Homeಮುಖಪುಟಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಮತದಾನಕ್ಕೆ ಅಮೆರಿಕ ಗೈರು. ಇತರ 14 ರಾಷ್ಟ್ರಗಳಿಂದ ನಿರ್ಣಯಕ್ಕೆ ಬೆಂಬಲ

- Advertisement -
- Advertisement -

ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಗೆ ಆಗ್ರಹಿಸಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೋಮವಾರ ನಿರ್ಣಯ ಅಂಗೀಕರಿಸಲಾಗಿದೆ.

ಪ್ರತಿ ಬಾರಿಯೂ ನಿರ್ಣಯದ ವಿರುದ್ಧ ಮತ ಚಲಾಯಿಸುತ್ತಿದ್ದ ಅಥವಾ ವೀಟೋ ಆಧಿಕಾರ ಚಲಾಯಿಸಿ ನಿರ್ಣಯ ಅಂಗೀಕಾರಗೊಳ್ಳದಂತೆ ತಡೆಯುತ್ತಿದ್ದ ಯುಎಸ್ ಈ ಬಾರಿ ಮತದಾನಕ್ಕೆ ಗೈರಾಗಿತ್ತು. ಹಾಗಾಗಿ, ಮೊದಲ ಬಾರಿಗೆ ಭದ್ರತಾ ಮಂಡಳಿಯಲ್ಲಿ ನಿರ್ಣಯ ಅಂಗೀಕಾರಗೊಂಡಿದೆ.

ಯುಎಸ್ ಹೊರತುಪಡಿಸಿ ಭದ್ರತಾ ಮಂಡಳಿಯ ಇತರ 14 ಸದಸ್ಯರು ನಿರ್ಣಯದ ಪರ ಮತ ಚಲಾಯಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ತಕ್ಷಣ ನಿಲ್ಲಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ನಿಶ್ಶರ್ತವಾಗಿ ಬಿಡುಗಡೆ ಮಾಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ನೆತನ್ಯಾಹು ಕಿಡಿ

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಿಡಿ ಕಾರಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಈ ಮೂಲಕ ಹಮಾಸ್ ಬಳಿ ಇರುವ ಒತ್ತೆಯಾಳುಗಳ ಬಿಡುಗಡೆಗೆ ಶ್ರಮಿಸಿತ್ತು. ಆದರೆ, ಅದಕ್ಕೆ ಹಿನ್ನಡೆಯಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಮೊದಲ ಬಾರಿಗೆ ವೀಟೋ ಅಧಿಕಾರ ಬಳಸದೆ ಕದನ ವಿರಾಮ ನಿರ್ಣಯ ಅಂಗೀಕರಿಸಲು ಅನುವು ಮಾಡಿಕೊಟ್ಟ ಯುಎಸ್ ವಿರುದ್ಧ ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಾರ ವಾಷಿಂಗ್ಟನ್‌ನಲ್ಲಿ ಇಸ್ರೇಲಿ ನಿಯೋಗ ಮತ್ತು ಯುಎಸ್ ಅಧಿಕಾರಿಗಳ ನಡುವೆ ನಡೆಯಬೇಕಿದ್ದ ಮಾತುಕತೆಯನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಸಚಿವ ಹೇಳಿದ್ದಾರೆ.

ಪ್ಯಾಲೆಸ್ತೀನ್ ಸ್ವಾಗತ

ವಿಶ್ವ ಸಂಸ್ಥೆಗೆ ಪ್ಯಾಲೆಸ್ತೀನ್‌ನ ರಾಯಭಾರಿಯಾಗಿರುವ ರಿಯಾದ್ ಮನ್ಸೂರ್ ಅವರು ಭದ್ರತಾ ಮಂಡಳಿಯ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಆದರೆ, ಅದು ತುಂಬಾ ವಿಳಂಬವಾಯಿತು ಎಂದಿದ್ದಾರೆ.

ಇಸ್ರೇಲ್ ಆಕ್ರಮಣದಿಂದ 1 ಲಕ್ಷಕ್ಕೂ ಅಧಿಕ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ, ಗಾಯಗೊಂಡಿದ್ದಾರೆ. ಎರಡು ಮಿಲಿಯನ್ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಗಾಝಾದ ಪರಿಸ್ಥಿತಿ ನರಕ ಸದೃಶ್ಯವಾಗಿದೆ. ಇಷ್ಟೆಲ್ಲಾ ಆಗಿ 6 ತಿಂಗಳ ಬಳಿಕ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ರಿಯಾದ್ ಮನ್ಸೂರ್ ಹೇಳಿದ್ದಾರೆ.

ಹಮಾಸ್ ಸ್ವಾಗತ

ಭದ್ರತಾ ಮಂಡಳಿಯ ನಿರ್ಣಯವನ್ನು ಹಮಾಸ್ ಸ್ವಾಗತಿಸಿದೆ. ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಾವು ಸಿದ್ದರಿದ್ದೇವೆ ಎಂದಿದೆ. ಆದರೆ, ನಾವು ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕಾದರೆ ಇಸ್ರೇಲ್ ಜೈಲಿನಲ್ಲಿರುವ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಬೇಕು ಎಂದು ಷರತ್ತು ವಿಧಿಸಿದೆ.

ಯುಎಸ್ ಪ್ರತಿಕ್ರಿಯೆ

ಮತದಾನದಿಂದ ದೂರ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ, ನಿರ್ಣಯ ಅಂಗೀಕರಿಸುವ ವಿಷಯದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಕದನ ವಿರಾಮದ ಪರವಾಗಿಯೇ ಇದ್ದೇವೆ. ಆದರೆ, ನಿರ್ಣಯದಲ್ಲಿ ಹಮಾಸ್‌ ಅನ್ನು ಖಂಡಿಸುವ ವಿಷಯವಿಲ್ಲ. ಹಾಗಾಗಿ, ಅದರ ಪರ ನಾವು ಮತ ಚಲಾಯಿಸಿಲ್ಲ ಎಂದಿದ್ದಾರೆ.

ತಕ್ಷಣ ನಿರ್ಣಯ ಜಾರಿಗೆ ಗುಟೆರೆಸ್ ಆಗ್ರಹ

ಭದ್ರತಾ ಮಂಡಳಿಯ ನಿರ್ಣಯದಂತೆ ತಕ್ಷಣ ಕದನ ವಿರಾಮ ಜಾರಿಗೊಳಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ಯಾವುದೇ ‍‍‍‍ ‍‍‍‍‍‍‍‍‍‍‍‍‍‍‍‍‍‍ಷರತ್ತು ವಿಧಿಸದೆ ಪರಸ್ಪರ ಬಿಡುಗಡೆಗೊಳಿಸಬೇಕು ಎಂದು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಆಗ್ರಹಿಸಿದ್ದಾರೆ.

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸುತ್ತಿದೆ. ಇಸ್ರೇಲ್ ಮಾರಣಹೋಮಕ್ಕೆ ಇದುವರೆಗೆ ಸುಮಾರು 32 ಸಾವಿರ ಪ್ಯಾಲೆಸ್ತೀನ್ ನಾಗರಿಕರು ಬಲಿಯಾಗಿದ್ದಾರೆ. ಪ್ರತಿದಿನ 100-200 ಜನರು ಸಾವನ್ನಪ್ಪುತ್ತಲೇ ಇದ್ದಾರೆ. ಆರಂಭದಲ್ಲಿ ಹಮಾಸ್ ನಮ್ಮ ಗುರಿ ನಾವು ನಾಗರಿಕರಿಗೆ ಏನೂ ಮಾಡುವುದಿಲ್ಲ ಎನ್ನುತ್ತಿಲ್ಲ ಇಸ್ರೇಲ್, ಪ್ರಸ್ತುತ ನಾಗರಿಕರನ್ನು ಗುರಿಯಾಗಿಸಿ ರಕ್ತ ಹರಿಸುತ್ತಿದೆ. ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದೆ. ವಿವಿಧ ರಾಷ್ಟ್ರಗಳು ಯುದ್ಧ ನಿರಾಶ್ರಿತರಿಗೆ ಕಳುಹಿಸುವ ನೆರವು ವಿತರಣೆಗೆ ಅಡ್ಡಿಪಡಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ಕುಡಿಯುವ ನೀರು ಪೋಲು; ಬೆಂಗಳೂರಿನ 22 ಕುಟುಂಬಗಳಿಗೆ ತಲಾ ₹5,000 ದಂಡ ವಿಧಿಸಿದ ಜಲ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...