Homeಮುಖಪುಟಆನ್‌ಲೈನ್‌ ತರಗತಿಗೆ ಹಾಜರಾಗಲು ಅಸಾಧ್ಯ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಆನ್‌ಲೈನ್‌ ತರಗತಿಗೆ ಹಾಜರಾಗಲು ಅಸಾಧ್ಯ: 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಆನ್‌ಲೈನ್‌ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣ ಕೇರಳದ ಮಲಪ್ಪುರಂ ಜಿಲ್ಲೆಯ ವಲಂಚೇರಿಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಲಂಚೇರಿ ಮೂಲದ ಬಾಲಕೃಷ್ಣನ್ ಎಂಬವರ ಪುತ್ರಿ ದೇವಿಕಾ (14) ಸ್ವತಃ ಬೆಂಕಿ ಹಚ್ಚಿ ಜೀವ ಕಳೆದುಕೊಂಡಿದ್ದಾರೆ.

ಆನ್‌ಲೈನ್‌ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣ ಖಿನ್ನತೆಗೆ ಒಳಗಾಗಿದ್ದ ಬಾಲಕಿಯೂ ಈ ಹೆಜ್ಜೆ ಇಟ್ಟಿದ್ದಾರೆ ಎಂದು ವಿದ್ಯಾರ್ಥಿನಿಯ ಪೋಷಕರು ತಿಳಿದ್ದಾರೆ.

“ಮನೆಯಲ್ಲಿ ಟೆಲಿವಿಷನ್ ಕಾರ್ಯನಿರ್ವಹಿಸದ ಕಾರಣ ಮಗುವಿಗೆ ತೊಂದರೆಯಾಯಿತು. ಜೊತೆಗೆ, ಯಾವುದೇ ಸ್ಮಾರ್ಟ್‌ಫೋನ್ ಇರಲಿಲ್ಲ. ಇದರಿಂದಾಗಿ ಅಧ್ಯಯನದ ಮೇಲೆ ಪರಿಣಾಮ ಬೀರುತ್ತದೆಂದು ಅವಳು ಹೆದರುತ್ತಿದ್ದಳು” ಎಂದು ಪೋಷಕರು ಹೇಳಿದ್ದಾರೆ.

ದಿನಗೂಲಿ ಕಾರ್ಮಿಕರಾಗಿರುವ ಬಾಲಕೃಷ್ಣನ್ ಕೊರೊನಾ ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿನಿಂದ  ನಿರುದ್ಯೋಗಿಯಾಗಿದ್ದರು ಎನ್ನಲಾಗಿದೆ.

ಕುಟುಂಬವು ಸ್ಮಾರ್ಟ್‌‌ಫೋನ್ ಹೊಂದಿರಲಿಲ್ಲ ಹಾಗೂ ಅವರ ಟಿವಿಯೂ ಸ್ವಲ್ಪ ಸಮಯದ ಹಿಂದೆ ಹಾಳಾಗಿದ್ದು, ಆನ್‌ಲೈನ್ ತರಗತಿಗಳು ಪ್ರಾರಂಭವಾಗುವ ಮೊದಲು ಅದನ್ನು ದುರಸ್ತಿ ಮಾಡಲು ದೇವಿಕಾ ತನ್ನ ತಂದೆಯನ್ನು ಕೇಳಿಕೊಂಡಿದ್ದರು. ಆದರೆ ಆರ್ಥಿಕ ಪರಿಸ್ಥಿತಿಯೂ ಸರಿಯಿಲ್ಲದ ಕಾರಣದಿಂದ ಕುಟುಂಬಕ್ಕೆ ಅದನ್ನು ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ದೇವಿಕಾ ಮನೆಯಿಂದ ದೊರೆತ ಆತ್ಮಹತ್ಯಾ ಪತ್ರದಲ್ಲಿ ತಪ್ಪಿಹೋದ ತರಗತಿಗಳು ಹಾಗೂ ಅವರ ಕುಟುಂಬದ ಆರ್ಥಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಸೋಮವಾರ ಸಂಜೆ 6 ಗಂಟೆಗೆ ತನ್ನ ಮನೆಯ ಸಮೀಪದ ನಿರ್ಜನ ತೋಟದಲ್ಲಿ ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಕೇರಳದ ಶಾಲಾ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಆನ್‌ಲೈನ್‌‌ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಒಂದರಿಂದ ಹನ್ನೆರಡನೇ ತರಗತಿಯ ವಿಶೇಷ ಅವಧಿಗಳು ಕೈಟ್ ವಿಕ್ಟರ್ಸ್ ಚಾನೆಲ್ ಮತ್ತು ಇಂಟರ್ನೆಟ್ ಮೂಲಕ ಪ್ರಸಾರವಾಗುತ್ತವೆ.

ಆದರೆ ಈ ಹೊಸ ವ್ಯವಸ್ಥೆಯ ಬಗ್ಗೆ ಮತ್ತು ಟಿವಿ ಅಥವಾ ಇಂಟರ್ನೆಟ್ ಇಲ್ಲದ ವಿದ್ಯಾರ್ಥಿಗಳು ತರಗತಿಗಳಿಗೆ ಹೇಗೆ ಹಾಜರಾಗುತ್ತಾರೆ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.


ಓದಿ: ಶಾಲೆಗಳು ಸಮಾಜ ಒಡೆಯುತ್ತಿವೆ: ಶಿಕ್ಷಣ ವ್ಯವಸ್ಥೆಯನ್ನು ತಲೆಕೆಳಗು ಮಾಡಬೇಕಿದೆ: ಇವಾನ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...