Homeಮುಖಪುಟ"ನೀವು ಮಾತನಾಡುವ ಟೋನ್ ಸರಿಯಿಲ್ಲ" : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ;...

“ನೀವು ಮಾತನಾಡುವ ಟೋನ್ ಸರಿಯಿಲ್ಲ” : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ; ಕ್ಷಮೆ ಕೇಳುವಂತೆ ಆಗ್ರಹ

- Advertisement -
- Advertisement -

ಇಂದು ರಾಜ್ಯಸಭೆಯಲ್ಲಿ ಮಾತನಾಡಲು ‘ಜಯಾ ಬಚ್ಚನ್’ ಅವರನ್ನು ಆಹ್ವಾನಿಸುವ ವೇಳೆ ಸಭಾಪತಿ ಜಗದೀಪ್ ಧನಕರ್ ‘ಜಯಾ ಅಮಿತಾಬ್ ಬಚ್ಚನ್’ ಎಂದು ಕರೆದಿದ್ದಕ್ಕೆ ಜಯಾ ಬಚ್ಚನ್ ಆಕ್ಷೇಪ ವ್ಯಕ್ತಪಡಿಸಿದರು.

ಸಭಾಪತಿಗಳ ಹೆಸರು ಸಂಭೋದನೆಗೆ ತೀವ್ರ ಸಿಡಿಮಿಡಿಗೊಂಡ ಜಯಾ ಬಚ್ಚನ್, “ನನ್ನ ಜೊತೆ ನೀವು ಮಾತನಾಡುವ ಟೋನ್ ಸರಿಯಿಲ್ಲ ಎಂದರು. ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.

“ನಾನೊಬ್ಬಳು ಕಲಾವಿದೆ. ದೇಹ ಭಾಷೆ ಮತ್ತು ಅಭಿವ್ಯಕ್ತಿ ನನಗೆ ಅರ್ಥವಾಗುತ್ತದೆ. ನೀವು ಮಾತನಾಡುವ ಟೋನ್ ಸರಿಯಿಲ್ಲ. ನಾವು ಸಹೊದ್ಯೋಗಿಗಳು. ಆದರೆ, ನಿಮ್ಮ ಟೋನ್ ಒಪ್ಪುವಂತದಲ್ಲ” ಎಂದು ಜಯಾ ಬಚ್ಚನ್ ಕಿಡಿಕಾರಿದರು. ಸಭಾಪತಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ ಜಗದೀಪ್ ಧನಕರ್, “ನೀವು ಸೆಲೆಬ್ರಿಟಿಯಾಗಿರಬಹುದು. ಆದರೆ, ಸದನದ ಗೌರವವನ್ನು ಅರ್ಥೈಸಿಕೊಳ್ಳಬೇಕು” ಎಂದರು. ಜಯಾ ಬಚ್ಚನ್ ಪರ ನಿಂತು ಕ್ಷಮೆಯಾಚನೆಗೆ ಒತ್ತಾಯಿಸುತ್ತಿದ್ದ ಪ್ರತಿಪಕ್ಷ ಸದಸ್ಯರ ವಿರುದ್ದ ಸಿಡಿಮಿಡಿಗೊಂಡರು.

“ಜಯಾ ಜೀ ನೀವು ಬಹಳ ಗೌರವವನ್ನು ಸಂಪಾದಿಸಿದ್ದೀರಿ. ನೀವು ನಟಿಯಾದರೆ ಅದು ನಿರ್ದೇಶಕರಿಗೆ ಸಂಬಂಧಿಸಿದ ವಿಷಯ. ಪ್ರತಿದಿನ ನಾನು ಅದನ್ನು ಪುನರಾವರ್ತಿಸಲು ಸಾಧ್ಯವಿಲ್ಲ. ನಿಮ್ಮಿಂದ ಕಲಿಯಬೇಕಾದ ಅಗತ್ಯವೂ ಇಲ್ಲ. ನೀವು ನನ್ನ ಟೋನ್ ಬಗ್ಗೆ ಮಾತನಾಡುತ್ತಿದ್ದೀರಾ? ಸಾಕು ನಿಲ್ಲಿಸಿ, ನೀವು ಏನೇ ಆಗಿರಬಹುದು. ಸದನದ ಗಾಂಭೀರ್ಯವನ್ನು ಕಾಪಾಡಿಕೊಂಡು ನಡೆದುಕೊಳ್ಳುವುದನ್ನು ಕಲಿಯಿರಿ” ಎಂದು ಸಭಾಪತಿ ಧನಕರ್ ಹೇಳಿದರು.

ಬಳಿಕ ಸಭಾಪತಿ ಧನಕರ್ ಗುರಿಯಾಗಿಸಿ ಹೇಳಿಕೆ ನೀಡಿದ್ದಕ್ಕೆ ಜಯಾ ಬಚ್ಚನ್ ವಿರುದ್ದ ರಾಜ್ಯಸಭೆಯ ಸಭಾನಾಯಕ ಜೆಪಿ ನಡ್ಡಾ ಖಂಡನಾ ನಿರ್ಣಯ ಮಂಡಿಸಿದರು.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಾ ಬಚ್ಚನ್ “ಸಭಾಪತಿಗಳ ಮಾತಿನ ಟೋನ್ ಸರಿ ಇರಲಿಲ್ಲ, ನಾನು ವಿರೋಧಿಸಿದೆ. ನಾವು ಶಾಲಾ ಮಕ್ಕಳಲ್ಲ, ನಮ್ಮಲ್ಲಿ ಕೆಲವರು ಹಿರಿಯ ನಾಗರಿಕರೂ ಇದ್ದಾರೆ. ಸಭಾಪತಿಗಳ ಟೋನ್‌ ನನಗೆ ಬೇಸರ ತರಿಸಿದೆ. ಮುಖ್ಯವಾಗಿ ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಮೈಕ್ ಆಫ್ ಮಾಡಲಾಗಿದೆ. ಇದು ಸಂಪ್ರದಾಯಕ್ಕೆ ವಿರುದ್ದ. ನೀವು ಪ್ರತಿಪಕ್ಷ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು” ಎಂದು ಹೇಳಿದರು.

ಮುಂದಿನ ನಡೆಯೇನು? ಎಂದು ಪತ್ರಕರ್ತರು ಕೇಳಿದ್ದಕ್ಕೆ “ಸಭಾಪತಿಗಳು ನಮ್ಮ ಕ್ಷಮೆ ಕೇಳಬೇಕು. ಅವರು ನಮ್ಮನ್ನು ಕೇರ್ ಮಾಡುವುದಿಲ್ಲ ಎಂದಿದ್ದಾರೆ. ಅವರು ಕೇರ್ ಮಾಡಲೇಬೇಕು, ಏಕೆಂದರೆ ನಾವು ಸಂಸತ್ತಿನ ಸದಸ್ಯರು” ಎಂದರು.

ಇದನ್ನೂ ಓದಿ : ಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...