Homeಮುಖಪುಟಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

- Advertisement -
- Advertisement -

ಎನ್ ಆರ್ ಸಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟಿನೆ ನಡೆಸಿದ್ದಕ್ಕಾಗಿ ಭಾರತದಲ್ಲಿ ಬಂಧಿಸಲಾಗಿರುವ ಹಲವಾರು ಸಾಮಾಜಿಕ ಕಾರ್ಯಕರ್ತರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

“ಸಿಎಎಯ ತಾರತಮ್ಯ ಸ್ವರೂಪವನ್ನು ಟೀಕಿಸಿರುವ ಭಾಷಣಗಳ ಕ್ಷುಲ್ಲಕ ಆಧಾರದ ಮೇಲೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಬಂಧಿಸಲಾಗಿರುವ ಮತ್ತು ವಿಚಾರಣಾ ಪೂರ್ವ ಬಂಧನದಲ್ಲಿರುವ ಎಲ್ಲಾ ಮಾನವ ಹಕ್ಕುಗಳ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು” ಎಂದು ವಿಶ್ವಸಂಸ್ಥೆಯ ಅಧಿಕಾರಿಗಳು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಈ ಹೇಳಿಕೆಯಲ್ಲಿ ಮೀರನ್ ಹೈದರ್, ಗುಲ್ಫಿಶಾ ಫಾತಿಮಾ, ಸಫೂರಾ ಜರ್ಗರ್, ಆಸಿಫ್ ಇಕ್ಬಾಲ್ ತನ್ಹಾ, ದೇವಂಗಾನಾ ಕಲಿತಾ, ನತಾಶಾ ನರ್ವಾಲ್, ಖಾಲಿದ್ ಸೈಫಿ, ಶಿಫಾ ಉರ್ ರೆಹಮಾನ್, ಡಾ. ಕಫೀಲ್‌ ಖಾನ್, ಸರ್ಜಿಲ್‌ ಇಮಾಮ್ ಮತ್ತು ಅಖಿಲ್ ಗೊಗೋಯ್‌ ಅವರ 11 ಹೆಸರುಗಳನ್ನು ನಮೂದಿಸಲಾಗಿದ್ದು ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.

“ಈ ಪ್ರತಿಭಟನಾಕಾರರಲ್ಲಿ ಅನೇಕರು ವಿದ್ಯರ್ಥಿಗಳಾಗಿದ್ದಾರೆ. ಸಿಎಎ ತಾರತಮ್ಯವನ್ನು ಖಂಡಿಸುವ ಮತ್ತು ಪ್ರತಿಭಟಿಸುವ ಹಕ್ಕನ್ನು ಚಲಾಯಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ. ಇದು ಸರ್ಕಾರವು ತನ್ನ ವಿರುದ್ಧ ಪ್ರಶ್ನೆ ಮಾಡುವುದನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದಂತಿದೆ. ಪ್ರಶ್ನೆಗಳನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ” ಎಂದು ವಿಶ್ವಸಂಸ್ಥೆ ಅಭಿಪ್ರಾಯ ಪಟ್ಟಿದೆ.

ಯುಎನ್ ಪ್ರಸ್ತಾಪಿಸಿದ 11 ವ್ಯಕ್ತಿಗಳಲ್ಲಿ, ಗೊಗೊಯ್, ಇಮಾಮ್, ರೆಹಮಾನ್, ಕಲಿತಾ, ನಾರ್ವಾಲ್, ತನ್ಹಾ, ಫಾತಿಮಾ ಮತ್ತು ಹೈದರ್ ವಿರುದ್ಧ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಿಸಿದ್ದಾರೆ.

ಸಿಎಎ ವಿರೋಧಿ ಮತ್ತು ಬೆಂಬಲಿತ ಪ್ರತಿಭಟನೆಗಳಲ್ಲಿ ಸರ್ಕಾರ ತಾರತಮ್ಯ ಎಸಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಸಿಎಎ ಬೆಂಬಲಿಗರ ವಿರುದ್ಧ ಮಾಡಿರುವ ದ್ವೇಷ ಮತ್ತು ಹಿಂಸಾಚಾರದ ಆರೋಪಗಳನ್ನು ಅಧಿಕಾರಿಗಳು ತನಿಖೆ ಮಾಡಿಲ್ಲ. “ಭಾರತೀಯ ಕಾರಾಗೃಹಗಳಲ್ಲಿ ವೈರಸ್ ಹರಡಿದೆ ಎಂದು ವರದಿಯಾಗಿದೆ. ಇಂತಹ ಸಂದರ್ಭದಲ್ಲಿ ಮಾನವ ಹಕ್ಕು ಹೋರಾಟಗಾರರನ್ನು ತುರ್ತಾಗಿ ಬಿಡುಗಡೆಗೊಳಿಬೇಕು ಎಂದು ವಿಶ್ವಸಂಸ್ಥೆ ಅಧಿಕಾರಿಗಳ ತಂಡ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...