Homeಮುಖಪುಟಅನಧಿಕೃತ ಗೋಶಾಲೆ ತೆರವು: ಭಜರಂಗದಳದಿಂದ 20 ವಾಹನಗಳ ಧ್ವಂಸ

ಅನಧಿಕೃತ ಗೋಶಾಲೆ ತೆರವು: ಭಜರಂಗದಳದಿಂದ 20 ವಾಹನಗಳ ಧ್ವಂಸ

- Advertisement -
- Advertisement -

ಇಂದೋರ್‌ (ಮಧ್ಯಪ್ರದೇಶ):  ಇಲ್ಲಿನ ರಾಜೇಂದ್ರ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ದತ್ತ್‌ನಗರದಲ್ಲಿ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಅನಧಿಕೃತ ಗೋಶಾಲೆಯನ್ನು ತೆರವುಗೊಳಿಸಿದ ಮುನ್ಸಿಪಲ್‌ ಅಧಿಕಾರಿಗಳ ತಂಡ ಮತ್ತು ಭಜರಂಗದಳದ ಸದಸ್ಯರ ನಡುವೆ ಭಾರೀ ವಾಗ್ವಾದವು  ಘರ್ಷಣೆಗೆ ಕಾರಣವಾಯಿತು. ನಂತರ ನಡೆದ ಹಿಂಸಾಚಾರದಲ್ಲಿ ಸುಮಾರು ಪುರಸಭೆಯ 20 ವಾಹನಗಳನ್ನು ಧ್ವಂಸಗೊಳಿಸಲಾಗಿರುವ ಘಟನೆ ಬುಧವಾರ ವರದಿಯಾಗಿದೆ.

ಮುನ್ಸಿಪಲ್ ಕಾರ್ಪೊರೇಷನ್ ತಂಡವು ಪೊಲೀಸ್ ಸಿಬ್ಬಂದಿಯೊಂದಿಗೆ ಇಂದೋರ್‌ನ ಜನನಿಬಿಡ ಪ್ರದೇಶದ ಸ್ಥಳಕ್ಕೆ ಆಗಮಿಸಿ, ಆಕ್ರಮ ಗೋಶಾಲೆಗಳನ್ನು ಕೆಡವಿದ ನಂತರ ಈ ಘಟನೆಯು  ನಡೆದಿದೆ. ಅತಿಕ್ರಮಣ ಮತ್ತು ಅಕ್ರಮ ನಿರ್ಮಾಣದ ದೂರುಗಳ ಆಧಾರದ ಮೇರೆಗೆ ಮುನ್ಸಿಪಲ್ ಅಧಿಕಾರಿಗಳು ಪೂರ್ವಾನುಮತಿ ಇಲ್ಲದೆ ನಿರ್ಮಿಸಿದ ಗೋಶಾಲೆಗಳ ಧ್ವಂಸಕ್ಕೆ ಮುಂದಾಯಿತು ಎಂದು ವರದಿ ಹೇಳಿದೆ.

ತೆರವುಗೊಳಿಸಿದ್ದನ್ನು ವಿರೋಧಿಸಿ ಭಜರಂಗದಳದ ಸದಸ್ಯರು ಸ್ಥಳದಲ್ಲಿ ಜಮಾಯಿಸಿದಾಗ ಉದ್ವಿಗ್ನತೆ ಉಂಟಾಯಿತು.  ಹಸುಗಳ ರಕ್ಷಣೆಗಾಗಿ ಘೋಷಣೆಗಳನ್ನು ಕೂಗುತ್ತಾ ಮತ್ತು ಧಾರ್ಮಿಕ ಭಾವನೆಗಳಿಗೆ ಘಾಸಿಯನ್ನುಂಟು ಮಾಡಿದ್ದಾರೆಂದು ಗುಂಪು ಆರೋಪಿಸಿದಾಗ ಹಿಂಸಾಚಾರಕ್ಕೆ ತಿರುಗಿತು. ದೊಣ್ಣೆ ಮತ್ತು ಕಲ್ಲುಗಳಿಂದ ಶಸ್ತ್ರಸಜ್ಜಿತವಾಗಿದ್ದ ಗುಂಪು ಪುರಸಭೆಯ ವಾಹನಗಳನ್ನು ಗುರಿಯಾಗಿಸಿ ಅವುಗಳ ಗಾಜುಗಳನ್ನು ಒಡೆದು ಹಾಕಿ, ಉಪಕರಣಗಳನ್ನು ಹಾನಿಗೊಳಿಸಿ, ಸ್ಥಳದಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಹೆಸರು ಹೇಳಲಿಚ್ಛಿಸದ ಪ್ರದೇಶದ ನಿವಾಸಿಯೊಬ್ಬರು, ಬಜರಂಗದಳದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಾಹನಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದರು. ಇದು ಭಯ ಹುಟ್ಟಿಸುವಂತಿತ್ತು. ಗೋಶಾಲೆಯು ಈಗ ತಿಂಗಳಿನಿಂದ ವಿವಾದಾತ್ಮಕ ವಿಷಯವಾಗಿದೆ ಎಂದಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಲತಾ ಅಗರವಾಲ್, ನಾವು ಬೆಳಿಗ್ಗೆ 6 ಗಂಟೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆವು ಮತ್ತು 9 ಗಂಟೆಗೆ ಅದನ್ನು ಪೂರ್ಣಗೊಳಿಸಿದವು. ಈ ಪ್ರದೇಶದಿಂದ ಹೊರಡುವಾಗ, ಬಜರಂಗದಳದ ಸದಸ್ಯರು ಮತ್ತು ನಮ್ಮ ನೌಕರರ ನಡುವೆ ವಾಗ್ವಾದ ಉಂಟಾಗಿ ವಾಹನಗಳಿಗೆ ಹಾನಿ ಮತ್ತು ನಮ್ಮ ಕೆಲವು ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಮುನ್ಸಿಪಲ್ ಕಾರ್ಪೊರೇಷನ್ ದ್ವಾರಕಾ ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ಪಾಲಿಕೆ ಆಯುಕ್ತ ಶಿವಂ ವರ್ಮಾ ಮತ್ತು ಮೇಯರ್ ಪುಷ್ಯಮಿತ್ರ ಭಾರ್ಗವ ಅವರಿಗೆ ಸಂಪೂರ್ಣ ವಿಷಯ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

ಬಜರಂಗದಳವು ತನ್ನ ಕಾರ್ಯವನ್ನು ಸಮರ್ಥಿಸಿಕೊಂಡಿದೆ. ಗೋವುಗಳನ್ನು ರಕ್ಷಿಸುವ ಪ್ರಾಮುಖ್ಯತೆಯನ್ನು ಉಲ್ಲೇಖಿಸಿದೆ ಮತ್ತು ಪುರಸಭೆಯ ಅಧಿಕಾರಿಗಳು ಧಾರ್ಮಿಕ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡಿದ್ದರು ಎಂದು ಅದು ಆರೋಪಿಸಿದೆ. ಸ್ಥಳೀಯ ಬಜರಂಗದಳ ನಾಯಕ ಅನಿಲ್ ತಿವಾರಿ ಮಾತನಾಡಿ, ಗೋಶಾಲೆಯು ಪವಿತ್ರ ಸ್ಥಳವಾಗಿದೆ. ಇದನ್ನು ಕೆಡವುವ ಬದಲು ನಗರಸಭೆಯು ಪರ್ಯಾಯ ಪರಿಹಾರ ಕಂಡುಕೊಳ್ಳಬೇಕಿತ್ತು ಎಂದು ಹೇಳಿದ್ದಾರೆ.

ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಕಾನೂನು  ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಘರ್ಷಣೆಯು ಸ್ಥಳೀಯ ಆಡಳಿತದ ವಿಷಯದಲ್ಲಿ ರಾಜಕೀಯ ಅಥವಾ ಧಾರ್ಮಿಕ ಗುಂಪುಗಳ ಒಳಗೊಳ್ಳುವಿಕೆಯ ಬಗ್ಗೆ ವ್ಯಾಪಕ ಚರ್ಚೆ ಹುಟ್ಟುಹಾಕಿದೆ.  ಶಾಂತಿ ಕಾಪಾಡಲು ಮತ್ತು ಇಂತಹ ಘಟನೆಗಳು ನಗರದಲ್ಲಿ ದೈನಂದಿನ ಜೀವನಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಘಟನೆಯು ಧಾರ್ಮಿಕ ಭಾವನೆಗಳನ್ನು ಸಮತೋಲನಗೊಳಿಸುವುದಕ್ಕೆ ಮತ್ತು ನಗರ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಯ ಜಾರಿಗೆ ಒಂದು ಸವಾಲಾಗಿದೆ.

ಸಾಂತಾ ಕ್ಲಾಸ್ ಬಟ್ಟೆ ತೆಗೆಸಿ ಜೈಶ್ರೀರಾಮ್ ಘೋಷಣೆ ಹೇಳಿಸಿದ ಬಿಜೆಪಿ ಪರ ಸಂಘಟನೆಯ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...