Homeಮುಖಪುಟಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

- Advertisement -
- Advertisement -

ಎನ್ ಆರ್ ಸಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟಿನೆ ನಡೆಸಿದ್ದಕ್ಕಾಗಿ ಭಾರತದಲ್ಲಿ ಬಂಧಿಸಲಾಗಿರುವ ಹಲವಾರು ಸಾಮಾಜಿಕ ಕಾರ್ಯಕರ್ತರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವಸಂಸ್ಥೆ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದೆ.

“ಸಿಎಎಯ ತಾರತಮ್ಯ ಸ್ವರೂಪವನ್ನು ಟೀಕಿಸಿರುವ ಭಾಷಣಗಳ ಕ್ಷುಲ್ಲಕ ಆಧಾರದ ಮೇಲೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಬಂಧಿಸಲಾಗಿರುವ ಮತ್ತು ವಿಚಾರಣಾ ಪೂರ್ವ ಬಂಧನದಲ್ಲಿರುವ ಎಲ್ಲಾ ಮಾನವ ಹಕ್ಕುಗಳ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು” ಎಂದು ವಿಶ್ವಸಂಸ್ಥೆಯ ಅಧಿಕಾರಿಗಳು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಈ ಹೇಳಿಕೆಯಲ್ಲಿ ಮೀರನ್ ಹೈದರ್, ಗುಲ್ಫಿಶಾ ಫಾತಿಮಾ, ಸಫೂರಾ ಜರ್ಗರ್, ಆಸಿಫ್ ಇಕ್ಬಾಲ್ ತನ್ಹಾ, ದೇವಂಗಾನಾ ಕಲಿತಾ, ನತಾಶಾ ನರ್ವಾಲ್, ಖಾಲಿದ್ ಸೈಫಿ, ಶಿಫಾ ಉರ್ ರೆಹಮಾನ್, ಡಾ. ಕಫೀಲ್‌ ಖಾನ್, ಸರ್ಜಿಲ್‌ ಇಮಾಮ್ ಮತ್ತು ಅಖಿಲ್ ಗೊಗೋಯ್‌ ಅವರ 11 ಹೆಸರುಗಳನ್ನು ನಮೂದಿಸಲಾಗಿದ್ದು ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದೆ.

“ಈ ಪ್ರತಿಭಟನಾಕಾರರಲ್ಲಿ ಅನೇಕರು ವಿದ್ಯರ್ಥಿಗಳಾಗಿದ್ದಾರೆ. ಸಿಎಎ ತಾರತಮ್ಯವನ್ನು ಖಂಡಿಸುವ ಮತ್ತು ಪ್ರತಿಭಟಿಸುವ ಹಕ್ಕನ್ನು ಚಲಾಯಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ. ಇದು ಸರ್ಕಾರವು ತನ್ನ ವಿರುದ್ಧ ಪ್ರಶ್ನೆ ಮಾಡುವುದನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದಂತಿದೆ. ಪ್ರಶ್ನೆಗಳನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ” ಎಂದು ವಿಶ್ವಸಂಸ್ಥೆ ಅಭಿಪ್ರಾಯ ಪಟ್ಟಿದೆ.

ಯುಎನ್ ಪ್ರಸ್ತಾಪಿಸಿದ 11 ವ್ಯಕ್ತಿಗಳಲ್ಲಿ, ಗೊಗೊಯ್, ಇಮಾಮ್, ರೆಹಮಾನ್, ಕಲಿತಾ, ನಾರ್ವಾಲ್, ತನ್ಹಾ, ಫಾತಿಮಾ ಮತ್ತು ಹೈದರ್ ವಿರುದ್ಧ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಿಸಿದ್ದಾರೆ.

ಸಿಎಎ ವಿರೋಧಿ ಮತ್ತು ಬೆಂಬಲಿತ ಪ್ರತಿಭಟನೆಗಳಲ್ಲಿ ಸರ್ಕಾರ ತಾರತಮ್ಯ ಎಸಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

ಸಿಎಎ ಬೆಂಬಲಿಗರ ವಿರುದ್ಧ ಮಾಡಿರುವ ದ್ವೇಷ ಮತ್ತು ಹಿಂಸಾಚಾರದ ಆರೋಪಗಳನ್ನು ಅಧಿಕಾರಿಗಳು ತನಿಖೆ ಮಾಡಿಲ್ಲ. “ಭಾರತೀಯ ಕಾರಾಗೃಹಗಳಲ್ಲಿ ವೈರಸ್ ಹರಡಿದೆ ಎಂದು ವರದಿಯಾಗಿದೆ. ಇಂತಹ ಸಂದರ್ಭದಲ್ಲಿ ಮಾನವ ಹಕ್ಕು ಹೋರಾಟಗಾರರನ್ನು ತುರ್ತಾಗಿ ಬಿಡುಗಡೆಗೊಳಿಬೇಕು ಎಂದು ವಿಶ್ವಸಂಸ್ಥೆ ಅಧಿಕಾರಿಗಳ ತಂಡ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...