Homeಮುಖಪುಟ'ಸುಪ್ರೀಂ ಕೋರ್ಟ್ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ': ಆರೋಪಿಗಳ ಮನೆ ಕೆಡವಿದ್ದಕ್ಕೆ ಹೈಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ನಾಗ್ಪುರ...

‘ಸುಪ್ರೀಂ ಕೋರ್ಟ್ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ’: ಆರೋಪಿಗಳ ಮನೆ ಕೆಡವಿದ್ದಕ್ಕೆ ಹೈಕೋರ್ಟ್‌ ಮುಂದೆ ಕ್ಷಮೆಯಾಚಿಸಿದ ನಾಗ್ಪುರ ಪಾಲಿಕೆ

- Advertisement -
- Advertisement -

ಇತ್ತೀಚೆಗೆ ನಡೆದ ಕೋಮು ಹಿಂಸಾಚಾರದ ಆರೋಪಿಗಳ ಮನೆಗಳನ್ನು ಅಕ್ರಮ ಎಂದು ಭಾಗಶಃ ಕೆಡವುವ ವೇಳೆ ಸುಪ್ರೀಂ ಕೋರ್ಟ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕೆ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಎಂಸಿ) ಮಂಗಳವಾರ (ಏ.15) ಬಾಂಬೆ ಹೈಕೋರ್ಟ್‌ ಮುಂದೆ ಬೇಷರತ್ ಕ್ಷಮೆಯಾಚಿಸಿದೆ

ನ್ಯಾಯಮೂರ್ತಿ ನಿತಿನ್ ಸಾಂಬ್ರೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ಎನ್‌ಎಂಸಿ ತನ್ನ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ನಮಗೆ ಅರಿವಿರಲಿಲ್ಲ ಎಂದು ಹೇಳಿಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಡ್ಡಾಯ ಮಾರ್ಗಸೂಚಿಗಳನ್ನು ಹೊರಡಿಸಿಲ್ಲ ಎಂದಿದೆ.

ಇತ್ತೀಚಿನ ಕೋಮು ಹಿಂಸಾಚಾರದ ಪ್ರಮುಖ ಆರೋಪಿ ಫಾಹೀಮ್ ಖಾನ್ ಅವರ ತಾಯಿ ಜೆಹ್ರುನ್ನಿಸಾ ಶಮೀಮ್ ಖಾನ್ ಅವರ ಕಟ್ಟಡಗಳನ್ನು ಕೆಡವಿದಕ್ಕಾಗಿ ಎನ್‌ಎಂಸಿಯ ಕಾರ್ಯನಿರ್ವಾಹಕ ಇಂಜಿನಿಯರ್ (ಕೊಳೆಗೇರಿಗಳು) ಕಮಲೇಶ್ ಚವಾಣ್ ಅವರ ಮೂಲಕ ಸಲ್ಲಿಸಿದ ಅಫಿಡವಿಟ್‌ನಲ್ಲಿ ಎನ್‌ಎಂಸಿ ಹೈಕೋರ್ಟ್‌ಗೆ ಕ್ಷಮೆಯಾಚಿಸಿದೆ.

ಎನ್‌ಎಂಸಿ ಅಥವಾ ಅದರ ಅಧಿಕಾರಿಗಳು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಅಥವಾ ಕೆಳ ನ್ಯಾಯಾಲಯಗಳ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುವುದಿಲ್ಲ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ನವೆಂಬರ್ 13, 2014ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ನಿರ್ದೇಶನಗಳ ಬಗ್ಗೆ ಅರಿವಿರಲಿಲ್ಲ ಎಂದು ಎನ್‌ಎಂಸಿ ಹೇಳಿಕೊಂಡಿದೆ. ನ್ಯಾಯಮೂರ್ತಿ ಬಿ.ಆರ್‌ ಗವಾಯಿ ನೇತೃತ್ವದ ಪೀಠವು, ಆರೋಪಿ ಅಥವಾ ಶಿಕ್ಷೆಗೊಳಗಾದ ವ್ಯಕ್ತಿಗಳೆಂಬ ಕಾರಣಕ್ಕಾಗಿ ಸರ್ಕಾರ ಅವರ ಮನೆಗಳು/ಆಸ್ತಿಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಬಗ್ಗೆ ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಸ್ಥಳೀಯ ಅಧಿಕಾರಿಗಳಿಗೆ ಸುತ್ತೋಲೆಗಳನ್ನು ಹೊರಡಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸಿದೆ ಎಂಬ ಅಂಶವನ್ನು ಅಫಿಡವಿಟ್ ಎತ್ತಿ ತೋರಿಸಿದೆ.

ಅಲ್ಲದೆ, ಪೊಲೀಸ್ ಅಧಿಕಾರಿಗಳು ಮಾರ್ಚ್ 21ರ ಗಲಭೆಯ ಆರೋಪಿಗಳ ಆಸ್ತಿಗಳ ಕುರಿತು ಎನ್‌ಎಂಸಿಯಿಂದ ವಿವರಗಳನ್ನು ಕೋರಿದ್ದರು ಮತ್ತು ಆರೋಪಿಗಳ ಆಸ್ತಿಗಳು ಅಕ್ರಮವಾಗಿದ್ದರೆ ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಕೇಳಿದ್ದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಅರ್ಜಿದಾರರು ತಮ್ಮ ಮನೆಯ ಅನುಮೋದಿತ ಯೋಜನೆ ದಾಖಲೆ ನೀಡಲು ವಿಫಲವಾಗಿದ್ದನ್ನು ಕಂಡುಕೊಂಡ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಕಟ್ಟಡ ಕೆಡವುವ ಮುನ್ನ ಅರ್ಜಿದಾರರಿಗೆ ಶೋಕಾಸ್ ನೀಡಿ ಪ್ರತಿಕ್ರಿಯಿಸಲು ಅವರಿಗೆ ಒಂದು ದಿನದ ಗಡುವು ನೀಡಲಾಗಿತ್ತು ಎಂದು ಎನ್‌ಎಂಸಿ ಹೇಳಿಕೊಂಡಿದೆ.

ಸಿವಿಲ್ ವಿವಾದದಲ್ಲಿ ಕ್ರಿಮಿನಲ್ ಮೊಕದ್ದಮೆ: ಉತ್ತರ ಪ್ರದೇಶ ಪೊಲೀಸರಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...