯ ನೆರವಿನ ಟ್ರಕ್‌ಗಳ ಸಂಖ್ಯೆ ನೋಡಿ ಕೆಲವರು ಗಾಝಾದಲ್ಲಿ ಮಾನವೀಯ ಕಾರ್ಯಾಚರಣೆಯ ಪರಿಣಾಮಕಾರಿತ್ವವನ್ನು ಅಳೆಯುತ್ತಿದ್ದಾರೆ. ಇದು ತಪ್ಪು, ನಿಜವಾದ ಸಮಸ್ಯೆ ಏನೆಂದರೆ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ವಿಧಾನ ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರೀ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಗುಟೆರಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಶುಕ್ರವಾರ ನಿರ್ಣಯ ಮಂಡಿಸಿದೆ. ಇದರ ಪರ ಭದ್ರತಾ ಮಂಡಳಿಯ ಎಲ್ಲಾ ಸದಸ್ಯರು ಮತ ಹಾಕಿದ್ದಾರೆ. ಯುಎಸ್ ಮತ್ತು ರಷ್ಯಾ ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು.

“ಯುಎಸ್ ನಿರ್ಣಯವನ್ನು ಬೆಂಬಲಿಸಿತ್ತು. ಆದರೆ, ನಿರ್ಣಯದಲ್ಲಿ ಯುದ್ಧವನ್ನು ಪ್ರಚೋದಿಸಿದ ಹಮಾಸ್ ದಾಳಿಯ ಬಗ್ಗೆ ಯಾವುದೇ ಖಂಡನೆ ಇಲ್ಲದ ಕಾರಣ ಮತದಾನದಿಂದ ದೂರ ಉಳಿದಿದೆ” ಎಂದು ವಿಶ್ವಸಂಸ್ಥೆಗೆ ಯುಎಸ್ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಹೇಳಿದ್ದಾರೆ.

“ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನಿರ್ಣಯ ಉಲ್ಲೇಖಿಸಿಲ್ಲ ಎಂಬುವುದು ನಮಗೆ ತೀವ್ರ ನಿರಾಶೆ ಉಂಟು ಮಾಡಿದೆ” ಎಂದು ಲಿಂಡಾ ಥಾಮಸ್ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಗಾಝಾದಲ್ಲಿ 20 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿಲ್ಲ.

ಈ ನಡುವೆ “ಯುಎಸ್ ನಿರ್ಣಯದ ಹಲ್ಲು ಕಿತ್ತು ಹಾಕಿದೆ” ಎಂದು ರಷ್ಯಾದ ರಾಯಭಾರಿ ವಾಸಿಲಿ ನೆಬೆನ್ಜ್ಯಾ ದೂರಿದ್ದಾರೆ. “ಈ ನಿರ್ಣಯವು ಇಸ್ರೇಲಿ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುತ್ತದೆ. ಹಾಗಾಗಿ, ರಷ್ಯಾ ಮತದಾನದಿಂದ ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಯುಎಸ್ ಗೆ ಬೆದರಿತಾ ವಿಶ್ವಸಂಸ್ಥೆ?

ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯದಲ್ಲಿ ಗಾಝಾದಲ್ಲಿ ಕದನ ವಿರಾಮದ ಬಗ್ಗೆ ಉಲ್ಲೇಖಿಸಿಲ್ಲ. ಇದರ ಹಿಂದೆ ಯುಎಸ್ ಬೆದರಿಕೆ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಈ ಹಿಂದೆ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿದ್ದ ನಿರ್ಣಯದ ಪರ ಯುಎಸ್ ಮತ ಹಾಕಿರಲಿಲ್ಲ. ಅಲ್ಲದೆ, ಯುಎಸ್ ನಿರ್ಣಯದ ಹಲ್ಲು ಕಿತ್ತಿದೆ ಎಂಬ ರಷ್ಯಾ ರಾಯಬಾರಿಯ ಹೇಳಿಕೆ ಈ ಸಂದೇಹವನ್ನು ಪುಷ್ಠೀಕರಿಸುತ್ತದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇಸ್ರೇಲ್ ರಕ್ತದಾಹಕ್ಕೆ ಗಾಝಾ ನರಕವಾಗಿ ಮಾರ್ಪಟ್ಟಿದೆ. ಅಲ್ಲಿನ ಶೇ.90ರಷ್ಟು ಜನರು ತಮ್ಮ ಮನೆ, ಆಸ್ತಿ-ಪಾಸ್ತಿ ಬಿಟ್ಟು ಪಲಾಯನ ಮಾಡಿದ್ದಾರೆ. ಉಳಿದವರಲ್ಲಿ ಅನೇಕರು ಬಲಿಯಾಗಿದ್ದಾರೆ. ಸುಮಾರು 50 ಸಾವಿರ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕನಿಷ್ಠ ವ್ಯವಸ್ಥೆಗಳಲಿಲ್ಲದೆ ಜನರು ನರಳುತ್ತಿದ್ದಾರೆ. ಗಾಯಾಳುಗಲ್ಲದ ಜನರು ಆಹಾರ, ಪಾನಿಯಕ್ಕಾಗಿ ಅಲೆದಾಡುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...