Homeಮುಖಪುಟಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಮತದಾನಕ್ಕೆ ಅಮೆರಿಕ ಗೈರು. ಇತರ 14 ರಾಷ್ಟ್ರಗಳಿಂದ ನಿರ್ಣಯಕ್ಕೆ ಬೆಂಬಲ

- Advertisement -
- Advertisement -

ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಗೆ ಆಗ್ರಹಿಸಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೋಮವಾರ ನಿರ್ಣಯ ಅಂಗೀಕರಿಸಲಾಗಿದೆ.

ಪ್ರತಿ ಬಾರಿಯೂ ನಿರ್ಣಯದ ವಿರುದ್ಧ ಮತ ಚಲಾಯಿಸುತ್ತಿದ್ದ ಅಥವಾ ವೀಟೋ ಆಧಿಕಾರ ಚಲಾಯಿಸಿ ನಿರ್ಣಯ ಅಂಗೀಕಾರಗೊಳ್ಳದಂತೆ ತಡೆಯುತ್ತಿದ್ದ ಯುಎಸ್ ಈ ಬಾರಿ ಮತದಾನಕ್ಕೆ ಗೈರಾಗಿತ್ತು. ಹಾಗಾಗಿ, ಮೊದಲ ಬಾರಿಗೆ ಭದ್ರತಾ ಮಂಡಳಿಯಲ್ಲಿ ನಿರ್ಣಯ ಅಂಗೀಕಾರಗೊಂಡಿದೆ.

ಯುಎಸ್ ಹೊರತುಪಡಿಸಿ ಭದ್ರತಾ ಮಂಡಳಿಯ ಇತರ 14 ಸದಸ್ಯರು ನಿರ್ಣಯದ ಪರ ಮತ ಚಲಾಯಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ತಕ್ಷಣ ನಿಲ್ಲಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ನಿಶ್ಶರ್ತವಾಗಿ ಬಿಡುಗಡೆ ಮಾಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ನೆತನ್ಯಾಹು ಕಿಡಿ

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಿಡಿ ಕಾರಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಈ ಮೂಲಕ ಹಮಾಸ್ ಬಳಿ ಇರುವ ಒತ್ತೆಯಾಳುಗಳ ಬಿಡುಗಡೆಗೆ ಶ್ರಮಿಸಿತ್ತು. ಆದರೆ, ಅದಕ್ಕೆ ಹಿನ್ನಡೆಯಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಮೊದಲ ಬಾರಿಗೆ ವೀಟೋ ಅಧಿಕಾರ ಬಳಸದೆ ಕದನ ವಿರಾಮ ನಿರ್ಣಯ ಅಂಗೀಕರಿಸಲು ಅನುವು ಮಾಡಿಕೊಟ್ಟ ಯುಎಸ್ ವಿರುದ್ಧ ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಾರ ವಾಷಿಂಗ್ಟನ್‌ನಲ್ಲಿ ಇಸ್ರೇಲಿ ನಿಯೋಗ ಮತ್ತು ಯುಎಸ್ ಅಧಿಕಾರಿಗಳ ನಡುವೆ ನಡೆಯಬೇಕಿದ್ದ ಮಾತುಕತೆಯನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಸಚಿವ ಹೇಳಿದ್ದಾರೆ.

ಪ್ಯಾಲೆಸ್ತೀನ್ ಸ್ವಾಗತ

ವಿಶ್ವ ಸಂಸ್ಥೆಗೆ ಪ್ಯಾಲೆಸ್ತೀನ್‌ನ ರಾಯಭಾರಿಯಾಗಿರುವ ರಿಯಾದ್ ಮನ್ಸೂರ್ ಅವರು ಭದ್ರತಾ ಮಂಡಳಿಯ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಆದರೆ, ಅದು ತುಂಬಾ ವಿಳಂಬವಾಯಿತು ಎಂದಿದ್ದಾರೆ.

ಇಸ್ರೇಲ್ ಆಕ್ರಮಣದಿಂದ 1 ಲಕ್ಷಕ್ಕೂ ಅಧಿಕ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ, ಗಾಯಗೊಂಡಿದ್ದಾರೆ. ಎರಡು ಮಿಲಿಯನ್ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಗಾಝಾದ ಪರಿಸ್ಥಿತಿ ನರಕ ಸದೃಶ್ಯವಾಗಿದೆ. ಇಷ್ಟೆಲ್ಲಾ ಆಗಿ 6 ತಿಂಗಳ ಬಳಿಕ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ರಿಯಾದ್ ಮನ್ಸೂರ್ ಹೇಳಿದ್ದಾರೆ.

ಹಮಾಸ್ ಸ್ವಾಗತ

ಭದ್ರತಾ ಮಂಡಳಿಯ ನಿರ್ಣಯವನ್ನು ಹಮಾಸ್ ಸ್ವಾಗತಿಸಿದೆ. ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಾವು ಸಿದ್ದರಿದ್ದೇವೆ ಎಂದಿದೆ. ಆದರೆ, ನಾವು ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕಾದರೆ ಇಸ್ರೇಲ್ ಜೈಲಿನಲ್ಲಿರುವ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಬೇಕು ಎಂದು ಷರತ್ತು ವಿಧಿಸಿದೆ.

ಯುಎಸ್ ಪ್ರತಿಕ್ರಿಯೆ

ಮತದಾನದಿಂದ ದೂರ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ, ನಿರ್ಣಯ ಅಂಗೀಕರಿಸುವ ವಿಷಯದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಕದನ ವಿರಾಮದ ಪರವಾಗಿಯೇ ಇದ್ದೇವೆ. ಆದರೆ, ನಿರ್ಣಯದಲ್ಲಿ ಹಮಾಸ್‌ ಅನ್ನು ಖಂಡಿಸುವ ವಿಷಯವಿಲ್ಲ. ಹಾಗಾಗಿ, ಅದರ ಪರ ನಾವು ಮತ ಚಲಾಯಿಸಿಲ್ಲ ಎಂದಿದ್ದಾರೆ.

ತಕ್ಷಣ ನಿರ್ಣಯ ಜಾರಿಗೆ ಗುಟೆರೆಸ್ ಆಗ್ರಹ

ಭದ್ರತಾ ಮಂಡಳಿಯ ನಿರ್ಣಯದಂತೆ ತಕ್ಷಣ ಕದನ ವಿರಾಮ ಜಾರಿಗೊಳಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ಯಾವುದೇ ‍‍‍‍ ‍‍‍‍‍‍‍‍‍‍‍‍‍‍‍‍‍‍ಷರತ್ತು ವಿಧಿಸದೆ ಪರಸ್ಪರ ಬಿಡುಗಡೆಗೊಳಿಸಬೇಕು ಎಂದು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಆಗ್ರಹಿಸಿದ್ದಾರೆ.

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸುತ್ತಿದೆ. ಇಸ್ರೇಲ್ ಮಾರಣಹೋಮಕ್ಕೆ ಇದುವರೆಗೆ ಸುಮಾರು 32 ಸಾವಿರ ಪ್ಯಾಲೆಸ್ತೀನ್ ನಾಗರಿಕರು ಬಲಿಯಾಗಿದ್ದಾರೆ. ಪ್ರತಿದಿನ 100-200 ಜನರು ಸಾವನ್ನಪ್ಪುತ್ತಲೇ ಇದ್ದಾರೆ. ಆರಂಭದಲ್ಲಿ ಹಮಾಸ್ ನಮ್ಮ ಗುರಿ ನಾವು ನಾಗರಿಕರಿಗೆ ಏನೂ ಮಾಡುವುದಿಲ್ಲ ಎನ್ನುತ್ತಿಲ್ಲ ಇಸ್ರೇಲ್, ಪ್ರಸ್ತುತ ನಾಗರಿಕರನ್ನು ಗುರಿಯಾಗಿಸಿ ರಕ್ತ ಹರಿಸುತ್ತಿದೆ. ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದೆ. ವಿವಿಧ ರಾಷ್ಟ್ರಗಳು ಯುದ್ಧ ನಿರಾಶ್ರಿತರಿಗೆ ಕಳುಹಿಸುವ ನೆರವು ವಿತರಣೆಗೆ ಅಡ್ಡಿಪಡಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ಕುಡಿಯುವ ನೀರು ಪೋಲು; ಬೆಂಗಳೂರಿನ 22 ಕುಟುಂಬಗಳಿಗೆ ತಲಾ ₹5,000 ದಂಡ ವಿಧಿಸಿದ ಜಲ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...