Homeದಲಿತ್ ಫೈಲ್ಸ್ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 42 ಆರೋಪಿಗಳಲ್ಲಿ ಐವರನ್ನು ದೋಷಿಗಳು ಹೇಳಿದೆ. ಇತರ 37 ಜನರನ್ನು ಖುಲಾಸೆಗೊಳಿಸಿದ್ದು, ಪ್ರಕರಣದ ಇಬ್ಬರು ಆರೋಪಿಗಳು ವಿಚಾರಣಾ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ.

ಶಿಕ್ಷೆಗೊಳಗಾದ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ. ತಪ್ಪಿತಸ್ಥರೆಂದು ಸಾಬೀತಾದ ಐದು ಆರೋಪಿಗಳು ರಮೇಶ್ ಜಾದವ್, ರಾಕೇಶ್ ಜೋಶಿ, ಪ್ರಮೋದ್ ಗೋಸ್ವಾಮಿ, ನಾಗ್ಜಿ ದಯಾ ಮತ್ತು ಬಲವಂತ್ ಗೋಸ್ವಾಮಿ.

ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಸೇರಿದಂತೆ 37 ಆರೋಪಿಗಳು ಖುಲಾಸೆಗೊಂಡಿದ್ದಾರೆ. ಖುಲಾಸೆಗೊಂಡ ಪೊಲೀಸ್ ಸಿಬ್ಬಂದಿಗಳಲ್ಲಿ ಕಾಂಚನ್‌ಬೆನ್, ಆಗ ಪಿಎಸ್‌ಐ ಪಾಂಡೆ, ಆಗ ಉನಾ ಪಿಎಸ್‌ಒ ಕರ್ಶನ್‌ಭಾಯ್ ಮತ್ತು ನಿರ್ಮಲ್ ಜಲಾ ಸೇರಿದ್ದಾರೆ, ಅವರಲ್ಲಿ ಕೊನೆಯವರು ಈಗ ನಿಧನರಾಗಿದ್ದಾರೆ.

ದೇಶವನ್ನು ತಲ್ಲಣಗೊಳಿಸಿದ್ದ ಊನಾ ಘಟನೆ

ಜುಲೈ 11, 2016ರಂದು ’ಗಿರ್ ಸೋಮನಾಥ’ ಜಿಲ್ಲೆಯ ’ಊನಾ’ದ ಬಳಿಯಲ್ಲಿರುವ ’ಮೋಟ ಸಮಾಧಿಯಾಲ’ ಎಂಬ ಹಳ್ಳಿಯಲ್ಲಿ ಸತ್ತ ದನದ ಚರ್ಮವನ್ನು ತಲತಲಾಂತರದಿಂದ ಸುಲಿಯುವ ದಲಿತ ಕುಟುಂಬದ ಏಳು ಯುವಕರು ಎಂದಿನಂತೆ ತಮ್ಮ ಕಾಯಕ ಮಾಡುತ್ತಿದ್ದರು. ಆ ಸತ್ತ ದನವನ್ನವರು ಬೇಡಿಯಾ ಜಿಲ್ಲೆಯಿಂದ ತಂದಿದ್ದರು. ಆಗ ಅಲ್ಲಿಗೆ ಎರಡು ಕಾರಿನಲ್ಲಿ ಬಂದ ಒಂದಷ್ಟು ಜನ ಕೆಳಗಿಳಿದು ಅವರ ಬಳಿ ಬಂದು ’ನಾವು ಗೋ ರಕ್ಷಕರು’ ಎಂದರು. ’ದನವನ್ನು ಕೊಂದು ಚರ್ಮ ಸುಲಿಯುತ್ತಿದ್ದೀರಿ’ ಎಂದು ದಲಿತರ ಮೇಲೆ ಆರೋಪ ಹೊರಿಸಿದರು. ಆ ದಲಿತ ಯುವಕರು ’ತಾವು ಸತ್ತ ದನದ ಚರ್ಮ ಸುಲಿಯುತ್ತಿರುವುದಾಗಿ’ ಎಷ್ಟೇ ಹೇಳಿದರೂ ಧರ್ಮಾಂಧತೆಯ ಅಮಲಿನಲ್ಲಿದ್ದ ಆ ಗೋ ರಕ್ಷಕರೆಂಬ ಭಯೋತ್ಪಾದಕರು ಏಳು ಜನ ದಲಿತರನ್ನೂ ಕಾರಿಗೆ ಕಟ್ಟಿಹಾಕಿ ದೊಣ್ಣೆ ಹಾಗೂ ಕಬ್ಬಿಣದ ರಾಡ್‌ನಿಂದ ಮನಸೋ ಇಚ್ಛ ಥಳಿಸಿದರು. ಅದಷ್ಟಕ್ಕೆ ಅವರ ವಿಕೃತಿ ಸಮಾಧಾನವಾಗಲಿಲ್ಲ. ಎರಡೂ ಕಾರಿನಲ್ಲಿ ನಾಲ್ವರನ್ನು ತುಂಬಿಕೊಂಡು ಊನಾ ಪಟ್ಟಣಕ್ಕೆ ಬಂದರು. ಅಲ್ಲಿ ಬೃಹತ್ ಸರ್ಕಲ್‌ನಲ್ಲಿ ಬಟ್ಟೆ ಬಿಚ್ಚಿ ಬೆತ್ತಲಾಗಿಸಿ ಮತ್ತೆ ಥಳಿಸಿದರು. ಇದನ್ನು ತಮ್ಮ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡಿಕೊಂಡರು. ಪೊಲೀಸರು ಅಲ್ಲಿಗೆ ಬರುವುದನ್ನು ಕಂಡು ಗೋರಕ್ಷಕ ಭಯೋತ್ಪಾದಕರು ನಂತರ ಓಡಿಹೋದರು.

ನಂತರ ಆ ಏಳು ದಲಿತರಿಗೆ ಊನಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಮೇಲೆ ಹೆಚ್ಚಿನ ಚಿಕಿತ್ಸೆಗೆ ರಾಜಕೋಟ್‌ನ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಯಿತು. ಸೋಷಿಯಲ್ ಮೀಡಿಯಾದಲ್ಲಿ ದಲಿತರನ್ನು ಮಾರಣಾಂತಿಕವಾಗಿ ಥಳಿಸಿದ್ದ ವಿಡಿಯೋ ಇಡೀ ಗುಜರಾತಿನ ದಲಿತರ ನಿದ್ದೆಗೆಡಿಸಿತು. ರಾಜ್ಯಾದ್ಯಂತ ಸರಣಿ ಹೋರಾಟಗಳು ಜರುಗಿದವು. ಜುಲೈ 12ರಂದೇ ಗುಜರಾತಿನ ಅಹಮದಾಬಾದ್‌ನಲ್ಲಿ ಹಲವು ದಲಿತ ನಾಯಕರು ಬೀದಿಗಿಳಿದ ಪರಿಣಾಮ ದಲಿತ ಯುವಕರು ಸಿಟ್ಟಿಗೆದ್ದು ಪ್ರತಿಭಟಿಸಿದರು. ರಾಜ್ಯ ಹೆದ್ದಾರಿಯನ್ನು ತಡೆಹಿಡಿದರು. ಸತ್ತ ಪ್ರಾಣಿಗಳ ಕಳೇಬರಗಳನ್ನು ಸರ್ಕಾರಿ ಕಚೇರಿಗಳ ಮುಂದೆ ಎಸೆದರು. ರಸ್ತೆರಸ್ತೆಯಲ್ಲಿ ಕಳೇಬರಗಳನ್ನು ಬಿಸಾಡಿದರು. ಅಕ್ಷರಶಃ ಗುಜರಾತ್ ಒಂದು ವಾರ ಗಬ್ಬು ನಾರುತ್ತಿತ್ತು. ದಲಿತರು ರೊಚ್ಚಿಗೆದ್ದರೆ ಆಗುವ ಪರಿಣಾಮವನ್ನು ಗುಜರಾತ್ ಕಂಡಿತ್ತು. 12 ದಲಿತ ಯುವಕರು ಆತ್ಮಹತ್ಯೆಗೆ ಪ್ರಯತ್ನಿಸಿದರು. ಅದರಲ್ಲಿ ಒಬ್ಬ ಯುವಕ ಅಸುನೀಗಿದನು. ಇದರ ಪರಿಣಾಮವಾಗಿ ಜುಲೈ 21ರಂದು ರಾಜ್ಯಸಭೆಯಲ್ಲಿ ಈ ಘಟನೆ ಪ್ರತಿಧ್ವನಿಸಿತು.

ದಲಿತ ಯುವಕ ಜಿಗ್ನೇಶ್ ಮೆವಾನಿ ನೇತೃತ್ವದಲ್ಲಿ ಆಗಸ್ಟ್ 15, 2016ರ ಸ್ವಾತಂತ್ರ್ಯ ದಿನಾಚರಣೆಯಂದು ಅಹಮದಾಬಾದ್‌ನಿಂದ ಊನಾದವರೆಗೆ ದಲಿತ ಅಸ್ಮಿತೆ ಯಾತ್ರೆಯನ್ನು ಕೈಗೊಳ್ಳಲಾಯಿತು. ಈ ಯಾತ್ರೆಯಲ್ಲಿ ಸುಮಾರು 20,000 ಹೋರಾಟಗಾರರು ಭಾಗವಹಿಸಿದ್ದರು. ಅತಿ ಪ್ರಮುಖವಾಗಿ ಈ ಯಾತ್ರೆಯಲ್ಲಿ ಭಾಗವಹಿಸಿದ್ದ ದಲಿತರು ’ಇನ್ನು ಮುಂದೆ ಸಾಂಪ್ರದಾಯಿಕ ವೃತ್ತಿಯಾದ ಸತ್ತ ಪ್ರಾಣಿಗಳ ಕಳೇಬರವನ್ನು ವಿಲೇವಾರಿ ಮಾಡುವ ಕಾಯಕವನ್ನು ಮಾಡಲಾರೆವು’ ಎಂಬ ಪ್ರತಿಜ್ಞೆಯನ್ನು ಕೈಗೊಂಡರು. ಆ ಹೋರಾಟದಲ್ಲಿಯೇ ’ದಲಿತರಿಗೆ ಉಳುಮೆ ಮಾಡಲು ಭೂಮಿ ಕೊಡಿ’ ಎಂಬ ಘೋಷವಾಕ್ಯವೂ ಮೊಳಗಿತು. ಬರೋಬ್ಬರಿ ಹತ್ತು ದಿನಗಳು ನಡೆದ ಈ ಯಾತ್ರೆಯಿಂದ ಮನೆಗೆ ಮರಳುತ್ತಿದ್ದಾಗ ದಲಿತರ ಮೇಲೆ ಬಾಂಬ್ ದಾಳಿ ಮಾಡಲಾಯಿತು. 10 ಜನರು ಗಂಭೀರವಾಗಿ ಗಾಯಗೊಂಡರು. ಆಶ್ಚರ್ಯವೆಂದರೆ ಅಲ್ಲಿನ ಬಿಜೆಪಿ ಸರ್ಕಾರ ದಲಿತರ ಮೇಲೆ ಬಾಂಬು ಹಾಕಿದವರನ್ನು ಬಂಧಿಸದೇ, ಅದನ್ನು ಸುಳ್ಳು ಸುದ್ದಿಯೆಂದು ಪ್ರಚಾರಮಾಡಿತು. ಮುಂದುವರೆದು ದಲಿತರ ಮೇಲೆಯೇ 74 ಕೇಸುಗಳನ್ನು ದಾಖಲಿಸಿತು. ಮುಂದುವರೆದು ದಲಿತರ ಮೇಲೆಯೇ 74 ಕೇಸುಗಳನ್ನು ದಾಖಲಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...