Homeಮುಖಪುಟಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

ಮತದಾನಕ್ಕೆ ಅಮೆರಿಕ ಗೈರು. ಇತರ 14 ರಾಷ್ಟ್ರಗಳಿಂದ ನಿರ್ಣಯಕ್ಕೆ ಬೆಂಬಲ

- Advertisement -
- Advertisement -

ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಗೆ ಆಗ್ರಹಿಸಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೋಮವಾರ ನಿರ್ಣಯ ಅಂಗೀಕರಿಸಲಾಗಿದೆ.

ಪ್ರತಿ ಬಾರಿಯೂ ನಿರ್ಣಯದ ವಿರುದ್ಧ ಮತ ಚಲಾಯಿಸುತ್ತಿದ್ದ ಅಥವಾ ವೀಟೋ ಆಧಿಕಾರ ಚಲಾಯಿಸಿ ನಿರ್ಣಯ ಅಂಗೀಕಾರಗೊಳ್ಳದಂತೆ ತಡೆಯುತ್ತಿದ್ದ ಯುಎಸ್ ಈ ಬಾರಿ ಮತದಾನಕ್ಕೆ ಗೈರಾಗಿತ್ತು. ಹಾಗಾಗಿ, ಮೊದಲ ಬಾರಿಗೆ ಭದ್ರತಾ ಮಂಡಳಿಯಲ್ಲಿ ನಿರ್ಣಯ ಅಂಗೀಕಾರಗೊಂಡಿದೆ.

ಯುಎಸ್ ಹೊರತುಪಡಿಸಿ ಭದ್ರತಾ ಮಂಡಳಿಯ ಇತರ 14 ಸದಸ್ಯರು ನಿರ್ಣಯದ ಪರ ಮತ ಚಲಾಯಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ತಕ್ಷಣ ನಿಲ್ಲಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ನಿಶ್ಶರ್ತವಾಗಿ ಬಿಡುಗಡೆ ಮಾಡಬೇಕು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ನೆತನ್ಯಾಹು ಕಿಡಿ

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಿಡಿ ಕಾರಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಈ ಮೂಲಕ ಹಮಾಸ್ ಬಳಿ ಇರುವ ಒತ್ತೆಯಾಳುಗಳ ಬಿಡುಗಡೆಗೆ ಶ್ರಮಿಸಿತ್ತು. ಆದರೆ, ಅದಕ್ಕೆ ಹಿನ್ನಡೆಯಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ಮೊದಲ ಬಾರಿಗೆ ವೀಟೋ ಅಧಿಕಾರ ಬಳಸದೆ ಕದನ ವಿರಾಮ ನಿರ್ಣಯ ಅಂಗೀಕರಿಸಲು ಅನುವು ಮಾಡಿಕೊಟ್ಟ ಯುಎಸ್ ವಿರುದ್ಧ ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಾರ ವಾಷಿಂಗ್ಟನ್‌ನಲ್ಲಿ ಇಸ್ರೇಲಿ ನಿಯೋಗ ಮತ್ತು ಯುಎಸ್ ಅಧಿಕಾರಿಗಳ ನಡುವೆ ನಡೆಯಬೇಕಿದ್ದ ಮಾತುಕತೆಯನ್ನು ರದ್ದುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ರಕ್ಷಣಾ ಸಚಿವ ಹೇಳಿದ್ದಾರೆ.

ಪ್ಯಾಲೆಸ್ತೀನ್ ಸ್ವಾಗತ

ವಿಶ್ವ ಸಂಸ್ಥೆಗೆ ಪ್ಯಾಲೆಸ್ತೀನ್‌ನ ರಾಯಭಾರಿಯಾಗಿರುವ ರಿಯಾದ್ ಮನ್ಸೂರ್ ಅವರು ಭದ್ರತಾ ಮಂಡಳಿಯ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಆದರೆ, ಅದು ತುಂಬಾ ವಿಳಂಬವಾಯಿತು ಎಂದಿದ್ದಾರೆ.

ಇಸ್ರೇಲ್ ಆಕ್ರಮಣದಿಂದ 1 ಲಕ್ಷಕ್ಕೂ ಅಧಿಕ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ, ಗಾಯಗೊಂಡಿದ್ದಾರೆ. ಎರಡು ಮಿಲಿಯನ್ ಜನರನ್ನು ಸ್ಥಳಾಂತರಗೊಳಿಸಲಾಗಿದೆ. ಗಾಝಾದ ಪರಿಸ್ಥಿತಿ ನರಕ ಸದೃಶ್ಯವಾಗಿದೆ. ಇಷ್ಟೆಲ್ಲಾ ಆಗಿ 6 ತಿಂಗಳ ಬಳಿಕ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ರಿಯಾದ್ ಮನ್ಸೂರ್ ಹೇಳಿದ್ದಾರೆ.

ಹಮಾಸ್ ಸ್ವಾಗತ

ಭದ್ರತಾ ಮಂಡಳಿಯ ನಿರ್ಣಯವನ್ನು ಹಮಾಸ್ ಸ್ವಾಗತಿಸಿದೆ. ಒತ್ತೆಯಾಳುಗಳ ಬಿಡುಗಡೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಾವು ಸಿದ್ದರಿದ್ದೇವೆ ಎಂದಿದೆ. ಆದರೆ, ನಾವು ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕಾದರೆ ಇಸ್ರೇಲ್ ಜೈಲಿನಲ್ಲಿರುವ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಬೇಕು ಎಂದು ಷರತ್ತು ವಿಧಿಸಿದೆ.

ಯುಎಸ್ ಪ್ರತಿಕ್ರಿಯೆ

ಮತದಾನದಿಂದ ದೂರ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ, ನಿರ್ಣಯ ಅಂಗೀಕರಿಸುವ ವಿಷಯದಲ್ಲಿ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಕದನ ವಿರಾಮದ ಪರವಾಗಿಯೇ ಇದ್ದೇವೆ. ಆದರೆ, ನಿರ್ಣಯದಲ್ಲಿ ಹಮಾಸ್‌ ಅನ್ನು ಖಂಡಿಸುವ ವಿಷಯವಿಲ್ಲ. ಹಾಗಾಗಿ, ಅದರ ಪರ ನಾವು ಮತ ಚಲಾಯಿಸಿಲ್ಲ ಎಂದಿದ್ದಾರೆ.

ತಕ್ಷಣ ನಿರ್ಣಯ ಜಾರಿಗೆ ಗುಟೆರೆಸ್ ಆಗ್ರಹ

ಭದ್ರತಾ ಮಂಡಳಿಯ ನಿರ್ಣಯದಂತೆ ತಕ್ಷಣ ಕದನ ವಿರಾಮ ಜಾರಿಗೊಳಿಸಬೇಕು. ಎಲ್ಲಾ ಒತ್ತೆಯಾಳುಗಳನ್ನು ಯಾವುದೇ ‍‍‍‍ ‍‍‍‍‍‍‍‍‍‍‍‍‍‍‍‍‍‍ಷರತ್ತು ವಿಧಿಸದೆ ಪರಸ್ಪರ ಬಿಡುಗಡೆಗೊಳಿಸಬೇಕು ಎಂದು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಆಗ್ರಹಿಸಿದ್ದಾರೆ.

ಕಳೆದ ಆರು ತಿಂಗಳಿನಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸುತ್ತಿದೆ. ಇಸ್ರೇಲ್ ಮಾರಣಹೋಮಕ್ಕೆ ಇದುವರೆಗೆ ಸುಮಾರು 32 ಸಾವಿರ ಪ್ಯಾಲೆಸ್ತೀನ್ ನಾಗರಿಕರು ಬಲಿಯಾಗಿದ್ದಾರೆ. ಪ್ರತಿದಿನ 100-200 ಜನರು ಸಾವನ್ನಪ್ಪುತ್ತಲೇ ಇದ್ದಾರೆ. ಆರಂಭದಲ್ಲಿ ಹಮಾಸ್ ನಮ್ಮ ಗುರಿ ನಾವು ನಾಗರಿಕರಿಗೆ ಏನೂ ಮಾಡುವುದಿಲ್ಲ ಎನ್ನುತ್ತಿಲ್ಲ ಇಸ್ರೇಲ್, ಪ್ರಸ್ತುತ ನಾಗರಿಕರನ್ನು ಗುರಿಯಾಗಿಸಿ ರಕ್ತ ಹರಿಸುತ್ತಿದೆ. ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದೆ. ವಿವಿಧ ರಾಷ್ಟ್ರಗಳು ಯುದ್ಧ ನಿರಾಶ್ರಿತರಿಗೆ ಕಳುಹಿಸುವ ನೆರವು ವಿತರಣೆಗೆ ಅಡ್ಡಿಪಡಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ಕುಡಿಯುವ ನೀರು ಪೋಲು; ಬೆಂಗಳೂರಿನ 22 ಕುಟುಂಬಗಳಿಗೆ ತಲಾ ₹5,000 ದಂಡ ವಿಧಿಸಿದ ಜಲ ಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...