Homeದಲಿತ್ ಫೈಲ್ಸ್ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 42 ಆರೋಪಿಗಳಲ್ಲಿ ಐವರನ್ನು ದೋಷಿಗಳು ಹೇಳಿದೆ. ಇತರ 37 ಜನರನ್ನು ಖುಲಾಸೆಗೊಳಿಸಿದ್ದು, ಪ್ರಕರಣದ ಇಬ್ಬರು ಆರೋಪಿಗಳು ವಿಚಾರಣಾ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ.

ಶಿಕ್ಷೆಗೊಳಗಾದ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ. ತಪ್ಪಿತಸ್ಥರೆಂದು ಸಾಬೀತಾದ ಐದು ಆರೋಪಿಗಳು ರಮೇಶ್ ಜಾದವ್, ರಾಕೇಶ್ ಜೋಶಿ, ಪ್ರಮೋದ್ ಗೋಸ್ವಾಮಿ, ನಾಗ್ಜಿ ದಯಾ ಮತ್ತು ಬಲವಂತ್ ಗೋಸ್ವಾಮಿ.

ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಸೇರಿದಂತೆ 37 ಆರೋಪಿಗಳು ಖುಲಾಸೆಗೊಂಡಿದ್ದಾರೆ. ಖುಲಾಸೆಗೊಂಡ ಪೊಲೀಸ್ ಸಿಬ್ಬಂದಿಗಳಲ್ಲಿ ಕಾಂಚನ್‌ಬೆನ್, ಆಗ ಪಿಎಸ್‌ಐ ಪಾಂಡೆ, ಆಗ ಉನಾ ಪಿಎಸ್‌ಒ ಕರ್ಶನ್‌ಭಾಯ್ ಮತ್ತು ನಿರ್ಮಲ್ ಜಲಾ ಸೇರಿದ್ದಾರೆ, ಅವರಲ್ಲಿ ಕೊನೆಯವರು ಈಗ ನಿಧನರಾಗಿದ್ದಾರೆ.

ದೇಶವನ್ನು ತಲ್ಲಣಗೊಳಿಸಿದ್ದ ಊನಾ ಘಟನೆ

ಜುಲೈ 11, 2016ರಂದು ’ಗಿರ್ ಸೋಮನಾಥ’ ಜಿಲ್ಲೆಯ ’ಊನಾ’ದ ಬಳಿಯಲ್ಲಿರುವ ’ಮೋಟ ಸಮಾಧಿಯಾಲ’ ಎಂಬ ಹಳ್ಳಿಯಲ್ಲಿ ಸತ್ತ ದನದ ಚರ್ಮವನ್ನು ತಲತಲಾಂತರದಿಂದ ಸುಲಿಯುವ ದಲಿತ ಕುಟುಂಬದ ಏಳು ಯುವಕರು ಎಂದಿನಂತೆ ತಮ್ಮ ಕಾಯಕ ಮಾಡುತ್ತಿದ್ದರು. ಆ ಸತ್ತ ದನವನ್ನವರು ಬೇಡಿಯಾ ಜಿಲ್ಲೆಯಿಂದ ತಂದಿದ್ದರು. ಆಗ ಅಲ್ಲಿಗೆ ಎರಡು ಕಾರಿನಲ್ಲಿ ಬಂದ ಒಂದಷ್ಟು ಜನ ಕೆಳಗಿಳಿದು ಅವರ ಬಳಿ ಬಂದು ’ನಾವು ಗೋ ರಕ್ಷಕರು’ ಎಂದರು. ’ದನವನ್ನು ಕೊಂದು ಚರ್ಮ ಸುಲಿಯುತ್ತಿದ್ದೀರಿ’ ಎಂದು ದಲಿತರ ಮೇಲೆ ಆರೋಪ ಹೊರಿಸಿದರು. ಆ ದಲಿತ ಯುವಕರು ’ತಾವು ಸತ್ತ ದನದ ಚರ್ಮ ಸುಲಿಯುತ್ತಿರುವುದಾಗಿ’ ಎಷ್ಟೇ ಹೇಳಿದರೂ ಧರ್ಮಾಂಧತೆಯ ಅಮಲಿನಲ್ಲಿದ್ದ ಆ ಗೋ ರಕ್ಷಕರೆಂಬ ಭಯೋತ್ಪಾದಕರು ಏಳು ಜನ ದಲಿತರನ್ನೂ ಕಾರಿಗೆ ಕಟ್ಟಿಹಾಕಿ ದೊಣ್ಣೆ ಹಾಗೂ ಕಬ್ಬಿಣದ ರಾಡ್‌ನಿಂದ ಮನಸೋ ಇಚ್ಛ ಥಳಿಸಿದರು. ಅದಷ್ಟಕ್ಕೆ ಅವರ ವಿಕೃತಿ ಸಮಾಧಾನವಾಗಲಿಲ್ಲ. ಎರಡೂ ಕಾರಿನಲ್ಲಿ ನಾಲ್ವರನ್ನು ತುಂಬಿಕೊಂಡು ಊನಾ ಪಟ್ಟಣಕ್ಕೆ ಬಂದರು. ಅಲ್ಲಿ ಬೃಹತ್ ಸರ್ಕಲ್‌ನಲ್ಲಿ ಬಟ್ಟೆ ಬಿಚ್ಚಿ ಬೆತ್ತಲಾಗಿಸಿ ಮತ್ತೆ ಥಳಿಸಿದರು. ಇದನ್ನು ತಮ್ಮ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡಿಕೊಂಡರು. ಪೊಲೀಸರು ಅಲ್ಲಿಗೆ ಬರುವುದನ್ನು ಕಂಡು ಗೋರಕ್ಷಕ ಭಯೋತ್ಪಾದಕರು ನಂತರ ಓಡಿಹೋದರು.

ನಂತರ ಆ ಏಳು ದಲಿತರಿಗೆ ಊನಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಮೇಲೆ ಹೆಚ್ಚಿನ ಚಿಕಿತ್ಸೆಗೆ ರಾಜಕೋಟ್‌ನ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಯಿತು. ಸೋಷಿಯಲ್ ಮೀಡಿಯಾದಲ್ಲಿ ದಲಿತರನ್ನು ಮಾರಣಾಂತಿಕವಾಗಿ ಥಳಿಸಿದ್ದ ವಿಡಿಯೋ ಇಡೀ ಗುಜರಾತಿನ ದಲಿತರ ನಿದ್ದೆಗೆಡಿಸಿತು. ರಾಜ್ಯಾದ್ಯಂತ ಸರಣಿ ಹೋರಾಟಗಳು ಜರುಗಿದವು. ಜುಲೈ 12ರಂದೇ ಗುಜರಾತಿನ ಅಹಮದಾಬಾದ್‌ನಲ್ಲಿ ಹಲವು ದಲಿತ ನಾಯಕರು ಬೀದಿಗಿಳಿದ ಪರಿಣಾಮ ದಲಿತ ಯುವಕರು ಸಿಟ್ಟಿಗೆದ್ದು ಪ್ರತಿಭಟಿಸಿದರು. ರಾಜ್ಯ ಹೆದ್ದಾರಿಯನ್ನು ತಡೆಹಿಡಿದರು. ಸತ್ತ ಪ್ರಾಣಿಗಳ ಕಳೇಬರಗಳನ್ನು ಸರ್ಕಾರಿ ಕಚೇರಿಗಳ ಮುಂದೆ ಎಸೆದರು. ರಸ್ತೆರಸ್ತೆಯಲ್ಲಿ ಕಳೇಬರಗಳನ್ನು ಬಿಸಾಡಿದರು. ಅಕ್ಷರಶಃ ಗುಜರಾತ್ ಒಂದು ವಾರ ಗಬ್ಬು ನಾರುತ್ತಿತ್ತು. ದಲಿತರು ರೊಚ್ಚಿಗೆದ್ದರೆ ಆಗುವ ಪರಿಣಾಮವನ್ನು ಗುಜರಾತ್ ಕಂಡಿತ್ತು. 12 ದಲಿತ ಯುವಕರು ಆತ್ಮಹತ್ಯೆಗೆ ಪ್ರಯತ್ನಿಸಿದರು. ಅದರಲ್ಲಿ ಒಬ್ಬ ಯುವಕ ಅಸುನೀಗಿದನು. ಇದರ ಪರಿಣಾಮವಾಗಿ ಜುಲೈ 21ರಂದು ರಾಜ್ಯಸಭೆಯಲ್ಲಿ ಈ ಘಟನೆ ಪ್ರತಿಧ್ವನಿಸಿತು.

ದಲಿತ ಯುವಕ ಜಿಗ್ನೇಶ್ ಮೆವಾನಿ ನೇತೃತ್ವದಲ್ಲಿ ಆಗಸ್ಟ್ 15, 2016ರ ಸ್ವಾತಂತ್ರ್ಯ ದಿನಾಚರಣೆಯಂದು ಅಹಮದಾಬಾದ್‌ನಿಂದ ಊನಾದವರೆಗೆ ದಲಿತ ಅಸ್ಮಿತೆ ಯಾತ್ರೆಯನ್ನು ಕೈಗೊಳ್ಳಲಾಯಿತು. ಈ ಯಾತ್ರೆಯಲ್ಲಿ ಸುಮಾರು 20,000 ಹೋರಾಟಗಾರರು ಭಾಗವಹಿಸಿದ್ದರು. ಅತಿ ಪ್ರಮುಖವಾಗಿ ಈ ಯಾತ್ರೆಯಲ್ಲಿ ಭಾಗವಹಿಸಿದ್ದ ದಲಿತರು ’ಇನ್ನು ಮುಂದೆ ಸಾಂಪ್ರದಾಯಿಕ ವೃತ್ತಿಯಾದ ಸತ್ತ ಪ್ರಾಣಿಗಳ ಕಳೇಬರವನ್ನು ವಿಲೇವಾರಿ ಮಾಡುವ ಕಾಯಕವನ್ನು ಮಾಡಲಾರೆವು’ ಎಂಬ ಪ್ರತಿಜ್ಞೆಯನ್ನು ಕೈಗೊಂಡರು. ಆ ಹೋರಾಟದಲ್ಲಿಯೇ ’ದಲಿತರಿಗೆ ಉಳುಮೆ ಮಾಡಲು ಭೂಮಿ ಕೊಡಿ’ ಎಂಬ ಘೋಷವಾಕ್ಯವೂ ಮೊಳಗಿತು. ಬರೋಬ್ಬರಿ ಹತ್ತು ದಿನಗಳು ನಡೆದ ಈ ಯಾತ್ರೆಯಿಂದ ಮನೆಗೆ ಮರಳುತ್ತಿದ್ದಾಗ ದಲಿತರ ಮೇಲೆ ಬಾಂಬ್ ದಾಳಿ ಮಾಡಲಾಯಿತು. 10 ಜನರು ಗಂಭೀರವಾಗಿ ಗಾಯಗೊಂಡರು. ಆಶ್ಚರ್ಯವೆಂದರೆ ಅಲ್ಲಿನ ಬಿಜೆಪಿ ಸರ್ಕಾರ ದಲಿತರ ಮೇಲೆ ಬಾಂಬು ಹಾಕಿದವರನ್ನು ಬಂಧಿಸದೇ, ಅದನ್ನು ಸುಳ್ಳು ಸುದ್ದಿಯೆಂದು ಪ್ರಚಾರಮಾಡಿತು. ಮುಂದುವರೆದು ದಲಿತರ ಮೇಲೆಯೇ 74 ಕೇಸುಗಳನ್ನು ದಾಖಲಿಸಿತು. ಮುಂದುವರೆದು ದಲಿತರ ಮೇಲೆಯೇ 74 ಕೇಸುಗಳನ್ನು ದಾಖಲಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...