Homeಮುಖಪುಟಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

- Advertisement -
- Advertisement -

ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ. ಆದರೆ, ಈ ನಿರ್ಣಯ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿಲ್ಲ.

ಯುಎಸ್ , ರಷ್ಯಾ ನಿರ್ಣಯದ ಪರ ಮತ ಹಾಕಿಲ್ಲ. ಈ ಎರಡು ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು. ಮಾನವೀಯ ನೆರವು ಒದಗಿಸುವ ನಿರ್ಣಯಕ್ಕೆ ಯುಎಸ್ ವಿರೋಧ ವ್ಯಕ್ತಪಡಿಸಿದೆ. ಮಾನವೀಯ ವಿತರಣೆಗಳ ವಿಶೇಷ ನಿಯಂತ್ರಣವನ್ನು ವಿಶ್ವ ಸಂಸ್ಥೆಗೆ ನೀಡುವ ಷರತ್ತನ್ನು ತೆಗೆದುಹಾಕಲು ಅದು ಒತ್ತಾಯಿಸಿದೆ.

ತಕ್ಷಣ ಗಾಝಾಗೆ ಮಾನವೀಯ ನೆರವು ಹೆಚ್ಚಿಸಬೇಕು. ಇದಕ್ಕಾಗಿ ವಿಶ್ವಸಂಸ್ಥೆಯಿಂದ ಸಂಯೋಜಕರನ್ನು ನೇಮಿಸಬೇಕು. ಇಸ್ರೇಲ್ ಕುರಿತು ಇದುವರೆಗೆ ಮಾತನಾಡದ ರಾಷ್ಟ್ರಗಳು ಕೂಡ ಇದರಲ್ಲಿ ಕೈ ಜೋಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ನಿರ್ಣಯದ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕದನ ವಿರಾಮವಿಲ್ಲದೆ ಕೇವಲ ಮಾನವೀಯ ವಿತರಣೆ ಹೆಚ್ಚಿಸುವ ನಿರ್ಣಯದ ಸಫಲತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

“ಗಾಝಾದ ಜನತೆಗೆ ಮಾನವೀಯ ನೆರವು ಹೆಚ್ಚಿಸುವ ಭದ್ರತಾ ಮಂಡಳಿಯ ನಿರ್ಣಯ ಜನರಿಗೆ ಸಹಕಾರಿಯಾಗಲಿದೆ ಎಂದು ನಾನು ಒಪ್ಪುತ್ತೇನೆ. ಆದರೆ, ಇದು ಸಫಲತೆ ಕಾಣಬೇಕಾದರೆ, ಗಾಝಾದ ಜನತೆಯ ದುಃಸ್ವಪ್ನ ಕೊನೆಗೊಳಿಸಲು ಮಾನವೀಯ ಕದನ ವಿರಾಮವು ಏಕೈಕ ಮಾರ್ಗವಾಗಿದೆ” ಎಂದು ಗುಟೆರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಜಿಪ್ಟ್ ರೆಡ್ ಕ್ರೆಸೆಂಟ್, ವಿಶ್ವಸಂಸ್ಥೆ ಮತ್ತು ನಮ್ಮ ಸಹವರ್ತಿಗಳು ಕಳಿಸಿದ ಮಾನವೀಯ ನೆರವಿನ ಟ್ರಕ್‌ಗಳ ಸಂಖ್ಯೆ ನೋಡಿ ಕೆಲವರು ಗಾಝಾದಲ್ಲಿ ಮಾನವೀಯ ಕಾರ್ಯಾಚರಣೆಯ ಪರಿಣಾಮಕಾರಿತ್ವವನ್ನು ಅಳೆಯುತ್ತಿದ್ದಾರೆ. ಇದು ತಪ್ಪು, ನಿಜವಾದ ಸಮಸ್ಯೆ ಏನೆಂದರೆ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ವಿಧಾನ ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರೀ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಗುಟೆರಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಶುಕ್ರವಾರ ನಿರ್ಣಯ ಮಂಡಿಸಿದೆ. ಇದರ ಪರ ಭದ್ರತಾ ಮಂಡಳಿಯ ಎಲ್ಲಾ ಸದಸ್ಯರು ಮತ ಹಾಕಿದ್ದಾರೆ. ಯುಎಸ್ ಮತ್ತು ರಷ್ಯಾ ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು.

“ಯುಎಸ್ ನಿರ್ಣಯವನ್ನು ಬೆಂಬಲಿಸಿತ್ತು. ಆದರೆ, ನಿರ್ಣಯದಲ್ಲಿ ಯುದ್ಧವನ್ನು ಪ್ರಚೋದಿಸಿದ ಹಮಾಸ್ ದಾಳಿಯ ಬಗ್ಗೆ ಯಾವುದೇ ಖಂಡನೆ ಇಲ್ಲದ ಕಾರಣ ಮತದಾನದಿಂದ ದೂರ ಉಳಿದಿದೆ” ಎಂದು ವಿಶ್ವಸಂಸ್ಥೆಗೆ ಯುಎಸ್ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಹೇಳಿದ್ದಾರೆ.

“ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನಿರ್ಣಯ ಉಲ್ಲೇಖಿಸಿಲ್ಲ ಎಂಬುವುದು ನಮಗೆ ತೀವ್ರ ನಿರಾಶೆ ಉಂಟು ಮಾಡಿದೆ” ಎಂದು ಲಿಂಡಾ ಥಾಮಸ್ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಗಾಝಾದಲ್ಲಿ 20 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿಲ್ಲ.

ಈ ನಡುವೆ “ಯುಎಸ್ ನಿರ್ಣಯದ ಹಲ್ಲು ಕಿತ್ತು ಹಾಕಿದೆ” ಎಂದು ರಷ್ಯಾದ ರಾಯಭಾರಿ ವಾಸಿಲಿ ನೆಬೆನ್ಜ್ಯಾ ದೂರಿದ್ದಾರೆ. “ಈ ನಿರ್ಣಯವು ಇಸ್ರೇಲಿ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುತ್ತದೆ. ಹಾಗಾಗಿ, ರಷ್ಯಾ ಮತದಾನದಿಂದ ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಯುಎಸ್ ಗೆ ಬೆದರಿತಾ ವಿಶ್ವಸಂಸ್ಥೆ?

ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯದಲ್ಲಿ ಗಾಝಾದಲ್ಲಿ ಕದನ ವಿರಾಮದ ಬಗ್ಗೆ ಉಲ್ಲೇಖಿಸಿಲ್ಲ. ಇದರ ಹಿಂದೆ ಯುಎಸ್ ಬೆದರಿಕೆ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಈ ಹಿಂದೆ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿದ್ದ ನಿರ್ಣಯದ ಪರ ಯುಎಸ್ ಮತ ಹಾಕಿರಲಿಲ್ಲ. ಅಲ್ಲದೆ, ಯುಎಸ್ ನಿರ್ಣಯದ ಹಲ್ಲು ಕಿತ್ತಿದೆ ಎಂಬ ರಷ್ಯಾ ರಾಯಬಾರಿಯ ಹೇಳಿಕೆ ಈ ಸಂದೇಹವನ್ನು ಪುಷ್ಠೀಕರಿಸುತ್ತದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇಸ್ರೇಲ್ ರಕ್ತದಾಹಕ್ಕೆ ಗಾಝಾ ನರಕವಾಗಿ ಮಾರ್ಪಟ್ಟಿದೆ. ಅಲ್ಲಿನ ಶೇ.90ರಷ್ಟು ಜನರು ತಮ್ಮ ಮನೆ, ಆಸ್ತಿ-ಪಾಸ್ತಿ ಬಿಟ್ಟು ಪಲಾಯನ ಮಾಡಿದ್ದಾರೆ. ಉಳಿದವರಲ್ಲಿ ಅನೇಕರು ಬಲಿಯಾಗಿದ್ದಾರೆ. ಸುಮಾರು 50 ಸಾವಿರ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕನಿಷ್ಠ ವ್ಯವಸ್ಥೆಗಳಲಿಲ್ಲದೆ ಜನರು ನರಳುತ್ತಿದ್ದಾರೆ. ಗಾಯಾಳುಗಲ್ಲದ ಜನರು ಆಹಾರ, ಪಾನಿಯಕ್ಕಾಗಿ ಅಲೆದಾಡುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...