Homeಮುಖಪುಟ"ನೀವು ಮಾತನಾಡುವ ಟೋನ್ ಸರಿಯಿಲ್ಲ" : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ;...

“ನೀವು ಮಾತನಾಡುವ ಟೋನ್ ಸರಿಯಿಲ್ಲ” : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ; ಕ್ಷಮೆ ಕೇಳುವಂತೆ ಆಗ್ರಹ

- Advertisement -
- Advertisement -

ಇಂದು ರಾಜ್ಯಸಭೆಯಲ್ಲಿ ಮಾತನಾಡಲು ‘ಜಯಾ ಬಚ್ಚನ್’ ಅವರನ್ನು ಆಹ್ವಾನಿಸುವ ವೇಳೆ ಸಭಾಪತಿ ಜಗದೀಪ್ ಧನಕರ್ ‘ಜಯಾ ಅಮಿತಾಬ್ ಬಚ್ಚನ್’ ಎಂದು ಕರೆದಿದ್ದಕ್ಕೆ ಜಯಾ ಬಚ್ಚನ್ ಆಕ್ಷೇಪ ವ್ಯಕ್ತಪಡಿಸಿದರು.

ಸಭಾಪತಿಗಳ ಹೆಸರು ಸಂಭೋದನೆಗೆ ತೀವ್ರ ಸಿಡಿಮಿಡಿಗೊಂಡ ಜಯಾ ಬಚ್ಚನ್, “ನನ್ನ ಜೊತೆ ನೀವು ಮಾತನಾಡುವ ಟೋನ್ ಸರಿಯಿಲ್ಲ ಎಂದರು. ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.

“ನಾನೊಬ್ಬಳು ಕಲಾವಿದೆ. ದೇಹ ಭಾಷೆ ಮತ್ತು ಅಭಿವ್ಯಕ್ತಿ ನನಗೆ ಅರ್ಥವಾಗುತ್ತದೆ. ನೀವು ಮಾತನಾಡುವ ಟೋನ್ ಸರಿಯಿಲ್ಲ. ನಾವು ಸಹೊದ್ಯೋಗಿಗಳು. ಆದರೆ, ನಿಮ್ಮ ಟೋನ್ ಒಪ್ಪುವಂತದಲ್ಲ” ಎಂದು ಜಯಾ ಬಚ್ಚನ್ ಕಿಡಿಕಾರಿದರು. ಸಭಾಪತಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ ಜಗದೀಪ್ ಧನಕರ್, “ನೀವು ಸೆಲೆಬ್ರಿಟಿಯಾಗಿರಬಹುದು. ಆದರೆ, ಸದನದ ಗೌರವವನ್ನು ಅರ್ಥೈಸಿಕೊಳ್ಳಬೇಕು” ಎಂದರು. ಜಯಾ ಬಚ್ಚನ್ ಪರ ನಿಂತು ಕ್ಷಮೆಯಾಚನೆಗೆ ಒತ್ತಾಯಿಸುತ್ತಿದ್ದ ಪ್ರತಿಪಕ್ಷ ಸದಸ್ಯರ ವಿರುದ್ದ ಸಿಡಿಮಿಡಿಗೊಂಡರು.

“ಜಯಾ ಜೀ ನೀವು ಬಹಳ ಗೌರವವನ್ನು ಸಂಪಾದಿಸಿದ್ದೀರಿ. ನೀವು ನಟಿಯಾದರೆ ಅದು ನಿರ್ದೇಶಕರಿಗೆ ಸಂಬಂಧಿಸಿದ ವಿಷಯ. ಪ್ರತಿದಿನ ನಾನು ಅದನ್ನು ಪುನರಾವರ್ತಿಸಲು ಸಾಧ್ಯವಿಲ್ಲ. ನಿಮ್ಮಿಂದ ಕಲಿಯಬೇಕಾದ ಅಗತ್ಯವೂ ಇಲ್ಲ. ನೀವು ನನ್ನ ಟೋನ್ ಬಗ್ಗೆ ಮಾತನಾಡುತ್ತಿದ್ದೀರಾ? ಸಾಕು ನಿಲ್ಲಿಸಿ, ನೀವು ಏನೇ ಆಗಿರಬಹುದು. ಸದನದ ಗಾಂಭೀರ್ಯವನ್ನು ಕಾಪಾಡಿಕೊಂಡು ನಡೆದುಕೊಳ್ಳುವುದನ್ನು ಕಲಿಯಿರಿ” ಎಂದು ಸಭಾಪತಿ ಧನಕರ್ ಹೇಳಿದರು.

ಬಳಿಕ ಸಭಾಪತಿ ಧನಕರ್ ಗುರಿಯಾಗಿಸಿ ಹೇಳಿಕೆ ನೀಡಿದ್ದಕ್ಕೆ ಜಯಾ ಬಚ್ಚನ್ ವಿರುದ್ದ ರಾಜ್ಯಸಭೆಯ ಸಭಾನಾಯಕ ಜೆಪಿ ನಡ್ಡಾ ಖಂಡನಾ ನಿರ್ಣಯ ಮಂಡಿಸಿದರು.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಾ ಬಚ್ಚನ್ “ಸಭಾಪತಿಗಳ ಮಾತಿನ ಟೋನ್ ಸರಿ ಇರಲಿಲ್ಲ, ನಾನು ವಿರೋಧಿಸಿದೆ. ನಾವು ಶಾಲಾ ಮಕ್ಕಳಲ್ಲ, ನಮ್ಮಲ್ಲಿ ಕೆಲವರು ಹಿರಿಯ ನಾಗರಿಕರೂ ಇದ್ದಾರೆ. ಸಭಾಪತಿಗಳ ಟೋನ್‌ ನನಗೆ ಬೇಸರ ತರಿಸಿದೆ. ಮುಖ್ಯವಾಗಿ ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಮೈಕ್ ಆಫ್ ಮಾಡಲಾಗಿದೆ. ಇದು ಸಂಪ್ರದಾಯಕ್ಕೆ ವಿರುದ್ದ. ನೀವು ಪ್ರತಿಪಕ್ಷ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು” ಎಂದು ಹೇಳಿದರು.

ಮುಂದಿನ ನಡೆಯೇನು? ಎಂದು ಪತ್ರಕರ್ತರು ಕೇಳಿದ್ದಕ್ಕೆ “ಸಭಾಪತಿಗಳು ನಮ್ಮ ಕ್ಷಮೆ ಕೇಳಬೇಕು. ಅವರು ನಮ್ಮನ್ನು ಕೇರ್ ಮಾಡುವುದಿಲ್ಲ ಎಂದಿದ್ದಾರೆ. ಅವರು ಕೇರ್ ಮಾಡಲೇಬೇಕು, ಏಕೆಂದರೆ ನಾವು ಸಂಸತ್ತಿನ ಸದಸ್ಯರು” ಎಂದರು.

ಇದನ್ನೂ ಓದಿ : ಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...