Homeಮುಖಪುಟ"ನೀವು ಮಾತನಾಡುವ ಟೋನ್ ಸರಿಯಿಲ್ಲ" : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ;...

“ನೀವು ಮಾತನಾಡುವ ಟೋನ್ ಸರಿಯಿಲ್ಲ” : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ; ಕ್ಷಮೆ ಕೇಳುವಂತೆ ಆಗ್ರಹ

- Advertisement -
- Advertisement -

ಇಂದು ರಾಜ್ಯಸಭೆಯಲ್ಲಿ ಮಾತನಾಡಲು ‘ಜಯಾ ಬಚ್ಚನ್’ ಅವರನ್ನು ಆಹ್ವಾನಿಸುವ ವೇಳೆ ಸಭಾಪತಿ ಜಗದೀಪ್ ಧನಕರ್ ‘ಜಯಾ ಅಮಿತಾಬ್ ಬಚ್ಚನ್’ ಎಂದು ಕರೆದಿದ್ದಕ್ಕೆ ಜಯಾ ಬಚ್ಚನ್ ಆಕ್ಷೇಪ ವ್ಯಕ್ತಪಡಿಸಿದರು.

ಸಭಾಪತಿಗಳ ಹೆಸರು ಸಂಭೋದನೆಗೆ ತೀವ್ರ ಸಿಡಿಮಿಡಿಗೊಂಡ ಜಯಾ ಬಚ್ಚನ್, “ನನ್ನ ಜೊತೆ ನೀವು ಮಾತನಾಡುವ ಟೋನ್ ಸರಿಯಿಲ್ಲ ಎಂದರು. ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.

“ನಾನೊಬ್ಬಳು ಕಲಾವಿದೆ. ದೇಹ ಭಾಷೆ ಮತ್ತು ಅಭಿವ್ಯಕ್ತಿ ನನಗೆ ಅರ್ಥವಾಗುತ್ತದೆ. ನೀವು ಮಾತನಾಡುವ ಟೋನ್ ಸರಿಯಿಲ್ಲ. ನಾವು ಸಹೊದ್ಯೋಗಿಗಳು. ಆದರೆ, ನಿಮ್ಮ ಟೋನ್ ಒಪ್ಪುವಂತದಲ್ಲ” ಎಂದು ಜಯಾ ಬಚ್ಚನ್ ಕಿಡಿಕಾರಿದರು. ಸಭಾಪತಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ ಜಗದೀಪ್ ಧನಕರ್, “ನೀವು ಸೆಲೆಬ್ರಿಟಿಯಾಗಿರಬಹುದು. ಆದರೆ, ಸದನದ ಗೌರವವನ್ನು ಅರ್ಥೈಸಿಕೊಳ್ಳಬೇಕು” ಎಂದರು. ಜಯಾ ಬಚ್ಚನ್ ಪರ ನಿಂತು ಕ್ಷಮೆಯಾಚನೆಗೆ ಒತ್ತಾಯಿಸುತ್ತಿದ್ದ ಪ್ರತಿಪಕ್ಷ ಸದಸ್ಯರ ವಿರುದ್ದ ಸಿಡಿಮಿಡಿಗೊಂಡರು.

“ಜಯಾ ಜೀ ನೀವು ಬಹಳ ಗೌರವವನ್ನು ಸಂಪಾದಿಸಿದ್ದೀರಿ. ನೀವು ನಟಿಯಾದರೆ ಅದು ನಿರ್ದೇಶಕರಿಗೆ ಸಂಬಂಧಿಸಿದ ವಿಷಯ. ಪ್ರತಿದಿನ ನಾನು ಅದನ್ನು ಪುನರಾವರ್ತಿಸಲು ಸಾಧ್ಯವಿಲ್ಲ. ನಿಮ್ಮಿಂದ ಕಲಿಯಬೇಕಾದ ಅಗತ್ಯವೂ ಇಲ್ಲ. ನೀವು ನನ್ನ ಟೋನ್ ಬಗ್ಗೆ ಮಾತನಾಡುತ್ತಿದ್ದೀರಾ? ಸಾಕು ನಿಲ್ಲಿಸಿ, ನೀವು ಏನೇ ಆಗಿರಬಹುದು. ಸದನದ ಗಾಂಭೀರ್ಯವನ್ನು ಕಾಪಾಡಿಕೊಂಡು ನಡೆದುಕೊಳ್ಳುವುದನ್ನು ಕಲಿಯಿರಿ” ಎಂದು ಸಭಾಪತಿ ಧನಕರ್ ಹೇಳಿದರು.

ಬಳಿಕ ಸಭಾಪತಿ ಧನಕರ್ ಗುರಿಯಾಗಿಸಿ ಹೇಳಿಕೆ ನೀಡಿದ್ದಕ್ಕೆ ಜಯಾ ಬಚ್ಚನ್ ವಿರುದ್ದ ರಾಜ್ಯಸಭೆಯ ಸಭಾನಾಯಕ ಜೆಪಿ ನಡ್ಡಾ ಖಂಡನಾ ನಿರ್ಣಯ ಮಂಡಿಸಿದರು.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಾ ಬಚ್ಚನ್ “ಸಭಾಪತಿಗಳ ಮಾತಿನ ಟೋನ್ ಸರಿ ಇರಲಿಲ್ಲ, ನಾನು ವಿರೋಧಿಸಿದೆ. ನಾವು ಶಾಲಾ ಮಕ್ಕಳಲ್ಲ, ನಮ್ಮಲ್ಲಿ ಕೆಲವರು ಹಿರಿಯ ನಾಗರಿಕರೂ ಇದ್ದಾರೆ. ಸಭಾಪತಿಗಳ ಟೋನ್‌ ನನಗೆ ಬೇಸರ ತರಿಸಿದೆ. ಮುಖ್ಯವಾಗಿ ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಮೈಕ್ ಆಫ್ ಮಾಡಲಾಗಿದೆ. ಇದು ಸಂಪ್ರದಾಯಕ್ಕೆ ವಿರುದ್ದ. ನೀವು ಪ್ರತಿಪಕ್ಷ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು” ಎಂದು ಹೇಳಿದರು.

ಮುಂದಿನ ನಡೆಯೇನು? ಎಂದು ಪತ್ರಕರ್ತರು ಕೇಳಿದ್ದಕ್ಕೆ “ಸಭಾಪತಿಗಳು ನಮ್ಮ ಕ್ಷಮೆ ಕೇಳಬೇಕು. ಅವರು ನಮ್ಮನ್ನು ಕೇರ್ ಮಾಡುವುದಿಲ್ಲ ಎಂದಿದ್ದಾರೆ. ಅವರು ಕೇರ್ ಮಾಡಲೇಬೇಕು, ಏಕೆಂದರೆ ನಾವು ಸಂಸತ್ತಿನ ಸದಸ್ಯರು” ಎಂದರು.

ಇದನ್ನೂ ಓದಿ : ಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...