Homeಮುಖಪುಟಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಮತದಾನಕ್ಕೆ ಅಮೆರಿಕ ಗೈರು. ಇತರ 14 ರಾಷ್ಟ್ರಗಳಿಂದ ನಿರ್ಣಯಕ್ಕೆ ಬೆಂಬಲ

- Advertisement -
- Advertisement -

ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಗೆ ಆಗ್ರಹಿಸಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೋಮವಾರ ನಿರ್ಣಯ ಅಂಗೀಕರಿಸಲಾಗಿದೆ.

ಪ್ರತಿ ಬಾರಿಯೂ ನಿರ್ಣಯದ ವಿರುದ್ಧ ಮತ ಚಲಾಯಿಸುತ್ತಿದ್ದ ಅಥವಾ ವೀಟೋ ಆಧಿಕಾರ ಚಲಾಯಿಸಿ ನಿರ್ಣಯ ಅಂಗೀಕಾರಗೊಳ್ಳದಂತೆ ತಡೆಯುತ್ತಿದ್ದ ಯುಎಸ್ ಈ ಬಾರಿ ಮತದಾನಕ್ಕೆ ಗೈರಾಗಿತ್ತು. ಹಾಗಾಗಿ, ಮೊದಲ ಬಾರಿಗೆ ಭದ್ರತಾ ಮಂಡಳಿಯಲ್ಲಿ ನಿರ್ಣಯ ಅಂಗೀಕಾರಗೊಂಡಿದೆ.

ಯುಎಸ್ ಹೊರತುಪಡಿಸಿ ಭದ್ರತಾ ಮಂಡಳಿಯ ಇತರ 14 ಸದಸ್ಯರು ನಿರ್ಣಯದ ಪರ ಮತ ಚಲಾಯಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ತಕ್ಷಣ ನಿಲ್ಲಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ನಿಶ್ಶರ್ತವಾಗಿ ಬಿಡುಗಡೆ ಮಾಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ನೆತನ್ಯಾಹು ಕಿಡಿ

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಿಡಿ ಕಾರಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಈ ಮೂಲಕ ಹಮಾಸ್ ಬಳಿ ಇರುವ ಒತ್ತೆಯಾಳುಗಳ ಬಿಡುಗಡೆಗೆ ಶ್ರಮಿಸಿತ್ತು. ಆದರೆ, ಅದಕ್ಕೆ ಹಿನ್ನಡೆಯಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಮೊದಲ ಬಾರಿಗೆ ವೀಟೋ ಅಧಿಕಾರ ಬಳಸದೆ ಕದನ ವಿರಾಮ ನಿರ್ಣಯ ಅಂಗೀಕರಿಸಲು ಅನುವು ಮಾಡಿಕೊಟ್ಟ ಯುಎಸ್ ವಿರುದ್ಧ ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಾರ ವಾಷಿಂಗ್ಟನ್‌ನಲ್ಲಿ ಇಸ್ರೇಲಿ ನಿಯೋಗ ಮತ್ತು ಯುಎಸ್ ಅಧಿಕಾರಿಗಳ ನಡುವೆ ನಡೆಯಬೇಕಿದ್ದ ಮಾತುಕತೆಯನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಸಚಿವ ಹೇಳಿದ್ದಾರೆ.

ಪ್ಯಾಲೆಸ್ತೀನ್ ಸ್ವಾಗತ

ವಿಶ್ವ ಸಂಸ್ಥೆಗೆ ಪ್ಯಾಲೆಸ್ತೀನ್‌ನ ರಾಯಭಾರಿಯಾಗಿರುವ ರಿಯಾದ್ ಮನ್ಸೂರ್ ಅವರು ಭದ್ರತಾ ಮಂಡಳಿಯ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಆದರೆ, ಅದು ತುಂಬಾ ವಿಳಂಬವಾಯಿತು ಎಂದಿದ್ದಾರೆ.

ಇಸ್ರೇಲ್ ಆಕ್ರಮಣದಿಂದ 1 ಲಕ್ಷಕ್ಕೂ ಅಧಿಕ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ, ಗಾಯಗೊಂಡಿದ್ದಾರೆ. ಎರಡು ಮಿಲಿಯನ್ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಗಾಝಾದ ಪರಿಸ್ಥಿತಿ ನರಕ ಸದೃಶ್ಯವಾಗಿದೆ. ಇಷ್ಟೆಲ್ಲಾ ಆಗಿ 6 ತಿಂಗಳ ಬಳಿಕ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ರಿಯಾದ್ ಮನ್ಸೂರ್ ಹೇಳಿದ್ದಾರೆ.

ಹಮಾಸ್ ಸ್ವಾಗತ

ಭದ್ರತಾ ಮಂಡಳಿಯ ನಿರ್ಣಯವನ್ನು ಹಮಾಸ್ ಸ್ವಾಗತಿಸಿದೆ. ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಾವು ಸಿದ್ದರಿದ್ದೇವೆ ಎಂದಿದೆ. ಆದರೆ, ನಾವು ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕಾದರೆ ಇಸ್ರೇಲ್ ಜೈಲಿನಲ್ಲಿರುವ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಬೇಕು ಎಂದು ಷರತ್ತು ವಿಧಿಸಿದೆ.

ಯುಎಸ್ ಪ್ರತಿಕ್ರಿಯೆ

ಮತದಾನದಿಂದ ದೂರ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ, ನಿರ್ಣಯ ಅಂಗೀಕರಿಸುವ ವಿಷಯದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಕದನ ವಿರಾಮದ ಪರವಾಗಿಯೇ ಇದ್ದೇವೆ. ಆದರೆ, ನಿರ್ಣಯದಲ್ಲಿ ಹಮಾಸ್‌ ಅನ್ನು ಖಂಡಿಸುವ ವಿಷಯವಿಲ್ಲ. ಹಾಗಾಗಿ, ಅದರ ಪರ ನಾವು ಮತ ಚಲಾಯಿಸಿಲ್ಲ ಎಂದಿದ್ದಾರೆ.

ತಕ್ಷಣ ನಿರ್ಣಯ ಜಾರಿಗೆ ಗುಟೆರೆಸ್ ಆಗ್ರಹ

ಭದ್ರತಾ ಮಂಡಳಿಯ ನಿರ್ಣಯದಂತೆ ತಕ್ಷಣ ಕದನ ವಿರಾಮ ಜಾರಿಗೊಳಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ಯಾವುದೇ ‍‍‍‍ ‍‍‍‍‍‍‍‍‍‍‍‍‍‍‍‍‍‍ಷರತ್ತು ವಿಧಿಸದೆ ಪರಸ್ಪರ ಬಿಡುಗಡೆಗೊಳಿಸಬೇಕು ಎಂದು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಆಗ್ರಹಿಸಿದ್ದಾರೆ.

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸುತ್ತಿದೆ. ಇಸ್ರೇಲ್ ಮಾರಣಹೋಮಕ್ಕೆ ಇದುವರೆಗೆ ಸುಮಾರು 32 ಸಾವಿರ ಪ್ಯಾಲೆಸ್ತೀನ್ ನಾಗರಿಕರು ಬಲಿಯಾಗಿದ್ದಾರೆ. ಪ್ರತಿದಿನ 100-200 ಜನರು ಸಾವನ್ನಪ್ಪುತ್ತಲೇ ಇದ್ದಾರೆ. ಆರಂಭದಲ್ಲಿ ಹಮಾಸ್ ನಮ್ಮ ಗುರಿ ನಾವು ನಾಗರಿಕರಿಗೆ ಏನೂ ಮಾಡುವುದಿಲ್ಲ ಎನ್ನುತ್ತಿಲ್ಲ ಇಸ್ರೇಲ್, ಪ್ರಸ್ತುತ ನಾಗರಿಕರನ್ನು ಗುರಿಯಾಗಿಸಿ ರಕ್ತ ಹರಿಸುತ್ತಿದೆ. ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದೆ. ವಿವಿಧ ರಾಷ್ಟ್ರಗಳು ಯುದ್ಧ ನಿರಾಶ್ರಿತರಿಗೆ ಕಳುಹಿಸುವ ನೆರವು ವಿತರಣೆಗೆ ಅಡ್ಡಿಪಡಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ಕುಡಿಯುವ ನೀರು ಪೋಲು; ಬೆಂಗಳೂರಿನ 22 ಕುಟುಂಬಗಳಿಗೆ ತಲಾ ₹5,000 ದಂಡ ವಿಧಿಸಿದ ಜಲ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...