HomeಮುಖಪುಟSIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಅತಿ ಹೆಚ್ಚು ಪರಿಣಾಮ ಬೀರಿದೆ ಎಂಬ ಆರೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ವಿಶ್ವಸಂಸ್ಥೆಯ ಮೂವರು ವಿಶೇಷ ವರದಿಗಾರರು ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಮೆ 1, 2026ರಂದು ಬರೆದಿರುವ ಪತ್ರದಲ್ಲಿ, ಅಲ್ಪಸಂಖ್ಯಾತರ ವಿಷಯಗಳ ಕುರಿತಾದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು, ಅಭಿಪ್ರಾಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಉತ್ತೇಜನ ಮತ್ತು ರಕ್ಷಣೆ ಕುರಿತಾದ ವಿಶೇಷ ವರದಿಗಾರರು ಹಾಗೂ ಧರ್ಮ/ನಂಬಿಕೆಯ ಸ್ವಾತಂತ್ರ್ಯದ ಕುರಿತಾದ ವಿಶೇಷ ವರದಿಗಾರರು, ಮತದಾರರ ಪಟ್ಟಿ ಪರಿಷ್ಕರಣೆಯು ಜನಾಂಗೀಯ, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಮೇಲೆ, ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಮೇಲೆ ಅತ್ಯಂತ ಪ್ರತಿಕೂಲ ಪರಿಣಾಮ ಬೀರಿದೆ ಎಂಬುದನ್ನು ಸೂಚಿಸುವ ಮಾಹಿತಿ ತಮಗೆ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

ಈ ಪತ್ರಕ್ಕೆ ಅಲ್ಪಸಂಖ್ಯಾತರ ವಿಷಯಗಳ ಕುರಿತಾದ ವಿಶ್ವಸಂಸ್ಥೆಯ ವಿಶೇಷ ವರದಿಗಾರ ನಿಕೋಲಸ್ ಲೆವ್ರಾಟ್, ಅಭಿಪ್ರಾಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಉತ್ತೇಜನ ಮತ್ತು ರಕ್ಷಣೆ ಕುರಿತಾದ ವಿಶೇಷ ವರದಿಗಾರ್ತಿ ಐರಿನ್ ಖಾನ್ ಹಾಗೂ ಧರ್ಮ ಅಥವಾ ನಂಬಿಕೆಯ ಸ್ವಾತಂತ್ರ್ಯದ ಕುರಿತಾದ ವಿಶೇಷ ವರದಿಗಾರ್ತಿ ನಾಝಿಲಾ ಘನೇಯಾ ಅವರು ಸಹಿ ಹಾಕಿದ್ದಾರೆ.

ವ್ಯಾಪಕ ಪ್ರಮಾಣದ ಹೆಸರುಗಳ ಅಳಿಸುವಿಕೆಯ ಕುರಿತು ಮಾತನಾಡುತ್ತಾ, ಆ ಪತ್ರದಲ್ಲಿ ಸೂಕ್ತವಾದ ಗುರುತಿನ ಚೀಟಿಗಳನ್ನು ಒದಗಿಸಿದ್ದಾಗ್ಯೂ ಕೂಡ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಎಂದು ತಿಳಿಸಲಾಗಿದೆ.

“ಎಸ್‌ಐಆರ್ ಪ್ರಕ್ರಿಯೆಯಿಂದ ಮುಸ್ಲಿಂ ಮತದಾರರು ಅತಿ ಹೆಚ್ಚು ಪ್ರಮಾಣದಲ್ಲಿ ತೊಂದರೆಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ನಂದಿಗ್ರಾಮ್ ಎಂಬ ಒಂದು ಕ್ಷೇತ್ರದಲ್ಲಿ, ಮುಸ್ಲಿಮರು ಆ ಕ್ಷೇತ್ರದ ಒಟ್ಟು ಮತದಾರರಲ್ಲಿ ಕೇವಲ ಶೇಕಡಾ 25 ರಷ್ಟು ಮಾತ್ರ ಇದ್ದಾಗ್ಯೂ, ಮತದಾರರ ಪಟ್ಟಿಯಿಂದ ಅಳಿಸಿಹಾಕಲಾದ ಮತದಾರರಲ್ಲಿ ಶೇಕಡಾ 95 ರಷ್ಟು ಮುಸ್ಲಿಮರಾಗಿದ್ದಾರೆ ಎಂದು ಆರೋಪಿಸಲಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ, “ಎಸ್‌ಐಆರ್ ಪ್ರಕ್ರಿಯೆಯಿಂದ ಮುಸ್ಲಿಂ ಮತದಾರರ ಮೇಲೆ ಅಸಮಾನವಾದ ಪರಿಣಾಮ ಬೀರಿದೆ ಎಂದು ವರದಿಯಾಗಿದೆ” ಎಂದು ಹೇಳಲಾಗಿದೆ.

ಮತದಾರರ ದತ್ತಾಂಶದಲ್ಲಿನ (ಡೇಟಾ) ‘ಅಕ್ರಮಗಳನ್ನು’ ಗುರುತಿಸಲು ಪರಿಷ್ಕರಣಾ ಪ್ರಕ್ರಿಯೆಯ ಸಮಯದಲ್ಲಿ ಕೃತಕ ಬುದ್ಧಿಮತ್ತೆಯನ್ನು (ಎಐ) ಬಳಸಲಾಗಿದೆ ಎಂದು ವರದಿಯಾಗಿರುವುದರ ಬಗ್ಗೆಯೂ ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ಇದು “ಪಾರದರ್ಶಕತೆ, ದೋಷಗಳು ಮತ್ತು ಸಂಭಾವ್ಯ ಪಕ್ಷಪಾತದ ಕುರಿತು ಕಳವಳವನ್ನು ಮೂಡಿಸಿದೆ” ಎಂದು ತಿಳಿಸಲಾಗಿದೆ.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೃತಕ ಬುದ್ಧಿಮತ್ತೆ ಚಾಲಿತ ವ್ಯವಸ್ಥೆಗಳ ಬಳಕೆಯು ಕಾನೂನುಬದ್ಧ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಅಪಾಯವನ್ನು ಹೊಂದಿದೆ, ಪ್ರಜಾಪ್ರಭುತ್ವದ ನ್ಯಾಯಸಮ್ಮತತೆಯನ್ನು ಕುಂದಿಸುತ್ತದೆ ಮತ್ತು ಇಂತಹ ಅತ್ಯಂತ ನಿರ್ಣಾಯಕ ಸಂದರ್ಭದಲ್ಲಿ ಸ್ವಯಂಚಾಲಿತ ನಿರ್ಧಾರ ತೆಗೆದುಕೊಳ್ಳುವಿಕೆಯ ವಿಶ್ವಾಸಾರ್ಹತೆಯ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಪರಿಷ್ಕರಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಸರ್ಕಾರದ ಹಿರಿಯ ನಾಯಕರು ನೀಡಿದ್ದಾರೆ ಎನ್ನಲಾದ ಹೇಳಿಕೆಗಳ ಬಗ್ಗೆಯೂ ವಿಶ್ವಸಂಸ್ಥೆಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಪ್ರಕ್ರಿಯೆಯನ್ನು “ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು” ಗುರಿಯಾಗಿಸಿಕೊಂಡು ಮಾಡಲಾಗುತ್ತಿದೆ ಎಂದು ಬಿಂಬಿಸುವ ರಾಜಕೀಯ ಭಾಷಣಗಳು, ಭಾರತೀಯ ಮುಸ್ಲಿಂ ನಾಗರಿಕರನ್ನು ವಿದೇಶಿ ಪ್ರಜೆಗಳೊಂದಿಗೆ ಸೇರಿಸುವ ಅಪಾಯವನ್ನು ಹೊಂದಿವೆ ಮತ್ತು ಇದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನಡಿಯಲ್ಲಿ ತಾರತಮ್ಯದ ಭಾಷಣಕ್ಕೆ ಸಮನಾಗುತ್ತದೆ ಎಂದು ಹೇಳಿದ್ದಾರೆ.

ಈ ಅಧಿಕೃತ ಪತ್ರ ಮತ್ತು ಇದಕ್ಕೆ ಭಾರತ ಸರ್ಕಾರ ನೀಡುವ ಯಾವುದೇ ಪ್ರತಿಕ್ರಿಯೆಯನ್ನು 60 ದಿನಗಳ ನಂತರ ಸಾರ್ವಜನಿಕವಾಗಿ ಪ್ರಕಟಿಸಲಾಗುವುದು, ಅಥವಾ ಒಂದು ವೇಳೆ ಸರ್ಕಾರವು ಅದಕ್ಕಿಂತ ಮುಂಚಿತವಾಗಿಯೇ ಉತ್ತರಿಸಿದರೆ ತಕ್ಷಣವೇ ಬಹಿರಂಗಪಡಿಸಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಮತದಾರರ ಪಟ್ಟಿಗಳಿಂದ ಜನಾಂಗೀಯ, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರನ್ನು ಕೈಬಿಡುವಲ್ಲಿ ಭಾರತೀಯ ಚುನಾವಣಾ ಆಯೋಗದ (ಇಸಿಐ) ಪಾತ್ರ ಹಾಗೂ ಎನ್‌ಆರ್‌ಸಿ ಕುರಿತು ಕಳವಳ ವ್ಯಕ್ತಪಡಿಸಿ ವಿಶ್ವಸಂಸ್ಥೆಯ ವರದಿಗಾರರು ಈ ಹಿಂದೆ 2018ರಲ್ಲೂ ಪತ್ರ ಬರೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...