Homeಮುಖಪುಟಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

- Advertisement -
- Advertisement -

ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ. ಆದರೆ, ಈ ನಿರ್ಣಯ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿಲ್ಲ.

ಯುಎಸ್ , ರಷ್ಯಾ ನಿರ್ಣಯದ ಪರ ಮತ ಹಾಕಿಲ್ಲ. ಈ ಎರಡು ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು. ಮಾನವೀಯ ನೆರವು ಒದಗಿಸುವ ನಿರ್ಣಯಕ್ಕೆ ಯುಎಸ್ ವಿರೋಧ ವ್ಯಕ್ತಪಡಿಸಿದೆ. ಮಾನವೀಯ ವಿತರಣೆಗಳ ವಿಶೇಷ ನಿಯಂತ್ರಣವನ್ನು ವಿಶ್ವ ಸಂಸ್ಥೆಗೆ ನೀಡುವ ಷರತ್ತನ್ನು ತೆಗೆದುಹಾಕಲು ಅದು ಒತ್ತಾಯಿಸಿದೆ.

ತಕ್ಷಣ ಗಾಝಾಗೆ ಮಾನವೀಯ ನೆರವು ಹೆಚ್ಚಿಸಬೇಕು. ಇದಕ್ಕಾಗಿ ವಿಶ್ವಸಂಸ್ಥೆಯಿಂದ ಸಂಯೋಜಕರನ್ನು ನೇಮಿಸಬೇಕು. ಇಸ್ರೇಲ್ ಕುರಿತು ಇದುವರೆಗೆ ಮಾತನಾಡದ ರಾಷ್ಟ್ರಗಳು ಕೂಡ ಇದರಲ್ಲಿ ಕೈ ಜೋಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ನಿರ್ಣಯದ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕದನ ವಿರಾಮವಿಲ್ಲದೆ ಕೇವಲ ಮಾನವೀಯ ವಿತರಣೆ ಹೆಚ್ಚಿಸುವ ನಿರ್ಣಯದ ಸಫಲತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

“ಗಾಝಾದ ಜನತೆಗೆ ಮಾನವೀಯ ನೆರವು ಹೆಚ್ಚಿಸುವ ಭದ್ರತಾ ಮಂಡಳಿಯ ನಿರ್ಣಯ ಜನರಿಗೆ ಸಹಕಾರಿಯಾಗಲಿದೆ ಎಂದು ನಾನು ಒಪ್ಪುತ್ತೇನೆ. ಆದರೆ, ಇದು ಸಫಲತೆ ಕಾಣಬೇಕಾದರೆ, ಗಾಝಾದ ಜನತೆಯ ದುಃಸ್ವಪ್ನ ಕೊನೆಗೊಳಿಸಲು ಮಾನವೀಯ ಕದನ ವಿರಾಮವು ಏಕೈಕ ಮಾರ್ಗವಾಗಿದೆ” ಎಂದು ಗುಟೆರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಜಿಪ್ಟ್ ರೆಡ್ ಕ್ರೆಸೆಂಟ್, ವಿಶ್ವಸಂಸ್ಥೆ ಮತ್ತು ನಮ್ಮ ಸಹವರ್ತಿಗಳು ಕಳಿಸಿದ ಮಾನವೀಯ ನೆರವಿನ ಟ್ರಕ್‌ಗಳ ಸಂಖ್ಯೆ ನೋಡಿ ಕೆಲವರು ಗಾಝಾದಲ್ಲಿ ಮಾನವೀಯ ಕಾರ್ಯಾಚರಣೆಯ ಪರಿಣಾಮಕಾರಿತ್ವವನ್ನು ಅಳೆಯುತ್ತಿದ್ದಾರೆ. ಇದು ತಪ್ಪು, ನಿಜವಾದ ಸಮಸ್ಯೆ ಏನೆಂದರೆ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ವಿಧಾನ ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರೀ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಗುಟೆರಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಶುಕ್ರವಾರ ನಿರ್ಣಯ ಮಂಡಿಸಿದೆ. ಇದರ ಪರ ಭದ್ರತಾ ಮಂಡಳಿಯ ಎಲ್ಲಾ ಸದಸ್ಯರು ಮತ ಹಾಕಿದ್ದಾರೆ. ಯುಎಸ್ ಮತ್ತು ರಷ್ಯಾ ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು.

“ಯುಎಸ್ ನಿರ್ಣಯವನ್ನು ಬೆಂಬಲಿಸಿತ್ತು. ಆದರೆ, ನಿರ್ಣಯದಲ್ಲಿ ಯುದ್ಧವನ್ನು ಪ್ರಚೋದಿಸಿದ ಹಮಾಸ್ ದಾಳಿಯ ಬಗ್ಗೆ ಯಾವುದೇ ಖಂಡನೆ ಇಲ್ಲದ ಕಾರಣ ಮತದಾನದಿಂದ ದೂರ ಉಳಿದಿದೆ” ಎಂದು ವಿಶ್ವಸಂಸ್ಥೆಗೆ ಯುಎಸ್ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಹೇಳಿದ್ದಾರೆ.

“ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನಿರ್ಣಯ ಉಲ್ಲೇಖಿಸಿಲ್ಲ ಎಂಬುವುದು ನಮಗೆ ತೀವ್ರ ನಿರಾಶೆ ಉಂಟು ಮಾಡಿದೆ” ಎಂದು ಲಿಂಡಾ ಥಾಮಸ್ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಗಾಝಾದಲ್ಲಿ 20 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿಲ್ಲ.

ಈ ನಡುವೆ “ಯುಎಸ್ ನಿರ್ಣಯದ ಹಲ್ಲು ಕಿತ್ತು ಹಾಕಿದೆ” ಎಂದು ರಷ್ಯಾದ ರಾಯಭಾರಿ ವಾಸಿಲಿ ನೆಬೆನ್ಜ್ಯಾ ದೂರಿದ್ದಾರೆ. “ಈ ನಿರ್ಣಯವು ಇಸ್ರೇಲಿ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುತ್ತದೆ. ಹಾಗಾಗಿ, ರಷ್ಯಾ ಮತದಾನದಿಂದ ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಯುಎಸ್ ಗೆ ಬೆದರಿತಾ ವಿಶ್ವಸಂಸ್ಥೆ?

ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯದಲ್ಲಿ ಗಾಝಾದಲ್ಲಿ ಕದನ ವಿರಾಮದ ಬಗ್ಗೆ ಉಲ್ಲೇಖಿಸಿಲ್ಲ. ಇದರ ಹಿಂದೆ ಯುಎಸ್ ಬೆದರಿಕೆ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಈ ಹಿಂದೆ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿದ್ದ ನಿರ್ಣಯದ ಪರ ಯುಎಸ್ ಮತ ಹಾಕಿರಲಿಲ್ಲ. ಅಲ್ಲದೆ, ಯುಎಸ್ ನಿರ್ಣಯದ ಹಲ್ಲು ಕಿತ್ತಿದೆ ಎಂಬ ರಷ್ಯಾ ರಾಯಬಾರಿಯ ಹೇಳಿಕೆ ಈ ಸಂದೇಹವನ್ನು ಪುಷ್ಠೀಕರಿಸುತ್ತದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇಸ್ರೇಲ್ ರಕ್ತದಾಹಕ್ಕೆ ಗಾಝಾ ನರಕವಾಗಿ ಮಾರ್ಪಟ್ಟಿದೆ. ಅಲ್ಲಿನ ಶೇ.90ರಷ್ಟು ಜನರು ತಮ್ಮ ಮನೆ, ಆಸ್ತಿ-ಪಾಸ್ತಿ ಬಿಟ್ಟು ಪಲಾಯನ ಮಾಡಿದ್ದಾರೆ. ಉಳಿದವರಲ್ಲಿ ಅನೇಕರು ಬಲಿಯಾಗಿದ್ದಾರೆ. ಸುಮಾರು 50 ಸಾವಿರ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕನಿಷ್ಠ ವ್ಯವಸ್ಥೆಗಳಲಿಲ್ಲದೆ ಜನರು ನರಳುತ್ತಿದ್ದಾರೆ. ಗಾಯಾಳುಗಲ್ಲದ ಜನರು ಆಹಾರ, ಪಾನಿಯಕ್ಕಾಗಿ ಅಲೆದಾಡುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...