Homeಮುಖಪುಟವಿಶ್ವಸಂಸ್ಥೆಯ ಮೌನವೇ ಇಸ್ರೇಲಿನ ಅನಾಗರಿಕ ದಾಳಿಗೆ ಪ್ರೇರಣೆ: ಜೋರ್ಡನ್

ವಿಶ್ವಸಂಸ್ಥೆಯ ಮೌನವೇ ಇಸ್ರೇಲಿನ ಅನಾಗರಿಕ ದಾಳಿಗೆ ಪ್ರೇರಣೆ: ಜೋರ್ಡನ್

- Advertisement -
- Advertisement -

ವಿಶ್ವಸಂಸ್ಥೆ ಭದ್ರತಾ ಮಂಡಳಿ ತನ್ನ ಮೌನದ ಮೂಲಕ ಗಾಝಾದ ಮುಖ್ಯ ಆಸ್ಪತ್ರೆಯ ಮೇಲೆ ಇಸ್ರೇಲಿನ ಅನಾಗರಿಕ ದಾಳಿಗೆ ಪ್ರೇರಣೆ ನೀಡಿದೆ ಎಂದು ಜೋರ್ಡನ್ ಬುಧವಾರ ಆರೋಪಿಸಿದೆ.

ಗಾಯಾಳುಗಳು ಮತ್ತು ಆಶ್ರಯ ಪಡೆದ ಪ್ಯಾಲೆಸ್ಟೀನಿಯಾದವರಿಂದ ತುಂಬಿ ತುಳುಕುತ್ತಿದ್ದ ಗಾಜಾ ಸಿಟಿ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಭಾರೀ ಸ್ಫೋಟ ಸಂಭವಿಸಿದ್ದು, ನೂರಾರು ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಸ್ರೇಲ್ ಈ ವೈಮಾನಿಕ ದಾಳಿ ನಡೆಸಿದೆ ಎಂದು ಹಮಾಸ್ ದೂಷಿಸಿದೆ, ಆದರೆ ಇಸ್ರೇಲಿ ಮಿಲಿಟರಿಯು ಪ್ಯಾಲೇಸ್ಟಿನಿಯನ್ ಗುಂಪಿನವರು ರಾಕೆಟ್‌ನಿಂದ ಆಸ್ಪತ್ರೆಯನ್ನು ಹೊಡೆದಿದೆ ಎಂದು ಹೇಳಿದೆ. ಕನಿಷ್ಠ 500 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ.

”ಅಲ್-ಶಿಫಾ ಆಸ್ಪತ್ರೆಯಲ್ಲಿನ ದುರಂತವು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಮೌನದಿಂದ ಆಗಿರುವ ಅನಾಗರಿಕತೆಗೆ ಸಾಕ್ಷಿಯಾಗಿದೆ ಎಂದು ಜೋರ್ಡನ್ ವಿದೇಶಾಂಗ ಸಚಿವ ಅಯಾನ್ ಸಫಾದಿ ಹೇಳಿದ್ದಾರೆ.

”ಈ ಕ್ರೂರ ಕೃತ್ಯದ ಕುರಿತ ಮೌನವನ್ನು ನಾವು ಖಂಡಿಸುತ್ತೇವೆ. ಇದು ಯುದ್ಧ ಅಪರಾಧಗಳಿಗೆ ರಕ್ಷಣೆ ನೀಡುತ್ತಿದೆ. ಇದು ಸ್ವೀಕಾರಾರ್ಹವಲ್ಲ ಸಮರ್ಥನೀಯವಲ್ಲ ವಿಶ್ವಸಂಸ್ಥೆ ಭದ್ರತಾ ಮಂಡಳಿ ತಕ್ಷಣ ಕಾರ್ಯನಿರ್ವಹಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಅಲ್ ಶಿಫಾ ಆಸ್ಪತ್ರೆಯಲ್ಲಿ ನಡೆಸುತ್ತಿರುವ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿರುವ ಇಸ್ರೇಲ್, ಅಗತ್ಯಬಿದ್ದರೆ ದಾಳಿ, ಕಾರ್ಯಾಚರಣೆಯನ್ನು ವಿಸ್ತರಿಸಲಾಗುವುದು ಎಂದು ಹೇಳಿದೆ.

ಈ ಮಧ್ಯೆ ಅಲ್-ಶಿಫಾ ಆಸ್ಪತ್ರೆಯ ಮೇಲಿನ ದಾಳಿಯ ಬಳಿಕ ಕದನ ವಿರಾಮಕ್ಕೆ ಇಸ್ರೇಲ್ ಮೇಲೆ ಅಂತರಾಷ್ಟ್ರೀಯ ಒತ್ತಡ ಹೆಚ್ಚಿದೆ. ಒತ್ತೆಯಾಳುಗಳ ಬಿಡುಗಡೆ ಮತ್ತು ಕದನ ವಿರಾಮಕ್ಕೆ ಸಂಬಂಧಿಸಿ ಎರಡೂ ದೇಶಗಳು ತಮ್ಮ ಷರತ್ತನ್ನು ಬದಿಗಿರಿಸಿ ಗಾಝಾದಲ್ಲಿ ತಕ್ಷಣ ಕದನ ವಿರಾಮ ಜಾರಿಯಾಗಲು ಅವಕಾಶ ನೀಡಬೇಕೆಂದು ಖತರ್ ಹಮಾಸ್ ಮತ್ತು ಇಸ್ರೇಲನ್ನು ಆಗ್ರಹಿಸಿದೆ.

ನಮ್ಮನ್ನು ಕೆಣಕಿದ ಹಮಾಸ್ ಗೆ ಗಾಝಾದಲ್ಲಿ ಅವಿತುಕೊಳ್ಳಲು ಯಾವುದೇ ಸ್ಥಳ ಸುರಕ್ಷಿತವಲ್ಲ ಇಸ್ರೇಲ್ ಸೇನೆ ಗಾಝಾದ ಯಾವುದೇ ಪ್ರದೇಶಕ್ಕೂ ಪ್ರವೇಶಿಸುವ ಸಾಮರ್ಥ್ಯ ಹೊಂದಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಯುದ್ಧದಿಂದ ಜರ್ಝರಿತಗೊಂಡಿರುವ ಗಾಝಾಕ್ಕೆ ತುರ್ತು ಅಗತ್ಯದ ವಸ್ತುಗಳನ್ನು ಒದಗಿಸಲು ವಿಶ್ವಸಂಸ್ಥೆ ಇನ್ನಷ್ಟು ಕ್ರಮ ಕೈಗೊಳ್ಳಬೇಕು ಎಂದು ಇರಾನ್ ವಿದೇಶಾಂಗ ಇಲಾಖೆ ಬುಧವಾರ ಆಗ್ರಹಿಸಿದೆ.

ಅಲ್ಲಿನ ಆರೋಗ್ಯ ಸಚಿವಾಲಯದ ಪ್ರಕಾರ, ಗಾಜಾದಲ್ಲಿ ಸುಮಾರು 3,000 ಜನರು ಸಾವನ್ನಪ್ಪಿದ್ದಾರೆ ಮತ್ತು 9,700 ಜನರು ಗಾಯಗೊಂಡಿದ್ದಾರೆ. ಹಮಾಸ್‌ನ ಅಕ್ಟೋಬರ್ 7 ರ ದಾಳಿಯಲ್ಲಿ 1,400 ಕ್ಕೂ ಹೆಚ್ಚು ಇಸ್ರೇಲಿಗಳು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಗಾಝಾ: ಸಂಸತ್ತು, ಸರ್ಕಾರಿ ಕಚೇರಿಗಳನ್ನು ವಶಪಡಿಸಿಕೊಂಡ ಇಸ್ರೇಲ್‌ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...