Homeಮುಖಪುಟವಿಶ್ವಸಂಸ್ಥೆಯ ಮೌನವೇ ಇಸ್ರೇಲಿನ ಅನಾಗರಿಕ ದಾಳಿಗೆ ಪ್ರೇರಣೆ: ಜೋರ್ಡನ್

ವಿಶ್ವಸಂಸ್ಥೆಯ ಮೌನವೇ ಇಸ್ರೇಲಿನ ಅನಾಗರಿಕ ದಾಳಿಗೆ ಪ್ರೇರಣೆ: ಜೋರ್ಡನ್

- Advertisement -
- Advertisement -

ವಿಶ್ವಸಂಸ್ಥೆ ಭದ್ರತಾ ಮಂಡಳಿ ತನ್ನ ಮೌನದ ಮೂಲಕ ಗಾಝಾದ ಮುಖ್ಯ ಆಸ್ಪತ್ರೆಯ ಮೇಲೆ ಇಸ್ರೇಲಿನ ಅನಾಗರಿಕ ದಾಳಿಗೆ ಪ್ರೇರಣೆ ನೀಡಿದೆ ಎಂದು ಜೋರ್ಡನ್ ಬುಧವಾರ ಆರೋಪಿಸಿದೆ.

ಗಾಯಾಳುಗಳು ಮತ್ತು ಆಶ್ರಯ ಪಡೆದ ಪ್ಯಾಲೆಸ್ಟೀನಿಯಾದವರಿಂದ ತುಂಬಿ ತುಳುಕುತ್ತಿದ್ದ ಗಾಜಾ ಸಿಟಿ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಭಾರೀ ಸ್ಫೋಟ ಸಂಭವಿಸಿದ್ದು, ನೂರಾರು ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಸ್ರೇಲ್ ಈ ವೈಮಾನಿಕ ದಾಳಿ ನಡೆಸಿದೆ ಎಂದು ಹಮಾಸ್ ದೂಷಿಸಿದೆ, ಆದರೆ ಇಸ್ರೇಲಿ ಮಿಲಿಟರಿಯು ಪ್ಯಾಲೇಸ್ಟಿನಿಯನ್ ಗುಂಪಿನವರು ರಾಕೆಟ್‌ನಿಂದ ಆಸ್ಪತ್ರೆಯನ್ನು ಹೊಡೆದಿದೆ ಎಂದು ಹೇಳಿದೆ. ಕನಿಷ್ಠ 500 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ.

”ಅಲ್-ಶಿಫಾ ಆಸ್ಪತ್ರೆಯಲ್ಲಿನ ದುರಂತವು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮೌನದಿಂದ ಆಗಿರುವ ಅನಾಗರಿಕತೆಗೆ ಸಾಕ್ಷಿಯಾಗಿದೆ ಎಂದು ಜೋರ್ಡನ್ ವಿದೇಶಾಂಗ ಸಚಿವ ಅಯಾನ್ ಸಫಾದಿ ಹೇಳಿದ್ದಾರೆ.

”ಈ ಕ್ರೂರ ಕೃತ್ಯದ ಕುರಿತ ಮೌನವನ್ನು ನಾವು ಖಂಡಿಸುತ್ತೇವೆ. ಇದು ಯುದ್ಧ ಅಪರಾಧಗಳಿಗೆ ರಕ್ಷಣೆ ನೀಡುತ್ತಿದೆ. ಇದು ಸ್ವೀಕಾರಾರ್ಹವಲ್ಲ ಸಮರ್ಥನೀಯವಲ್ಲ ವಿಶ್ವಸಂಸ್ಥೆ ಭದ್ರತಾ ಮಂಡಳಿ ತಕ್ಷಣ ಕಾರ್ಯನಿರ್ವಹಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಅಲ್ ಶಿಫಾ ಆಸ್ಪತ್ರೆಯಲ್ಲಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿರುವ ಇಸ್ರೇಲ್, ಅಗತ್ಯಬಿದ್ದರೆ ದಾಳಿ, ಕಾರ್ಯಾಚರಣೆಯನ್ನು ವಿಸ್ತರಿಸಲಾಗುವುದು ಎಂದು ಹೇಳಿದೆ.

ಈ ಮಧ್ಯೆ ಅಲ್-ಶಿಫಾ ಆಸ್ಪತ್ರೆಯ ಮೇಲಿನ ದಾಳಿಯ ಬಳಿಕ ಕದನ ವಿರಾಮಕ್ಕೆ ಇಸ್ರೇಲ್ ಮೇಲೆ ಅಂತರಾಷ್ಟ್ರೀಯ ಒತ್ತಡ ಹೆಚ್ಚಿದೆ. ಒತ್ತೆಯಾಳುಗಳ ಬಿಡುಗಡೆ ಮತ್ತು ಕದನ ವಿರಾಮಕ್ಕೆ ಸಂಬಂಧಿಸಿ ಎರಡೂ ದೇಶಗಳು ತಮ್ಮ ಷರತ್ತನ್ನು ಬದಿಗಿರಿಸಿ ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಯಾಗಲು ಅವಕಾಶ ನೀಡಬೇಕೆಂದು ಖತರ್ ಹಮಾಸ್ ಮತ್ತು ಇಸ್ರೇಲನ್ನು ಆಗ್ರಹಿಸಿದೆ.

ನಮ್ಮನ್ನು ಕೆಣಕಿದ ಹಮಾಸ್ ಗೆ ಗಾಝಾದಲ್ಲಿ ಅವಿತುಕೊಳ್ಳಲು ಯಾವುದೇ ಸ್ಥಳ ಸುರಕ್ಷಿತವಲ್ಲ ಇಸ್ರೇಲ್ ಸೇನೆ ಗಾಝಾದ ಯಾವುದೇ ಪ್ರದೇಶಕ್ಕೂ ಪ್ರವೇಶಿಸುವ ಸಾಮರ್ಥ್ಯ ಹೊಂದಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಯುದ್ಧದಿಂದ ಜರ್ಝರಿತಗೊಂಡಿರುವ ಗಾಝಾಕ್ಕೆ ತುರ್ತು ಅಗತ್ಯದ ವಸ್ತುಗಳನ್ನು ಒದಗಿಸಲು ವಿಶ್ವಸಂಸ್ಥೆ ಇನ್ನಷ್ಟು ಕ್ರಮ ಕೈಗೊಳ್ಳಬೇಕು ಎಂದು ಇರಾನ್ ವಿದೇಶಾಂಗ ಇಲಾಖೆ ಬುಧವಾರ ಆಗ್ರಹಿಸಿದೆ.

ಅಲ್ಲಿನ ಆರೋಗ್ಯ ಸಚಿವಾಲಯದ ಪ್ರಕಾರ, ಗಾಜಾದಲ್ಲಿ ಸುಮಾರು 3,000 ಜನರು ಸಾವನ್ನಪ್ಪಿದ್ದಾರೆ ಮತ್ತು 9,700 ಜನರು ಗಾಯಗೊಂಡಿದ್ದಾರೆ. ಹಮಾಸ್‌ನ ಅಕ್ಟೋಬರ್ 7 ರ ದಾಳಿಯಲ್ಲಿ 1,400 ಕ್ಕೂ ಹೆಚ್ಚು ಇಸ್ರೇಲಿಗಳು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಗಾಝಾ: ಸಂಸತ್ತು, ಸರ್ಕಾರಿ ಕಚೇರಿಗಳನ್ನು ವಶಪಡಿಸಿಕೊಂಡ ಇಸ್ರೇಲ್‌ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...