Homeಮುಖಪುಟಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

- Advertisement -
- Advertisement -

ಎನ್ ಆರ್ ಸಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟಿನೆ ನಡೆಸಿದ್ದಕ್ಕಾಗಿ ಭಾರತದಲ್ಲಿ ಬಂಧಿಸಲಾಗಿರುವ ಹಲವಾರು ಸಾಮಾಜಿಕ ಕಾರ್ಯಕರ್ತರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

“ಸಿಎಎಯ ತಾರತಮ್ಯ ಸ್ವರೂಪವನ್ನು ಟೀಕಿಸಿರುವ ಭಾಷಣಗಳ ಕ್ಷುಲ್ಲಕ ಆಧಾರದ ಮೇಲೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಬಂಧಿಸಲಾಗಿರುವ ಮತ್ತು ವಿಚಾರಣಾ ಪೂರ್ವ ಬಂಧನದಲ್ಲಿರುವ ಎಲ್ಲಾ ಮಾನವ ಹಕ್ಕುಗಳ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು” ಎಂದು ವಿಶ್ವಸಂಸ್ಥೆಯ ಅಧಿಕಾರಿಗಳು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಈ ಹೇಳಿಕೆಯಲ್ಲಿ ಮೀರನ್ ಹೈದರ್, ಗುಲ್ಫಿಶಾ ಫಾತಿಮಾ, ಸಫೂರಾ ಜರ್ಗರ್, ಆಸಿಫ್ ಇಕ್ಬಾಲ್ ತನ್ಹಾ, ದೇವಂಗಾನಾ ಕಲಿತಾ, ನತಾಶಾ ನರ್ವಾಲ್, ಖಾಲಿದ್ ಸೈಫಿ, ಶಿಫಾ ಉರ್ ರೆಹಮಾನ್, ಡಾ. ಕಫೀಲ್‌ ಖಾನ್, ಸರ್ಜಿಲ್‌ ಇಮಾಮ್ ಮತ್ತು ಅಖಿಲ್ ಗೊಗೋಯ್‌ ಅವರ 11 ಹೆಸರುಗಳನ್ನು ನಮೂದಿಸಲಾಗಿದ್ದು ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.

“ಈ ಪ್ರತಿಭಟನಾಕಾರರಲ್ಲಿ ಅನೇಕರು ವಿದ್ಯರ್ಥಿಗಳಾಗಿದ್ದಾರೆ. ಸಿಎಎ ತಾರತಮ್ಯವನ್ನು ಖಂಡಿಸುವ ಮತ್ತು ಪ್ರತಿಭಟಿಸುವ ಹಕ್ಕನ್ನು ಚಲಾಯಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ. ಇದು ಸರ್ಕಾರವು ತನ್ನ ವಿರುದ್ಧ ಪ್ರಶ್ನೆ ಮಾಡುವುದನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದಂತಿದೆ. ಪ್ರಶ್ನೆಗಳನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ” ಎಂದು ವಿಶ್ವಸಂಸ್ಥೆ ಅಭಿಪ್ರಾಯ ಪಟ್ಟಿದೆ.

ಯುಎನ್ ಪ್ರಸ್ತಾಪಿಸಿದ 11 ವ್ಯಕ್ತಿಗಳಲ್ಲಿ, ಗೊಗೊಯ್, ಇಮಾಮ್, ರೆಹಮಾನ್, ಕಲಿತಾ, ನಾರ್ವಾಲ್, ತನ್ಹಾ, ಫಾತಿಮಾ ಮತ್ತು ಹೈದರ್ ವಿರುದ್ಧ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಿಸಿದ್ದಾರೆ.

ಸಿಎಎ ವಿರೋಧಿ ಮತ್ತು ಬೆಂಬಲಿತ ಪ್ರತಿಭಟನೆಗಳಲ್ಲಿ ಸರ್ಕಾರ ತಾರತಮ್ಯ ಎಸಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಸಿಎಎ ಬೆಂಬಲಿಗರ ವಿರುದ್ಧ ಮಾಡಿರುವ ದ್ವೇಷ ಮತ್ತು ಹಿಂಸಾಚಾರದ ಆರೋಪಗಳನ್ನು ಅಧಿಕಾರಿಗಳು ತನಿಖೆ ಮಾಡಿಲ್ಲ. “ಭಾರತೀಯ ಕಾರಾಗೃಹಗಳಲ್ಲಿ ವೈರಸ್ ಹರಡಿದೆ ಎಂದು ವರದಿಯಾಗಿದೆ. ಇಂತಹ ಸಂದರ್ಭದಲ್ಲಿ ಮಾನವ ಹಕ್ಕು ಹೋರಾಟಗಾರರನ್ನು ತುರ್ತಾಗಿ ಬಿಡುಗಡೆಗೊಳಿಬೇಕು ಎಂದು ವಿಶ್ವಸಂಸ್ಥೆ ಅಧಿಕಾರಿಗಳ ತಂಡ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....