Homeಮುಖಪುಟಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

- Advertisement -
- Advertisement -

ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ. ಆದರೆ, ಈ ನಿರ್ಣಯ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿಲ್ಲ.

ಯುಎಸ್ , ರಷ್ಯಾ ನಿರ್ಣಯದ ಪರ ಮತ ಹಾಕಿಲ್ಲ. ಈ ಎರಡು ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು. ಮಾನವೀಯ ನೆರವು ಒದಗಿಸುವ ನಿರ್ಣಯಕ್ಕೆ ಯುಎಸ್ ವಿರೋಧ ವ್ಯಕ್ತಪಡಿಸಿದೆ. ಮಾನವೀಯ ವಿತರಣೆಗಳ ವಿಶೇಷ ನಿಯಂತ್ರಣವನ್ನು ವಿಶ್ವ ಸಂಸ್ಥೆಗೆ ನೀಡುವ ಷರತ್ತನ್ನು ತೆಗೆದುಹಾಕಲು ಅದು ಒತ್ತಾಯಿಸಿದೆ.

ತಕ್ಷಣ ಗಾಝಾಗೆ ಮಾನವೀಯ ನೆರವು ಹೆಚ್ಚಿಸಬೇಕು. ಇದಕ್ಕಾಗಿ ವಿಶ್ವಸಂಸ್ಥೆಯಿಂದ ಸಂಯೋಜಕರನ್ನು ನೇಮಿಸಬೇಕು. ಇಸ್ರೇಲ್ ಕುರಿತು ಇದುವರೆಗೆ ಮಾತನಾಡದ ರಾಷ್ಟ್ರಗಳು ಕೂಡ ಇದರಲ್ಲಿ ಕೈ ಜೋಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ನಿರ್ಣಯದ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕದನ ವಿರಾಮವಿಲ್ಲದೆ ಕೇವಲ ಮಾನವೀಯ ವಿತರಣೆ ಹೆಚ್ಚಿಸುವ ನಿರ್ಣಯದ ಸಫಲತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

“ಗಾಝಾದ ಜನತೆಗೆ ಮಾನವೀಯ ನೆರವು ಹೆಚ್ಚಿಸುವ ಭದ್ರತಾ ಮಂಡಳಿಯ ನಿರ್ಣಯ ಜನರಿಗೆ ಸಹಕಾರಿಯಾಗಲಿದೆ ಎಂದು ನಾನು ಒಪ್ಪುತ್ತೇನೆ. ಆದರೆ, ಇದು ಸಫಲತೆ ಕಾಣಬೇಕಾದರೆ, ಗಾಝಾದ ಜನತೆಯ ದುಃಸ್ವಪ್ನ ಕೊನೆಗೊಳಿಸಲು ಮಾನವೀಯ ಕದನ ವಿರಾಮವು ಏಕೈಕ ಮಾರ್ಗವಾಗಿದೆ” ಎಂದು ಗುಟೆರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಜಿಪ್ಟ್ ರೆಡ್ ಕ್ರೆಸೆಂಟ್, ವಿಶ್ವಸಂಸ್ಥೆ ಮತ್ತು ನಮ್ಮ ಸಹವರ್ತಿಗಳು ಕಳಿಸಿದ ಮಾನವೀಯ ನೆರವಿನ ಟ್ರಕ್‌ಗಳ ಸಂಖ್ಯೆ ನೋಡಿ ಕೆಲವರು ಗಾಝಾದಲ್ಲಿ ಮಾನವೀಯ ಕಾರ್ಯಾಚರಣೆಯ ಪರಿಣಾಮಕಾರಿತ್ವವನ್ನು ಅಳೆಯುತ್ತಿದ್ದಾರೆ. ಇದು ತಪ್ಪು, ನಿಜವಾದ ಸಮಸ್ಯೆ ಏನೆಂದರೆ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ವಿಧಾನ ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರೀ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಗುಟೆರಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಶುಕ್ರವಾರ ನಿರ್ಣಯ ಮಂಡಿಸಿದೆ. ಇದರ ಪರ ಭದ್ರತಾ ಮಂಡಳಿಯ ಎಲ್ಲಾ ಸದಸ್ಯರು ಮತ ಹಾಕಿದ್ದಾರೆ. ಯುಎಸ್ ಮತ್ತು ರಷ್ಯಾ ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು.

“ಯುಎಸ್ ನಿರ್ಣಯವನ್ನು ಬೆಂಬಲಿಸಿತ್ತು. ಆದರೆ, ನಿರ್ಣಯದಲ್ಲಿ ಯುದ್ಧವನ್ನು ಪ್ರಚೋದಿಸಿದ ಹಮಾಸ್ ದಾಳಿಯ ಬಗ್ಗೆ ಯಾವುದೇ ಖಂಡನೆ ಇಲ್ಲದ ಕಾರಣ ಮತದಾನದಿಂದ ದೂರ ಉಳಿದಿದೆ” ಎಂದು ವಿಶ್ವಸಂಸ್ಥೆಗೆ ಯುಎಸ್ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಹೇಳಿದ್ದಾರೆ.

“ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನಿರ್ಣಯ ಉಲ್ಲೇಖಿಸಿಲ್ಲ ಎಂಬುವುದು ನಮಗೆ ತೀವ್ರ ನಿರಾಶೆ ಉಂಟು ಮಾಡಿದೆ” ಎಂದು ಲಿಂಡಾ ಥಾಮಸ್ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಗಾಝಾದಲ್ಲಿ 20 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿಲ್ಲ.

ಈ ನಡುವೆ “ಯುಎಸ್ ನಿರ್ಣಯದ ಹಲ್ಲು ಕಿತ್ತು ಹಾಕಿದೆ” ಎಂದು ರಷ್ಯಾದ ರಾಯಭಾರಿ ವಾಸಿಲಿ ನೆಬೆನ್ಜ್ಯಾ ದೂರಿದ್ದಾರೆ. “ಈ ನಿರ್ಣಯವು ಇಸ್ರೇಲಿ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುತ್ತದೆ. ಹಾಗಾಗಿ, ರಷ್ಯಾ ಮತದಾನದಿಂದ ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಯುಎಸ್ ಗೆ ಬೆದರಿತಾ ವಿಶ್ವಸಂಸ್ಥೆ?

ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯದಲ್ಲಿ ಗಾಝಾದಲ್ಲಿ ಕದನ ವಿರಾಮದ ಬಗ್ಗೆ ಉಲ್ಲೇಖಿಸಿಲ್ಲ. ಇದರ ಹಿಂದೆ ಯುಎಸ್ ಬೆದರಿಕೆ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಈ ಹಿಂದೆ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿದ್ದ ನಿರ್ಣಯದ ಪರ ಯುಎಸ್ ಮತ ಹಾಕಿರಲಿಲ್ಲ. ಅಲ್ಲದೆ, ಯುಎಸ್ ನಿರ್ಣಯದ ಹಲ್ಲು ಕಿತ್ತಿದೆ ಎಂಬ ರಷ್ಯಾ ರಾಯಬಾರಿಯ ಹೇಳಿಕೆ ಈ ಸಂದೇಹವನ್ನು ಪುಷ್ಠೀಕರಿಸುತ್ತದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇಸ್ರೇಲ್ ರಕ್ತದಾಹಕ್ಕೆ ಗಾಝಾ ನರಕವಾಗಿ ಮಾರ್ಪಟ್ಟಿದೆ. ಅಲ್ಲಿನ ಶೇ.90ರಷ್ಟು ಜನರು ತಮ್ಮ ಮನೆ, ಆಸ್ತಿ-ಪಾಸ್ತಿ ಬಿಟ್ಟು ಪಲಾಯನ ಮಾಡಿದ್ದಾರೆ. ಉಳಿದವರಲ್ಲಿ ಅನೇಕರು ಬಲಿಯಾಗಿದ್ದಾರೆ. ಸುಮಾರು 50 ಸಾವಿರ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕನಿಷ್ಠ ವ್ಯವಸ್ಥೆಗಳಲಿಲ್ಲದೆ ಜನರು ನರಳುತ್ತಿದ್ದಾರೆ. ಗಾಯಾಳುಗಲ್ಲದ ಜನರು ಆಹಾರ, ಪಾನಿಯಕ್ಕಾಗಿ ಅಲೆದಾಡುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...