Homeಮುಖಪುಟಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಮತದಾನಕ್ಕೆ ಅಮೆರಿಕ ಗೈರು. ಇತರ 14 ರಾಷ್ಟ್ರಗಳಿಂದ ನಿರ್ಣಯಕ್ಕೆ ಬೆಂಬಲ

- Advertisement -
- Advertisement -

ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಗೆ ಆಗ್ರಹಿಸಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೋಮವಾರ ನಿರ್ಣಯ ಅಂಗೀಕರಿಸಲಾಗಿದೆ.

ಪ್ರತಿ ಬಾರಿಯೂ ನಿರ್ಣಯದ ವಿರುದ್ಧ ಮತ ಚಲಾಯಿಸುತ್ತಿದ್ದ ಅಥವಾ ವೀಟೋ ಆಧಿಕಾರ ಚಲಾಯಿಸಿ ನಿರ್ಣಯ ಅಂಗೀಕಾರಗೊಳ್ಳದಂತೆ ತಡೆಯುತ್ತಿದ್ದ ಯುಎಸ್ ಈ ಬಾರಿ ಮತದಾನಕ್ಕೆ ಗೈರಾಗಿತ್ತು. ಹಾಗಾಗಿ, ಮೊದಲ ಬಾರಿಗೆ ಭದ್ರತಾ ಮಂಡಳಿಯಲ್ಲಿ ನಿರ್ಣಯ ಅಂಗೀಕಾರಗೊಂಡಿದೆ.

ಯುಎಸ್ ಹೊರತುಪಡಿಸಿ ಭದ್ರತಾ ಮಂಡಳಿಯ ಇತರ 14 ಸದಸ್ಯರು ನಿರ್ಣಯದ ಪರ ಮತ ಚಲಾಯಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ತಕ್ಷಣ ನಿಲ್ಲಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ನಿಶ್ಶರ್ತವಾಗಿ ಬಿಡುಗಡೆ ಮಾಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ನೆತನ್ಯಾಹು ಕಿಡಿ

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಿಡಿ ಕಾರಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಈ ಮೂಲಕ ಹಮಾಸ್ ಬಳಿ ಇರುವ ಒತ್ತೆಯಾಳುಗಳ ಬಿಡುಗಡೆಗೆ ಶ್ರಮಿಸಿತ್ತು. ಆದರೆ, ಅದಕ್ಕೆ ಹಿನ್ನಡೆಯಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಮೊದಲ ಬಾರಿಗೆ ವೀಟೋ ಅಧಿಕಾರ ಬಳಸದೆ ಕದನ ವಿರಾಮ ನಿರ್ಣಯ ಅಂಗೀಕರಿಸಲು ಅನುವು ಮಾಡಿಕೊಟ್ಟ ಯುಎಸ್ ವಿರುದ್ಧ ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಾರ ವಾಷಿಂಗ್ಟನ್‌ನಲ್ಲಿ ಇಸ್ರೇಲಿ ನಿಯೋಗ ಮತ್ತು ಯುಎಸ್ ಅಧಿಕಾರಿಗಳ ನಡುವೆ ನಡೆಯಬೇಕಿದ್ದ ಮಾತುಕತೆಯನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಸಚಿವ ಹೇಳಿದ್ದಾರೆ.

ಪ್ಯಾಲೆಸ್ತೀನ್ ಸ್ವಾಗತ

ವಿಶ್ವ ಸಂಸ್ಥೆಗೆ ಪ್ಯಾಲೆಸ್ತೀನ್‌ನ ರಾಯಭಾರಿಯಾಗಿರುವ ರಿಯಾದ್ ಮನ್ಸೂರ್ ಅವರು ಭದ್ರತಾ ಮಂಡಳಿಯ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಆದರೆ, ಅದು ತುಂಬಾ ವಿಳಂಬವಾಯಿತು ಎಂದಿದ್ದಾರೆ.

ಇಸ್ರೇಲ್ ಆಕ್ರಮಣದಿಂದ 1 ಲಕ್ಷಕ್ಕೂ ಅಧಿಕ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ, ಗಾಯಗೊಂಡಿದ್ದಾರೆ. ಎರಡು ಮಿಲಿಯನ್ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಗಾಝಾದ ಪರಿಸ್ಥಿತಿ ನರಕ ಸದೃಶ್ಯವಾಗಿದೆ. ಇಷ್ಟೆಲ್ಲಾ ಆಗಿ 6 ತಿಂಗಳ ಬಳಿಕ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ರಿಯಾದ್ ಮನ್ಸೂರ್ ಹೇಳಿದ್ದಾರೆ.

ಹಮಾಸ್ ಸ್ವಾಗತ

ಭದ್ರತಾ ಮಂಡಳಿಯ ನಿರ್ಣಯವನ್ನು ಹಮಾಸ್ ಸ್ವಾಗತಿಸಿದೆ. ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಾವು ಸಿದ್ದರಿದ್ದೇವೆ ಎಂದಿದೆ. ಆದರೆ, ನಾವು ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕಾದರೆ ಇಸ್ರೇಲ್ ಜೈಲಿನಲ್ಲಿರುವ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಬೇಕು ಎಂದು ಷರತ್ತು ವಿಧಿಸಿದೆ.

ಯುಎಸ್ ಪ್ರತಿಕ್ರಿಯೆ

ಮತದಾನದಿಂದ ದೂರ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ, ನಿರ್ಣಯ ಅಂಗೀಕರಿಸುವ ವಿಷಯದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಕದನ ವಿರಾಮದ ಪರವಾಗಿಯೇ ಇದ್ದೇವೆ. ಆದರೆ, ನಿರ್ಣಯದಲ್ಲಿ ಹಮಾಸ್‌ ಅನ್ನು ಖಂಡಿಸುವ ವಿಷಯವಿಲ್ಲ. ಹಾಗಾಗಿ, ಅದರ ಪರ ನಾವು ಮತ ಚಲಾಯಿಸಿಲ್ಲ ಎಂದಿದ್ದಾರೆ.

ತಕ್ಷಣ ನಿರ್ಣಯ ಜಾರಿಗೆ ಗುಟೆರೆಸ್ ಆಗ್ರಹ

ಭದ್ರತಾ ಮಂಡಳಿಯ ನಿರ್ಣಯದಂತೆ ತಕ್ಷಣ ಕದನ ವಿರಾಮ ಜಾರಿಗೊಳಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ಯಾವುದೇ ‍‍‍‍ ‍‍‍‍‍‍‍‍‍‍‍‍‍‍‍‍‍‍ಷರತ್ತು ವಿಧಿಸದೆ ಪರಸ್ಪರ ಬಿಡುಗಡೆಗೊಳಿಸಬೇಕು ಎಂದು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಆಗ್ರಹಿಸಿದ್ದಾರೆ.

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸುತ್ತಿದೆ. ಇಸ್ರೇಲ್ ಮಾರಣಹೋಮಕ್ಕೆ ಇದುವರೆಗೆ ಸುಮಾರು 32 ಸಾವಿರ ಪ್ಯಾಲೆಸ್ತೀನ್ ನಾಗರಿಕರು ಬಲಿಯಾಗಿದ್ದಾರೆ. ಪ್ರತಿದಿನ 100-200 ಜನರು ಸಾವನ್ನಪ್ಪುತ್ತಲೇ ಇದ್ದಾರೆ. ಆರಂಭದಲ್ಲಿ ಹಮಾಸ್ ನಮ್ಮ ಗುರಿ ನಾವು ನಾಗರಿಕರಿಗೆ ಏನೂ ಮಾಡುವುದಿಲ್ಲ ಎನ್ನುತ್ತಿಲ್ಲ ಇಸ್ರೇಲ್, ಪ್ರಸ್ತುತ ನಾಗರಿಕರನ್ನು ಗುರಿಯಾಗಿಸಿ ರಕ್ತ ಹರಿಸುತ್ತಿದೆ. ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದೆ. ವಿವಿಧ ರಾಷ್ಟ್ರಗಳು ಯುದ್ಧ ನಿರಾಶ್ರಿತರಿಗೆ ಕಳುಹಿಸುವ ನೆರವು ವಿತರಣೆಗೆ ಅಡ್ಡಿಪಡಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ಕುಡಿಯುವ ನೀರು ಪೋಲು; ಬೆಂಗಳೂರಿನ 22 ಕುಟುಂಬಗಳಿಗೆ ತಲಾ ₹5,000 ದಂಡ ವಿಧಿಸಿದ ಜಲ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...