Homeಮುಖಪುಟ"ನೀವು ಮಾತನಾಡುವ ಟೋನ್ ಸರಿಯಿಲ್ಲ" : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ;...

“ನೀವು ಮಾತನಾಡುವ ಟೋನ್ ಸರಿಯಿಲ್ಲ” : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ; ಕ್ಷಮೆ ಕೇಳುವಂತೆ ಆಗ್ರಹ

- Advertisement -
- Advertisement -

ಇಂದು ರಾಜ್ಯಸಭೆಯಲ್ಲಿ ಮಾತನಾಡಲು ‘ಜಯಾ ಬಚ್ಚನ್’ ಅವರನ್ನು ಆಹ್ವಾನಿಸುವ ವೇಳೆ ಸಭಾಪತಿ ಜಗದೀಪ್ ಧನಕರ್ ‘ಜಯಾ ಅಮಿತಾಬ್ ಬಚ್ಚನ್’ ಎಂದು ಕರೆದಿದ್ದಕ್ಕೆ ಜಯಾ ಬಚ್ಚನ್ ಆಕ್ಷೇಪ ವ್ಯಕ್ತಪಡಿಸಿದರು.

ಸಭಾಪತಿಗಳ ಹೆಸರು ಸಂಭೋದನೆಗೆ ತೀವ್ರ ಸಿಡಿಮಿಡಿಗೊಂಡ ಜಯಾ ಬಚ್ಚನ್, “ನನ್ನ ಜೊತೆ ನೀವು ಮಾತನಾಡುವ ಟೋನ್ ಸರಿಯಿಲ್ಲ ಎಂದರು. ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.

“ನಾನೊಬ್ಬಳು ಕಲಾವಿದೆ. ದೇಹ ಭಾಷೆ ಮತ್ತು ಅಭಿವ್ಯಕ್ತಿ ನನಗೆ ಅರ್ಥವಾಗುತ್ತದೆ. ನೀವು ಮಾತನಾಡುವ ಟೋನ್ ಸರಿಯಿಲ್ಲ. ನಾವು ಸಹೊದ್ಯೋಗಿಗಳು. ಆದರೆ, ನಿಮ್ಮ ಟೋನ್ ಒಪ್ಪುವಂತದಲ್ಲ” ಎಂದು ಜಯಾ ಬಚ್ಚನ್ ಕಿಡಿಕಾರಿದರು. ಸಭಾಪತಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ ಜಗದೀಪ್ ಧನಕರ್, “ನೀವು ಸೆಲೆಬ್ರಿಟಿಯಾಗಿರಬಹುದು. ಆದರೆ, ಸದನದ ಗೌರವವನ್ನು ಅರ್ಥೈಸಿಕೊಳ್ಳಬೇಕು” ಎಂದರು. ಜಯಾ ಬಚ್ಚನ್ ಪರ ನಿಂತು ಕ್ಷಮೆಯಾಚನೆಗೆ ಒತ್ತಾಯಿಸುತ್ತಿದ್ದ ಪ್ರತಿಪಕ್ಷ ಸದಸ್ಯರ ವಿರುದ್ದ ಸಿಡಿಮಿಡಿಗೊಂಡರು.

“ಜಯಾ ಜೀ ನೀವು ಬಹಳ ಗೌರವವನ್ನು ಸಂಪಾದಿಸಿದ್ದೀರಿ. ನೀವು ನಟಿಯಾದರೆ ಅದು ನಿರ್ದೇಶಕರಿಗೆ ಸಂಬಂಧಿಸಿದ ವಿಷಯ. ಪ್ರತಿದಿನ ನಾನು ಅದನ್ನು ಪುನರಾವರ್ತಿಸಲು ಸಾಧ್ಯವಿಲ್ಲ. ನಿಮ್ಮಿಂದ ಕಲಿಯಬೇಕಾದ ಅಗತ್ಯವೂ ಇಲ್ಲ. ನೀವು ನನ್ನ ಟೋನ್ ಬಗ್ಗೆ ಮಾತನಾಡುತ್ತಿದ್ದೀರಾ? ಸಾಕು ನಿಲ್ಲಿಸಿ, ನೀವು ಏನೇ ಆಗಿರಬಹುದು. ಸದನದ ಗಾಂಭೀರ್ಯವನ್ನು ಕಾಪಾಡಿಕೊಂಡು ನಡೆದುಕೊಳ್ಳುವುದನ್ನು ಕಲಿಯಿರಿ” ಎಂದು ಸಭಾಪತಿ ಧನಕರ್ ಹೇಳಿದರು.

ಬಳಿಕ ಸಭಾಪತಿ ಧನಕರ್ ಗುರಿಯಾಗಿಸಿ ಹೇಳಿಕೆ ನೀಡಿದ್ದಕ್ಕೆ ಜಯಾ ಬಚ್ಚನ್ ವಿರುದ್ದ ರಾಜ್ಯಸಭೆಯ ಸಭಾನಾಯಕ ಜೆಪಿ ನಡ್ಡಾ ಖಂಡನಾ ನಿರ್ಣಯ ಮಂಡಿಸಿದರು.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಾ ಬಚ್ಚನ್ “ಸಭಾಪತಿಗಳ ಮಾತಿನ ಟೋನ್ ಸರಿ ಇರಲಿಲ್ಲ, ನಾನು ವಿರೋಧಿಸಿದೆ. ನಾವು ಶಾಲಾ ಮಕ್ಕಳಲ್ಲ, ನಮ್ಮಲ್ಲಿ ಕೆಲವರು ಹಿರಿಯ ನಾಗರಿಕರೂ ಇದ್ದಾರೆ. ಸಭಾಪತಿಗಳ ಟೋನ್‌ ನನಗೆ ಬೇಸರ ತರಿಸಿದೆ. ಮುಖ್ಯವಾಗಿ ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಮೈಕ್ ಆಫ್ ಮಾಡಲಾಗಿದೆ. ಇದು ಸಂಪ್ರದಾಯಕ್ಕೆ ವಿರುದ್ದ. ನೀವು ಪ್ರತಿಪಕ್ಷ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು” ಎಂದು ಹೇಳಿದರು.

ಮುಂದಿನ ನಡೆಯೇನು? ಎಂದು ಪತ್ರಕರ್ತರು ಕೇಳಿದ್ದಕ್ಕೆ “ಸಭಾಪತಿಗಳು ನಮ್ಮ ಕ್ಷಮೆ ಕೇಳಬೇಕು. ಅವರು ನಮ್ಮನ್ನು ಕೇರ್ ಮಾಡುವುದಿಲ್ಲ ಎಂದಿದ್ದಾರೆ. ಅವರು ಕೇರ್ ಮಾಡಲೇಬೇಕು, ಏಕೆಂದರೆ ನಾವು ಸಂಸತ್ತಿನ ಸದಸ್ಯರು” ಎಂದರು.

ಇದನ್ನೂ ಓದಿ : ಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...