Homeಮುಖಪುಟಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಮತದಾನಕ್ಕೆ ಅಮೆರಿಕ ಗೈರು. ಇತರ 14 ರಾಷ್ಟ್ರಗಳಿಂದ ನಿರ್ಣಯಕ್ಕೆ ಬೆಂಬಲ

- Advertisement -
- Advertisement -

ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಗೆ ಆಗ್ರಹಿಸಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೋಮವಾರ ನಿರ್ಣಯ ಅಂಗೀಕರಿಸಲಾಗಿದೆ.

ಪ್ರತಿ ಬಾರಿಯೂ ನಿರ್ಣಯದ ವಿರುದ್ಧ ಮತ ಚಲಾಯಿಸುತ್ತಿದ್ದ ಅಥವಾ ವೀಟೋ ಆಧಿಕಾರ ಚಲಾಯಿಸಿ ನಿರ್ಣಯ ಅಂಗೀಕಾರಗೊಳ್ಳದಂತೆ ತಡೆಯುತ್ತಿದ್ದ ಯುಎಸ್ ಈ ಬಾರಿ ಮತದಾನಕ್ಕೆ ಗೈರಾಗಿತ್ತು. ಹಾಗಾಗಿ, ಮೊದಲ ಬಾರಿಗೆ ಭದ್ರತಾ ಮಂಡಳಿಯಲ್ಲಿ ನಿರ್ಣಯ ಅಂಗೀಕಾರಗೊಂಡಿದೆ.

ಯುಎಸ್ ಹೊರತುಪಡಿಸಿ ಭದ್ರತಾ ಮಂಡಳಿಯ ಇತರ 14 ಸದಸ್ಯರು ನಿರ್ಣಯದ ಪರ ಮತ ಚಲಾಯಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ತಕ್ಷಣ ನಿಲ್ಲಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ನಿಶ್ಶರ್ತವಾಗಿ ಬಿಡುಗಡೆ ಮಾಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ನೆತನ್ಯಾಹು ಕಿಡಿ

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಿಡಿ ಕಾರಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಈ ಮೂಲಕ ಹಮಾಸ್ ಬಳಿ ಇರುವ ಒತ್ತೆಯಾಳುಗಳ ಬಿಡುಗಡೆಗೆ ಶ್ರಮಿಸಿತ್ತು. ಆದರೆ, ಅದಕ್ಕೆ ಹಿನ್ನಡೆಯಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಮೊದಲ ಬಾರಿಗೆ ವೀಟೋ ಅಧಿಕಾರ ಬಳಸದೆ ಕದನ ವಿರಾಮ ನಿರ್ಣಯ ಅಂಗೀಕರಿಸಲು ಅನುವು ಮಾಡಿಕೊಟ್ಟ ಯುಎಸ್ ವಿರುದ್ಧ ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಾರ ವಾಷಿಂಗ್ಟನ್‌ನಲ್ಲಿ ಇಸ್ರೇಲಿ ನಿಯೋಗ ಮತ್ತು ಯುಎಸ್ ಅಧಿಕಾರಿಗಳ ನಡುವೆ ನಡೆಯಬೇಕಿದ್ದ ಮಾತುಕತೆಯನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಸಚಿವ ಹೇಳಿದ್ದಾರೆ.

ಪ್ಯಾಲೆಸ್ತೀನ್ ಸ್ವಾಗತ

ವಿಶ್ವ ಸಂಸ್ಥೆಗೆ ಪ್ಯಾಲೆಸ್ತೀನ್‌ನ ರಾಯಭಾರಿಯಾಗಿರುವ ರಿಯಾದ್ ಮನ್ಸೂರ್ ಅವರು ಭದ್ರತಾ ಮಂಡಳಿಯ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಆದರೆ, ಅದು ತುಂಬಾ ವಿಳಂಬವಾಯಿತು ಎಂದಿದ್ದಾರೆ.

ಇಸ್ರೇಲ್ ಆಕ್ರಮಣದಿಂದ 1 ಲಕ್ಷಕ್ಕೂ ಅಧಿಕ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ, ಗಾಯಗೊಂಡಿದ್ದಾರೆ. ಎರಡು ಮಿಲಿಯನ್ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಗಾಝಾದ ಪರಿಸ್ಥಿತಿ ನರಕ ಸದೃಶ್ಯವಾಗಿದೆ. ಇಷ್ಟೆಲ್ಲಾ ಆಗಿ 6 ತಿಂಗಳ ಬಳಿಕ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ರಿಯಾದ್ ಮನ್ಸೂರ್ ಹೇಳಿದ್ದಾರೆ.

ಹಮಾಸ್ ಸ್ವಾಗತ

ಭದ್ರತಾ ಮಂಡಳಿಯ ನಿರ್ಣಯವನ್ನು ಹಮಾಸ್ ಸ್ವಾಗತಿಸಿದೆ. ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಾವು ಸಿದ್ದರಿದ್ದೇವೆ ಎಂದಿದೆ. ಆದರೆ, ನಾವು ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕಾದರೆ ಇಸ್ರೇಲ್ ಜೈಲಿನಲ್ಲಿರುವ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಬೇಕು ಎಂದು ಷರತ್ತು ವಿಧಿಸಿದೆ.

ಯುಎಸ್ ಪ್ರತಿಕ್ರಿಯೆ

ಮತದಾನದಿಂದ ದೂರ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ, ನಿರ್ಣಯ ಅಂಗೀಕರಿಸುವ ವಿಷಯದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಕದನ ವಿರಾಮದ ಪರವಾಗಿಯೇ ಇದ್ದೇವೆ. ಆದರೆ, ನಿರ್ಣಯದಲ್ಲಿ ಹಮಾಸ್‌ ಅನ್ನು ಖಂಡಿಸುವ ವಿಷಯವಿಲ್ಲ. ಹಾಗಾಗಿ, ಅದರ ಪರ ನಾವು ಮತ ಚಲಾಯಿಸಿಲ್ಲ ಎಂದಿದ್ದಾರೆ.

ತಕ್ಷಣ ನಿರ್ಣಯ ಜಾರಿಗೆ ಗುಟೆರೆಸ್ ಆಗ್ರಹ

ಭದ್ರತಾ ಮಂಡಳಿಯ ನಿರ್ಣಯದಂತೆ ತಕ್ಷಣ ಕದನ ವಿರಾಮ ಜಾರಿಗೊಳಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ಯಾವುದೇ ‍‍‍‍ ‍‍‍‍‍‍‍‍‍‍‍‍‍‍‍‍‍‍ಷರತ್ತು ವಿಧಿಸದೆ ಪರಸ್ಪರ ಬಿಡುಗಡೆಗೊಳಿಸಬೇಕು ಎಂದು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಆಗ್ರಹಿಸಿದ್ದಾರೆ.

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸುತ್ತಿದೆ. ಇಸ್ರೇಲ್ ಮಾರಣಹೋಮಕ್ಕೆ ಇದುವರೆಗೆ ಸುಮಾರು 32 ಸಾವಿರ ಪ್ಯಾಲೆಸ್ತೀನ್ ನಾಗರಿಕರು ಬಲಿಯಾಗಿದ್ದಾರೆ. ಪ್ರತಿದಿನ 100-200 ಜನರು ಸಾವನ್ನಪ್ಪುತ್ತಲೇ ಇದ್ದಾರೆ. ಆರಂಭದಲ್ಲಿ ಹಮಾಸ್ ನಮ್ಮ ಗುರಿ ನಾವು ನಾಗರಿಕರಿಗೆ ಏನೂ ಮಾಡುವುದಿಲ್ಲ ಎನ್ನುತ್ತಿಲ್ಲ ಇಸ್ರೇಲ್, ಪ್ರಸ್ತುತ ನಾಗರಿಕರನ್ನು ಗುರಿಯಾಗಿಸಿ ರಕ್ತ ಹರಿಸುತ್ತಿದೆ. ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದೆ. ವಿವಿಧ ರಾಷ್ಟ್ರಗಳು ಯುದ್ಧ ನಿರಾಶ್ರಿತರಿಗೆ ಕಳುಹಿಸುವ ನೆರವು ವಿತರಣೆಗೆ ಅಡ್ಡಿಪಡಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ಕುಡಿಯುವ ನೀರು ಪೋಲು; ಬೆಂಗಳೂರಿನ 22 ಕುಟುಂಬಗಳಿಗೆ ತಲಾ ₹5,000 ದಂಡ ವಿಧಿಸಿದ ಜಲ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...