Homeಮುಖಪುಟಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

- Advertisement -
- Advertisement -

ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ. ಆದರೆ, ಈ ನಿರ್ಣಯ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿಲ್ಲ.

ಯುಎಸ್ , ರಷ್ಯಾ ನಿರ್ಣಯದ ಪರ ಮತ ಹಾಕಿಲ್ಲ. ಈ ಎರಡು ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು. ಮಾನವೀಯ ನೆರವು ಒದಗಿಸುವ ನಿರ್ಣಯಕ್ಕೆ ಯುಎಸ್ ವಿರೋಧ ವ್ಯಕ್ತಪಡಿಸಿದೆ. ಮಾನವೀಯ ವಿತರಣೆಗಳ ವಿಶೇಷ ನಿಯಂತ್ರಣವನ್ನು ವಿಶ್ವ ಸಂಸ್ಥೆಗೆ ನೀಡುವ ಷರತ್ತನ್ನು ತೆಗೆದುಹಾಕಲು ಅದು ಒತ್ತಾಯಿಸಿದೆ.

ತಕ್ಷಣ ಗಾಝಾಗೆ ಮಾನವೀಯ ನೆರವು ಹೆಚ್ಚಿಸಬೇಕು. ಇದಕ್ಕಾಗಿ ವಿಶ್ವಸಂಸ್ಥೆಯಿಂದ ಸಂಯೋಜಕರನ್ನು ನೇಮಿಸಬೇಕು. ಇಸ್ರೇಲ್ ಕುರಿತು ಇದುವರೆಗೆ ಮಾತನಾಡದ ರಾಷ್ಟ್ರಗಳು ಕೂಡ ಇದರಲ್ಲಿ ಕೈ ಜೋಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ನಿರ್ಣಯದ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕದನ ವಿರಾಮವಿಲ್ಲದೆ ಕೇವಲ ಮಾನವೀಯ ವಿತರಣೆ ಹೆಚ್ಚಿಸುವ ನಿರ್ಣಯದ ಸಫಲತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

“ಗಾಝಾದ ಜನತೆಗೆ ಮಾನವೀಯ ನೆರವು ಹೆಚ್ಚಿಸುವ ಭದ್ರತಾ ಮಂಡಳಿಯ ನಿರ್ಣಯ ಜನರಿಗೆ ಸಹಕಾರಿಯಾಗಲಿದೆ ಎಂದು ನಾನು ಒಪ್ಪುತ್ತೇನೆ. ಆದರೆ, ಇದು ಸಫಲತೆ ಕಾಣಬೇಕಾದರೆ, ಗಾಝಾದ ಜನತೆಯ ದುಃಸ್ವಪ್ನ ಕೊನೆಗೊಳಿಸಲು ಮಾನವೀಯ ಕದನ ವಿರಾಮವು ಏಕೈಕ ಮಾರ್ಗವಾಗಿದೆ” ಎಂದು ಗುಟೆರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಜಿಪ್ಟ್ ರೆಡ್ ಕ್ರೆಸೆಂಟ್, ವಿಶ್ವಸಂಸ್ಥೆ ಮತ್ತು ನಮ್ಮ ಸಹವರ್ತಿಗಳು ಕಳಿಸಿದ ಮಾನವೀಯ ನೆರವಿನ ಟ್ರಕ್‌ಗಳ ಸಂಖ್ಯೆ ನೋಡಿ ಕೆಲವರು ಗಾಝಾದಲ್ಲಿ ಮಾನವೀಯ ಕಾರ್ಯಾಚರಣೆಯ ಪರಿಣಾಮಕಾರಿತ್ವವನ್ನು ಅಳೆಯುತ್ತಿದ್ದಾರೆ. ಇದು ತಪ್ಪು, ನಿಜವಾದ ಸಮಸ್ಯೆ ಏನೆಂದರೆ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ವಿಧಾನ ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರೀ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಗುಟೆರಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಶುಕ್ರವಾರ ನಿರ್ಣಯ ಮಂಡಿಸಿದೆ. ಇದರ ಪರ ಭದ್ರತಾ ಮಂಡಳಿಯ ಎಲ್ಲಾ ಸದಸ್ಯರು ಮತ ಹಾಕಿದ್ದಾರೆ. ಯುಎಸ್ ಮತ್ತು ರಷ್ಯಾ ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು.

“ಯುಎಸ್ ನಿರ್ಣಯವನ್ನು ಬೆಂಬಲಿಸಿತ್ತು. ಆದರೆ, ನಿರ್ಣಯದಲ್ಲಿ ಯುದ್ಧವನ್ನು ಪ್ರಚೋದಿಸಿದ ಹಮಾಸ್ ದಾಳಿಯ ಬಗ್ಗೆ ಯಾವುದೇ ಖಂಡನೆ ಇಲ್ಲದ ಕಾರಣ ಮತದಾನದಿಂದ ದೂರ ಉಳಿದಿದೆ” ಎಂದು ವಿಶ್ವಸಂಸ್ಥೆಗೆ ಯುಎಸ್ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಹೇಳಿದ್ದಾರೆ.

“ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನಿರ್ಣಯ ಉಲ್ಲೇಖಿಸಿಲ್ಲ ಎಂಬುವುದು ನಮಗೆ ತೀವ್ರ ನಿರಾಶೆ ಉಂಟು ಮಾಡಿದೆ” ಎಂದು ಲಿಂಡಾ ಥಾಮಸ್ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಗಾಝಾದಲ್ಲಿ 20 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿಲ್ಲ.

ಈ ನಡುವೆ “ಯುಎಸ್ ನಿರ್ಣಯದ ಹಲ್ಲು ಕಿತ್ತು ಹಾಕಿದೆ” ಎಂದು ರಷ್ಯಾದ ರಾಯಭಾರಿ ವಾಸಿಲಿ ನೆಬೆನ್ಜ್ಯಾ ದೂರಿದ್ದಾರೆ. “ಈ ನಿರ್ಣಯವು ಇಸ್ರೇಲಿ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುತ್ತದೆ. ಹಾಗಾಗಿ, ರಷ್ಯಾ ಮತದಾನದಿಂದ ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಯುಎಸ್ ಗೆ ಬೆದರಿತಾ ವಿಶ್ವಸಂಸ್ಥೆ?

ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯದಲ್ಲಿ ಗಾಝಾದಲ್ಲಿ ಕದನ ವಿರಾಮದ ಬಗ್ಗೆ ಉಲ್ಲೇಖಿಸಿಲ್ಲ. ಇದರ ಹಿಂದೆ ಯುಎಸ್ ಬೆದರಿಕೆ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಈ ಹಿಂದೆ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿದ್ದ ನಿರ್ಣಯದ ಪರ ಯುಎಸ್ ಮತ ಹಾಕಿರಲಿಲ್ಲ. ಅಲ್ಲದೆ, ಯುಎಸ್ ನಿರ್ಣಯದ ಹಲ್ಲು ಕಿತ್ತಿದೆ ಎಂಬ ರಷ್ಯಾ ರಾಯಬಾರಿಯ ಹೇಳಿಕೆ ಈ ಸಂದೇಹವನ್ನು ಪುಷ್ಠೀಕರಿಸುತ್ತದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇಸ್ರೇಲ್ ರಕ್ತದಾಹಕ್ಕೆ ಗಾಝಾ ನರಕವಾಗಿ ಮಾರ್ಪಟ್ಟಿದೆ. ಅಲ್ಲಿನ ಶೇ.90ರಷ್ಟು ಜನರು ತಮ್ಮ ಮನೆ, ಆಸ್ತಿ-ಪಾಸ್ತಿ ಬಿಟ್ಟು ಪಲಾಯನ ಮಾಡಿದ್ದಾರೆ. ಉಳಿದವರಲ್ಲಿ ಅನೇಕರು ಬಲಿಯಾಗಿದ್ದಾರೆ. ಸುಮಾರು 50 ಸಾವಿರ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕನಿಷ್ಠ ವ್ಯವಸ್ಥೆಗಳಲಿಲ್ಲದೆ ಜನರು ನರಳುತ್ತಿದ್ದಾರೆ. ಗಾಯಾಳುಗಲ್ಲದ ಜನರು ಆಹಾರ, ಪಾನಿಯಕ್ಕಾಗಿ ಅಲೆದಾಡುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...