Homeಮುಖಪುಟಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

- Advertisement -
- Advertisement -

ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ. ಆದರೆ, ಈ ನಿರ್ಣಯ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿಲ್ಲ.

ಯುಎಸ್ , ರಷ್ಯಾ ನಿರ್ಣಯದ ಪರ ಮತ ಹಾಕಿಲ್ಲ. ಈ ಎರಡು ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು. ಮಾನವೀಯ ನೆರವು ಒದಗಿಸುವ ನಿರ್ಣಯಕ್ಕೆ ಯುಎಸ್ ವಿರೋಧ ವ್ಯಕ್ತಪಡಿಸಿದೆ. ಮಾನವೀಯ ವಿತರಣೆಗಳ ವಿಶೇಷ ನಿಯಂತ್ರಣವನ್ನು ವಿಶ್ವ ಸಂಸ್ಥೆಗೆ ನೀಡುವ ಷರತ್ತನ್ನು ತೆಗೆದುಹಾಕಲು ಅದು ಒತ್ತಾಯಿಸಿದೆ.

ತಕ್ಷಣ ಗಾಝಾಗೆ ಮಾನವೀಯ ನೆರವು ಹೆಚ್ಚಿಸಬೇಕು. ಇದಕ್ಕಾಗಿ ವಿಶ್ವಸಂಸ್ಥೆಯಿಂದ ಸಂಯೋಜಕರನ್ನು ನೇಮಿಸಬೇಕು. ಇಸ್ರೇಲ್ ಕುರಿತು ಇದುವರೆಗೆ ಮಾತನಾಡದ ರಾಷ್ಟ್ರಗಳು ಕೂಡ ಇದರಲ್ಲಿ ಕೈ ಜೋಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ನಿರ್ಣಯದ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕದನ ವಿರಾಮವಿಲ್ಲದೆ ಕೇವಲ ಮಾನವೀಯ ವಿತರಣೆ ಹೆಚ್ಚಿಸುವ ನಿರ್ಣಯದ ಸಫಲತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

“ಗಾಝಾದ ಜನತೆಗೆ ಮಾನವೀಯ ನೆರವು ಹೆಚ್ಚಿಸುವ ಭದ್ರತಾ ಮಂಡಳಿಯ ನಿರ್ಣಯ ಜನರಿಗೆ ಸಹಕಾರಿಯಾಗಲಿದೆ ಎಂದು ನಾನು ಒಪ್ಪುತ್ತೇನೆ. ಆದರೆ, ಇದು ಸಫಲತೆ ಕಾಣಬೇಕಾದರೆ, ಗಾಝಾದ ಜನತೆಯ ದುಃಸ್ವಪ್ನ ಕೊನೆಗೊಳಿಸಲು ಮಾನವೀಯ ಕದನ ವಿರಾಮವು ಏಕೈಕ ಮಾರ್ಗವಾಗಿದೆ” ಎಂದು ಗುಟೆರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಜಿಪ್ಟ್ ರೆಡ್ ಕ್ರೆಸೆಂಟ್, ವಿಶ್ವಸಂಸ್ಥೆ ಮತ್ತು ನಮ್ಮ ಸಹವರ್ತಿಗಳು ಕಳಿಸಿದ ಮಾನವೀಯ ನೆರವಿನ ಟ್ರಕ್‌ಗಳ ಸಂಖ್ಯೆ ನೋಡಿ ಕೆಲವರು ಗಾಝಾದಲ್ಲಿ ಮಾನವೀಯ ಕಾರ್ಯಾಚರಣೆಯ ಪರಿಣಾಮಕಾರಿತ್ವವನ್ನು ಅಳೆಯುತ್ತಿದ್ದಾರೆ. ಇದು ತಪ್ಪು, ನಿಜವಾದ ಸಮಸ್ಯೆ ಏನೆಂದರೆ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ವಿಧಾನ ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರೀ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಗುಟೆರಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಶುಕ್ರವಾರ ನಿರ್ಣಯ ಮಂಡಿಸಿದೆ. ಇದರ ಪರ ಭದ್ರತಾ ಮಂಡಳಿಯ ಎಲ್ಲಾ ಸದಸ್ಯರು ಮತ ಹಾಕಿದ್ದಾರೆ. ಯುಎಸ್ ಮತ್ತು ರಷ್ಯಾ ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು.

“ಯುಎಸ್ ನಿರ್ಣಯವನ್ನು ಬೆಂಬಲಿಸಿತ್ತು. ಆದರೆ, ನಿರ್ಣಯದಲ್ಲಿ ಯುದ್ಧವನ್ನು ಪ್ರಚೋದಿಸಿದ ಹಮಾಸ್ ದಾಳಿಯ ಬಗ್ಗೆ ಯಾವುದೇ ಖಂಡನೆ ಇಲ್ಲದ ಕಾರಣ ಮತದಾನದಿಂದ ದೂರ ಉಳಿದಿದೆ” ಎಂದು ವಿಶ್ವಸಂಸ್ಥೆಗೆ ಯುಎಸ್ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಹೇಳಿದ್ದಾರೆ.

“ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನಿರ್ಣಯ ಉಲ್ಲೇಖಿಸಿಲ್ಲ ಎಂಬುವುದು ನಮಗೆ ತೀವ್ರ ನಿರಾಶೆ ಉಂಟು ಮಾಡಿದೆ” ಎಂದು ಲಿಂಡಾ ಥಾಮಸ್ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಗಾಝಾದಲ್ಲಿ 20 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿಲ್ಲ.

ಈ ನಡುವೆ “ಯುಎಸ್ ನಿರ್ಣಯದ ಹಲ್ಲು ಕಿತ್ತು ಹಾಕಿದೆ” ಎಂದು ರಷ್ಯಾದ ರಾಯಭಾರಿ ವಾಸಿಲಿ ನೆಬೆನ್ಜ್ಯಾ ದೂರಿದ್ದಾರೆ. “ಈ ನಿರ್ಣಯವು ಇಸ್ರೇಲಿ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುತ್ತದೆ. ಹಾಗಾಗಿ, ರಷ್ಯಾ ಮತದಾನದಿಂದ ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಯುಎಸ್ ಗೆ ಬೆದರಿತಾ ವಿಶ್ವಸಂಸ್ಥೆ?

ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯದಲ್ಲಿ ಗಾಝಾದಲ್ಲಿ ಕದನ ವಿರಾಮದ ಬಗ್ಗೆ ಉಲ್ಲೇಖಿಸಿಲ್ಲ. ಇದರ ಹಿಂದೆ ಯುಎಸ್ ಬೆದರಿಕೆ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಈ ಹಿಂದೆ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿದ್ದ ನಿರ್ಣಯದ ಪರ ಯುಎಸ್ ಮತ ಹಾಕಿರಲಿಲ್ಲ. ಅಲ್ಲದೆ, ಯುಎಸ್ ನಿರ್ಣಯದ ಹಲ್ಲು ಕಿತ್ತಿದೆ ಎಂಬ ರಷ್ಯಾ ರಾಯಬಾರಿಯ ಹೇಳಿಕೆ ಈ ಸಂದೇಹವನ್ನು ಪುಷ್ಠೀಕರಿಸುತ್ತದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇಸ್ರೇಲ್ ರಕ್ತದಾಹಕ್ಕೆ ಗಾಝಾ ನರಕವಾಗಿ ಮಾರ್ಪಟ್ಟಿದೆ. ಅಲ್ಲಿನ ಶೇ.90ರಷ್ಟು ಜನರು ತಮ್ಮ ಮನೆ, ಆಸ್ತಿ-ಪಾಸ್ತಿ ಬಿಟ್ಟು ಪಲಾಯನ ಮಾಡಿದ್ದಾರೆ. ಉಳಿದವರಲ್ಲಿ ಅನೇಕರು ಬಲಿಯಾಗಿದ್ದಾರೆ. ಸುಮಾರು 50 ಸಾವಿರ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕನಿಷ್ಠ ವ್ಯವಸ್ಥೆಗಳಲಿಲ್ಲದೆ ಜನರು ನರಳುತ್ತಿದ್ದಾರೆ. ಗಾಯಾಳುಗಲ್ಲದ ಜನರು ಆಹಾರ, ಪಾನಿಯಕ್ಕಾಗಿ ಅಲೆದಾಡುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...