HomeUncategorizedಮಾನ್ಯತೆ ಇಲ್ಲದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ - ಸಿಎಂ ಸಿದ್ದರಾಮಯ್ಯ

ಮಾನ್ಯತೆ ಇಲ್ಲದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ – ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಾಧ್ಯಮ ಮಾನ್ಯತಾ ಪಮಾಣಪತ್ರಗಳನ್ನು ಹೊಂದಿರದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ತಂದು ತಮ್ಮ ಸರ್ಕಾರವು ನುಡಿದಂತೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಮಾನ್ಯತೆ ಇಲ್ಲದ

ಈ ಬಗ್ಗೆ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿದ್ದು,”ಉಚಿತ ಬಸ್‌ಪಾಸ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್‌ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು ಎಂದು ತಿಳಿಸಿದ್ದಾರೆ. ಮಾನ್ಯತೆ ಇಲ್ಲದ

ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್‌ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

 

“ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ, ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ” ಎಂದು ಅವರು ಹೇಳಿದ್ದಾರೆ.

“ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದು. ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಬಸ್ ಪಾಸ್‌ಗಳನ್ನು ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

“ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು ಅರಮನೆ ಭೂ ಬಳಕೆ, ನಿಯಂತ್ರಣ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...