Homeದಲಿತ್ ಫೈಲ್ಸ್ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 42 ಆರೋಪಿಗಳಲ್ಲಿ ಐವರನ್ನು ದೋಷಿಗಳು ಹೇಳಿದೆ. ಇತರ 37 ಜನರನ್ನು ಖುಲಾಸೆಗೊಳಿಸಿದ್ದು, ಪ್ರಕರಣದ ಇಬ್ಬರು ಆರೋಪಿಗಳು ವಿಚಾರಣಾ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ.

ಶಿಕ್ಷೆಗೊಳಗಾದ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ. ತಪ್ಪಿತಸ್ಥರೆಂದು ಸಾಬೀತಾದ ಐದು ಆರೋಪಿಗಳು ರಮೇಶ್ ಜಾದವ್, ರಾಕೇಶ್ ಜೋಶಿ, ಪ್ರಮೋದ್ ಗೋಸ್ವಾಮಿ, ನಾಗ್ಜಿ ದಯಾ ಮತ್ತು ಬಲವಂತ್ ಗೋಸ್ವಾಮಿ.

ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ನಾಲ್ವರು ಪೊಲೀಸ್ ಸಿಬ್ಬಂದಿ ಸೇರಿದಂತೆ 37 ಆರೋಪಿಗಳು ಖುಲಾಸೆಗೊಂಡಿದ್ದಾರೆ. ಖುಲಾಸೆಗೊಂಡ ಪೊಲೀಸ್ ಸಿಬ್ಬಂದಿಗಳಲ್ಲಿ ಕಾಂಚನ್‌ಬೆನ್, ಆಗ ಪಿಎಸ್‌ಐ ಪಾಂಡೆ, ಆಗ ಉನಾ ಪಿಎಸ್‌ಒ ಕರ್ಶನ್‌ಭಾಯ್ ಮತ್ತು ನಿರ್ಮಲ್ ಜಲಾ ಸೇರಿದ್ದಾರೆ, ಅವರಲ್ಲಿ ಕೊನೆಯವರು ಈಗ ನಿಧನರಾಗಿದ್ದಾರೆ.

ದೇಶವನ್ನು ತಲ್ಲಣಗೊಳಿಸಿದ್ದ ಊನಾ ಘಟನೆ

ಜುಲೈ 11, 2016ರಂದು ’ಗಿರ್ ಸೋಮನಾಥ’ ಜಿಲ್ಲೆಯ ’ಊನಾ’ದ ಬಳಿಯಲ್ಲಿರುವ ’ಮೋಟ ಸಮಾಧಿಯಾಲ’ ಎಂಬ ಹಳ್ಳಿಯಲ್ಲಿ ಸತ್ತ ದನದ ಚರ್ಮವನ್ನು ತಲತಲಾಂತರದಿಂದ ಸುಲಿಯುವ ದಲಿತ ಕುಟುಂಬದ ಏಳು ಯುವಕರು ಎಂದಿನಂತೆ ತಮ್ಮ ಕಾಯಕ ಮಾಡುತ್ತಿದ್ದರು. ಆ ಸತ್ತ ದನವನ್ನವರು ಬೇಡಿಯಾ ಜಿಲ್ಲೆಯಿಂದ ತಂದಿದ್ದರು. ಆಗ ಅಲ್ಲಿಗೆ ಎರಡು ಕಾರಿನಲ್ಲಿ ಬಂದ ಒಂದಷ್ಟು ಜನ ಕೆಳಗಿಳಿದು ಅವರ ಬಳಿ ಬಂದು ’ನಾವು ಗೋ ರಕ್ಷಕರು’ ಎಂದರು. ’ದನವನ್ನು ಕೊಂದು ಚರ್ಮ ಸುಲಿಯುತ್ತಿದ್ದೀರಿ’ ಎಂದು ದಲಿತರ ಮೇಲೆ ಆರೋಪ ಹೊರಿಸಿದರು. ಆ ದಲಿತ ಯುವಕರು ’ತಾವು ಸತ್ತ ದನದ ಚರ್ಮ ಸುಲಿಯುತ್ತಿರುವುದಾಗಿ’ ಎಷ್ಟೇ ಹೇಳಿದರೂ ಧರ್ಮಾಂಧತೆಯ ಅಮಲಿನಲ್ಲಿದ್ದ ಆ ಗೋ ರಕ್ಷಕರೆಂಬ ಭಯೋತ್ಪಾದಕರು ಏಳು ಜನ ದಲಿತರನ್ನೂ ಕಾರಿಗೆ ಕಟ್ಟಿಹಾಕಿ ದೊಣ್ಣೆ ಹಾಗೂ ಕಬ್ಬಿಣದ ರಾಡ್‌ನಿಂದ ಮನಸೋ ಇಚ್ಛ ಥಳಿಸಿದರು. ಅದಷ್ಟಕ್ಕೆ ಅವರ ವಿಕೃತಿ ಸಮಾಧಾನವಾಗಲಿಲ್ಲ. ಎರಡೂ ಕಾರಿನಲ್ಲಿ ನಾಲ್ವರನ್ನು ತುಂಬಿಕೊಂಡು ಊನಾ ಪಟ್ಟಣಕ್ಕೆ ಬಂದರು. ಅಲ್ಲಿ ಬೃಹತ್ ಸರ್ಕಲ್‌ನಲ್ಲಿ ಬಟ್ಟೆ ಬಿಚ್ಚಿ ಬೆತ್ತಲಾಗಿಸಿ ಮತ್ತೆ ಥಳಿಸಿದರು. ಇದನ್ನು ತಮ್ಮ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡಿಕೊಂಡರು. ಪೊಲೀಸರು ಅಲ್ಲಿಗೆ ಬರುವುದನ್ನು ಕಂಡು ಗೋರಕ್ಷಕ ಭಯೋತ್ಪಾದಕರು ನಂತರ ಓಡಿಹೋದರು.

ನಂತರ ಆ ಏಳು ದಲಿತರಿಗೆ ಊನಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಮೇಲೆ ಹೆಚ್ಚಿನ ಚಿಕಿತ್ಸೆಗೆ ರಾಜಕೋಟ್‌ನ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಯಿತು. ಸೋಷಿಯಲ್ ಮೀಡಿಯಾದಲ್ಲಿ ದಲಿತರನ್ನು ಮಾರಣಾಂತಿಕವಾಗಿ ಥಳಿಸಿದ್ದ ವಿಡಿಯೋ ಇಡೀ ಗುಜರಾತಿನ ದಲಿತರ ನಿದ್ದೆಗೆಡಿಸಿತು. ರಾಜ್ಯಾದ್ಯಂತ ಸರಣಿ ಹೋರಾಟಗಳು ಜರುಗಿದವು. ಜುಲೈ 12ರಂದೇ ಗುಜರಾತಿನ ಅಹಮದಾಬಾದ್‌ನಲ್ಲಿ ಹಲವು ದಲಿತ ನಾಯಕರು ಬೀದಿಗಿಳಿದ ಪರಿಣಾಮ ದಲಿತ ಯುವಕರು ಸಿಟ್ಟಿಗೆದ್ದು ಪ್ರತಿಭಟಿಸಿದರು. ರಾಜ್ಯ ಹೆದ್ದಾರಿಯನ್ನು ತಡೆಹಿಡಿದರು. ಸತ್ತ ಪ್ರಾಣಿಗಳ ಕಳೇಬರಗಳನ್ನು ಸರ್ಕಾರಿ ಕಚೇರಿಗಳ ಮುಂದೆ ಎಸೆದರು. ರಸ್ತೆರಸ್ತೆಯಲ್ಲಿ ಕಳೇಬರಗಳನ್ನು ಬಿಸಾಡಿದರು. ಅಕ್ಷರಶಃ ಗುಜರಾತ್ ಒಂದು ವಾರ ಗಬ್ಬು ನಾರುತ್ತಿತ್ತು. ದಲಿತರು ರೊಚ್ಚಿಗೆದ್ದರೆ ಆಗುವ ಪರಿಣಾಮವನ್ನು ಗುಜರಾತ್ ಕಂಡಿತ್ತು. 12 ದಲಿತ ಯುವಕರು ಆತ್ಮಹತ್ಯೆಗೆ ಪ್ರಯತ್ನಿಸಿದರು. ಅದರಲ್ಲಿ ಒಬ್ಬ ಯುವಕ ಅಸುನೀಗಿದನು. ಇದರ ಪರಿಣಾಮವಾಗಿ ಜುಲೈ 21ರಂದು ರಾಜ್ಯಸಭೆಯಲ್ಲಿ ಈ ಘಟನೆ ಪ್ರತಿಧ್ವನಿಸಿತು.

ದಲಿತ ಯುವಕ ಜಿಗ್ನೇಶ್ ಮೆವಾನಿ ನೇತೃತ್ವದಲ್ಲಿ ಆಗಸ್ಟ್ 15, 2016ರ ಸ್ವಾತಂತ್ರ್ಯ ದಿನಾಚರಣೆಯಂದು ಅಹಮದಾಬಾದ್‌ನಿಂದ ಊನಾದವರೆಗೆ ದಲಿತ ಅಸ್ಮಿತೆ ಯಾತ್ರೆಯನ್ನು ಕೈಗೊಳ್ಳಲಾಯಿತು. ಈ ಯಾತ್ರೆಯಲ್ಲಿ ಸುಮಾರು 20,000 ಹೋರಾಟಗಾರರು ಭಾಗವಹಿಸಿದ್ದರು. ಅತಿ ಪ್ರಮುಖವಾಗಿ ಈ ಯಾತ್ರೆಯಲ್ಲಿ ಭಾಗವಹಿಸಿದ್ದ ದಲಿತರು ’ಇನ್ನು ಮುಂದೆ ಸಾಂಪ್ರದಾಯಿಕ ವೃತ್ತಿಯಾದ ಸತ್ತ ಪ್ರಾಣಿಗಳ ಕಳೇಬರವನ್ನು ವಿಲೇವಾರಿ ಮಾಡುವ ಕಾಯಕವನ್ನು ಮಾಡಲಾರೆವು’ ಎಂಬ ಪ್ರತಿಜ್ಞೆಯನ್ನು ಕೈಗೊಂಡರು. ಆ ಹೋರಾಟದಲ್ಲಿಯೇ ’ದಲಿತರಿಗೆ ಉಳುಮೆ ಮಾಡಲು ಭೂಮಿ ಕೊಡಿ’ ಎಂಬ ಘೋಷವಾಕ್ಯವೂ ಮೊಳಗಿತು. ಬರೋಬ್ಬರಿ ಹತ್ತು ದಿನಗಳು ನಡೆದ ಈ ಯಾತ್ರೆಯಿಂದ ಮನೆಗೆ ಮರಳುತ್ತಿದ್ದಾಗ ದಲಿತರ ಮೇಲೆ ಬಾಂಬ್ ದಾಳಿ ಮಾಡಲಾಯಿತು. 10 ಜನರು ಗಂಭೀರವಾಗಿ ಗಾಯಗೊಂಡರು. ಆಶ್ಚರ್ಯವೆಂದರೆ ಅಲ್ಲಿನ ಬಿಜೆಪಿ ಸರ್ಕಾರ ದಲಿತರ ಮೇಲೆ ಬಾಂಬು ಹಾಕಿದವರನ್ನು ಬಂಧಿಸದೇ, ಅದನ್ನು ಸುಳ್ಳು ಸುದ್ದಿಯೆಂದು ಪ್ರಚಾರಮಾಡಿತು. ಮುಂದುವರೆದು ದಲಿತರ ಮೇಲೆಯೇ 74 ಕೇಸುಗಳನ್ನು ದಾಖಲಿಸಿತು. ಮುಂದುವರೆದು ದಲಿತರ ಮೇಲೆಯೇ 74 ಕೇಸುಗಳನ್ನು ದಾಖಲಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...