Homeಮುಖಪುಟಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

- Advertisement -
- Advertisement -

ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ. ಆದರೆ, ಈ ನಿರ್ಣಯ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿಲ್ಲ.

ಯುಎಸ್ , ರಷ್ಯಾ ನಿರ್ಣಯದ ಪರ ಮತ ಹಾಕಿಲ್ಲ. ಈ ಎರಡು ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು. ಮಾನವೀಯ ನೆರವು ಒದಗಿಸುವ ನಿರ್ಣಯಕ್ಕೆ ಯುಎಸ್ ವಿರೋಧ ವ್ಯಕ್ತಪಡಿಸಿದೆ. ಮಾನವೀಯ ವಿತರಣೆಗಳ ವಿಶೇಷ ನಿಯಂತ್ರಣವನ್ನು ವಿಶ್ವ ಸಂಸ್ಥೆಗೆ ನೀಡುವ ಷರತ್ತನ್ನು ತೆಗೆದುಹಾಕಲು ಅದು ಒತ್ತಾಯಿಸಿದೆ.

ತಕ್ಷಣ ಗಾಝಾಗೆ ಮಾನವೀಯ ನೆರವು ಹೆಚ್ಚಿಸಬೇಕು. ಇದಕ್ಕಾಗಿ ವಿಶ್ವಸಂಸ್ಥೆಯಿಂದ ಸಂಯೋಜಕರನ್ನು ನೇಮಿಸಬೇಕು. ಇಸ್ರೇಲ್ ಕುರಿತು ಇದುವರೆಗೆ ಮಾತನಾಡದ ರಾಷ್ಟ್ರಗಳು ಕೂಡ ಇದರಲ್ಲಿ ಕೈ ಜೋಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ನಿರ್ಣಯದ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕದನ ವಿರಾಮವಿಲ್ಲದೆ ಕೇವಲ ಮಾನವೀಯ ವಿತರಣೆ ಹೆಚ್ಚಿಸುವ ನಿರ್ಣಯದ ಸಫಲತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

“ಗಾಝಾದ ಜನತೆಗೆ ಮಾನವೀಯ ನೆರವು ಹೆಚ್ಚಿಸುವ ಭದ್ರತಾ ಮಂಡಳಿಯ ನಿರ್ಣಯ ಜನರಿಗೆ ಸಹಕಾರಿಯಾಗಲಿದೆ ಎಂದು ನಾನು ಒಪ್ಪುತ್ತೇನೆ. ಆದರೆ, ಇದು ಸಫಲತೆ ಕಾಣಬೇಕಾದರೆ, ಗಾಝಾದ ಜನತೆಯ ದುಃಸ್ವಪ್ನ ಕೊನೆಗೊಳಿಸಲು ಮಾನವೀಯ ಕದನ ವಿರಾಮವು ಏಕೈಕ ಮಾರ್ಗವಾಗಿದೆ” ಎಂದು ಗುಟೆರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಜಿಪ್ಟ್ ರೆಡ್ ಕ್ರೆಸೆಂಟ್, ವಿಶ್ವಸಂಸ್ಥೆ ಮತ್ತು ನಮ್ಮ ಸಹವರ್ತಿಗಳು ಕಳಿಸಿದ ಮಾನವೀಯ ನೆರವಿನ ಟ್ರಕ್‌ಗಳ ಸಂಖ್ಯೆ ನೋಡಿ ಕೆಲವರು ಗಾಝಾದಲ್ಲಿ ಮಾನವೀಯ ಕಾರ್ಯಾಚರಣೆಯ ಪರಿಣಾಮಕಾರಿತ್ವವನ್ನು ಅಳೆಯುತ್ತಿದ್ದಾರೆ. ಇದು ತಪ್ಪು, ನಿಜವಾದ ಸಮಸ್ಯೆ ಏನೆಂದರೆ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ವಿಧಾನ ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರೀ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಗುಟೆರಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಶುಕ್ರವಾರ ನಿರ್ಣಯ ಮಂಡಿಸಿದೆ. ಇದರ ಪರ ಭದ್ರತಾ ಮಂಡಳಿಯ ಎಲ್ಲಾ ಸದಸ್ಯರು ಮತ ಹಾಕಿದ್ದಾರೆ. ಯುಎಸ್ ಮತ್ತು ರಷ್ಯಾ ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು.

“ಯುಎಸ್ ನಿರ್ಣಯವನ್ನು ಬೆಂಬಲಿಸಿತ್ತು. ಆದರೆ, ನಿರ್ಣಯದಲ್ಲಿ ಯುದ್ಧವನ್ನು ಪ್ರಚೋದಿಸಿದ ಹಮಾಸ್ ದಾಳಿಯ ಬಗ್ಗೆ ಯಾವುದೇ ಖಂಡನೆ ಇಲ್ಲದ ಕಾರಣ ಮತದಾನದಿಂದ ದೂರ ಉಳಿದಿದೆ” ಎಂದು ವಿಶ್ವಸಂಸ್ಥೆಗೆ ಯುಎಸ್ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಹೇಳಿದ್ದಾರೆ.

“ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನಿರ್ಣಯ ಉಲ್ಲೇಖಿಸಿಲ್ಲ ಎಂಬುವುದು ನಮಗೆ ತೀವ್ರ ನಿರಾಶೆ ಉಂಟು ಮಾಡಿದೆ” ಎಂದು ಲಿಂಡಾ ಥಾಮಸ್ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಗಾಝಾದಲ್ಲಿ 20 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿಲ್ಲ.

ಈ ನಡುವೆ “ಯುಎಸ್ ನಿರ್ಣಯದ ಹಲ್ಲು ಕಿತ್ತು ಹಾಕಿದೆ” ಎಂದು ರಷ್ಯಾದ ರಾಯಭಾರಿ ವಾಸಿಲಿ ನೆಬೆನ್ಜ್ಯಾ ದೂರಿದ್ದಾರೆ. “ಈ ನಿರ್ಣಯವು ಇಸ್ರೇಲಿ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುತ್ತದೆ. ಹಾಗಾಗಿ, ರಷ್ಯಾ ಮತದಾನದಿಂದ ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಯುಎಸ್ ಗೆ ಬೆದರಿತಾ ವಿಶ್ವಸಂಸ್ಥೆ?

ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯದಲ್ಲಿ ಗಾಝಾದಲ್ಲಿ ಕದನ ವಿರಾಮದ ಬಗ್ಗೆ ಉಲ್ಲೇಖಿಸಿಲ್ಲ. ಇದರ ಹಿಂದೆ ಯುಎಸ್ ಬೆದರಿಕೆ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಈ ಹಿಂದೆ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿದ್ದ ನಿರ್ಣಯದ ಪರ ಯುಎಸ್ ಮತ ಹಾಕಿರಲಿಲ್ಲ. ಅಲ್ಲದೆ, ಯುಎಸ್ ನಿರ್ಣಯದ ಹಲ್ಲು ಕಿತ್ತಿದೆ ಎಂಬ ರಷ್ಯಾ ರಾಯಬಾರಿಯ ಹೇಳಿಕೆ ಈ ಸಂದೇಹವನ್ನು ಪುಷ್ಠೀಕರಿಸುತ್ತದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇಸ್ರೇಲ್ ರಕ್ತದಾಹಕ್ಕೆ ಗಾಝಾ ನರಕವಾಗಿ ಮಾರ್ಪಟ್ಟಿದೆ. ಅಲ್ಲಿನ ಶೇ.90ರಷ್ಟು ಜನರು ತಮ್ಮ ಮನೆ, ಆಸ್ತಿ-ಪಾಸ್ತಿ ಬಿಟ್ಟು ಪಲಾಯನ ಮಾಡಿದ್ದಾರೆ. ಉಳಿದವರಲ್ಲಿ ಅನೇಕರು ಬಲಿಯಾಗಿದ್ದಾರೆ. ಸುಮಾರು 50 ಸಾವಿರ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕನಿಷ್ಠ ವ್ಯವಸ್ಥೆಗಳಲಿಲ್ಲದೆ ಜನರು ನರಳುತ್ತಿದ್ದಾರೆ. ಗಾಯಾಳುಗಲ್ಲದ ಜನರು ಆಹಾರ, ಪಾನಿಯಕ್ಕಾಗಿ ಅಲೆದಾಡುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...